Homeಮುಖಪುಟಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

- Advertisement -
- Advertisement -

ಒಂದು ತಿಂಗಳ ಹಿಂದೆ ಕಾಣೆಯಾಗಿದ್ದ ಒಂದೇ ಕುಟುಂಬದ ಐವರು ಶವವಾಗಿ 8 ಅಡಿ ಗುಂಡಿಯಲ್ಲಿ ಪತ್ತೆಯಾಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ದಿವಾಸ್ ಜಿಲ್ಲೆಯಲ್ಲಿ ನಡೆದಿದೆ. ದೇಹಗಳು ಜೀರ್ಣವಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಎಲ್ಲಾ ದೇಹಗಳನ್ನು ನಗ್ನವಾದ ಸ್ಥಿತಿಯಲ್ಲಿ ಕಂಡುಬಂದಿವೆ. ಪೊಲೀಸರು ಹಿಟಾಚಿಯನ್ನು ಬಳಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

45 ವರ್ಷ ವಯಸ್ಸಿನ ಮಮತಾ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ರೂಪಾಲಿ(21), ದಿವ್ಯಾ(14) ಮತ್ತು ಅವರ ಇಬ್ಬರು ಸೋದರ ಸಂಬಂಧಿಕರು ದಿವಾಸ್‌ನ ತಮ್ಮ ನಿವಾಸದಿಂದ ಮೇ 13 ರಂದು ಕಾಣೆಯಾಗಿದ್ದರು. ಮೃತ ಕುಟುಂಬದವರು ವಾಸವಿದ್ದ ಮನೆಯ ಮಾಲೀಕ ಮತ್ತು ಆತನ 12 ಜನ ಸಹಾಯಕರು ಈ ಭೀಕರ ಘಟನೆಯ ಹಿಂದೆ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಗುಂಡಿಯನ್ನು ತೋಡಿದಾಗ ದೇಹಗಳು ನಗ್ನಾವಸ್ಥೆಯಲ್ಲಿ ಪತ್ತೆಯಾಗಿದ್ದವು. ಆರೋಪಿಗಳು ಕೊಲೆ ಮಾಡಿ ಬಟ್ಟೆಗಳನ್ನು ಸುಟ್ಟು ಉಪ್ಪು ಮತ್ತು ಯೂರಿಯಾವನ್ನು ಬಳಸಿ ಮೃತದೇಹಗಳನ್ನು ಕೊಳೆಯುವಂತೆ ಮಾಡಿದ್ದರೆಂದು ಪ್ರಕರಣದ ಕುರಿತು ಪೊಲೀಸ್ ಇಲಾಖೆ ಹೇಳಿಕೆ ನೀಡಿದೆ.

ಮುಖ್ಯ ಅರೋಪಿ ಸುರೇಂದ್ರ ಚೌಹಾಣ್ ಸೇರಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಂದ್ರ ಚೌಹಾಣ್ ಕೊಲೆಯ ಯೋಜನೆಯನ್ನು ರೂಪಿಸಿ ಕೊಲೆಗೈದಿದ್ದಾನೆ. ಉಳಿದ 5 ಜನ ಆರೋಪಿಗಳು ಗುಂಡಿಯನ್ನು ತೆಗಯುವ ಮೂಲಕ ಕೊಲೆಗೆ ಸಹಕರಿಸಿದ್ದಾರೆ ಎಂದು ದಿವಾಸ್ ಪೊಲೀಸ್ ಠಾಣಾಧಿಕಾರಿ ಶಿವ ದಯಾಳ್ ಸಿಂಗ್ ಮಾಹಿತಿ ನೀಡಿದ್ದಾರೆ. ಉಳಿದ ಏಳು ಜನ ಆರೋಪಿಗಳಿಗಾಗಿ ದಿವಾಸ್ ಪೊಲೀಸರು ಶೋಧಕಾರ್ಯವನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: ಯುಪಿ: ಅತ್ಯಾಚಾರ ಆರೋಪಿಗಳ ಕಪಾಳಕ್ಕೆ ಹೊಡೆದು ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯ!

