Homeಮುಖಪುಟಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

- Advertisement -
- Advertisement -

ಔಪಚಾರಿಕವಾಗಿ ಫೇಸ್‌ಬುಕ್ ಎಂದು ಕರೆಯಲ್ಪಡುವ ಮೆಟಾ ಪ್ಲಾಟ್‌ಫಾರ್ಮ್‌ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಒಂದು ಫೇಸ್‌ಬುಕ್ ಖಾತೆಯು ಒಂದಕ್ಕಿಂತ ಹೆಚ್ಚು ಪ್ರೊಫೈಲ್ ಹೊಂದುವ ಹೊಸ ಅವಕಾಶ ಕಲ್ಪಿಸುವ ಪ್ರಯೋಗ ಈಗ ನಡೆಯುತ್ತಿದೆ.

ತನ್ನ ಬಳಕೆದಾರರನ್ನು ಸಕ್ರಿಯಗೊಳಿಸಲು ದೈತ್ಯ ಫೇಸ್‌ಬುಕ್ ಸಂಸ್ಥೆ, ಬಳಕೆದಾರರ ಆಸಕ್ತಿಗಳು ಮತ್ತು ಸಂಬಂಧಗಳ ಆಧಾರದ ಮೇಲೆ ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದುವ ಅವಕಾಶ ಕಲ್ಪಿಸಲು ಹೊರಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಭಿನ್ನ ಗುಂಪಿನ ಜನರಿಗಾಗಿ ವಿಭಿನ್ನ ಪ್ರೊಫೈಲ್‌ಗಳನ್ನು ಹೊಂದಲು ಅವಕಾಶ ಮಾಡಿಕೊಡಲಾಗುತ್ತಿದೆ. ಉದಾಹರಣೆಗೆ, ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಸ್ನೇಹಿತರಿಗಾಗಿ ಪ್ರೊಫೈಲ್ ಹೊಂದಬಹುದು, ಮತ್ತೊಂದು ಪ್ರೊಫೈಲ್‌ಅನ್ನು ತಾನು ಕೆಲಸ ಮಾಡುತ್ತಿರುವ ಸಂಸ್ಥೆಯ ಜನರಿಗಾಗಿ, ಕುಟುಂಬವರ್ಗಕ್ಕಾಗಿ- ಹೀಗೆ ವಿಭಿನ್ನ ಗುಂಪಿನ ಜನರಿಗಾಗಿ ರೂಪಿಸಬಹುದು.

ಬಳಕೆದಾರರು ಒಂದೇ ಖಾತೆಯ ಅಡಿಯಲ್ಲಿ ಐದು ವಿಭಿನ್ನ ಪ್ರೊಫೈಲ್‌ಗಳನ್ನು ರಚಿಸಲು ಅವಕಾಶ ನೀಡಲಾಗುತ್ತಿದೆ. ಯಾವುದೇ ನಂಬರ್‌‌, ವಿಶೇಷ ಅಕ್ಷರ, ನಿಜವಾದ ಹೆಸರು ಯಾವುದೇ ಅಂಶವನ್ನು ಈ  ಹೆಚ್ಚುವರಿ ಪ್ರೊಫೈಲ್‌ಗಳಿಗೆ ಸೇರಿಸುವ ಅಗತ್ಯವಿಲ್ಲ. ಆದರೆ ಬಳಕೆದಾರರ ಮುಖ್ಯ ಪ್ರೊಫೈಲ್ ವ್ಯಕ್ತಿಯ ನಿಜವಾದ ಹೆಸರನ್ನು ಹೊಂದಿರಬೇಕು ಎಂದು ಮೆಟಾ ಸಂಸ್ಥೆಯು ಸ್ಪಷ್ಟಪಡಿಸಿರುವುದಾಗಿ ‘TechCrunch’ ಸಂಸ್ಥೆ ವರದಿ ಮಾಡಿದೆ.

ಈ ಹೊಸ ಪ್ರಯೋಗವನ್ನು ಆಯ್ದ ಫೇಸ್‌ಬುಕ್ ಬಳಕೆದಾರರ ಮೇಲೆ ಪರೀಕ್ಷಿಸಲಾಗುತ್ತಿದೆ. ಬಹು ಪ್ರೊಫೈಲ್‌ಗಳನ್ನು ಕೆಲವೇ ಟ್ಯಾಪ್‌ಗಳಲ್ಲಿ ಬದಲಾಯಿಸಿ ಉಪಯೋಗಿಸಬಹುದು ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಈ ಪ್ರಯೋಗವು ಫೇಸ್‌ಬುಕ್‌ನ ಈಗಿನ ನೀತಿಗೆ ಹೋಲಿಸಿದರೆ ಪ್ರಮುಖ ಬದಲಾವಣೆಯಾಗಿದೆ. ಸಾಮಾಜಿಕ ನೆಟ್‌ವರ್ಕ್‌ನಲ್ಲಿ ಒಂದಕ್ಕಿಂತ ಹೆಚ್ಚು ವೈಯಕ್ತಿಕ ಪ್ರೊಫೈಲ್  ರಚಿಸುವುದು ಫೇಸ್‌ಬುಕ್‌ನ ಮಾನದಂಡಗಳಿಗೆ ವಿರುದ್ಧ ಎಂದು ರಾಯಿಟರ್ಸ್ ವರದಿ ಮಾಡಿದೆ.

“ಇದು ಅನಗತ್ಯ ಗೌಪ್ಯತೆ ಸಮಸ್ಯೆಗಳನ್ನು ಸೃಷ್ಟಿಸಬಹುದಾದರೂ, ಹೆಚ್ಚುವರಿ ಪ್ರೊಫೈಲ್‌ಗಳು ಫೇಸ್‌ಬುಕ್‌ನ ನಿಯಮಗಳಿಗೆ ಒಳಪಟ್ಟಿರುತ್ತವೆ. ನಿಯಮಗಳನ್ನು ಮುರಿದರೆ ಸಂಪೂರ್ಣ ಖಾತೆಗೆ ದಂಡ ವಿಧಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

“ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದಿರುವ ಬಳಕೆದಾರ ಫೇಸ್‌ಬುಕ್‌ ನಿಯಮಗಳು ಅಥವಾ ನೀತಿಯನ್ನು ಉಲ್ಲಂಘಿಸಿದರೆ ಆ ಬಳಕೆದಾರನ ಮುಖ್ಯ ಫೇಸ್‌ಬುಕ್ ಖಾತೆಯ ಮೇಲೆ ಕ್ರಮ ಜರುಗಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...