Homeಮುಖಪುಟಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

- Advertisement -
- Advertisement -

ಒಂದು ತಿಂಗಳ ಹಿಂದೆ ಕಾಣೆಯಾಗಿದ್ದ ಒಂದೇ ಕುಟುಂಬದ ಐವರು ಶವವಾಗಿ 8 ಅಡಿ ಗುಂಡಿಯಲ್ಲಿ ಪತ್ತೆಯಾಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ದಿವಾಸ್ ಜಿಲ್ಲೆಯಲ್ಲಿ ನಡೆದಿದೆ. ದೇಹಗಳು ಜೀರ್ಣವಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಎಲ್ಲಾ ದೇಹಗಳನ್ನು ನಗ್ನವಾದ ಸ್ಥಿತಿಯಲ್ಲಿ ಕಂಡುಬಂದಿವೆ. ಪೊಲೀಸರು ಹಿಟಾಚಿಯನ್ನು ಬಳಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

45 ವರ್ಷ ವಯಸ್ಸಿನ ಮಮತಾ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ರೂಪಾಲಿ(21), ದಿವ್ಯಾ(14) ಮತ್ತು ಅವರ ಇಬ್ಬರು ಸೋದರ ಸಂಬಂಧಿಕರು ದಿವಾಸ್‌ನ ತಮ್ಮ ನಿವಾಸದಿಂದ ಮೇ 13 ರಂದು ಕಾಣೆಯಾಗಿದ್ದರು. ಮೃತ ಕುಟುಂಬದವರು ವಾಸವಿದ್ದ ಮನೆಯ ಮಾಲೀಕ ಮತ್ತು ಆತನ 12 ಜನ ಸಹಾಯಕರು ಈ ಭೀಕರ ಘಟನೆಯ ಹಿಂದೆ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಗುಂಡಿಯನ್ನು ತೋಡಿದಾಗ ದೇಹಗಳು ನಗ್ನಾವಸ್ಥೆಯಲ್ಲಿ ಪತ್ತೆಯಾಗಿದ್ದವು. ಆರೋಪಿಗಳು ಕೊಲೆ ಮಾಡಿ ಬಟ್ಟೆಗಳನ್ನು ಸುಟ್ಟು ಉಪ್ಪು ಮತ್ತು ಯೂರಿಯಾವನ್ನು ಬಳಸಿ ಮೃತದೇಹಗಳನ್ನು ಕೊಳೆಯುವಂತೆ ಮಾಡಿದ್ದರೆಂದು ಪ್ರಕರಣದ ಕುರಿತು ಪೊಲೀಸ್ ಇಲಾಖೆ ಹೇಳಿಕೆ ನೀಡಿದೆ.

ಮುಖ್ಯ ಅರೋಪಿ ಸುರೇಂದ್ರ ಚೌಹಾಣ್ ಸೇರಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಂದ್ರ ಚೌಹಾಣ್ ಕೊಲೆಯ ಯೋಜನೆಯನ್ನು ರೂಪಿಸಿ ಕೊಲೆಗೈದಿದ್ದಾನೆ. ಉಳಿದ 5 ಜನ ಆರೋಪಿಗಳು ಗುಂಡಿಯನ್ನು ತೆಗಯುವ ಮೂಲಕ ಕೊಲೆಗೆ ಸಹಕರಿಸಿದ್ದಾರೆ ಎಂದು ದಿವಾಸ್ ಪೊಲೀಸ್ ಠಾಣಾಧಿಕಾರಿ ಶಿವ ದಯಾಳ್ ಸಿಂಗ್ ಮಾಹಿತಿ ನೀಡಿದ್ದಾರೆ. ಉಳಿದ ಏಳು ಜನ ಆರೋಪಿಗಳಿಗಾಗಿ ದಿವಾಸ್ ಪೊಲೀಸರು ಶೋಧಕಾರ್ಯವನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: ಯುಪಿ: ಅತ್ಯಾಚಾರ ಆರೋಪಿಗಳ ಕಪಾಳಕ್ಕೆ ಹೊಡೆದು ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯ!

