Homeಮುಖಪುಟಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

- Advertisement -
- Advertisement -

ಔಪಚಾರಿಕವಾಗಿ ಫೇಸ್‌ಬುಕ್ ಎಂದು ಕರೆಯಲ್ಪಡುವ ಮೆಟಾ ಪ್ಲಾಟ್‌ಫಾರ್ಮ್‌ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಒಂದು ಫೇಸ್‌ಬುಕ್ ಖಾತೆಯು ಒಂದಕ್ಕಿಂತ ಹೆಚ್ಚು ಪ್ರೊಫೈಲ್ ಹೊಂದುವ ಹೊಸ ಅವಕಾಶ ಕಲ್ಪಿಸುವ ಪ್ರಯೋಗ ಈಗ ನಡೆಯುತ್ತಿದೆ.

ತನ್ನ ಬಳಕೆದಾರರನ್ನು ಸಕ್ರಿಯಗೊಳಿಸಲು ದೈತ್ಯ ಫೇಸ್‌ಬುಕ್ ಸಂಸ್ಥೆ, ಬಳಕೆದಾರರ ಆಸಕ್ತಿಗಳು ಮತ್ತು ಸಂಬಂಧಗಳ ಆಧಾರದ ಮೇಲೆ ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದುವ ಅವಕಾಶ ಕಲ್ಪಿಸಲು ಹೊರಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಭಿನ್ನ ಗುಂಪಿನ ಜನರಿಗಾಗಿ ವಿಭಿನ್ನ ಪ್ರೊಫೈಲ್‌ಗಳನ್ನು ಹೊಂದಲು ಅವಕಾಶ ಮಾಡಿಕೊಡಲಾಗುತ್ತಿದೆ. ಉದಾಹರಣೆಗೆ, ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಸ್ನೇಹಿತರಿಗಾಗಿ ಪ್ರೊಫೈಲ್ ಹೊಂದಬಹುದು, ಮತ್ತೊಂದು ಪ್ರೊಫೈಲ್‌ಅನ್ನು ತಾನು ಕೆಲಸ ಮಾಡುತ್ತಿರುವ ಸಂಸ್ಥೆಯ ಜನರಿಗಾಗಿ, ಕುಟುಂಬವರ್ಗಕ್ಕಾಗಿ- ಹೀಗೆ ವಿಭಿನ್ನ ಗುಂಪಿನ ಜನರಿಗಾಗಿ ರೂಪಿಸಬಹುದು.

ಬಳಕೆದಾರರು ಒಂದೇ ಖಾತೆಯ ಅಡಿಯಲ್ಲಿ ಐದು ವಿಭಿನ್ನ ಪ್ರೊಫೈಲ್‌ಗಳನ್ನು ರಚಿಸಲು ಅವಕಾಶ ನೀಡಲಾಗುತ್ತಿದೆ. ಯಾವುದೇ ನಂಬರ್‌‌, ವಿಶೇಷ ಅಕ್ಷರ, ನಿಜವಾದ ಹೆಸರು ಯಾವುದೇ ಅಂಶವನ್ನು ಈ  ಹೆಚ್ಚುವರಿ ಪ್ರೊಫೈಲ್‌ಗಳಿಗೆ ಸೇರಿಸುವ ಅಗತ್ಯವಿಲ್ಲ. ಆದರೆ ಬಳಕೆದಾರರ ಮುಖ್ಯ ಪ್ರೊಫೈಲ್ ವ್ಯಕ್ತಿಯ ನಿಜವಾದ ಹೆಸರನ್ನು ಹೊಂದಿರಬೇಕು ಎಂದು ಮೆಟಾ ಸಂಸ್ಥೆಯು ಸ್ಪಷ್ಟಪಡಿಸಿರುವುದಾಗಿ ‘TechCrunch’ ಸಂಸ್ಥೆ ವರದಿ ಮಾಡಿದೆ.

ಈ ಹೊಸ ಪ್ರಯೋಗವನ್ನು ಆಯ್ದ ಫೇಸ್‌ಬುಕ್ ಬಳಕೆದಾರರ ಮೇಲೆ ಪರೀಕ್ಷಿಸಲಾಗುತ್ತಿದೆ. ಬಹು ಪ್ರೊಫೈಲ್‌ಗಳನ್ನು ಕೆಲವೇ ಟ್ಯಾಪ್‌ಗಳಲ್ಲಿ ಬದಲಾಯಿಸಿ ಉಪಯೋಗಿಸಬಹುದು ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಈ ಪ್ರಯೋಗವು ಫೇಸ್‌ಬುಕ್‌ನ ಈಗಿನ ನೀತಿಗೆ ಹೋಲಿಸಿದರೆ ಪ್ರಮುಖ ಬದಲಾವಣೆಯಾಗಿದೆ. ಸಾಮಾಜಿಕ ನೆಟ್‌ವರ್ಕ್‌ನಲ್ಲಿ ಒಂದಕ್ಕಿಂತ ಹೆಚ್ಚು ವೈಯಕ್ತಿಕ ಪ್ರೊಫೈಲ್  ರಚಿಸುವುದು ಫೇಸ್‌ಬುಕ್‌ನ ಮಾನದಂಡಗಳಿಗೆ ವಿರುದ್ಧ ಎಂದು ರಾಯಿಟರ್ಸ್ ವರದಿ ಮಾಡಿದೆ.

“ಇದು ಅನಗತ್ಯ ಗೌಪ್ಯತೆ ಸಮಸ್ಯೆಗಳನ್ನು ಸೃಷ್ಟಿಸಬಹುದಾದರೂ, ಹೆಚ್ಚುವರಿ ಪ್ರೊಫೈಲ್‌ಗಳು ಫೇಸ್‌ಬುಕ್‌ನ ನಿಯಮಗಳಿಗೆ ಒಳಪಟ್ಟಿರುತ್ತವೆ. ನಿಯಮಗಳನ್ನು ಮುರಿದರೆ ಸಂಪೂರ್ಣ ಖಾತೆಗೆ ದಂಡ ವಿಧಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

“ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದಿರುವ ಬಳಕೆದಾರ ಫೇಸ್‌ಬುಕ್‌ ನಿಯಮಗಳು ಅಥವಾ ನೀತಿಯನ್ನು ಉಲ್ಲಂಘಿಸಿದರೆ ಆ ಬಳಕೆದಾರನ ಮುಖ್ಯ ಫೇಸ್‌ಬುಕ್ ಖಾತೆಯ ಮೇಲೆ ಕ್ರಮ ಜರುಗಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...