Homeಮುಖಪುಟಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

- Advertisement -
- Advertisement -

ಔಪಚಾರಿಕವಾಗಿ ಫೇಸ್‌ಬುಕ್ ಎಂದು ಕರೆಯಲ್ಪಡುವ ಮೆಟಾ ಪ್ಲಾಟ್‌ಫಾರ್ಮ್‌ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಒಂದು ಫೇಸ್‌ಬುಕ್ ಖಾತೆಯು ಒಂದಕ್ಕಿಂತ ಹೆಚ್ಚು ಪ್ರೊಫೈಲ್ ಹೊಂದುವ ಹೊಸ ಅವಕಾಶ ಕಲ್ಪಿಸುವ ಪ್ರಯೋಗ ಈಗ ನಡೆಯುತ್ತಿದೆ.

ತನ್ನ ಬಳಕೆದಾರರನ್ನು ಸಕ್ರಿಯಗೊಳಿಸಲು ದೈತ್ಯ ಫೇಸ್‌ಬುಕ್ ಸಂಸ್ಥೆ, ಬಳಕೆದಾರರ ಆಸಕ್ತಿಗಳು ಮತ್ತು ಸಂಬಂಧಗಳ ಆಧಾರದ ಮೇಲೆ ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದುವ ಅವಕಾಶ ಕಲ್ಪಿಸಲು ಹೊರಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಭಿನ್ನ ಗುಂಪಿನ ಜನರಿಗಾಗಿ ವಿಭಿನ್ನ ಪ್ರೊಫೈಲ್‌ಗಳನ್ನು ಹೊಂದಲು ಅವಕಾಶ ಮಾಡಿಕೊಡಲಾಗುತ್ತಿದೆ. ಉದಾಹರಣೆಗೆ, ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಸ್ನೇಹಿತರಿಗಾಗಿ ಪ್ರೊಫೈಲ್ ಹೊಂದಬಹುದು, ಮತ್ತೊಂದು ಪ್ರೊಫೈಲ್‌ಅನ್ನು ತಾನು ಕೆಲಸ ಮಾಡುತ್ತಿರುವ ಸಂಸ್ಥೆಯ ಜನರಿಗಾಗಿ, ಕುಟುಂಬವರ್ಗಕ್ಕಾಗಿ- ಹೀಗೆ ವಿಭಿನ್ನ ಗುಂಪಿನ ಜನರಿಗಾಗಿ ರೂಪಿಸಬಹುದು.

ಬಳಕೆದಾರರು ಒಂದೇ ಖಾತೆಯ ಅಡಿಯಲ್ಲಿ ಐದು ವಿಭಿನ್ನ ಪ್ರೊಫೈಲ್‌ಗಳನ್ನು ರಚಿಸಲು ಅವಕಾಶ ನೀಡಲಾಗುತ್ತಿದೆ. ಯಾವುದೇ ನಂಬರ್‌‌, ವಿಶೇಷ ಅಕ್ಷರ, ನಿಜವಾದ ಹೆಸರು ಯಾವುದೇ ಅಂಶವನ್ನು ಈ  ಹೆಚ್ಚುವರಿ ಪ್ರೊಫೈಲ್‌ಗಳಿಗೆ ಸೇರಿಸುವ ಅಗತ್ಯವಿಲ್ಲ. ಆದರೆ ಬಳಕೆದಾರರ ಮುಖ್ಯ ಪ್ರೊಫೈಲ್ ವ್ಯಕ್ತಿಯ ನಿಜವಾದ ಹೆಸರನ್ನು ಹೊಂದಿರಬೇಕು ಎಂದು ಮೆಟಾ ಸಂಸ್ಥೆಯು ಸ್ಪಷ್ಟಪಡಿಸಿರುವುದಾಗಿ ‘TechCrunch’ ಸಂಸ್ಥೆ ವರದಿ ಮಾಡಿದೆ.

ಈ ಹೊಸ ಪ್ರಯೋಗವನ್ನು ಆಯ್ದ ಫೇಸ್‌ಬುಕ್ ಬಳಕೆದಾರರ ಮೇಲೆ ಪರೀಕ್ಷಿಸಲಾಗುತ್ತಿದೆ. ಬಹು ಪ್ರೊಫೈಲ್‌ಗಳನ್ನು ಕೆಲವೇ ಟ್ಯಾಪ್‌ಗಳಲ್ಲಿ ಬದಲಾಯಿಸಿ ಉಪಯೋಗಿಸಬಹುದು ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಈ ಪ್ರಯೋಗವು ಫೇಸ್‌ಬುಕ್‌ನ ಈಗಿನ ನೀತಿಗೆ ಹೋಲಿಸಿದರೆ ಪ್ರಮುಖ ಬದಲಾವಣೆಯಾಗಿದೆ. ಸಾಮಾಜಿಕ ನೆಟ್‌ವರ್ಕ್‌ನಲ್ಲಿ ಒಂದಕ್ಕಿಂತ ಹೆಚ್ಚು ವೈಯಕ್ತಿಕ ಪ್ರೊಫೈಲ್  ರಚಿಸುವುದು ಫೇಸ್‌ಬುಕ್‌ನ ಮಾನದಂಡಗಳಿಗೆ ವಿರುದ್ಧ ಎಂದು ರಾಯಿಟರ್ಸ್ ವರದಿ ಮಾಡಿದೆ.

“ಇದು ಅನಗತ್ಯ ಗೌಪ್ಯತೆ ಸಮಸ್ಯೆಗಳನ್ನು ಸೃಷ್ಟಿಸಬಹುದಾದರೂ, ಹೆಚ್ಚುವರಿ ಪ್ರೊಫೈಲ್‌ಗಳು ಫೇಸ್‌ಬುಕ್‌ನ ನಿಯಮಗಳಿಗೆ ಒಳಪಟ್ಟಿರುತ್ತವೆ. ನಿಯಮಗಳನ್ನು ಮುರಿದರೆ ಸಂಪೂರ್ಣ ಖಾತೆಗೆ ದಂಡ ವಿಧಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

“ಒಂದಕ್ಕಿಂತ ಹೆಚ್ಚು ಪ್ರೊಫೈಲ್‌ ಹೊಂದಿರುವ ಬಳಕೆದಾರ ಫೇಸ್‌ಬುಕ್‌ ನಿಯಮಗಳು ಅಥವಾ ನೀತಿಯನ್ನು ಉಲ್ಲಂಘಿಸಿದರೆ ಆ ಬಳಕೆದಾರನ ಮುಖ್ಯ ಫೇಸ್‌ಬುಕ್ ಖಾತೆಯ ಮೇಲೆ ಕ್ರಮ ಜರುಗಿಸಲಾಗುತ್ತದೆ” ಎಂದು ಫೇಸ್‌ಬುಕ್‌ ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....