Homeಮುಖಪುಟನಟ ಸುಶಾಂತ್‌ ಸಿಂಗ್‌ ಕುಟುಂಬದ ಐವರು ಸದಸ್ಯರು ರಸ್ತೆ ಅಪಘಾತದಲ್ಲಿ ದುರ್ಮರಣ

ನಟ ಸುಶಾಂತ್‌ ಸಿಂಗ್‌ ಕುಟುಂಬದ ಐವರು ಸದಸ್ಯರು ರಸ್ತೆ ಅಪಘಾತದಲ್ಲಿ ದುರ್ಮರಣ

ಕಳೆದ ವರ್ಷ ಸುಶಾಂತ್‌ ಸಿಂಗ್‌ ರಜಪೂತ್ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಸುಶಾಂತ್ ಕುಟುಂಬವು ಈ ನೋವಿನಲ್ಲಿ ಇರುವಾಗಲೇ ಮತ್ತೆ ಆಘಾತಕ್ಕೆ ಒಳಗಾಗಿದೆ.

- Advertisement -
- Advertisement -

ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ಬಾಲಿವುಡ್‌ ನಟ ಸುಶಾಂತ್‌ ಸಿಂಗ್ ರಜಪೂತ್‌ ಅವರ ಕುಟುಂಬಕ್ಕೆ ಸೇರಿದ ಕನಿಷ್ಠ ಐವರು ಸದಸ್ಯರು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ತೀವ್ರ ಗಾಯಗೊಂಡಿರುವ ಬಾಲ್‌ಮುಕುಂದ್ ಸಿಂಗ್ ಮತ್ತು ದಿಲ್‌ಖುಷ್‌ ಸಿಂಗ್ ಅವರನ್ನು ಪಾಟ್ನಾಕ್ಕೆ ಕರೆದೊಯ್ಯಲಾಗಿದ್ದು, ಬಾಲ್ಮಿಕಿ ಸಿಂಗ್‌ ಹಾಗೂ ತೋನು ಸಿಂಗ್ ಅವರನ್ನು ಲಖಿಸರಾಯ್‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಹಾರದ ಲಖಿಸರಾಯ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 333ರಲ್ಲಿ ಮಂಗಳವಾರ ಬೆಳಿಗ್ಗೆ ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದಾಗ ವಾಹನವು ಟ್ರಕ್‌ಗೆ ಡಿಕ್ಕಿಯಾಗಿದ್ದು ಐವರು ಮೃತಪಟ್ಟಿದ್ದಾರೆ.

ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ಒಪಿ ಸಿಂಗ್ ಅವರ ಸಹೋದರಿ ಗೀತಾ ದೇವಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಪಾಟ್ನಾದಿಂದ ವಾಪಾಸ್ಸಾಗುತ್ತಿದ್ದರು. ಓಪಿ ಸಿಂಗ್ ಅವರು ಸುಶಾಂತ್ ಸಿಂಗ್ ರಜಪೂತ್ ಅವರ ಸೋದರ ಮಾವನಾಗಿದ್ದಾರೆ. ಸುಶಾಂತ್ ಸಿಂಗ್ ಅವರು 2020ರ ಜೂನ್‌ 14ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.

ಇದನ್ನೂ ಓದಿರಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ಹಲ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರಾದ ಪ್ರೌಢಶಾಲೆ ಬಳಿ ಅಪಘಾತ ಸಂಭವಿಸಿದೆ. ಲಖಿಸರಾಯ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಕುಮಾರ್, “ಟ್ರಕ್ ಮತ್ತು ಸುಮೋ [ಎಸ್‌ಯುವಿ] ನಡುವೆ ಭಾರಿ ಡಿಕ್ಕಿ ಸಂಭವಿಸಿದ್ದು, ಹತ್ತು ಜನರು ಪಾಟ್ನಾದಿಂದ ಹಿಂತಿರುಗುತ್ತಿದ್ದರು. ಸುಮೋ ಚಾಲಕ ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಾಳುಗಳನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ಗಾಯಗೊಂಡಿರುವ ಬಾಲ್‌ಮುಕುಂದ್‌‌ ಸಿಂಗ್ ಮತ್ತು ದಿಲ್ ಖುಷ್ ಸಿಂಗ್ ಇಬ್ಬರನ್ನು ಉತ್ತಮ ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಲಾಗಿದ್ದು, ಉಳಿದ ಇಬ್ಬರಾದ ಬಾಲ್ಮಿಕಿ ಸಿಂಗ್ ಮತ್ತು ತೋನು ಸಿಂಗ್ ಅವರನ್ನು ಲಖಿಸರಾಯ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಲಖಿಸರಾಯ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರನ್ನು ಲಾಲ್ಜಿತ್ ಸಿಂಗ್ (ಒಪಿ ಸಿಂಗ್ ಅವರ ಸೋದರ ಸಂಬಂಧಿ), ಅವರ ಇಬ್ಬರು ಮಕ್ಕಳಾದ ಅಮಿತ್ ಶೇಖರ್ ಅಲಿಯಾಸ್ ನೇಮಾನಿ ಸಿಂಗ್ ಮತ್ತು ರಾಮಚಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಉಳಿದವರನ್ನು ಬೇಬಿದೇವಿ, ಅನಿತಾದೇವಿ ಮತ್ತು ಚಾಲಕ ಪ್ರೀತಂ ಕುಮಾರ್ ಎಂದು ಗುರುತಿಸಲಾಗಿದೆ. ಸಾವಿಗೀಡಾಗಿರುವ ಕುಮಾರ್, ಇದೇ ಕುಟುಂಬದವರೇ ಎಂಬುದು ಖಚಿತವಾಗಿಲ್ಲ.

