Homeಮುಖಪುಟಮುಂದಿನ ವರ್ಷ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಂದೂಡುವ ಸಾಧ್ಯತೆಯಿಲ್ಲ: ಮೂಲಗಳು

ಮುಂದಿನ ವರ್ಷ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಂದೂಡುವ ಸಾಧ್ಯತೆಯಿಲ್ಲ: ಮೂಲಗಳು

- Advertisement -
- Advertisement -

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ಚುನಾವಣೆಯನ್ನು ಮುಂದೂಡುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ. ವಿಧಾನಸಭೆಗಳ ಅವಧಿ ಮುಗಿಯುವ ಮೊದಲು ಸಾಂವಿಧಾನಿಕ ಆದೇಶದ ಪ್ರಕಾರ ಚುನಾವಣಾ ಆಯೋಗವು ವೇಳಾಪಟ್ಟಿ ನೀಡುವ ಸಾಧ್ಯತೆಯಿದೆ ಎಂದು NDTV ವರದಿ ಮಾಡಿದೆ.

2022ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮೂಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಮನವಿ ಮಾಡಿತ್ತು. ಅಲ್ಲದೆ ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳನ್ನು ಸಹ ರದ್ದುಗೊಳಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ. ಹೆಚ್ಚುತ್ತಿರುವ ಒಮೈಕ್ರಾನ್ ಪ್ರಕರಣಗಳು ತೀವ್ರಥರನಾದ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.

ಗೋವಾ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 15 ರಂದು ಮುಕ್ತಾಯಗೊಳ್ಳಲಿದೆ. ಮಣಿಪುರ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 19 ರಂದು ಮುಕ್ತಾಯಗೊಳ್ಳಲಿದ್ದು, ಯುಪಿ ವಿಧಾನಸಭೆಯ ಅಧಿಕಾರಾವಧಿಯು ಮೇ 14 ರವರೆಗೆ ಇರುತ್ತದೆ.

ಇದನ್ನೂ ಓದಿ: ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು: ‘ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ’