Homeಮುಖಪುಟಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

- Advertisement -
- Advertisement -

ಔಪಚಾರಿಕವಾಗಿ ಫೇಸ್‌ಬುಕ್ ಎಂದು ಕರೆಯಲ್ಪಡುವ ಮೆಟಾ ಪ್ಲಾಟ್‌ಫಾರ್ಮ್‌ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಒಂದು ಫೇಸ್‌ಬುಕ್ ಖಾತೆಯು ಒಂದಕ್ಕಿಂತ ಹೆಚ್ಚು ಪ್ರೊಫೈಲ್ ಹೊಂದುವ ಹೊಸ ಅವಕಾಶ ಕಲ್ಪಿಸುವ ಪ್ರಯೋಗ ಈಗ ನಡೆಯುತ್ತಿದೆ.

ತನ್ನ ಬಳಕೆದಾರರನ್ನು ಸಕ್ರಿಯಗೊಳಿಸಲು ದೈತ್ಯ ಫೇಸ್‌ಬುಕ್ ಸಂಸ್ಥೆ, ಬಳಕೆದಾರರ ಆಸಕ್ತಿಗಳು ಮತ್ತು ಸಂಬಂಧಗಳ ಆಧಾರದ ಮೇಲೆ ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದುವ ಅವಕಾಶ ಕಲ್ಪಿಸಲು ಹೊರಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಭಿನ್ನ ಗುಂಪಿನ ಜನರಿಗಾಗಿ ವಿಭಿನ್ನ ಪ್ರೊಫೈಲ್‌ಗಳನ್ನು ಹೊಂದಲು ಅವಕಾಶ ಮಾಡಿಕೊಡಲಾಗುತ್ತಿದೆ. ಉದಾಹರಣೆಗೆ, ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಸ್ನೇಹಿತರಿಗಾಗಿ ಪ್ರೊಫೈಲ್ ಹೊಂದಬಹುದು, ಮತ್ತೊಂದು ಪ್ರೊಫೈಲ್‌ಅನ್ನು ತಾನು ಕೆಲಸ ಮಾಡುತ್ತಿರುವ ಸಂಸ್ಥೆಯ ಜನರಿಗಾಗಿ, ಕುಟುಂಬವರ್ಗಕ್ಕಾಗಿ- ಹೀಗೆ ವಿಭಿನ್ನ ಗುಂಪಿನ ಜನರಿಗಾಗಿ ರೂಪಿಸಬಹುದು.

ಬಳಕೆದಾರರು ಒಂದೇ ಖಾತೆಯ ಅಡಿಯಲ್ಲಿ ಐದು ವಿಭಿನ್ನ ಪ್ರೊಫೈಲ್‌ಗಳನ್ನು ರಚಿಸಲು ಅವಕಾಶ ನೀಡಲಾಗುತ್ತಿದೆ. ಯಾವುದೇ ನಂಬರ್‌‌, ವಿಶೇಷ ಅಕ್ಷರ, ನಿಜವಾದ ಹೆಸರು ಯಾವುದೇ ಅಂಶವನ್ನು ಈ  ಹೆಚ್ಚುವರಿ ಪ್ರೊಫೈಲ್‌ಗಳಿಗೆ ಸೇರಿಸುವ ಅಗತ್ಯವಿಲ್ಲ. ಆದರೆ ಬಳಕೆದಾರರ ಮುಖ್ಯ ಪ್ರೊಫೈಲ್ ವ್ಯಕ್ತಿಯ ನಿಜವಾದ ಹೆಸರನ್ನು ಹೊಂದಿರಬೇಕು ಎಂದು ಮೆಟಾ ಸಂಸ್ಥೆಯು ಸ್ಪಷ್ಟಪಡಿಸಿರುವುದಾಗಿ ‘TechCrunch’ ಸಂಸ್ಥೆ ವರದಿ ಮಾಡಿದೆ.

ಈ ಹೊಸ ಪ್ರಯೋಗವನ್ನು ಆಯ್ದ ಫೇಸ್‌ಬುಕ್ ಬಳಕೆದಾರರ ಮೇಲೆ ಪರೀಕ್ಷಿಸಲಾಗುತ್ತಿದೆ. ಬಹು ಪ್ರೊಫೈಲ್‌ಗಳನ್ನು ಕೆಲವೇ ಟ್ಯಾಪ್‌ಗಳಲ್ಲಿ ಬದಲಾಯಿಸಿ ಉಪಯೋಗಿಸಬಹುದು ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಈ ಪ್ರಯೋಗವು ಫೇಸ್‌ಬುಕ್‌ನ ಈಗಿನ ನೀತಿಗೆ ಹೋಲಿಸಿದರೆ ಪ್ರಮುಖ ಬದಲಾವಣೆಯಾಗಿದೆ. ಸಾಮಾಜಿಕ ನೆಟ್‌ವರ್ಕ್‌ನಲ್ಲಿ ಒಂದಕ್ಕಿಂತ ಹೆಚ್ಚು ವೈಯಕ್ತಿಕ ಪ್ರೊಫೈಲ್  ರಚಿಸುವುದು ಫೇಸ್‌ಬುಕ್‌ನ ಮಾನದಂಡಗಳಿಗೆ ವಿರುದ್ಧ ಎಂದು ರಾಯಿಟರ್ಸ್ ವರದಿ ಮಾಡಿದೆ.

“ಇದು ಅನಗತ್ಯ ಗೌಪ್ಯತೆ ಸಮಸ್ಯೆಗಳನ್ನು ಸೃಷ್ಟಿಸಬಹುದಾದರೂ, ಹೆಚ್ಚುವರಿ ಪ್ರೊಫೈಲ್‌ಗಳು ಫೇಸ್‌ಬುಕ್‌ನ ನಿಯಮಗಳಿಗೆ ಒಳಪಟ್ಟಿರುತ್ತವೆ. ನಿಯಮಗಳನ್ನು ಮುರಿದರೆ ಸಂಪೂರ್ಣ ಖಾತೆಗೆ ದಂಡ ವಿಧಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

“ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದಿರುವ ಬಳಕೆದಾರ ಫೇಸ್‌ಬುಕ್‌ ನಿಯಮಗಳು ಅಥವಾ ನೀತಿಯನ್ನು ಉಲ್ಲಂಘಿಸಿದರೆ ಆ ಬಳಕೆದಾರನ ಮುಖ್ಯ ಫೇಸ್‌ಬುಕ್ ಖಾತೆಯ ಮೇಲೆ ಕ್ರಮ ಜರುಗಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...