Homeಮುಖಪುಟಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್

ಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್

- Advertisement -
- Advertisement -

ಜಾರ್ಖಂಡ್‌ನ ಐವರು ವಲಸೆ ಕಾರ್ಮಿಕರನ್ನು ಪಶ್ಚಿಮ ಆಫ್ರಿಕಾದ ನೈಜರ್‌ನಲ್ಲಿ ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಅವರು ಜನವರಿ 2024ರಲ್ಲಿ ಕಲ್ಪತರು ಪವರ್ ಟ್ರಾನ್ಸ್‌ಮಿಷನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡಲು ನೈಜರ್‌ಗೆ ವಲಸೆ ಹೋಗಿದ್ದರು. ಅಂದಿನಿಂದ ಮನೆಗೆ ಹಿಂತಿರುಗಿಲ್ಲ ಎನ್ನಲಾಗಿದೆ.

ಕಳೆದ ಶುಕ್ರವಾರ ಮಧ್ಯಾಹ್ನ ಕಾರ್ಮಿಕರ ಅಪಹರಣ ನಡೆದಿದೆ ಎಂದು ವರದಿಯಾಗಿದೆ.ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯ ಬಾಗೋದರ್ ಪೊಲೀಸ್ ಠಾಣೆ ವ್ಯಾಪ್ತಿಯ ಡೊಂಡ್ಲೋ ಪಂಚಾಯತ್‌ನ ಸಂಜಯ್ ಮಹತೋ, ಫಲ್ಜಿತ್ ಮಹತೋ, ರಾಜು ಮಹತೋ,ಚಂದ್ರಿಕಾ ಮಹತೋ ಮತ್ತು ಮುಂಡ್ರೋ ಪಂಚಾಯತ್‌ನ ಉತ್ತಮ್ ಮಹತೋ ಅಪಹರಣಕ್ಕೊಳಗಾದವರಲ್ಲಿ ಸೇರಿದ್ದಾರೆ.

ಇವರೊಂದಿಗೆ ಕೆಲಸ ಮಾಡುತ್ತಿದ್ದ ಇತರ ವಲಸೆ ಕಾರ್ಮಿಕರ ಪ್ರಕಾರ, ಸ್ಥಳೀಯರ ಗುಂಪೊಂದು ಕೆಲಸ ಸ್ಥಳದ ಮೇಲೆ ದಾಳಿ ನಡೆಸಿ, ಸರ್ಕಾರದಿಂದ ನಿಯೋಜಿಸಲ್ಪಟ್ಟ ಹನ್ನೆರಡು ಭದ್ರತಾ ಸಿಬ್ಬಂದಿಯನ್ನು ಕೊಂದು, ಬಂದೂಕು ತೋರಿಸಿ ಒಬ್ಬ ಸ್ಥಳೀಯ ಸೇರಿದಂತೆ ಆರು ಜನರನ್ನು ಕರೆದೊಯ್ದಿದೆ ಎಂದು ವರದಿಯಾಗಿದೆ.

“ನನ್ನ ಪತಿ ಸಂಜಯ್ ಮಹ್ತೋ ಕೆಲಸಕ್ಕೆಂದು ನೈಜರ್‌ಗೆ ಹೋಗಿದ್ದರು. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನನಗೆ ಅವರಿಂದ ಕೊನೆಯ ಬಾರಿಗೆ ಕರೆ ಬಂದಿತ್ತು, ನಂತರ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಅವರನ್ನು ಅಪಹರಿಸಲಾಗಿದೆ ಎಂದು ಅವರೊಂದಿಗೆ ಕೆಲಸ ಮಾಡುತ್ತಿರುವ ಇತರರು ನಮಗೆ ತಿಳಿಸಿದ್ದಾರೆ” ಎಂದು ಸಂಜಯ್ ಮಹ್ತೋ ಅವರ ಪತ್ನಿ ಹೇಳಿದ್ದಾರೆ.ನನ್ನ ಪತಿ ಸುರಕ್ಷಿತವಾಗಿ ಮನೆಗೆ ಮರಳಲು ವ್ಯವಸ್ಥೆ ಮಾಡುವಂತೆ ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಫಲ್ಜಿತ್ ಕುಮಾರ್ ಮಹ್ತೊ ಅವರು 2024ರ ಜನವರಿಯಲ್ಲಿ ನೈಜೀರಿಯಾಕ್ಕೆ ಹೋಗಿದ್ದರು. ಏಪ್ರಿಲ್ 25ರಂದು ಬೈಕ್‌ನಲ್ಲಿ ಬಂದ ಕೆಲವರು ಅವರನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ಅವರ ಮೊಬೈಲ್‌ ಸ್ವಿಚ್ ಆಫ್ ಆಗಿದೆ ಎಂದು ಸಹೋದರ ದಾಮೋದರ್ ಮಹ್ತೊ ಹೇಳಿದ್ಧಾರೆ. ಅವರನ್ನು ಪತ್ತೆಹಚ್ಚಲು ಮತ್ತು ಅವರು ಭಾರತಕ್ಕೆ ಸುರಕ್ಷಿತವಾಗಿ ಮರಳಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ವಲಸೆ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸಿಕಂದರ್ ಅಲಿ, ಅಪಹರಣಕ್ಕೊಳಗಾದವರು ಕಲ್ಪತರು ಪವರ್ ಟ್ರಾನ್ಸ್ಮಿಷನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ತಕ್ಷಣ ಕಾರ್ಮಿಕರನ್ನು ಬಿಡುಗಡೆ ಮಾಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

“ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದೇವೆ, ಈ ವಿಷಯದಲ್ಲಿ ಸಕಾಲಿಕ ಕ್ರಮ ತೆಗೆದುಕೊಂಡು ಸಂಕಷ್ಟದಲ್ಲಿರುವ ಕಾರ್ಮಿಕರನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ವಿನಂತಿಸುತ್ತಿದ್ದೇವೆ” ಎಂದು ಸಿಕಂದರ್ ಅಲಿ ಹೇಳಿದ್ದಾರೆ.

ಈ ವಿಷಯ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಗಮನಕ್ಕೆ ಬಂದಿದ್ದು, ಅವರು ವಿದೇಶಾಂಗ ಸಚಿವ ಎಸ್ ಜೈಶಕರ್ ಅವರ ಸಹಾಯವನ್ನು ಕೋರಿದ್ದಾರೆ.

ಗೌರವಾನ್ವಿತ ಕೇಂದ್ರ ವಿದೇಶಾಂಗ ಸಚಿವರೇ ನೈಜರ್‌ನಲ್ಲಿ ಅಪಹರಿಸಲ್ಪಟ್ಟಿರುವ ಜಾರ್ಖಂಡ್‌ನ ನಮ್ಮ ವಲಸೆ ಸಹೋದರರಿಗೆ ದಯವಿಟ್ಟು ಸಹಾಯ ಮಾಡುವಂತೆ ವಿನಂತಿಸುತ್ತೇನೆ ಎಂದು ಸಿಎಂ ಹೇಮಂತ್ ಸೊರೇನ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಉತ್ತರ ಪ್ರದೇಶ| ತೀವ್ರ ಗಾಯಗಳಿಂದ ದಲಿತ ಅತ್ಯಾಚಾರ ಸಂತ್ರಸ್ತೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...