Homeಮುಖಪುಟಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

ಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ದಾರಿ ಮತ್ತು ಹೊಸ ನಾಯಕತ್ವವನ್ನು ತೋರಿಸಲು ಹೊಸ ರಾಜಕೀಯ ಪಕ್ಷವನ್ನು ಐವರು ಅಪರಿಚಿತರು ಆರಂಭಿಸಿದ್ದಾರೆ! 370ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ದೊಡ್ಡ ರಾಜಕೀಯ ಬೆಳವಣಿಗೆ ಇದಾಗಿದ್ದು ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆ ಈಗ ಎಲ್ಲರಲ್ಲಿ ಮೂಡಿದೆ.

ಐವರು ಪುರುಷರು ತಮ್ಮ ಪಕ್ಷವನ್ನು ಜಮ್ಮು ಕಾಶ್ಮೀರ ರಾಜಕೀಯ ಚಳವಳಿ- I ಎಂದು ಗುರುತಿಸಿದ್ದಾರೆ. “ಭಾರತ”ದೊಂದಿಗೆ ಭದ್ರವಾಗಿ ನಿಲ್ಲುತ್ತೇವೆ ಎಂದು ಘೋಷಿಸಿರುವ ಅವರನ್ನು ವಕ್ತಾರ ಶಾಹಿದ್ ಖಾನ್, ವಕೀಲ ರಾಜಾ ಅಶ್ರಫ್, ಮತ್ತು ಮುಷ್ತಾಕ್ ತಂತರಿ ಎಂದು ಗುರುತಿಸಲಾಗಿದೆ.

ಆಗಸ್ಟ್ 5ರ ನಂತರ ಕಾಶ್ಮೀರದಲ್ಲಿ ನಡೆದ ಮೊದಲ “ಅಧಿಕೃತೇತರ” ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬೇರೆ ಯಾರೂ ಮಾಡದ” ಸಮಯದಲ್ಲಿ ಮಾತನಾಡಲು ಧೈರ್ಯ ಮಾಡುವ ಮೂಲಕ ತಮ್ಮ ಜೀವನವನ್ನು ಅಪಾಯದಲ್ಲಿಟ್ಟಿದ್ದೇವೆ ಎಂದು ಘೋಷಿಸಿಕೊಂಡಿದ್ದಾರೆ.

ತಾವು ಪ್ರಗತಿಪರ ಮನಸ್ಸನ್ನು ಹೊಂದಿದ್ದಾರೆಂದು ಹೇಳಿಕೊಂಡಿರುವ ಅವರು “370ನೇ ವಿಧಿ ರದ್ದತಿ ನಂತರ ಕಾಶ್ಮೀರದ ಬಗ್ಗೆ ಮಾಧ್ಯಮಗಳು ನಕಾರಾತ್ಮಕತೆಯನ್ನು ತೋರಿಸುವುದನ್ನು ಬಿಟ್ಟು ಸಕಾರಾತ್ಮಕತೆಯನ್ನು ತೋರಿಸಬೇಕೆಂದು ಮಾಧ್ಯಮವನ್ನು ಒತ್ತಾಯಿಸಿದರು.

ಶಾಹಿದ್ ಖಾನ್ ಅವರು ತಮ್ಮನ್ನು ಮಾಜಿ ಪತ್ರಕರ್ತ ಎಂದು ಪರಿಚಯಿಸಿಕೊಂಡಿದ್ದಲ್ಲದೇ ನನ್ನನ್ನು ಇಲ್ಲಿರುವ ಅನೇಕರ ಬಲ್ಲರು ಎಂದರು. ಆದರೆ ಹಾಜರಿದ್ದ ವರದಿಗಾರರು ಆತನನ್ನು ತಿಳಿದಿಲ್ಲವೆಂದು ಹೇಳಿದ್ದಾರೆ.

