Homeಮುಖಪುಟಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

ಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ದಾರಿ ಮತ್ತು ಹೊಸ ನಾಯಕತ್ವವನ್ನು ತೋರಿಸಲು ಹೊಸ ರಾಜಕೀಯ ಪಕ್ಷವನ್ನು ಐವರು ಅಪರಿಚಿತರು ಆರಂಭಿಸಿದ್ದಾರೆ! 370ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ದೊಡ್ಡ ರಾಜಕೀಯ ಬೆಳವಣಿಗೆ ಇದಾಗಿದ್ದು ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆ ಈಗ ಎಲ್ಲರಲ್ಲಿ ಮೂಡಿದೆ.

ಐವರು ಪುರುಷರು ತಮ್ಮ ಪಕ್ಷವನ್ನು ಜಮ್ಮು ಕಾಶ್ಮೀರ ರಾಜಕೀಯ ಚಳವಳಿ- I ಎಂದು ಗುರುತಿಸಿದ್ದಾರೆ. “ಭಾರತ”ದೊಂದಿಗೆ ಭದ್ರವಾಗಿ ನಿಲ್ಲುತ್ತೇವೆ ಎಂದು ಘೋಷಿಸಿರುವ ಅವರನ್ನು ವಕ್ತಾರ ಶಾಹಿದ್ ಖಾನ್, ವಕೀಲ ರಾಜಾ ಅಶ್ರಫ್, ಮತ್ತು ಮುಷ್ತಾಕ್ ತಂತರಿ ಎಂದು ಗುರುತಿಸಲಾಗಿದೆ.

ಆಗಸ್ಟ್ 5ರ ನಂತರ ಕಾಶ್ಮೀರದಲ್ಲಿ ನಡೆದ ಮೊದಲ “ಅಧಿಕೃತೇತರ” ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬೇರೆ ಯಾರೂ ಮಾಡದ” ಸಮಯದಲ್ಲಿ ಮಾತನಾಡಲು ಧೈರ್ಯ ಮಾಡುವ ಮೂಲಕ ತಮ್ಮ ಜೀವನವನ್ನು ಅಪಾಯದಲ್ಲಿಟ್ಟಿದ್ದೇವೆ ಎಂದು ಘೋಷಿಸಿಕೊಂಡಿದ್ದಾರೆ.

ತಾವು ಪ್ರಗತಿಪರ ಮನಸ್ಸನ್ನು ಹೊಂದಿದ್ದಾರೆಂದು ಹೇಳಿಕೊಂಡಿರುವ ಅವರು “370ನೇ ವಿಧಿ ರದ್ದತಿ ನಂತರ ಕಾಶ್ಮೀರದ ಬಗ್ಗೆ ಮಾಧ್ಯಮಗಳು ನಕಾರಾತ್ಮಕತೆಯನ್ನು ತೋರಿಸುವುದನ್ನು ಬಿಟ್ಟು ಸಕಾರಾತ್ಮಕತೆಯನ್ನು ತೋರಿಸಬೇಕೆಂದು ಮಾಧ್ಯಮವನ್ನು ಒತ್ತಾಯಿಸಿದರು.

ಶಾಹಿದ್ ಖಾನ್ ಅವರು ತಮ್ಮನ್ನು ಮಾಜಿ ಪತ್ರಕರ್ತ ಎಂದು ಪರಿಚಯಿಸಿಕೊಂಡಿದ್ದಲ್ಲದೇ ನನ್ನನ್ನು ಇಲ್ಲಿರುವ ಅನೇಕರ ಬಲ್ಲರು ಎಂದರು. ಆದರೆ ಹಾಜರಿದ್ದ ವರದಿಗಾರರು ಆತನನ್ನು ತಿಳಿದಿಲ್ಲವೆಂದು ಹೇಳಿದ್ದಾರೆ.

