Homeಮುಖಪುಟಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

- Advertisement -
- Advertisement -

ಒಂದು ತಿಂಗಳ ಹಿಂದೆ ಕಾಣೆಯಾಗಿದ್ದ ಒಂದೇ ಕುಟುಂಬದ ಐವರು ಶವವಾಗಿ 8 ಅಡಿ ಗುಂಡಿಯಲ್ಲಿ ಪತ್ತೆಯಾಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ದಿವಾಸ್ ಜಿಲ್ಲೆಯಲ್ಲಿ ನಡೆದಿದೆ. ದೇಹಗಳು ಜೀರ್ಣವಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಎಲ್ಲಾ ದೇಹಗಳನ್ನು ನಗ್ನವಾದ ಸ್ಥಿತಿಯಲ್ಲಿ ಕಂಡುಬಂದಿವೆ. ಪೊಲೀಸರು ಹಿಟಾಚಿಯನ್ನು ಬಳಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

45 ವರ್ಷ ವಯಸ್ಸಿನ ಮಮತಾ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ರೂಪಾಲಿ(21), ದಿವ್ಯಾ(14) ಮತ್ತು ಅವರ ಇಬ್ಬರು ಸೋದರ ಸಂಬಂಧಿಕರು ದಿವಾಸ್‌ನ ತಮ್ಮ ನಿವಾಸದಿಂದ ಮೇ 13 ರಂದು ಕಾಣೆಯಾಗಿದ್ದರು. ಮೃತ ಕುಟುಂಬದವರು ವಾಸವಿದ್ದ ಮನೆಯ ಮಾಲೀಕ ಮತ್ತು ಆತನ 12 ಜನ ಸಹಾಯಕರು ಈ ಭೀಕರ ಘಟನೆಯ ಹಿಂದೆ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಗುಂಡಿಯನ್ನು ತೋಡಿದಾಗ ದೇಹಗಳು ನಗ್ನಾವಸ್ಥೆಯಲ್ಲಿ ಪತ್ತೆಯಾಗಿದ್ದವು. ಆರೋಪಿಗಳು ಕೊಲೆ ಮಾಡಿ ಬಟ್ಟೆಗಳನ್ನು ಸುಟ್ಟು ಉಪ್ಪು ಮತ್ತು ಯೂರಿಯಾವನ್ನು ಬಳಸಿ ಮೃತದೇಹಗಳನ್ನು ಕೊಳೆಯುವಂತೆ ಮಾಡಿದ್ದರೆಂದು ಪ್ರಕರಣದ ಕುರಿತು ಪೊಲೀಸ್ ಇಲಾಖೆ ಹೇಳಿಕೆ ನೀಡಿದೆ.

ಮುಖ್ಯ ಅರೋಪಿ ಸುರೇಂದ್ರ ಚೌಹಾಣ್ ಸೇರಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಂದ್ರ ಚೌಹಾಣ್ ಕೊಲೆಯ ಯೋಜನೆಯನ್ನು ರೂಪಿಸಿ ಕೊಲೆಗೈದಿದ್ದಾನೆ. ಉಳಿದ 5 ಜನ ಆರೋಪಿಗಳು ಗುಂಡಿಯನ್ನು ತೆಗಯುವ ಮೂಲಕ ಕೊಲೆಗೆ ಸಹಕರಿಸಿದ್ದಾರೆ ಎಂದು ದಿವಾಸ್ ಪೊಲೀಸ್ ಠಾಣಾಧಿಕಾರಿ ಶಿವ ದಯಾಳ್ ಸಿಂಗ್ ಮಾಹಿತಿ ನೀಡಿದ್ದಾರೆ. ಉಳಿದ ಏಳು ಜನ ಆರೋಪಿಗಳಿಗಾಗಿ ದಿವಾಸ್ ಪೊಲೀಸರು ಶೋಧಕಾರ್ಯವನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: ಯುಪಿ: ಅತ್ಯಾಚಾರ ಆರೋಪಿಗಳ ಕಪಾಳಕ್ಕೆ ಹೊಡೆದು ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯ!

ಮೃತ ಕುಟುಂಬದ ಸಂಬಂಧಿಕರು ಮೇ 13ರಂದು ಕಾಣೆಯಾಗಿರುವ ಕಂಪ್ಲೇಂಟ್‌ ದಾಖಲಿಸಿದ್ದರು. ಆರೋಪಿಯು ಪೊಲೀಸರ ತನಿಖೆಯ ಹಾದಿಯನ್ನು ತಪ್ಪಿಸಲು ಹಲವು ಪ್ರಯತ್ನಗಳನ್ನು ಮಾಡಿದ್ದ. ಕೊಲೆ ಆರೋಪಿ ಸುರೇಂದ್ರ ಚೌಹಾಣ್ ಕುಟುಂಬಸ್ಥರ ಫೇಸ್‌ಬುಕ್ ಐಡಿಯನ್ನು ಬಳಸಿ ಮೃತ ರೂಪಾಲಿ ತನ್ನ ಇಚ್ಛೆಯಂತೆಯೇ ಮದುವೆಯಾಗಿದ್ದಾಳೆ. ಹಾಗೂ ಆಕೆಯ ತಾಯಿ ಮತ್ತು ಸಹೋದರಿಯರು ಅವಳೊಂದಿಗೆ ಸುರಕ್ಷಿತವಾಗಿದ್ದಾರೆ ಎಂಬ ಸಂದೇಶಗಳನ್ನು ಹರಿಬಿಟ್ಟು ಪೊಲೀಸರ ಕಣ್ಣು ತಪ್ಪಿಸಲು ಯತ್ನಿಸಿದ್ದಾನೆ. ಪೊಲೀಸರು ಸಂದೇಶ ಕಳುಹಿಸಲಾದ ಮೊಬೈಲ್ ಫೋನ್‌ ಅನ್ನು ಟ್ರೇಸ್‌ ಮಾಡಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

ಘಟನೆಯ ಹಿನ್ನಲೆ

ಕೊಲೆಯ ಮುಖ್ಯ ಆರೋಪಿ ಸುರೇಂದ್ರ ಚೌಹಾಣ್ ಮೃತ ಕುಟುಂಬಕ್ಕೆ ಪರಿಚಿತ ವ್ಯಕ್ತಿಯಾಗಿದ್ದು ಅವರ ಮನೆಗೆ ಬಂದು ಹೋಗುವ ಪರಿಪಾಠವನ್ನು ಬೆಳೆಸಿಕೊಂಡಿದ್ದ. ಮೃತ ರೂಪಾಲಿ ಮತ್ತು ಆರೋಪಿ ಸುರೇಂದ್ರನ ನಡುವೆ ಪ್ರೇಮ ಸಂಬಂಧವೂ ನಡೆದಿತ್ತು. ಇದ್ದಕ್ಕಿದ್ದಂತೆ ಸುರೇಂದ್ರ ಇನ್ನೊಂದು ಮಹಿಳೆಯೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದು ರೂಪಾಲಿಯಯನ್ನು ಸಿಟ್ಟಿಗೇಳಿಸಿತ್ತು. ಸುರೇಂದ್ರ ಮತ್ತು ತನ್ನ ಪೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ರೂಪಾಲಿ ಸುರೇಂದ್ರ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿಗೂ ಈ ಚಿತ್ರವನ್ನು ಕಳುಹಿಸಿದ್ದಳು. ರೂಪಾಲಿ ಮತ್ತು ಆಕೆಯ ಕುಟುಂಬ ತನ್ನ ನಿಶ್ಚಿತಾರ್ಥನ್ನು ಎಲ್ಲಿ ಮುರಿದುಹಾಕುತ್ತದೆಯೋ ಎಂಬ ಭಯದಲ್ಲಿ ಆರೋಪಿಯು ಕುಟುಂಬಸ್ಥರೆಲ್ಲರನ್ನು ಕೊಲೆ ಮಾಡಿ 8 ಅಡಿ ಗುಂಡಿಯಲ್ಲಿ ಹೂತಿದ್ದಾನೆ ಎಂದು ದಿವಾಸ್ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಾವ ರೀತಿಯಲ್ಲಿ ಕೊಲೆಯನ್ನು ಮಾಡಲಾಗಿದೆ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಯೋತ್ಪಾದನೆ ಆರೋಪ ಹೊತ್ತು 12 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...