Homeಮುಖಪುಟನಟ ಸುಶಾಂತ್‌ ಸಿಂಗ್‌ ಕುಟುಂಬದ ಐವರು ಸದಸ್ಯರು ರಸ್ತೆ ಅಪಘಾತದಲ್ಲಿ ದುರ್ಮರಣ

ನಟ ಸುಶಾಂತ್‌ ಸಿಂಗ್‌ ಕುಟುಂಬದ ಐವರು ಸದಸ್ಯರು ರಸ್ತೆ ಅಪಘಾತದಲ್ಲಿ ದುರ್ಮರಣ

ಕಳೆದ ವರ್ಷ ಸುಶಾಂತ್‌ ಸಿಂಗ್‌ ರಜಪೂತ್ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಸುಶಾಂತ್ ಕುಟುಂಬವು ಈ ನೋವಿನಲ್ಲಿ ಇರುವಾಗಲೇ ಮತ್ತೆ ಆಘಾತಕ್ಕೆ ಒಳಗಾಗಿದೆ.

- Advertisement -
- Advertisement -

ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ಬಾಲಿವುಡ್‌ ನಟ ಸುಶಾಂತ್‌ ಸಿಂಗ್ ರಜಪೂತ್‌ ಅವರ ಕುಟುಂಬಕ್ಕೆ ಸೇರಿದ ಕನಿಷ್ಠ ಐವರು ಸದಸ್ಯರು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ತೀವ್ರ ಗಾಯಗೊಂಡಿರುವ ಬಾಲ್‌ಮುಕುಂದ್ ಸಿಂಗ್ ಮತ್ತು ದಿಲ್‌ಖುಷ್‌ ಸಿಂಗ್ ಅವರನ್ನು ಪಾಟ್ನಾಕ್ಕೆ ಕರೆದೊಯ್ಯಲಾಗಿದ್ದು, ಬಾಲ್ಮಿಕಿ ಸಿಂಗ್‌ ಹಾಗೂ ತೋನು ಸಿಂಗ್ ಅವರನ್ನು ಲಖಿಸರಾಯ್‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಹಾರದ ಲಖಿಸರಾಯ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 333ರಲ್ಲಿ ಮಂಗಳವಾರ ಬೆಳಿಗ್ಗೆ ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದಾಗ ವಾಹನವು ಟ್ರಕ್‌ಗೆ ಡಿಕ್ಕಿಯಾಗಿದ್ದು ಐವರು ಮೃತಪಟ್ಟಿದ್ದಾರೆ.

ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ಒಪಿ ಸಿಂಗ್ ಅವರ ಸಹೋದರಿ ಗೀತಾ ದೇವಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಪಾಟ್ನಾದಿಂದ ವಾಪಾಸ್ಸಾಗುತ್ತಿದ್ದರು. ಓಪಿ ಸಿಂಗ್ ಅವರು ಸುಶಾಂತ್ ಸಿಂಗ್ ರಜಪೂತ್ ಅವರ ಸೋದರ ಮಾವನಾಗಿದ್ದಾರೆ. ಸುಶಾಂತ್ ಸಿಂಗ್ ಅವರು 2020ರ ಜೂನ್‌ 14ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.

ಇದನ್ನೂ ಓದಿರಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ಹಲ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರಾದ ಪ್ರೌಢಶಾಲೆ ಬಳಿ ಅಪಘಾತ ಸಂಭವಿಸಿದೆ. ಲಖಿಸರಾಯ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಕುಮಾರ್, “ಟ್ರಕ್ ಮತ್ತು ಸುಮೋ [ಎಸ್‌ಯುವಿ] ನಡುವೆ ಭಾರಿ ಡಿಕ್ಕಿ ಸಂಭವಿಸಿದ್ದು, ಹತ್ತು ಜನರು ಪಾಟ್ನಾದಿಂದ ಹಿಂತಿರುಗುತ್ತಿದ್ದರು. ಸುಮೋ ಚಾಲಕ ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಾಳುಗಳನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ಗಾಯಗೊಂಡಿರುವ ಬಾಲ್‌ಮುಕುಂದ್‌‌ ಸಿಂಗ್ ಮತ್ತು ದಿಲ್ ಖುಷ್ ಸಿಂಗ್ ಇಬ್ಬರನ್ನು ಉತ್ತಮ ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಲಾಗಿದ್ದು, ಉಳಿದ ಇಬ್ಬರಾದ ಬಾಲ್ಮಿಕಿ ಸಿಂಗ್ ಮತ್ತು ತೋನು ಸಿಂಗ್ ಅವರನ್ನು ಲಖಿಸರಾಯ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಲಖಿಸರಾಯ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರನ್ನು ಲಾಲ್ಜಿತ್ ಸಿಂಗ್ (ಒಪಿ ಸಿಂಗ್ ಅವರ ಸೋದರ ಸಂಬಂಧಿ), ಅವರ ಇಬ್ಬರು ಮಕ್ಕಳಾದ ಅಮಿತ್ ಶೇಖರ್ ಅಲಿಯಾಸ್ ನೇಮಾನಿ ಸಿಂಗ್ ಮತ್ತು ರಾಮಚಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಉಳಿದವರನ್ನು ಬೇಬಿದೇವಿ, ಅನಿತಾದೇವಿ ಮತ್ತು ಚಾಲಕ ಪ್ರೀತಂ ಕುಮಾರ್ ಎಂದು ಗುರುತಿಸಲಾಗಿದೆ. ಸಾವಿಗೀಡಾಗಿರುವ ಕುಮಾರ್, ಇದೇ ಕುಟುಂಬದವರೇ ಎಂಬುದು ಖಚಿತವಾಗಿಲ್ಲ.