ಸೋಮವಾರದ ಪತ್ರಿಕಾಗೋಷ್ಟಿ ನಡೆಸಲು ಸರ್ಕಾರ ಅವರಿಗೆ ಅನುಮತಿ ನೀಡಿದೆ ಎಂದು ಅವರು ಹೇಳಿದ್ದಾರೆ. ಕಾಶ್ಮೀರದ ಮುಖ್ಯವಾಹಿನಿಯ ಮತ್ತು ಪ್ರತ್ಯೇಕತಾವಾದಿ ನಾಯಕರು ಜೈಲಿನಲ್ಲಿರುವ ಸಮಯದಲ್ಲಿ ಇದು ಹಲವರನ್ನು ಹುಬ್ಬೇರಿಸುವಂತೆ ಮಾಡಿದೆ. ಜೊತೆಗೆ ಹಲವಾರು ಟಿವಿ ಚಾನೆಲ್‌ಗಳ ಸಿಬ್ಬಂದಿಗಳು ಈ ಪತ್ರಿಕಾಗೋಷ್ಟಿಯನ್ನು ನೇರ ಪ್ರಸಾರ ಮಾಡುದ್ದಾರೆ ಮತ್ತು ಅದಕ್ಕೆ ಇನ್ನಿಲ್ಲದ ಪ್ರಾಮುಖ್ಯತೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಅವರು ಯಾರೆಂದು ಪತ್ರಕರ್ತರು ಪದೇ ಪದೇ ಕೇಳಿದಾಗ, ಅವರು “ಸಾಮಾನ್ಯ” ಮತ್ತು “ಸಾಮಾನ್ಯ” ಪುರುಷರು ಎಂದು ಸಿದ್ದಉತ್ತರ ನೀಡಿದ್ದಾರೆ.

“ನಾವು ಯಾರೆಂದು ನೀವು ಕೇಳುತ್ತಿದ್ದೀರಿ. ಅದಕ್ಕಾಗಿಯೇ ನಾವು ಮುಂದೆ ಬರಲು ಬಯಸುವುದಿಲ್ಲ. ಸದ್ಯಕ್ಕೆ ನಾವು ಏನೂ ಅಲ್ಲ…. ನಮ್ಮನ್ನು ಬಲ್ಲವರು ಹೆಚ್ಚು ಇಲ್ಲ. ಮುಂದೆ ಇಂತಹ ಪ್ರಶ್ನೆಗಳು ಉದ್ಭವಿಸುತ್ತವೆ ಮತ್ತು ಅನೇಕ ಜನರು ನಮ್ಮ ಬಗ್ಗೆ ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ ಎಂದು ನಮಗೆ ತಿಳಿದಿದೆ” ಖಾನ್ ಹೇಳಿದ್ದಾರೆ.

ನಿಮ್ಮ ಪಕ್ಷವು ಜಮ್ಮು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಮಾಡುವುದನ್ನು ಬೆಂಬಲಿಸುತ್ತದೆಯೇ ಅಥವಾ ಅದನ್ನು ಪುನಃಸ್ಥಾಪಿಸಲು ಒತ್ತಾಯಿಸುತ್ತದೆಯೇ ಎಂಬ ಪ್ರಶ್ನೆಗೆ ಅವರ ಬಳಿ ಯಾವುದೇ ಸ್ಪಷ್ಟ ಉತ್ತರಗಳಿಲ್ಲ. “ವಿಶೇಷ ಸ್ಥಾನಮಾನ ಕಳೆದ 60-70 ವರ್ಷಗಳಿಂದ ನಮ್ಮೊಂದಿಗೆ ಇತ್ತು. ಇದನ್ನು ತೆಗೆದುಹಾಕುವಂತೆ ಯಾರೂ ಒತ್ತಾಯಿಸಲಿಲ್ಲ. ನಾವು ಬಹಳಷ್ಟು ಸಂಗತಿಗಳೊಂದಿಗೆ ಬದುಕುತ್ತೇವೆ. ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂಬುದನ್ನು ಕಾಲವೇ ಉತ್ತರಿಸಲಿದೆ”ಎಂದು ಖಾನ್ ಹೇಳಿದ್ದಾರೆ.

ಇವರ ಈ ಪತ್ರಿಕಾಗೋಷ್ಟಿಯು ಉತ್ತರ ಕೊಡುವುದರ ಬದಲು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟಿಸಿದೆ. ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಮುಂದೆ ಇದು ಯಾವ ರೀತಿಯ ತಿರುವು ತೆಗೆದುಕೊಳ್ಳುತ್ತದೆ ನೋಡಬೇಕಿದೆ.

ಮಾಹಿತಿ: ದಿ ಟೆಲಿಗ್ರಾಫ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...