ಸೋಮವಾರದ ಪತ್ರಿಕಾಗೋಷ್ಟಿ ನಡೆಸಲು ಸರ್ಕಾರ ಅವರಿಗೆ ಅನುಮತಿ ನೀಡಿದೆ ಎಂದು ಅವರು ಹೇಳಿದ್ದಾರೆ. ಕಾಶ್ಮೀರದ ಮುಖ್ಯವಾಹಿನಿಯ ಮತ್ತು ಪ್ರತ್ಯೇಕತಾವಾದಿ ನಾಯಕರು ಜೈಲಿನಲ್ಲಿರುವ ಸಮಯದಲ್ಲಿ ಇದು ಹಲವರನ್ನು ಹುಬ್ಬೇರಿಸುವಂತೆ ಮಾಡಿದೆ. ಜೊತೆಗೆ ಹಲವಾರು ಟಿವಿ ಚಾನೆಲ್‌ಗಳ ಸಿಬ್ಬಂದಿಗಳು ಈ ಪತ್ರಿಕಾಗೋಷ್ಟಿಯನ್ನು ನೇರ ಪ್ರಸಾರ ಮಾಡುದ್ದಾರೆ ಮತ್ತು ಅದಕ್ಕೆ ಇನ್ನಿಲ್ಲದ ಪ್ರಾಮುಖ್ಯತೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಅವರು ಯಾರೆಂದು ಪತ್ರಕರ್ತರು ಪದೇ ಪದೇ ಕೇಳಿದಾಗ, ಅವರು “ಸಾಮಾನ್ಯ” ಮತ್ತು “ಸಾಮಾನ್ಯ” ಪುರುಷರು ಎಂದು ಸಿದ್ದಉತ್ತರ ನೀಡಿದ್ದಾರೆ.

“ನಾವು ಯಾರೆಂದು ನೀವು ಕೇಳುತ್ತಿದ್ದೀರಿ. ಅದಕ್ಕಾಗಿಯೇ ನಾವು ಮುಂದೆ ಬರಲು ಬಯಸುವುದಿಲ್ಲ. ಸದ್ಯಕ್ಕೆ ನಾವು ಏನೂ ಅಲ್ಲ…. ನಮ್ಮನ್ನು ಬಲ್ಲವರು ಹೆಚ್ಚು ಇಲ್ಲ. ಮುಂದೆ ಇಂತಹ ಪ್ರಶ್ನೆಗಳು ಉದ್ಭವಿಸುತ್ತವೆ ಮತ್ತು ಅನೇಕ ಜನರು ನಮ್ಮ ಬಗ್ಗೆ ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ ಎಂದು ನಮಗೆ ತಿಳಿದಿದೆ” ಖಾನ್ ಹೇಳಿದ್ದಾರೆ.

ನಿಮ್ಮ ಪಕ್ಷವು ಜಮ್ಮು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಮಾಡುವುದನ್ನು ಬೆಂಬಲಿಸುತ್ತದೆಯೇ ಅಥವಾ ಅದನ್ನು ಪುನಃಸ್ಥಾಪಿಸಲು ಒತ್ತಾಯಿಸುತ್ತದೆಯೇ ಎಂಬ ಪ್ರಶ್ನೆಗೆ ಅವರ ಬಳಿ ಯಾವುದೇ ಸ್ಪಷ್ಟ ಉತ್ತರಗಳಿಲ್ಲ. “ವಿಶೇಷ ಸ್ಥಾನಮಾನ ಕಳೆದ 60-70 ವರ್ಷಗಳಿಂದ ನಮ್ಮೊಂದಿಗೆ ಇತ್ತು. ಇದನ್ನು ತೆಗೆದುಹಾಕುವಂತೆ ಯಾರೂ ಒತ್ತಾಯಿಸಲಿಲ್ಲ. ನಾವು ಬಹಳಷ್ಟು ಸಂಗತಿಗಳೊಂದಿಗೆ ಬದುಕುತ್ತೇವೆ. ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂಬುದನ್ನು ಕಾಲವೇ ಉತ್ತರಿಸಲಿದೆ”ಎಂದು ಖಾನ್ ಹೇಳಿದ್ದಾರೆ.

ಇವರ ಈ ಪತ್ರಿಕಾಗೋಷ್ಟಿಯು ಉತ್ತರ ಕೊಡುವುದರ ಬದಲು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟಿಸಿದೆ. ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಮುಂದೆ ಇದು ಯಾವ ರೀತಿಯ ತಿರುವು ತೆಗೆದುಕೊಳ್ಳುತ್ತದೆ ನೋಡಬೇಕಿದೆ.

ಮಾಹಿತಿ: ದಿ ಟೆಲಿಗ್ರಾಫ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...