Homeಮುಖಪುಟಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

ಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ದಾರಿ ಮತ್ತು ಹೊಸ ನಾಯಕತ್ವವನ್ನು ತೋರಿಸಲು ಹೊಸ ರಾಜಕೀಯ ಪಕ್ಷವನ್ನು ಐವರು ಅಪರಿಚಿತರು ಆರಂಭಿಸಿದ್ದಾರೆ! 370ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ದೊಡ್ಡ ರಾಜಕೀಯ ಬೆಳವಣಿಗೆ ಇದಾಗಿದ್ದು ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆ ಈಗ ಎಲ್ಲರಲ್ಲಿ ಮೂಡಿದೆ.

ಐವರು ಪುರುಷರು ತಮ್ಮ ಪಕ್ಷವನ್ನು ಜಮ್ಮು ಕಾಶ್ಮೀರ ರಾಜಕೀಯ ಚಳವಳಿ- I ಎಂದು ಗುರುತಿಸಿದ್ದಾರೆ. “ಭಾರತ”ದೊಂದಿಗೆ ಭದ್ರವಾಗಿ ನಿಲ್ಲುತ್ತೇವೆ ಎಂದು ಘೋಷಿಸಿರುವ ಅವರನ್ನು ವಕ್ತಾರ ಶಾಹಿದ್ ಖಾನ್, ವಕೀಲ ರಾಜಾ ಅಶ್ರಫ್, ಮತ್ತು ಮುಷ್ತಾಕ್ ತಂತರಿ ಎಂದು ಗುರುತಿಸಲಾಗಿದೆ.

ಆಗಸ್ಟ್ 5ರ ನಂತರ ಕಾಶ್ಮೀರದಲ್ಲಿ ನಡೆದ ಮೊದಲ “ಅಧಿಕೃತೇತರ” ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬೇರೆ ಯಾರೂ ಮಾಡದ” ಸಮಯದಲ್ಲಿ ಮಾತನಾಡಲು ಧೈರ್ಯ ಮಾಡುವ ಮೂಲಕ ತಮ್ಮ ಜೀವನವನ್ನು ಅಪಾಯದಲ್ಲಿಟ್ಟಿದ್ದೇವೆ ಎಂದು ಘೋಷಿಸಿಕೊಂಡಿದ್ದಾರೆ.

ತಾವು ಪ್ರಗತಿಪರ ಮನಸ್ಸನ್ನು ಹೊಂದಿದ್ದಾರೆಂದು ಹೇಳಿಕೊಂಡಿರುವ ಅವರು “370ನೇ ವಿಧಿ ರದ್ದತಿ ನಂತರ ಕಾಶ್ಮೀರದ ಬಗ್ಗೆ ಮಾಧ್ಯಮಗಳು ನಕಾರಾತ್ಮಕತೆಯನ್ನು ತೋರಿಸುವುದನ್ನು ಬಿಟ್ಟು ಸಕಾರಾತ್ಮಕತೆಯನ್ನು ತೋರಿಸಬೇಕೆಂದು ಮಾಧ್ಯಮವನ್ನು ಒತ್ತಾಯಿಸಿದರು.

ಶಾಹಿದ್ ಖಾನ್ ಅವರು ತಮ್ಮನ್ನು ಮಾಜಿ ಪತ್ರಕರ್ತ ಎಂದು ಪರಿಚಯಿಸಿಕೊಂಡಿದ್ದಲ್ಲದೇ ನನ್ನನ್ನು ಇಲ್ಲಿರುವ ಅನೇಕರ ಬಲ್ಲರು ಎಂದರು. ಆದರೆ ಹಾಜರಿದ್ದ ವರದಿಗಾರರು ಆತನನ್ನು ತಿಳಿದಿಲ್ಲವೆಂದು ಹೇಳಿದ್ದಾರೆ.

