Homeಮುಖಪುಟಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

- Advertisement -
- Advertisement -

ಔಪಚಾರಿಕವಾಗಿ ಫೇಸ್‌ಬುಕ್ ಎಂದು ಕರೆಯಲ್ಪಡುವ ಮೆಟಾ ಪ್ಲಾಟ್‌ಫಾರ್ಮ್‌ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಒಂದು ಫೇಸ್‌ಬುಕ್ ಖಾತೆಯು ಒಂದಕ್ಕಿಂತ ಹೆಚ್ಚು ಪ್ರೊಫೈಲ್ ಹೊಂದುವ ಹೊಸ ಅವಕಾಶ ಕಲ್ಪಿಸುವ ಪ್ರಯೋಗ ಈಗ ನಡೆಯುತ್ತಿದೆ.

ತನ್ನ ಬಳಕೆದಾರರನ್ನು ಸಕ್ರಿಯಗೊಳಿಸಲು ದೈತ್ಯ ಫೇಸ್‌ಬುಕ್ ಸಂಸ್ಥೆ, ಬಳಕೆದಾರರ ಆಸಕ್ತಿಗಳು ಮತ್ತು ಸಂಬಂಧಗಳ ಆಧಾರದ ಮೇಲೆ ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದುವ ಅವಕಾಶ ಕಲ್ಪಿಸಲು ಹೊರಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಭಿನ್ನ ಗುಂಪಿನ ಜನರಿಗಾಗಿ ವಿಭಿನ್ನ ಪ್ರೊಫೈಲ್‌ಗಳನ್ನು ಹೊಂದಲು ಅವಕಾಶ ಮಾಡಿಕೊಡಲಾಗುತ್ತಿದೆ. ಉದಾಹರಣೆಗೆ, ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಸ್ನೇಹಿತರಿಗಾಗಿ ಪ್ರೊಫೈಲ್ ಹೊಂದಬಹುದು, ಮತ್ತೊಂದು ಪ್ರೊಫೈಲ್‌ಅನ್ನು ತಾನು ಕೆಲಸ ಮಾಡುತ್ತಿರುವ ಸಂಸ್ಥೆಯ ಜನರಿಗಾಗಿ, ಕುಟುಂಬವರ್ಗಕ್ಕಾಗಿ- ಹೀಗೆ ವಿಭಿನ್ನ ಗುಂಪಿನ ಜನರಿಗಾಗಿ ರೂಪಿಸಬಹುದು.

ಬಳಕೆದಾರರು ಒಂದೇ ಖಾತೆಯ ಅಡಿಯಲ್ಲಿ ಐದು ವಿಭಿನ್ನ ಪ್ರೊಫೈಲ್‌ಗಳನ್ನು ರಚಿಸಲು ಅವಕಾಶ ನೀಡಲಾಗುತ್ತಿದೆ. ಯಾವುದೇ ನಂಬರ್‌‌, ವಿಶೇಷ ಅಕ್ಷರ, ನಿಜವಾದ ಹೆಸರು ಯಾವುದೇ ಅಂಶವನ್ನು ಈ  ಹೆಚ್ಚುವರಿ ಪ್ರೊಫೈಲ್‌ಗಳಿಗೆ ಸೇರಿಸುವ ಅಗತ್ಯವಿಲ್ಲ. ಆದರೆ ಬಳಕೆದಾರರ ಮುಖ್ಯ ಪ್ರೊಫೈಲ್ ವ್ಯಕ್ತಿಯ ನಿಜವಾದ ಹೆಸರನ್ನು ಹೊಂದಿರಬೇಕು ಎಂದು ಮೆಟಾ ಸಂಸ್ಥೆಯು ಸ್ಪಷ್ಟಪಡಿಸಿರುವುದಾಗಿ ‘TechCrunch’ ಸಂಸ್ಥೆ ವರದಿ ಮಾಡಿದೆ.

ಈ ಹೊಸ ಪ್ರಯೋಗವನ್ನು ಆಯ್ದ ಫೇಸ್‌ಬುಕ್ ಬಳಕೆದಾರರ ಮೇಲೆ ಪರೀಕ್ಷಿಸಲಾಗುತ್ತಿದೆ. ಬಹು ಪ್ರೊಫೈಲ್‌ಗಳನ್ನು ಕೆಲವೇ ಟ್ಯಾಪ್‌ಗಳಲ್ಲಿ ಬದಲಾಯಿಸಿ ಉಪಯೋಗಿಸಬಹುದು ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಈ ಪ್ರಯೋಗವು ಫೇಸ್‌ಬುಕ್‌ನ ಈಗಿನ ನೀತಿಗೆ ಹೋಲಿಸಿದರೆ ಪ್ರಮುಖ ಬದಲಾವಣೆಯಾಗಿದೆ. ಸಾಮಾಜಿಕ ನೆಟ್‌ವರ್ಕ್‌ನಲ್ಲಿ ಒಂದಕ್ಕಿಂತ ಹೆಚ್ಚು ವೈಯಕ್ತಿಕ ಪ್ರೊಫೈಲ್  ರಚಿಸುವುದು ಫೇಸ್‌ಬುಕ್‌ನ ಮಾನದಂಡಗಳಿಗೆ ವಿರುದ್ಧ ಎಂದು ರಾಯಿಟರ್ಸ್ ವರದಿ ಮಾಡಿದೆ.

“ಇದು ಅನಗತ್ಯ ಗೌಪ್ಯತೆ ಸಮಸ್ಯೆಗಳನ್ನು ಸೃಷ್ಟಿಸಬಹುದಾದರೂ, ಹೆಚ್ಚುವರಿ ಪ್ರೊಫೈಲ್‌ಗಳು ಫೇಸ್‌ಬುಕ್‌ನ ನಿಯಮಗಳಿಗೆ ಒಳಪಟ್ಟಿರುತ್ತವೆ. ನಿಯಮಗಳನ್ನು ಮುರಿದರೆ ಸಂಪೂರ್ಣ ಖಾತೆಗೆ ದಂಡ ವಿಧಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

“ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದಿರುವ ಬಳಕೆದಾರ ಫೇಸ್‌ಬುಕ್‌ ನಿಯಮಗಳು ಅಥವಾ ನೀತಿಯನ್ನು ಉಲ್ಲಂಘಿಸಿದರೆ ಆ ಬಳಕೆದಾರನ ಮುಖ್ಯ ಫೇಸ್‌ಬುಕ್ ಖಾತೆಯ ಮೇಲೆ ಕ್ರಮ ಜರುಗಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...