Homeಮುಖಪುಟಪಂಚರಾಜ್ಯ ಚುನಾವಣೆ ಮುಖ್ಯಾಂಶಗಳು: ಆದಿತ್ಯನಾಥ್‌‌ ನಾಮಪತ್ರ ಸಲ್ಲಿಕೆ; BJPಗೆ ಓಟಿಲ್ಲ ಎಂದ ರೈತರು!

ಪಂಚರಾಜ್ಯ ಚುನಾವಣೆ ಮುಖ್ಯಾಂಶಗಳು: ಆದಿತ್ಯನಾಥ್‌‌ ನಾಮಪತ್ರ ಸಲ್ಲಿಕೆ; BJPಗೆ ಓಟಿಲ್ಲ ಎಂದ ರೈತರು!

- Advertisement -
- Advertisement -

ಉತ್ತರಪ್ರದೇಶ, ಪಂಜಾಬ್, ಉತ್ತರಖಂಡ್, ಗೋವಾ ಮತ್ತು ಮಣಿಪುರ ರಾಜ್ಯಗಳಿಗೆ ಫೆಬ್ರವರಿ 10ರಿಂದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಐದೂ ರಾಜ್ಯಗಳಲ್ಲಿ ಸೆಣಸಾಟಕ್ಕೆ ಕಣ ಸಿದ್ದವಾಗಿದೆ. ರಾಷ್ಟ್ರೀಯ ಮತ್ತು ಸ್ಥಳೀಯ ಪಕ್ಷಗಳು ಚುನಾವಣೆಗೆ ಬಿರುಸಿನ ತಯಾರಿ ನಡೆಸುತ್ತಿವೆ.

ಪಂಚರಾಜ್ಯ ಚುನಾವಣಾ ಕಣದ ಫೆಬ್ರವರಿ 4ರ ಪ್ರಮುಖ ಅಂಶಗಳು ಹೀಗಿವೆ:

1. ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಇಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಗೋರಖ್‌ಪುರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ಮೇಲೆ ಆದಿತ್ಯನಾಥ್ ಜೊತೆಗೆ ಗೋರಖ್‌ಪುರದಲ್ಲಿ ರೋಡ್ ಶೋ ನಡೆಸಿದ ಒಕ್ಕೂಟ ಸರ್ಕಾರದ ಗೃಹಸಚಿವ ಅಮಿತ್ ಶಾ, ಬಿಜೆಪಿಯು ಉತ್ತರಪ್ರದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಿಜಾಬ್ ವಿವಾದ: ಕಠಿಣ ನಿಲುವು ತಳೆಯದ ಬೊಮ್ಮಾಯಿ ಸರ್ಕಾರ 

2. ಮಣಿಪುರದ ವಿಧಾನಸಭಾ ಸ್ಪೀಕರ್ ಯುಮನ್ ಕೆಂಚದ್ ಸಿಂಗ್ ಅವರು ಮಣಿಪುರದ 13-ಸಿಗ್ನಾಮೆಯ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಮಣಿಪುರದ ನಾಲ್ವರು ಸಚಿವರು ಕೂಡ ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

3. ನೂರಾರು ರೈತರ ಸಾವಿಗೆ ಕಾರಣವಾದ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿಯ ಭರವಸೆ ನೀಡಿ ಸಮಿತಿಯನ್ನೂ ರಚಿಸದ ಬಿಜೆಪಿಗೆ ಈ ಬಾರಿಯ ಮತ ನೀಡದಂತೆ ಉತ್ತರ ಪ್ರದೇಶ ಹಾಗೂ ಚುನಾವಣೆ ನಡೆಯುತ್ತಿರುವ ಎಲ್ಲಾ ರಾಜ್ಯಗಳ ಜನರಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದಕ್ಕಾಗಿ ಕರಪತ್ರವೊಂದನ್ನು ಹೊರಡಿಸಿದ್ದು, ಅದನ್ನು ಸ್ವಯಂಪ್ರೇರಿತರಾಗಿ ಹಂಚುವಂತೆ ಜನರಲ್ಲಿ ರೈತ ಮುಖಂಡರು ಮನವಿ ಮಾಡಿದ್ದಾರೆ.