ಮೃತ ಕುಟುಂಬದ ಸಂಬಂಧಿಕರು ಮೇ 13ರಂದು ಕಾಣೆಯಾಗಿರುವ ಕಂಪ್ಲೇಂಟ್‌ ದಾಖಲಿಸಿದ್ದರು. ಆರೋಪಿಯು ಪೊಲೀಸರ ತನಿಖೆಯ ಹಾದಿಯನ್ನು ತಪ್ಪಿಸಲು ಹಲವು ಪ್ರಯತ್ನಗಳನ್ನು ಮಾಡಿದ್ದ. ಕೊಲೆ ಆರೋಪಿ ಸುರೇಂದ್ರ ಚೌಹಾಣ್ ಕುಟುಂಬಸ್ಥರ ಫೇಸ್‌ಬುಕ್ ಐಡಿಯನ್ನು ಬಳಸಿ ಮೃತ ರೂಪಾಲಿ ತನ್ನ ಇಚ್ಛೆಯಂತೆಯೇ ಮದುವೆಯಾಗಿದ್ದಾಳೆ. ಹಾಗೂ ಆಕೆಯ ತಾಯಿ ಮತ್ತು ಸಹೋದರಿಯರು ಅವಳೊಂದಿಗೆ ಸುರಕ್ಷಿತವಾಗಿದ್ದಾರೆ ಎಂಬ ಸಂದೇಶಗಳನ್ನು ಹರಿಬಿಟ್ಟು ಪೊಲೀಸರ ಕಣ್ಣು ತಪ್ಪಿಸಲು ಯತ್ನಿಸಿದ್ದಾನೆ. ಪೊಲೀಸರು ಸಂದೇಶ ಕಳುಹಿಸಲಾದ ಮೊಬೈಲ್ ಫೋನ್‌ ಅನ್ನು ಟ್ರೇಸ್‌ ಮಾಡಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

ಘಟನೆಯ ಹಿನ್ನಲೆ

ಕೊಲೆಯ ಮುಖ್ಯ ಆರೋಪಿ ಸುರೇಂದ್ರ ಚೌಹಾಣ್ ಮೃತ ಕುಟುಂಬಕ್ಕೆ ಪರಿಚಿತ ವ್ಯಕ್ತಿಯಾಗಿದ್ದು ಅವರ ಮನೆಗೆ ಬಂದು ಹೋಗುವ ಪರಿಪಾಠವನ್ನು ಬೆಳೆಸಿಕೊಂಡಿದ್ದ. ಮೃತ ರೂಪಾಲಿ ಮತ್ತು ಆರೋಪಿ ಸುರೇಂದ್ರನ ನಡುವೆ ಪ್ರೇಮ ಸಂಬಂಧವೂ ನಡೆದಿತ್ತು. ಇದ್ದಕ್ಕಿದ್ದಂತೆ ಸುರೇಂದ್ರ ಇನ್ನೊಂದು ಮಹಿಳೆಯೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದು ರೂಪಾಲಿಯಯನ್ನು ಸಿಟ್ಟಿಗೇಳಿಸಿತ್ತು. ಸುರೇಂದ್ರ ಮತ್ತು ತನ್ನ ಪೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ರೂಪಾಲಿ ಸುರೇಂದ್ರ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿಗೂ ಈ ಚಿತ್ರವನ್ನು ಕಳುಹಿಸಿದ್ದಳು. ರೂಪಾಲಿ ಮತ್ತು ಆಕೆಯ ಕುಟುಂಬ ತನ್ನ ನಿಶ್ಚಿತಾರ್ಥನ್ನು ಎಲ್ಲಿ ಮುರಿದುಹಾಕುತ್ತದೆಯೋ ಎಂಬ ಭಯದಲ್ಲಿ ಆರೋಪಿಯು ಕುಟುಂಬಸ್ಥರೆಲ್ಲರನ್ನು ಕೊಲೆ ಮಾಡಿ 8 ಅಡಿ ಗುಂಡಿಯಲ್ಲಿ ಹೂತಿದ್ದಾನೆ ಎಂದು ದಿವಾಸ್ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಾವ ರೀತಿಯಲ್ಲಿ ಕೊಲೆಯನ್ನು ಮಾಡಲಾಗಿದೆ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಯೋತ್ಪಾದನೆ ಆರೋಪ ಹೊತ್ತು 12 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...