Homeಮುಖಪುಟಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್

ಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್

- Advertisement -
- Advertisement -

ಜಾರ್ಖಂಡ್‌ನ ಐವರು ವಲಸೆ ಕಾರ್ಮಿಕರನ್ನು ಪಶ್ಚಿಮ ಆಫ್ರಿಕಾದ ನೈಜರ್‌ನಲ್ಲಿ ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಅವರು ಜನವರಿ 2024ರಲ್ಲಿ ಕಲ್ಪತರು ಪವರ್ ಟ್ರಾನ್ಸ್‌ಮಿಷನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡಲು ನೈಜರ್‌ಗೆ ವಲಸೆ ಹೋಗಿದ್ದರು. ಅಂದಿನಿಂದ ಮನೆಗೆ ಹಿಂತಿರುಗಿಲ್ಲ ಎನ್ನಲಾಗಿದೆ.

ಕಳೆದ ಶುಕ್ರವಾರ ಮಧ್ಯಾಹ್ನ ಕಾರ್ಮಿಕರ ಅಪಹರಣ ನಡೆದಿದೆ ಎಂದು ವರದಿಯಾಗಿದೆ.ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯ ಬಾಗೋದರ್ ಪೊಲೀಸ್ ಠಾಣೆ ವ್ಯಾಪ್ತಿಯ ಡೊಂಡ್ಲೋ ಪಂಚಾಯತ್‌ನ ಸಂಜಯ್ ಮಹತೋ, ಫಲ್ಜಿತ್ ಮಹತೋ, ರಾಜು ಮಹತೋ,ಚಂದ್ರಿಕಾ ಮಹತೋ ಮತ್ತು ಮುಂಡ್ರೋ ಪಂಚಾಯತ್‌ನ ಉತ್ತಮ್ ಮಹತೋ ಅಪಹರಣಕ್ಕೊಳಗಾದವರಲ್ಲಿ ಸೇರಿದ್ದಾರೆ.

ಇವರೊಂದಿಗೆ ಕೆಲಸ ಮಾಡುತ್ತಿದ್ದ ಇತರ ವಲಸೆ ಕಾರ್ಮಿಕರ ಪ್ರಕಾರ, ಸ್ಥಳೀಯರ ಗುಂಪೊಂದು ಕೆಲಸ ಸ್ಥಳದ ಮೇಲೆ ದಾಳಿ ನಡೆಸಿ, ಸರ್ಕಾರದಿಂದ ನಿಯೋಜಿಸಲ್ಪಟ್ಟ ಹನ್ನೆರಡು ಭದ್ರತಾ ಸಿಬ್ಬಂದಿಯನ್ನು ಕೊಂದು, ಬಂದೂಕು ತೋರಿಸಿ ಒಬ್ಬ ಸ್ಥಳೀಯ ಸೇರಿದಂತೆ ಆರು ಜನರನ್ನು ಕರೆದೊಯ್ದಿದೆ ಎಂದು ವರದಿಯಾಗಿದೆ.

“ನನ್ನ ಪತಿ ಸಂಜಯ್ ಮಹ್ತೋ ಕೆಲಸಕ್ಕೆಂದು ನೈಜರ್‌ಗೆ ಹೋಗಿದ್ದರು. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನನಗೆ ಅವರಿಂದ ಕೊನೆಯ ಬಾರಿಗೆ ಕರೆ ಬಂದಿತ್ತು, ನಂತರ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಅವರನ್ನು ಅಪಹರಿಸಲಾಗಿದೆ ಎಂದು ಅವರೊಂದಿಗೆ ಕೆಲಸ ಮಾಡುತ್ತಿರುವ ಇತರರು ನಮಗೆ ತಿಳಿಸಿದ್ದಾರೆ” ಎಂದು ಸಂಜಯ್ ಮಹ್ತೋ ಅವರ ಪತ್ನಿ ಹೇಳಿದ್ದಾರೆ.ನನ್ನ ಪತಿ ಸುರಕ್ಷಿತವಾಗಿ ಮನೆಗೆ ಮರಳಲು ವ್ಯವಸ್ಥೆ ಮಾಡುವಂತೆ ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಫಲ್ಜಿತ್ ಕುಮಾರ್ ಮಹ್ತೊ ಅವರು 2024ರ ಜನವರಿಯಲ್ಲಿ ನೈಜೀರಿಯಾಕ್ಕೆ ಹೋಗಿದ್ದರು. ಏಪ್ರಿಲ್ 25ರಂದು ಬೈಕ್‌ನಲ್ಲಿ ಬಂದ ಕೆಲವರು ಅವರನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ಅವರ ಮೊಬೈಲ್‌ ಸ್ವಿಚ್ ಆಫ್ ಆಗಿದೆ ಎಂದು ಸಹೋದರ ದಾಮೋದರ್ ಮಹ್ತೊ ಹೇಳಿದ್ಧಾರೆ. ಅವರನ್ನು ಪತ್ತೆಹಚ್ಚಲು ಮತ್ತು ಅವರು ಭಾರತಕ್ಕೆ ಸುರಕ್ಷಿತವಾಗಿ ಮರಳಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ವಲಸೆ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸಿಕಂದರ್ ಅಲಿ, ಅಪಹರಣಕ್ಕೊಳಗಾದವರು ಕಲ್ಪತರು ಪವರ್ ಟ್ರಾನ್ಸ್ಮಿಷನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ತಕ್ಷಣ ಕಾರ್ಮಿಕರನ್ನು ಬಿಡುಗಡೆ ಮಾಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

“ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದೇವೆ, ಈ ವಿಷಯದಲ್ಲಿ ಸಕಾಲಿಕ ಕ್ರಮ ತೆಗೆದುಕೊಂಡು ಸಂಕಷ್ಟದಲ್ಲಿರುವ ಕಾರ್ಮಿಕರನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ವಿನಂತಿಸುತ್ತಿದ್ದೇವೆ” ಎಂದು ಸಿಕಂದರ್ ಅಲಿ ಹೇಳಿದ್ದಾರೆ.

ಈ ವಿಷಯ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಗಮನಕ್ಕೆ ಬಂದಿದ್ದು, ಅವರು ವಿದೇಶಾಂಗ ಸಚಿವ ಎಸ್ ಜೈಶಕರ್ ಅವರ ಸಹಾಯವನ್ನು ಕೋರಿದ್ದಾರೆ.

ಗೌರವಾನ್ವಿತ ಕೇಂದ್ರ ವಿದೇಶಾಂಗ ಸಚಿವರೇ ನೈಜರ್‌ನಲ್ಲಿ ಅಪಹರಿಸಲ್ಪಟ್ಟಿರುವ ಜಾರ್ಖಂಡ್‌ನ ನಮ್ಮ ವಲಸೆ ಸಹೋದರರಿಗೆ ದಯವಿಟ್ಟು ಸಹಾಯ ಮಾಡುವಂತೆ ವಿನಂತಿಸುತ್ತೇನೆ ಎಂದು ಸಿಎಂ ಹೇಮಂತ್ ಸೊರೇನ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಉತ್ತರ ಪ್ರದೇಶ| ತೀವ್ರ ಗಾಯಗಳಿಂದ ದಲಿತ ಅತ್ಯಾಚಾರ ಸಂತ್ರಸ್ತೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...