ಜಮುಯಿ ಜಿಲ್ಲೆಯ ಭಂಡಾರ್ ಗ್ರಾಮದಲ್ಲಿನ ತಮ್ಮ ಮನೆಗೆ ಕುಟುಂಬವು ಹಿಂದಿರುಗುತ್ತಿದ್ದಾಗ ಅವರ ವಾಹನವು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ಆತ್ಮಹತ್ಯೆಗೆ ಶರಣಾಗಿದ್ದ ಸುಶಾಂತ್‌; ನೋವಿನಲ್ಲಿರುವ ಕುಟುಂಬಕ್ಕೆ ಮತ್ತೆ ಆಘಾತ

2020ರಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವು ಅನುಮಾನಗಳಿಗೆ ಎಡೆ ಮಾಡಿತ್ತು. ಆದರೆ ನಂತರದಲ್ಲಿ ನಡೆದ ತನಿಖೆಗಳು, ಊಹಾಪೋಹಗಳಿಗೆ ತೆರೆ ಎಳೆದಿದ್ದವು.

ಏಮ್ಸ್ ವೈದ್ಯಕೀಯ ಮಂಡಳಿಯು ಸಿಬಿಐಗೆ ನೀಡಿದ ವರದಿಯಲ್ಲಿ ಇದು ಕೊಲೆ ಅಲ್ಲ ಆತ್ಮಹತ್ಯೆ ಎಂದು ಹೇಳಿತ್ತು. “ಈ ವಿಷಯ ನಮಗೆ ಯಾವಾಗಲೋ ತಿಳಿದಿತ್ತು. ಅದರೆ ಈಗ ಅದನ್ನು ಪುನರ್‌ಸಾಬೀತುಪಡಿಸಲಾಗಿದೆ ಅಷ್ಟೆ” ಎಂದು ಮುಂಬೈ ಪೊಲೀಸ್ ಮುಖ್ಯಸ್ಥ ಪರಮ್‌ಬೀರ್ ಸಿಂಗ್ ಹೇಳಿದ್ದರು.

“34 ವರ್ಷದ ಬಾಲಿವುಡ್ ತಾರೆ ಸುಶಾಂತ್ ಸಿಂಗ್ ಅನ್ನು ಹತ್ಯೆ ಮಾಡಲಾಗಿದೆ ಎನ್ನುವ ಕುಟುಂಬದ ಹೇಳಿಕೆಗೆ ಯಾವುದೇ ಪುರಾವೆಗಳಿಲ್ಲ” ಎಂದು ಏಮ್ಸ್ ತಿಳಿಸಿತ್ತು. ಇದು ಸುಶಾಂತ್ ಕುಟುಂಬ ಮತ್ತು ಅವರ ವಕೀಲರಿಂದ ಬರುತ್ತಿರುವ ಆರೋಪಗಳಷ್ಟೆ ಎಂದು ತಳ್ಳಿಹಾಕಿತ್ತು.

ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆ ಎಂದು ಕರೆದಿದ್ದರು. ಆದರೆ ಸುಶಾಂತ್ ಕುಟುಂಬ ಸೇರಿದಂತೆ ಹಲವರು ಇದನ್ನು ಕೊಲೆ ಎಂದು ಕರೆದು ನ್ಯಾಯಕ್ಕಾಗಿ ಪ್ರಚಾರಾಂದೋಲನ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬ ವಕೀಲ ವಿಕಾಸ್ ಸಿಂಗ್ ಅವರು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡು, “ಇವರು ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸುವುದರ ಮೂಲಕ ಮೋಸ ಮಾಡಿದ್ದಾರೆ” ಎಂದು ಆರೋಪಿಸಿದ್ದರು.

ಸುಶಾಂತ್ ಸಿಂಗ್ ರಜಪೂತ್ ಅವರ ಜೀವನವನ್ನು ಆಧರಿಸಿ ತಯಾರಿಸಿರುವ ‘ನ್ಯಾಯ್: ದಿ ಜಸ್ಟೀಸ್’ ಚಿತ್ರವೂ ನಿರ್ಮಾಣವಾಗಿದೆ. ಈ ಸಿನಿಮಾವನ್ನು ಬಿಡುಗಡೆ ಮಾಡದಂತೆ ತಡೆಯಾಜ್ಞೆ ತರುವ ಪ್ರಯತ್ನವೂ ನಡೆದಿತ್ತು. ಮೊದಲೇ ನೋವಿನಲ್ಲಿದ್ದ ಕುಟುಂಬಕ್ಕೆ ಮತ್ತೊಂದು ಆಘಾತ ಉಂಟಾಗಿದೆ.


ಇದನ್ನೂ ಓದಿರಿ: ಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...