Homeಮುಖಪುಟಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

- Advertisement -
- Advertisement -

ಒಂದು ತಿಂಗಳ ಹಿಂದೆ ಕಾಣೆಯಾಗಿದ್ದ ಒಂದೇ ಕುಟುಂಬದ ಐವರು ಶವವಾಗಿ 8 ಅಡಿ ಗುಂಡಿಯಲ್ಲಿ ಪತ್ತೆಯಾಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ದಿವಾಸ್ ಜಿಲ್ಲೆಯಲ್ಲಿ ನಡೆದಿದೆ. ದೇಹಗಳು ಜೀರ್ಣವಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಎಲ್ಲಾ ದೇಹಗಳನ್ನು ನಗ್ನವಾದ ಸ್ಥಿತಿಯಲ್ಲಿ ಕಂಡುಬಂದಿವೆ. ಪೊಲೀಸರು ಹಿಟಾಚಿಯನ್ನು ಬಳಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

45 ವರ್ಷ ವಯಸ್ಸಿನ ಮಮತಾ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ರೂಪಾಲಿ(21), ದಿವ್ಯಾ(14) ಮತ್ತು ಅವರ ಇಬ್ಬರು ಸೋದರ ಸಂಬಂಧಿಕರು ದಿವಾಸ್‌ನ ತಮ್ಮ ನಿವಾಸದಿಂದ ಮೇ 13 ರಂದು ಕಾಣೆಯಾಗಿದ್ದರು. ಮೃತ ಕುಟುಂಬದವರು ವಾಸವಿದ್ದ ಮನೆಯ ಮಾಲೀಕ ಮತ್ತು ಆತನ 12 ಜನ ಸಹಾಯಕರು ಈ ಭೀಕರ ಘಟನೆಯ ಹಿಂದೆ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಗುಂಡಿಯನ್ನು ತೋಡಿದಾಗ ದೇಹಗಳು ನಗ್ನಾವಸ್ಥೆಯಲ್ಲಿ ಪತ್ತೆಯಾಗಿದ್ದವು. ಆರೋಪಿಗಳು ಕೊಲೆ ಮಾಡಿ ಬಟ್ಟೆಗಳನ್ನು ಸುಟ್ಟು ಉಪ್ಪು ಮತ್ತು ಯೂರಿಯಾವನ್ನು ಬಳಸಿ ಮೃತದೇಹಗಳನ್ನು ಕೊಳೆಯುವಂತೆ ಮಾಡಿದ್ದರೆಂದು ಪ್ರಕರಣದ ಕುರಿತು ಪೊಲೀಸ್ ಇಲಾಖೆ ಹೇಳಿಕೆ ನೀಡಿದೆ.

ಮುಖ್ಯ ಅರೋಪಿ ಸುರೇಂದ್ರ ಚೌಹಾಣ್ ಸೇರಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಂದ್ರ ಚೌಹಾಣ್ ಕೊಲೆಯ ಯೋಜನೆಯನ್ನು ರೂಪಿಸಿ ಕೊಲೆಗೈದಿದ್ದಾನೆ. ಉಳಿದ 5 ಜನ ಆರೋಪಿಗಳು ಗುಂಡಿಯನ್ನು ತೆಗಯುವ ಮೂಲಕ ಕೊಲೆಗೆ ಸಹಕರಿಸಿದ್ದಾರೆ ಎಂದು ದಿವಾಸ್ ಪೊಲೀಸ್ ಠಾಣಾಧಿಕಾರಿ ಶಿವ ದಯಾಳ್ ಸಿಂಗ್ ಮಾಹಿತಿ ನೀಡಿದ್ದಾರೆ. ಉಳಿದ ಏಳು ಜನ ಆರೋಪಿಗಳಿಗಾಗಿ ದಿವಾಸ್ ಪೊಲೀಸರು ಶೋಧಕಾರ್ಯವನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: ಯುಪಿ: ಅತ್ಯಾಚಾರ ಆರೋಪಿಗಳ ಕಪಾಳಕ್ಕೆ ಹೊಡೆದು ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯ!

