Homeಮುಖಪುಟಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

- Advertisement -
- Advertisement -

ಒಂದು ತಿಂಗಳ ಹಿಂದೆ ಕಾಣೆಯಾಗಿದ್ದ ಒಂದೇ ಕುಟುಂಬದ ಐವರು ಶವವಾಗಿ 8 ಅಡಿ ಗುಂಡಿಯಲ್ಲಿ ಪತ್ತೆಯಾಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ದಿವಾಸ್ ಜಿಲ್ಲೆಯಲ್ಲಿ ನಡೆದಿದೆ. ದೇಹಗಳು ಜೀರ್ಣವಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಎಲ್ಲಾ ದೇಹಗಳನ್ನು ನಗ್ನವಾದ ಸ್ಥಿತಿಯಲ್ಲಿ ಕಂಡುಬಂದಿವೆ. ಪೊಲೀಸರು ಹಿಟಾಚಿಯನ್ನು ಬಳಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

45 ವರ್ಷ ವಯಸ್ಸಿನ ಮಮತಾ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ರೂಪಾಲಿ(21), ದಿವ್ಯಾ(14) ಮತ್ತು ಅವರ ಇಬ್ಬರು ಸೋದರ ಸಂಬಂಧಿಕರು ದಿವಾಸ್‌ನ ತಮ್ಮ ನಿವಾಸದಿಂದ ಮೇ 13 ರಂದು ಕಾಣೆಯಾಗಿದ್ದರು. ಮೃತ ಕುಟುಂಬದವರು ವಾಸವಿದ್ದ ಮನೆಯ ಮಾಲೀಕ ಮತ್ತು ಆತನ 12 ಜನ ಸಹಾಯಕರು ಈ ಭೀಕರ ಘಟನೆಯ ಹಿಂದೆ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಗುಂಡಿಯನ್ನು ತೋಡಿದಾಗ ದೇಹಗಳು ನಗ್ನಾವಸ್ಥೆಯಲ್ಲಿ ಪತ್ತೆಯಾಗಿದ್ದವು. ಆರೋಪಿಗಳು ಕೊಲೆ ಮಾಡಿ ಬಟ್ಟೆಗಳನ್ನು ಸುಟ್ಟು ಉಪ್ಪು ಮತ್ತು ಯೂರಿಯಾವನ್ನು ಬಳಸಿ ಮೃತದೇಹಗಳನ್ನು ಕೊಳೆಯುವಂತೆ ಮಾಡಿದ್ದರೆಂದು ಪ್ರಕರಣದ ಕುರಿತು ಪೊಲೀಸ್ ಇಲಾಖೆ ಹೇಳಿಕೆ ನೀಡಿದೆ.

ಮುಖ್ಯ ಅರೋಪಿ ಸುರೇಂದ್ರ ಚೌಹಾಣ್ ಸೇರಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಂದ್ರ ಚೌಹಾಣ್ ಕೊಲೆಯ ಯೋಜನೆಯನ್ನು ರೂಪಿಸಿ ಕೊಲೆಗೈದಿದ್ದಾನೆ. ಉಳಿದ 5 ಜನ ಆರೋಪಿಗಳು ಗುಂಡಿಯನ್ನು ತೆಗಯುವ ಮೂಲಕ ಕೊಲೆಗೆ ಸಹಕರಿಸಿದ್ದಾರೆ ಎಂದು ದಿವಾಸ್ ಪೊಲೀಸ್ ಠಾಣಾಧಿಕಾರಿ ಶಿವ ದಯಾಳ್ ಸಿಂಗ್ ಮಾಹಿತಿ ನೀಡಿದ್ದಾರೆ. ಉಳಿದ ಏಳು ಜನ ಆರೋಪಿಗಳಿಗಾಗಿ ದಿವಾಸ್ ಪೊಲೀಸರು ಶೋಧಕಾರ್ಯವನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: ಯುಪಿ: ಅತ್ಯಾಚಾರ ಆರೋಪಿಗಳ ಕಪಾಳಕ್ಕೆ ಹೊಡೆದು ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯ!