ಸೋಮವಾರದ ಪತ್ರಿಕಾಗೋಷ್ಟಿ ನಡೆಸಲು ಸರ್ಕಾರ ಅವರಿಗೆ ಅನುಮತಿ ನೀಡಿದೆ ಎಂದು ಅವರು ಹೇಳಿದ್ದಾರೆ. ಕಾಶ್ಮೀರದ ಮುಖ್ಯವಾಹಿನಿಯ ಮತ್ತು ಪ್ರತ್ಯೇಕತಾವಾದಿ ನಾಯಕರು ಜೈಲಿನಲ್ಲಿರುವ ಸಮಯದಲ್ಲಿ ಇದು ಹಲವರನ್ನು ಹುಬ್ಬೇರಿಸುವಂತೆ ಮಾಡಿದೆ. ಜೊತೆಗೆ ಹಲವಾರು ಟಿವಿ ಚಾನೆಲ್‌ಗಳ ಸಿಬ್ಬಂದಿಗಳು ಈ ಪತ್ರಿಕಾಗೋಷ್ಟಿಯನ್ನು ನೇರ ಪ್ರಸಾರ ಮಾಡುದ್ದಾರೆ ಮತ್ತು ಅದಕ್ಕೆ ಇನ್ನಿಲ್ಲದ ಪ್ರಾಮುಖ್ಯತೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಅವರು ಯಾರೆಂದು ಪತ್ರಕರ್ತರು ಪದೇ ಪದೇ ಕೇಳಿದಾಗ, ಅವರು “ಸಾಮಾನ್ಯ” ಮತ್ತು “ಸಾಮಾನ್ಯ” ಪುರುಷರು ಎಂದು ಸಿದ್ದಉತ್ತರ ನೀಡಿದ್ದಾರೆ.

“ನಾವು ಯಾರೆಂದು ನೀವು ಕೇಳುತ್ತಿದ್ದೀರಿ. ಅದಕ್ಕಾಗಿಯೇ ನಾವು ಮುಂದೆ ಬರಲು ಬಯಸುವುದಿಲ್ಲ. ಸದ್ಯಕ್ಕೆ ನಾವು ಏನೂ ಅಲ್ಲ…. ನಮ್ಮನ್ನು ಬಲ್ಲವರು ಹೆಚ್ಚು ಇಲ್ಲ. ಮುಂದೆ ಇಂತಹ ಪ್ರಶ್ನೆಗಳು ಉದ್ಭವಿಸುತ್ತವೆ ಮತ್ತು ಅನೇಕ ಜನರು ನಮ್ಮ ಬಗ್ಗೆ ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ ಎಂದು ನಮಗೆ ತಿಳಿದಿದೆ” ಖಾನ್ ಹೇಳಿದ್ದಾರೆ.

ನಿಮ್ಮ ಪಕ್ಷವು ಜಮ್ಮು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಮಾಡುವುದನ್ನು ಬೆಂಬಲಿಸುತ್ತದೆಯೇ ಅಥವಾ ಅದನ್ನು ಪುನಃಸ್ಥಾಪಿಸಲು ಒತ್ತಾಯಿಸುತ್ತದೆಯೇ ಎಂಬ ಪ್ರಶ್ನೆಗೆ ಅವರ ಬಳಿ ಯಾವುದೇ ಸ್ಪಷ್ಟ ಉತ್ತರಗಳಿಲ್ಲ. “ವಿಶೇಷ ಸ್ಥಾನಮಾನ ಕಳೆದ 60-70 ವರ್ಷಗಳಿಂದ ನಮ್ಮೊಂದಿಗೆ ಇತ್ತು. ಇದನ್ನು ತೆಗೆದುಹಾಕುವಂತೆ ಯಾರೂ ಒತ್ತಾಯಿಸಲಿಲ್ಲ. ನಾವು ಬಹಳಷ್ಟು ಸಂಗತಿಗಳೊಂದಿಗೆ ಬದುಕುತ್ತೇವೆ. ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂಬುದನ್ನು ಕಾಲವೇ ಉತ್ತರಿಸಲಿದೆ”ಎಂದು ಖಾನ್ ಹೇಳಿದ್ದಾರೆ.

ಇವರ ಈ ಪತ್ರಿಕಾಗೋಷ್ಟಿಯು ಉತ್ತರ ಕೊಡುವುದರ ಬದಲು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟಿಸಿದೆ. ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಮುಂದೆ ಇದು ಯಾವ ರೀತಿಯ ತಿರುವು ತೆಗೆದುಕೊಳ್ಳುತ್ತದೆ ನೋಡಬೇಕಿದೆ.

ಮಾಹಿತಿ: ದಿ ಟೆಲಿಗ್ರಾಫ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...