ಮೃತ ಕುಟುಂಬದ ಸಂಬಂಧಿಕರು ಮೇ 13ರಂದು ಕಾಣೆಯಾಗಿರುವ ಕಂಪ್ಲೇಂಟ್‌ ದಾಖಲಿಸಿದ್ದರು. ಆರೋಪಿಯು ಪೊಲೀಸರ ತನಿಖೆಯ ಹಾದಿಯನ್ನು ತಪ್ಪಿಸಲು ಹಲವು ಪ್ರಯತ್ನಗಳನ್ನು ಮಾಡಿದ್ದ. ಕೊಲೆ ಆರೋಪಿ ಸುರೇಂದ್ರ ಚೌಹಾಣ್ ಕುಟುಂಬಸ್ಥರ ಫೇಸ್‌ಬುಕ್ ಐಡಿಯನ್ನು ಬಳಸಿ ಮೃತ ರೂಪಾಲಿ ತನ್ನ ಇಚ್ಛೆಯಂತೆಯೇ ಮದುವೆಯಾಗಿದ್ದಾಳೆ. ಹಾಗೂ ಆಕೆಯ ತಾಯಿ ಮತ್ತು ಸಹೋದರಿಯರು ಅವಳೊಂದಿಗೆ ಸುರಕ್ಷಿತವಾಗಿದ್ದಾರೆ ಎಂಬ ಸಂದೇಶಗಳನ್ನು ಹರಿಬಿಟ್ಟು ಪೊಲೀಸರ ಕಣ್ಣು ತಪ್ಪಿಸಲು ಯತ್ನಿಸಿದ್ದಾನೆ. ಪೊಲೀಸರು ಸಂದೇಶ ಕಳುಹಿಸಲಾದ ಮೊಬೈಲ್ ಫೋನ್‌ ಅನ್ನು ಟ್ರೇಸ್‌ ಮಾಡಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

ಘಟನೆಯ ಹಿನ್ನಲೆ

ಕೊಲೆಯ ಮುಖ್ಯ ಆರೋಪಿ ಸುರೇಂದ್ರ ಚೌಹಾಣ್ ಮೃತ ಕುಟುಂಬಕ್ಕೆ ಪರಿಚಿತ ವ್ಯಕ್ತಿಯಾಗಿದ್ದು ಅವರ ಮನೆಗೆ ಬಂದು ಹೋಗುವ ಪರಿಪಾಠವನ್ನು ಬೆಳೆಸಿಕೊಂಡಿದ್ದ. ಮೃತ ರೂಪಾಲಿ ಮತ್ತು ಆರೋಪಿ ಸುರೇಂದ್ರನ ನಡುವೆ ಪ್ರೇಮ ಸಂಬಂಧವೂ ನಡೆದಿತ್ತು. ಇದ್ದಕ್ಕಿದ್ದಂತೆ ಸುರೇಂದ್ರ ಇನ್ನೊಂದು ಮಹಿಳೆಯೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದು ರೂಪಾಲಿಯಯನ್ನು ಸಿಟ್ಟಿಗೇಳಿಸಿತ್ತು. ಸುರೇಂದ್ರ ಮತ್ತು ತನ್ನ ಪೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ರೂಪಾಲಿ ಸುರೇಂದ್ರ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿಗೂ ಈ ಚಿತ್ರವನ್ನು ಕಳುಹಿಸಿದ್ದಳು. ರೂಪಾಲಿ ಮತ್ತು ಆಕೆಯ ಕುಟುಂಬ ತನ್ನ ನಿಶ್ಚಿತಾರ್ಥನ್ನು ಎಲ್ಲಿ ಮುರಿದುಹಾಕುತ್ತದೆಯೋ ಎಂಬ ಭಯದಲ್ಲಿ ಆರೋಪಿಯು ಕುಟುಂಬಸ್ಥರೆಲ್ಲರನ್ನು ಕೊಲೆ ಮಾಡಿ 8 ಅಡಿ ಗುಂಡಿಯಲ್ಲಿ ಹೂತಿದ್ದಾನೆ ಎಂದು ದಿವಾಸ್ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಾವ ರೀತಿಯಲ್ಲಿ ಕೊಲೆಯನ್ನು ಮಾಡಲಾಗಿದೆ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಯೋತ್ಪಾದನೆ ಆರೋಪ ಹೊತ್ತು 12 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....