ಮೃತ ಕುಟುಂಬದ ಸಂಬಂಧಿಕರು ಮೇ 13ರಂದು ಕಾಣೆಯಾಗಿರುವ ಕಂಪ್ಲೇಂಟ್‌ ದಾಖಲಿಸಿದ್ದರು. ಆರೋಪಿಯು ಪೊಲೀಸರ ತನಿಖೆಯ ಹಾದಿಯನ್ನು ತಪ್ಪಿಸಲು ಹಲವು ಪ್ರಯತ್ನಗಳನ್ನು ಮಾಡಿದ್ದ. ಕೊಲೆ ಆರೋಪಿ ಸುರೇಂದ್ರ ಚೌಹಾಣ್ ಕುಟುಂಬಸ್ಥರ ಫೇಸ್‌ಬುಕ್ ಐಡಿಯನ್ನು ಬಳಸಿ ಮೃತ ರೂಪಾಲಿ ತನ್ನ ಇಚ್ಛೆಯಂತೆಯೇ ಮದುವೆಯಾಗಿದ್ದಾಳೆ. ಹಾಗೂ ಆಕೆಯ ತಾಯಿ ಮತ್ತು ಸಹೋದರಿಯರು ಅವಳೊಂದಿಗೆ ಸುರಕ್ಷಿತವಾಗಿದ್ದಾರೆ ಎಂಬ ಸಂದೇಶಗಳನ್ನು ಹರಿಬಿಟ್ಟು ಪೊಲೀಸರ ಕಣ್ಣು ತಪ್ಪಿಸಲು ಯತ್ನಿಸಿದ್ದಾನೆ. ಪೊಲೀಸರು ಸಂದೇಶ ಕಳುಹಿಸಲಾದ ಮೊಬೈಲ್ ಫೋನ್‌ ಅನ್ನು ಟ್ರೇಸ್‌ ಮಾಡಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

ಘಟನೆಯ ಹಿನ್ನಲೆ

ಕೊಲೆಯ ಮುಖ್ಯ ಆರೋಪಿ ಸುರೇಂದ್ರ ಚೌಹಾಣ್ ಮೃತ ಕುಟುಂಬಕ್ಕೆ ಪರಿಚಿತ ವ್ಯಕ್ತಿಯಾಗಿದ್ದು ಅವರ ಮನೆಗೆ ಬಂದು ಹೋಗುವ ಪರಿಪಾಠವನ್ನು ಬೆಳೆಸಿಕೊಂಡಿದ್ದ. ಮೃತ ರೂಪಾಲಿ ಮತ್ತು ಆರೋಪಿ ಸುರೇಂದ್ರನ ನಡುವೆ ಪ್ರೇಮ ಸಂಬಂಧವೂ ನಡೆದಿತ್ತು. ಇದ್ದಕ್ಕಿದ್ದಂತೆ ಸುರೇಂದ್ರ ಇನ್ನೊಂದು ಮಹಿಳೆಯೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದು ರೂಪಾಲಿಯಯನ್ನು ಸಿಟ್ಟಿಗೇಳಿಸಿತ್ತು. ಸುರೇಂದ್ರ ಮತ್ತು ತನ್ನ ಪೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ರೂಪಾಲಿ ಸುರೇಂದ್ರ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿಗೂ ಈ ಚಿತ್ರವನ್ನು ಕಳುಹಿಸಿದ್ದಳು. ರೂಪಾಲಿ ಮತ್ತು ಆಕೆಯ ಕುಟುಂಬ ತನ್ನ ನಿಶ್ಚಿತಾರ್ಥನ್ನು ಎಲ್ಲಿ ಮುರಿದುಹಾಕುತ್ತದೆಯೋ ಎಂಬ ಭಯದಲ್ಲಿ ಆರೋಪಿಯು ಕುಟುಂಬಸ್ಥರೆಲ್ಲರನ್ನು ಕೊಲೆ ಮಾಡಿ 8 ಅಡಿ ಗುಂಡಿಯಲ್ಲಿ ಹೂತಿದ್ದಾನೆ ಎಂದು ದಿವಾಸ್ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಾವ ರೀತಿಯಲ್ಲಿ ಕೊಲೆಯನ್ನು ಮಾಡಲಾಗಿದೆ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಯೋತ್ಪಾದನೆ ಆರೋಪ ಹೊತ್ತು 12 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...