ಮೃತ ಕುಟುಂಬದ ಸಂಬಂಧಿಕರು ಮೇ 13ರಂದು ಕಾಣೆಯಾಗಿರುವ ಕಂಪ್ಲೇಂಟ್‌ ದಾಖಲಿಸಿದ್ದರು. ಆರೋಪಿಯು ಪೊಲೀಸರ ತನಿಖೆಯ ಹಾದಿಯನ್ನು ತಪ್ಪಿಸಲು ಹಲವು ಪ್ರಯತ್ನಗಳನ್ನು ಮಾಡಿದ್ದ. ಕೊಲೆ ಆರೋಪಿ ಸುರೇಂದ್ರ ಚೌಹಾಣ್ ಕುಟುಂಬಸ್ಥರ ಫೇಸ್‌ಬುಕ್ ಐಡಿಯನ್ನು ಬಳಸಿ ಮೃತ ರೂಪಾಲಿ ತನ್ನ ಇಚ್ಛೆಯಂತೆಯೇ ಮದುವೆಯಾಗಿದ್ದಾಳೆ. ಹಾಗೂ ಆಕೆಯ ತಾಯಿ ಮತ್ತು ಸಹೋದರಿಯರು ಅವಳೊಂದಿಗೆ ಸುರಕ್ಷಿತವಾಗಿದ್ದಾರೆ ಎಂಬ ಸಂದೇಶಗಳನ್ನು ಹರಿಬಿಟ್ಟು ಪೊಲೀಸರ ಕಣ್ಣು ತಪ್ಪಿಸಲು ಯತ್ನಿಸಿದ್ದಾನೆ. ಪೊಲೀಸರು ಸಂದೇಶ ಕಳುಹಿಸಲಾದ ಮೊಬೈಲ್ ಫೋನ್‌ ಅನ್ನು ಟ್ರೇಸ್‌ ಮಾಡಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

ಘಟನೆಯ ಹಿನ್ನಲೆ

ಕೊಲೆಯ ಮುಖ್ಯ ಆರೋಪಿ ಸುರೇಂದ್ರ ಚೌಹಾಣ್ ಮೃತ ಕುಟುಂಬಕ್ಕೆ ಪರಿಚಿತ ವ್ಯಕ್ತಿಯಾಗಿದ್ದು ಅವರ ಮನೆಗೆ ಬಂದು ಹೋಗುವ ಪರಿಪಾಠವನ್ನು ಬೆಳೆಸಿಕೊಂಡಿದ್ದ. ಮೃತ ರೂಪಾಲಿ ಮತ್ತು ಆರೋಪಿ ಸುರೇಂದ್ರನ ನಡುವೆ ಪ್ರೇಮ ಸಂಬಂಧವೂ ನಡೆದಿತ್ತು. ಇದ್ದಕ್ಕಿದ್ದಂತೆ ಸುರೇಂದ್ರ ಇನ್ನೊಂದು ಮಹಿಳೆಯೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದು ರೂಪಾಲಿಯಯನ್ನು ಸಿಟ್ಟಿಗೇಳಿಸಿತ್ತು. ಸುರೇಂದ್ರ ಮತ್ತು ತನ್ನ ಪೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ರೂಪಾಲಿ ಸುರೇಂದ್ರ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿಗೂ ಈ ಚಿತ್ರವನ್ನು ಕಳುಹಿಸಿದ್ದಳು. ರೂಪಾಲಿ ಮತ್ತು ಆಕೆಯ ಕುಟುಂಬ ತನ್ನ ನಿಶ್ಚಿತಾರ್ಥನ್ನು ಎಲ್ಲಿ ಮುರಿದುಹಾಕುತ್ತದೆಯೋ ಎಂಬ ಭಯದಲ್ಲಿ ಆರೋಪಿಯು ಕುಟುಂಬಸ್ಥರೆಲ್ಲರನ್ನು ಕೊಲೆ ಮಾಡಿ 8 ಅಡಿ ಗುಂಡಿಯಲ್ಲಿ ಹೂತಿದ್ದಾನೆ ಎಂದು ದಿವಾಸ್ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಾವ ರೀತಿಯಲ್ಲಿ ಕೊಲೆಯನ್ನು ಮಾಡಲಾಗಿದೆ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಯೋತ್ಪಾದನೆ ಆರೋಪ ಹೊತ್ತು 12 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...