Homeಮುಖಪುಟಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

- Advertisement -
- Advertisement -

ಔಪಚಾರಿಕವಾಗಿ ಫೇಸ್‌ಬುಕ್ ಎಂದು ಕರೆಯಲ್ಪಡುವ ಮೆಟಾ ಪ್ಲಾಟ್‌ಫಾರ್ಮ್‌ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಒಂದು ಫೇಸ್‌ಬುಕ್ ಖಾತೆಯು ಒಂದಕ್ಕಿಂತ ಹೆಚ್ಚು ಪ್ರೊಫೈಲ್ ಹೊಂದುವ ಹೊಸ ಅವಕಾಶ ಕಲ್ಪಿಸುವ ಪ್ರಯೋಗ ಈಗ ನಡೆಯುತ್ತಿದೆ.

ತನ್ನ ಬಳಕೆದಾರರನ್ನು ಸಕ್ರಿಯಗೊಳಿಸಲು ದೈತ್ಯ ಫೇಸ್‌ಬುಕ್ ಸಂಸ್ಥೆ, ಬಳಕೆದಾರರ ಆಸಕ್ತಿಗಳು ಮತ್ತು ಸಂಬಂಧಗಳ ಆಧಾರದ ಮೇಲೆ ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದುವ ಅವಕಾಶ ಕಲ್ಪಿಸಲು ಹೊರಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಭಿನ್ನ ಗುಂಪಿನ ಜನರಿಗಾಗಿ ವಿಭಿನ್ನ ಪ್ರೊಫೈಲ್‌ಗಳನ್ನು ಹೊಂದಲು ಅವಕಾಶ ಮಾಡಿಕೊಡಲಾಗುತ್ತಿದೆ. ಉದಾಹರಣೆಗೆ, ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಸ್ನೇಹಿತರಿಗಾಗಿ ಪ್ರೊಫೈಲ್ ಹೊಂದಬಹುದು, ಮತ್ತೊಂದು ಪ್ರೊಫೈಲ್‌ಅನ್ನು ತಾನು ಕೆಲಸ ಮಾಡುತ್ತಿರುವ ಸಂಸ್ಥೆಯ ಜನರಿಗಾಗಿ, ಕುಟುಂಬವರ್ಗಕ್ಕಾಗಿ- ಹೀಗೆ ವಿಭಿನ್ನ ಗುಂಪಿನ ಜನರಿಗಾಗಿ ರೂಪಿಸಬಹುದು.

ಬಳಕೆದಾರರು ಒಂದೇ ಖಾತೆಯ ಅಡಿಯಲ್ಲಿ ಐದು ವಿಭಿನ್ನ ಪ್ರೊಫೈಲ್‌ಗಳನ್ನು ರಚಿಸಲು ಅವಕಾಶ ನೀಡಲಾಗುತ್ತಿದೆ. ಯಾವುದೇ ನಂಬರ್‌‌, ವಿಶೇಷ ಅಕ್ಷರ, ನಿಜವಾದ ಹೆಸರು ಯಾವುದೇ ಅಂಶವನ್ನು ಈ  ಹೆಚ್ಚುವರಿ ಪ್ರೊಫೈಲ್‌ಗಳಿಗೆ ಸೇರಿಸುವ ಅಗತ್ಯವಿಲ್ಲ. ಆದರೆ ಬಳಕೆದಾರರ ಮುಖ್ಯ ಪ್ರೊಫೈಲ್ ವ್ಯಕ್ತಿಯ ನಿಜವಾದ ಹೆಸರನ್ನು ಹೊಂದಿರಬೇಕು ಎಂದು ಮೆಟಾ ಸಂಸ್ಥೆಯು ಸ್ಪಷ್ಟಪಡಿಸಿರುವುದಾಗಿ ‘TechCrunch’ ಸಂಸ್ಥೆ ವರದಿ ಮಾಡಿದೆ.

ಈ ಹೊಸ ಪ್ರಯೋಗವನ್ನು ಆಯ್ದ ಫೇಸ್‌ಬುಕ್ ಬಳಕೆದಾರರ ಮೇಲೆ ಪರೀಕ್ಷಿಸಲಾಗುತ್ತಿದೆ. ಬಹು ಪ್ರೊಫೈಲ್‌ಗಳನ್ನು ಕೆಲವೇ ಟ್ಯಾಪ್‌ಗಳಲ್ಲಿ ಬದಲಾಯಿಸಿ ಉಪಯೋಗಿಸಬಹುದು ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಈ ಪ್ರಯೋಗವು ಫೇಸ್‌ಬುಕ್‌ನ ಈಗಿನ ನೀತಿಗೆ ಹೋಲಿಸಿದರೆ ಪ್ರಮುಖ ಬದಲಾವಣೆಯಾಗಿದೆ. ಸಾಮಾಜಿಕ ನೆಟ್‌ವರ್ಕ್‌ನಲ್ಲಿ ಒಂದಕ್ಕಿಂತ ಹೆಚ್ಚು ವೈಯಕ್ತಿಕ ಪ್ರೊಫೈಲ್  ರಚಿಸುವುದು ಫೇಸ್‌ಬುಕ್‌ನ ಮಾನದಂಡಗಳಿಗೆ ವಿರುದ್ಧ ಎಂದು ರಾಯಿಟರ್ಸ್ ವರದಿ ಮಾಡಿದೆ.

“ಇದು ಅನಗತ್ಯ ಗೌಪ್ಯತೆ ಸಮಸ್ಯೆಗಳನ್ನು ಸೃಷ್ಟಿಸಬಹುದಾದರೂ, ಹೆಚ್ಚುವರಿ ಪ್ರೊಫೈಲ್‌ಗಳು ಫೇಸ್‌ಬುಕ್‌ನ ನಿಯಮಗಳಿಗೆ ಒಳಪಟ್ಟಿರುತ್ತವೆ. ನಿಯಮಗಳನ್ನು ಮುರಿದರೆ ಸಂಪೂರ್ಣ ಖಾತೆಗೆ ದಂಡ ವಿಧಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

“ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದಿರುವ ಬಳಕೆದಾರ ಫೇಸ್‌ಬುಕ್‌ ನಿಯಮಗಳು ಅಥವಾ ನೀತಿಯನ್ನು ಉಲ್ಲಂಘಿಸಿದರೆ ಆ ಬಳಕೆದಾರನ ಮುಖ್ಯ ಫೇಸ್‌ಬುಕ್ ಖಾತೆಯ ಮೇಲೆ ಕ್ರಮ ಜರುಗಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...