4. ಪಂಜಾಬ್ ಚುನಾವಣೆಗೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ, ಪಂಜಾಬ್ ಮುಖ್ಯಮಂತ್ರಿ ಚರಣಜಿತ್‌ ಸಿಂಗ್ ಚನ್ನಿ ಅವರ ಸೋದರಳಿಯ ಭೂಪೇಂದ್ರ ಸಿಂಗ್ ಹನಿ ಅವರನ್ನು ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದ್ದು, ಶುಕ್ರವಾರ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಾಕ್ಷ್ಯವಿಲ್ಲ-ಎಸ್‌ಐಟಿ

5. ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಇಂದು ಗೋವಾದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರು ತಮ್ಮ ಅಭ್ಯರ್ಥಿಗಳ ಪರವಾಗಿ ಮನೆ-ಮನೆ ಪ್ರಚಾರವನ್ನು ನಡೆಸುತ್ತಿದ್ದಾರೆ. ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಮಂದಿರ, ಮಸೀದಿ, ಚರ್ಚ್‌ಗಳ ಮುಂದೆ ಪ್ರಮಾಣ ವಚನ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಕಲ್ಪ್ ಅಮೋನ್ಕರ್ ತಿಳಿಸಿದ್ದಾರೆ.

6. ಉತ್ತರಪ್ರದೇಶದಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಅದರ ಮೈತ್ರಿ ಪಕ್ಷ ಅಪ್ನಾ ದಳ (ಕೆ) ನಡುವೆ ಬಿರುಕು ಹೆಚ್ಚುತ್ತಿದೆ. ಸೀಟು ಹಂಚಿಕೆಯಲ್ಲಿ ಅಪ್ನಾ ದಳ ನಿರೀಕ್ಷಿಸಿದ್ದ ಅಲಹಾಬಾದ್ ಪಶ್ಚಿಮ ಕ್ಷೇತ್ರದಿಂದ ಎಸ್‌ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ನಂತರ ಮೈತ್ರಿ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ತಲೆದೂರಿದೆ. ಶುಕ್ರವಾರ ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಮತ್ತು ಅಪ್ನಾ ದಳದ ನಾಯಕ ಪಲ್ಲವಿ ಪಟೇಲ್ ನಡುವೆ ಮಾತುಕತೆ ನಡೆಯಲಿದೆ. ನಂತರ, ಅಪ್ನಾ ದಳವು ಎಸ್‌ಪಿ ಜೊತೆ ಉಳಿಯುವುದೇ ಇಲ್ಲವೇ ಎಂದು ತಿಳಿಯಲಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

7. “ರೈತ ಆಂದೋಲನ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದ್ದ ಕನಿಷ್ಠ ಬೆಂಬಲ ಬೆಲೆಗಾಗಿ ಸಮಿತಿ ರಚಿಸಲು ಒಕ್ಕೂಟ ಸರ್ಕಾರ ಬದ್ಧವಾಗಿದೆ. ಆದರೆ, ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದಾಗಿ, ಚುನಾವಣೆ ಮುಗಿದ ನಂತರ ಸಮಿತಿಯನ್ನು ರಚಿಸುವಂತೆ ಚುನಾವಣಾ ಆಯೋಗ ಸೂಚಿಸಿದೆ. ಚುನಾವಣೆಯ ನಂತರ ಸಮಿತಿ ರಚಿಸಲಾಗುವುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

8. ಕಾಂಗ್ರೆಸ್ ಜನರಿಗಾಗಿ ಕೆಲಸ ಮಾಡಿದ್ದರೆ, ನನ್ನಂತವರು ರಾಜಕೀಯಕ್ಕೆ ಬರುವ ಅಗತ್ಯವೇ ಇರಲಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕೇಜ್ರಿವಾಲ್ ಅವರನ್ನು ‘ಛೋಟಾ ಮೋದಿ’ ಎಂದು ಗುರುವಾರ ಕರೆದಿದ್ದರು. ಈ ಕುರಿತು ಗೋವಾ ಚುನಾವಣಾ ಪ್ರಚಾರದಲ್ಲಿ ಪ್ರತಿಕ್ರಿಯಿಸಿದ ಕೇಜ್ರಿವಾಲ್, “ಅವರು ಹೀಗೆಲ್ಲ ಮಾತನಾಡುವ ಬದಲು ಜನರಿಗಾಗಿ ಕೆಲಸ ಮಾಡಿದ್ದರೆ, ನನ್ನಂತವರು ರಾಜಕೀಯಕ್ಕೆ ಬರುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ! 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

0
ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 670ಕ್ಕೂ ಹೆಚ್ಚು ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಭಾನುವಾರ ಅಂದಾಜಿಸಿದೆ. ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ...