Homeಮುಖಪುಟಒಬ್ಬನೇ ಒಬ್ಬ ಪ್ರೇಕ್ಷಕನಿಗೆ ಐವರು ಭಾಷಣಕಾರರು!: ಬಿಜೆಪಿ ಕಾಲೆಳೆದ ಸಂಸದ ಶಶಿ ತರೂರ್

ಒಬ್ಬನೇ ಒಬ್ಬ ಪ್ರೇಕ್ಷಕನಿಗೆ ಐವರು ಭಾಷಣಕಾರರು!: ಬಿಜೆಪಿ ಕಾಲೆಳೆದ ಸಂಸದ ಶಶಿ ತರೂರ್

- Advertisement -
- Advertisement -

“ವೇದಿಕೆಯ ಮೇಲೆ ಐದು ಜನ ಬಿಜೆಪಿ ಮುಖಂಡರಿದ್ದಾರೆ. ಅದರಲ್ಲೊಬ್ಬ ಭಾಷಣ ಮಾಡುತ್ತಿದ್ದಾರೆ. ಒಬ್ಬನೇ ಒಬ್ಬ ಪ್ರೇಕ್ಷಕ ಕೊಡೆಹಿಡಿದು ಕುಳಿತಿದ್ದಾನೆ” ಈ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ಸಂಸದ ಶಶಿ ತರೂರ್ ಬಿಜೆಪಿಗರ ಕಾಲೆಳಿದಿದ್ದಾರೆ.

“ಐದು ಜನ ವೇದಿಕೆಯಲ್ಲಿದ್ದಾರೆ. 7 ಜನ ಮುಖಂಡರ ಚಿತ್ರಗಳು ಪೋಸ್ಟರ್‌ನಲ್ಲಿವೆ. ಒಬ್ಬನೇ ಪ್ರೇಕ್ಷಕ. ಅಲ್ಲದೆ ಇದು ಕೇರಳವೂ ಅಲ್ಲ.. ಬಿಜೆಪಿ ಪಕ್ಷದ ಕತೆ ಮುಗಿಯಿತು” ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

ಇದೇ ಫೋಟೊವನ್ನು ಟ್ವೀಟ್ ಮಾಡಿರುವ ಗಬ್ಬರ್ ಎನ್ನುವವರು ” ಪಶ್ಚಿಮ ಬಂಗಾಳ ಚುನಾವಣೆಯ ಬಿಜೆಪಿಯ ಬೃಹತ್ ರ್ಯಾಲಿ” ಎಂಬ ಶೀರ್ಷಿಕೆ ನೀಡಿ ವ್ಯಂಗ್ಯವಾಡಿದ್ದಾರೆ.

ಬಂಗ್ಲರ್ ಗೊರ್ಬೊ ಮಮತ ಎಂಬ ಅಧಿಕೃತ ಟ್ವಿಟರ್ ಖಾತೆಯಿಂದಲೂ ಈ ಚಿತ್ರವನ್ನು ಪೋಸ್ಟ್ ಮಾಡಲಾಗಿದ್ದು, ಇದು ಪಶ್ಚಿಮ ಬಂಗಾಳ ಬಿಜೆಪಿಯ ಪರಿಸ್ಥಿತಿ. ಬಂಗಾಳ ಬಿಜೆಪಿಯನ್ನು ತಿರಸ್ಕರಿಸುತ್ತದೆ ಎಂದು ಬರೆಯಲಾಗಿದೆ. ಈ ಚಿತ್ರವನ್ನು ನೂರಾರು ಜನ ಹಂಚಿಕೊಂಡಿದ್ದಾರೆ.

ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರವರ ಭಾವಚಿತ್ರಗಳನ್ನು ಹಾಕಲಾಗಿದೆ. ಒಟ್ಟಿನಲ್ಲಿ ಬಂಗಾಳದಲ್ಲಿ ಬಿಜೆಪಿ ರ್ಯಾಲಿಗೆ ಜನವೇ ಇಲ್ಲ ಎಂಬುದನ್ನು ಈ ಚಿತ್ರ ಸಾರುತ್ತದೆ. ಇದನ್ನು ಪೋಸ್ಟ್ ಮಾಡಿ ಬಿಜೆಪಿಯನ್ನು ಟ್ರೋಲ್ ಮಾಡುತ್ತಿದ್ದಾರೆ.


ಇದನ್ನೂ ಓದಿ: ಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...