Homeಮುಖಪುಟಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

- Advertisement -
- Advertisement -

ಔಪಚಾರಿಕವಾಗಿ ಫೇಸ್‌ಬುಕ್ ಎಂದು ಕರೆಯಲ್ಪಡುವ ಮೆಟಾ ಪ್ಲಾಟ್‌ಫಾರ್ಮ್‌ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಒಂದು ಫೇಸ್‌ಬುಕ್ ಖಾತೆಯು ಒಂದಕ್ಕಿಂತ ಹೆಚ್ಚು ಪ್ರೊಫೈಲ್ ಹೊಂದುವ ಹೊಸ ಅವಕಾಶ ಕಲ್ಪಿಸುವ ಪ್ರಯೋಗ ಈಗ ನಡೆಯುತ್ತಿದೆ.

ತನ್ನ ಬಳಕೆದಾರರನ್ನು ಸಕ್ರಿಯಗೊಳಿಸಲು ದೈತ್ಯ ಫೇಸ್‌ಬುಕ್ ಸಂಸ್ಥೆ, ಬಳಕೆದಾರರ ಆಸಕ್ತಿಗಳು ಮತ್ತು ಸಂಬಂಧಗಳ ಆಧಾರದ ಮೇಲೆ ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದುವ ಅವಕಾಶ ಕಲ್ಪಿಸಲು ಹೊರಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಭಿನ್ನ ಗುಂಪಿನ ಜನರಿಗಾಗಿ ವಿಭಿನ್ನ ಪ್ರೊಫೈಲ್‌ಗಳನ್ನು ಹೊಂದಲು ಅವಕಾಶ ಮಾಡಿಕೊಡಲಾಗುತ್ತಿದೆ. ಉದಾಹರಣೆಗೆ, ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಸ್ನೇಹಿತರಿಗಾಗಿ ಪ್ರೊಫೈಲ್ ಹೊಂದಬಹುದು, ಮತ್ತೊಂದು ಪ್ರೊಫೈಲ್‌ಅನ್ನು ತಾನು ಕೆಲಸ ಮಾಡುತ್ತಿರುವ ಸಂಸ್ಥೆಯ ಜನರಿಗಾಗಿ, ಕುಟುಂಬವರ್ಗಕ್ಕಾಗಿ- ಹೀಗೆ ವಿಭಿನ್ನ ಗುಂಪಿನ ಜನರಿಗಾಗಿ ರೂಪಿಸಬಹುದು.

ಬಳಕೆದಾರರು ಒಂದೇ ಖಾತೆಯ ಅಡಿಯಲ್ಲಿ ಐದು ವಿಭಿನ್ನ ಪ್ರೊಫೈಲ್‌ಗಳನ್ನು ರಚಿಸಲು ಅವಕಾಶ ನೀಡಲಾಗುತ್ತಿದೆ. ಯಾವುದೇ ನಂಬರ್‌‌, ವಿಶೇಷ ಅಕ್ಷರ, ನಿಜವಾದ ಹೆಸರು ಯಾವುದೇ ಅಂಶವನ್ನು ಈ  ಹೆಚ್ಚುವರಿ ಪ್ರೊಫೈಲ್‌ಗಳಿಗೆ ಸೇರಿಸುವ ಅಗತ್ಯವಿಲ್ಲ. ಆದರೆ ಬಳಕೆದಾರರ ಮುಖ್ಯ ಪ್ರೊಫೈಲ್ ವ್ಯಕ್ತಿಯ ನಿಜವಾದ ಹೆಸರನ್ನು ಹೊಂದಿರಬೇಕು ಎಂದು ಮೆಟಾ ಸಂಸ್ಥೆಯು ಸ್ಪಷ್ಟಪಡಿಸಿರುವುದಾಗಿ ‘TechCrunch’ ಸಂಸ್ಥೆ ವರದಿ ಮಾಡಿದೆ.

ಈ ಹೊಸ ಪ್ರಯೋಗವನ್ನು ಆಯ್ದ ಫೇಸ್‌ಬುಕ್ ಬಳಕೆದಾರರ ಮೇಲೆ ಪರೀಕ್ಷಿಸಲಾಗುತ್ತಿದೆ. ಬಹು ಪ್ರೊಫೈಲ್‌ಗಳನ್ನು ಕೆಲವೇ ಟ್ಯಾಪ್‌ಗಳಲ್ಲಿ ಬದಲಾಯಿಸಿ ಉಪಯೋಗಿಸಬಹುದು ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಈ ಪ್ರಯೋಗವು ಫೇಸ್‌ಬುಕ್‌ನ ಈಗಿನ ನೀತಿಗೆ ಹೋಲಿಸಿದರೆ ಪ್ರಮುಖ ಬದಲಾವಣೆಯಾಗಿದೆ. ಸಾಮಾಜಿಕ ನೆಟ್‌ವರ್ಕ್‌ನಲ್ಲಿ ಒಂದಕ್ಕಿಂತ ಹೆಚ್ಚು ವೈಯಕ್ತಿಕ ಪ್ರೊಫೈಲ್  ರಚಿಸುವುದು ಫೇಸ್‌ಬುಕ್‌ನ ಮಾನದಂಡಗಳಿಗೆ ವಿರುದ್ಧ ಎಂದು ರಾಯಿಟರ್ಸ್ ವರದಿ ಮಾಡಿದೆ.

“ಇದು ಅನಗತ್ಯ ಗೌಪ್ಯತೆ ಸಮಸ್ಯೆಗಳನ್ನು ಸೃಷ್ಟಿಸಬಹುದಾದರೂ, ಹೆಚ್ಚುವರಿ ಪ್ರೊಫೈಲ್‌ಗಳು ಫೇಸ್‌ಬುಕ್‌ನ ನಿಯಮಗಳಿಗೆ ಒಳಪಟ್ಟಿರುತ್ತವೆ. ನಿಯಮಗಳನ್ನು ಮುರಿದರೆ ಸಂಪೂರ್ಣ ಖಾತೆಗೆ ದಂಡ ವಿಧಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

“ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದಿರುವ ಬಳಕೆದಾರ ಫೇಸ್‌ಬುಕ್‌ ನಿಯಮಗಳು ಅಥವಾ ನೀತಿಯನ್ನು ಉಲ್ಲಂಘಿಸಿದರೆ ಆ ಬಳಕೆದಾರನ ಮುಖ್ಯ ಫೇಸ್‌ಬುಕ್ ಖಾತೆಯ ಮೇಲೆ ಕ್ರಮ ಜರುಗಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...