Homeಮುಖಪುಟಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್

ಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್

- Advertisement -
- Advertisement -

ಜಾರ್ಖಂಡ್‌ನ ಐವರು ವಲಸೆ ಕಾರ್ಮಿಕರನ್ನು ಪಶ್ಚಿಮ ಆಫ್ರಿಕಾದ ನೈಜರ್‌ನಲ್ಲಿ ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಅವರು ಜನವರಿ 2024ರಲ್ಲಿ ಕಲ್ಪತರು ಪವರ್ ಟ್ರಾನ್ಸ್‌ಮಿಷನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡಲು ನೈಜರ್‌ಗೆ ವಲಸೆ ಹೋಗಿದ್ದರು. ಅಂದಿನಿಂದ ಮನೆಗೆ ಹಿಂತಿರುಗಿಲ್ಲ ಎನ್ನಲಾಗಿದೆ.

ಕಳೆದ ಶುಕ್ರವಾರ ಮಧ್ಯಾಹ್ನ ಕಾರ್ಮಿಕರ ಅಪಹರಣ ನಡೆದಿದೆ ಎಂದು ವರದಿಯಾಗಿದೆ.ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯ ಬಾಗೋದರ್ ಪೊಲೀಸ್ ಠಾಣೆ ವ್ಯಾಪ್ತಿಯ ಡೊಂಡ್ಲೋ ಪಂಚಾಯತ್‌ನ ಸಂಜಯ್ ಮಹತೋ, ಫಲ್ಜಿತ್ ಮಹತೋ, ರಾಜು ಮಹತೋ,ಚಂದ್ರಿಕಾ ಮಹತೋ ಮತ್ತು ಮುಂಡ್ರೋ ಪಂಚಾಯತ್‌ನ ಉತ್ತಮ್ ಮಹತೋ ಅಪಹರಣಕ್ಕೊಳಗಾದವರಲ್ಲಿ ಸೇರಿದ್ದಾರೆ.

ಇವರೊಂದಿಗೆ ಕೆಲಸ ಮಾಡುತ್ತಿದ್ದ ಇತರ ವಲಸೆ ಕಾರ್ಮಿಕರ ಪ್ರಕಾರ, ಸ್ಥಳೀಯರ ಗುಂಪೊಂದು ಕೆಲಸ ಸ್ಥಳದ ಮೇಲೆ ದಾಳಿ ನಡೆಸಿ, ಸರ್ಕಾರದಿಂದ ನಿಯೋಜಿಸಲ್ಪಟ್ಟ ಹನ್ನೆರಡು ಭದ್ರತಾ ಸಿಬ್ಬಂದಿಯನ್ನು ಕೊಂದು, ಬಂದೂಕು ತೋರಿಸಿ ಒಬ್ಬ ಸ್ಥಳೀಯ ಸೇರಿದಂತೆ ಆರು ಜನರನ್ನು ಕರೆದೊಯ್ದಿದೆ ಎಂದು ವರದಿಯಾಗಿದೆ.

“ನನ್ನ ಪತಿ ಸಂಜಯ್ ಮಹ್ತೋ ಕೆಲಸಕ್ಕೆಂದು ನೈಜರ್‌ಗೆ ಹೋಗಿದ್ದರು. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನನಗೆ ಅವರಿಂದ ಕೊನೆಯ ಬಾರಿಗೆ ಕರೆ ಬಂದಿತ್ತು, ನಂತರ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಅವರನ್ನು ಅಪಹರಿಸಲಾಗಿದೆ ಎಂದು ಅವರೊಂದಿಗೆ ಕೆಲಸ ಮಾಡುತ್ತಿರುವ ಇತರರು ನಮಗೆ ತಿಳಿಸಿದ್ದಾರೆ” ಎಂದು ಸಂಜಯ್ ಮಹ್ತೋ ಅವರ ಪತ್ನಿ ಹೇಳಿದ್ದಾರೆ.ನನ್ನ ಪತಿ ಸುರಕ್ಷಿತವಾಗಿ ಮನೆಗೆ ಮರಳಲು ವ್ಯವಸ್ಥೆ ಮಾಡುವಂತೆ ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಫಲ್ಜಿತ್ ಕುಮಾರ್ ಮಹ್ತೊ ಅವರು 2024ರ ಜನವರಿಯಲ್ಲಿ ನೈಜೀರಿಯಾಕ್ಕೆ ಹೋಗಿದ್ದರು. ಏಪ್ರಿಲ್ 25ರಂದು ಬೈಕ್‌ನಲ್ಲಿ ಬಂದ ಕೆಲವರು ಅವರನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ಅವರ ಮೊಬೈಲ್‌ ಸ್ವಿಚ್ ಆಫ್ ಆಗಿದೆ ಎಂದು ಸಹೋದರ ದಾಮೋದರ್ ಮಹ್ತೊ ಹೇಳಿದ್ಧಾರೆ. ಅವರನ್ನು ಪತ್ತೆಹಚ್ಚಲು ಮತ್ತು ಅವರು ಭಾರತಕ್ಕೆ ಸುರಕ್ಷಿತವಾಗಿ ಮರಳಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ವಲಸೆ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸಿಕಂದರ್ ಅಲಿ, ಅಪಹರಣಕ್ಕೊಳಗಾದವರು ಕಲ್ಪತರು ಪವರ್ ಟ್ರಾನ್ಸ್ಮಿಷನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ತಕ್ಷಣ ಕಾರ್ಮಿಕರನ್ನು ಬಿಡುಗಡೆ ಮಾಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

“ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದೇವೆ, ಈ ವಿಷಯದಲ್ಲಿ ಸಕಾಲಿಕ ಕ್ರಮ ತೆಗೆದುಕೊಂಡು ಸಂಕಷ್ಟದಲ್ಲಿರುವ ಕಾರ್ಮಿಕರನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ವಿನಂತಿಸುತ್ತಿದ್ದೇವೆ” ಎಂದು ಸಿಕಂದರ್ ಅಲಿ ಹೇಳಿದ್ದಾರೆ.

ಈ ವಿಷಯ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಗಮನಕ್ಕೆ ಬಂದಿದ್ದು, ಅವರು ವಿದೇಶಾಂಗ ಸಚಿವ ಎಸ್ ಜೈಶಕರ್ ಅವರ ಸಹಾಯವನ್ನು ಕೋರಿದ್ದಾರೆ.

ಗೌರವಾನ್ವಿತ ಕೇಂದ್ರ ವಿದೇಶಾಂಗ ಸಚಿವರೇ ನೈಜರ್‌ನಲ್ಲಿ ಅಪಹರಿಸಲ್ಪಟ್ಟಿರುವ ಜಾರ್ಖಂಡ್‌ನ ನಮ್ಮ ವಲಸೆ ಸಹೋದರರಿಗೆ ದಯವಿಟ್ಟು ಸಹಾಯ ಮಾಡುವಂತೆ ವಿನಂತಿಸುತ್ತೇನೆ ಎಂದು ಸಿಎಂ ಹೇಮಂತ್ ಸೊರೇನ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಉತ್ತರ ಪ್ರದೇಶ| ತೀವ್ರ ಗಾಯಗಳಿಂದ ದಲಿತ ಅತ್ಯಾಚಾರ ಸಂತ್ರಸ್ತೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...