ಜಮುಯಿ ಜಿಲ್ಲೆಯ ಭಂಡಾರ್ ಗ್ರಾಮದಲ್ಲಿನ ತಮ್ಮ ಮನೆಗೆ ಕುಟುಂಬವು ಹಿಂದಿರುಗುತ್ತಿದ್ದಾಗ ಅವರ ವಾಹನವು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ಆತ್ಮಹತ್ಯೆಗೆ ಶರಣಾಗಿದ್ದ ಸುಶಾಂತ್‌; ನೋವಿನಲ್ಲಿರುವ ಕುಟುಂಬಕ್ಕೆ ಮತ್ತೆ ಆಘಾತ

2020ರಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವು ಅನುಮಾನಗಳಿಗೆ ಎಡೆ ಮಾಡಿತ್ತು. ಆದರೆ ನಂತರದಲ್ಲಿ ನಡೆದ ತನಿಖೆಗಳು, ಊಹಾಪೋಹಗಳಿಗೆ ತೆರೆ ಎಳೆದಿದ್ದವು.

ಏಮ್ಸ್ ವೈದ್ಯಕೀಯ ಮಂಡಳಿಯು ಸಿಬಿಐಗೆ ನೀಡಿದ ವರದಿಯಲ್ಲಿ ಇದು ಕೊಲೆ ಅಲ್ಲ ಆತ್ಮಹತ್ಯೆ ಎಂದು ಹೇಳಿತ್ತು. “ಈ ವಿಷಯ ನಮಗೆ ಯಾವಾಗಲೋ ತಿಳಿದಿತ್ತು. ಅದರೆ ಈಗ ಅದನ್ನು ಪುನರ್‌ಸಾಬೀತುಪಡಿಸಲಾಗಿದೆ ಅಷ್ಟೆ” ಎಂದು ಮುಂಬೈ ಪೊಲೀಸ್ ಮುಖ್ಯಸ್ಥ ಪರಮ್‌ಬೀರ್ ಸಿಂಗ್ ಹೇಳಿದ್ದರು.

“34 ವರ್ಷದ ಬಾಲಿವುಡ್ ತಾರೆ ಸುಶಾಂತ್ ಸಿಂಗ್ ಅನ್ನು ಹತ್ಯೆ ಮಾಡಲಾಗಿದೆ ಎನ್ನುವ ಕುಟುಂಬದ ಹೇಳಿಕೆಗೆ ಯಾವುದೇ ಪುರಾವೆಗಳಿಲ್ಲ” ಎಂದು ಏಮ್ಸ್ ತಿಳಿಸಿತ್ತು. ಇದು ಸುಶಾಂತ್ ಕುಟುಂಬ ಮತ್ತು ಅವರ ವಕೀಲರಿಂದ ಬರುತ್ತಿರುವ ಆರೋಪಗಳಷ್ಟೆ ಎಂದು ತಳ್ಳಿಹಾಕಿತ್ತು.

ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆ ಎಂದು ಕರೆದಿದ್ದರು. ಆದರೆ ಸುಶಾಂತ್ ಕುಟುಂಬ ಸೇರಿದಂತೆ ಹಲವರು ಇದನ್ನು ಕೊಲೆ ಎಂದು ಕರೆದು ನ್ಯಾಯಕ್ಕಾಗಿ ಪ್ರಚಾರಾಂದೋಲನ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬ ವಕೀಲ ವಿಕಾಸ್ ಸಿಂಗ್ ಅವರು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡು, “ಇವರು ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸುವುದರ ಮೂಲಕ ಮೋಸ ಮಾಡಿದ್ದಾರೆ” ಎಂದು ಆರೋಪಿಸಿದ್ದರು.

ಸುಶಾಂತ್ ಸಿಂಗ್ ರಜಪೂತ್ ಅವರ ಜೀವನವನ್ನು ಆಧರಿಸಿ ತಯಾರಿಸಿರುವ ‘ನ್ಯಾಯ್: ದಿ ಜಸ್ಟೀಸ್’ ಚಿತ್ರವೂ ನಿರ್ಮಾಣವಾಗಿದೆ. ಈ ಸಿನಿಮಾವನ್ನು ಬಿಡುಗಡೆ ಮಾಡದಂತೆ ತಡೆಯಾಜ್ಞೆ ತರುವ ಪ್ರಯತ್ನವೂ ನಡೆದಿತ್ತು. ಮೊದಲೇ ನೋವಿನಲ್ಲಿದ್ದ ಕುಟುಂಬಕ್ಕೆ ಮತ್ತೊಂದು ಆಘಾತ ಉಂಟಾಗಿದೆ.


ಇದನ್ನೂ ಓದಿರಿ: ಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...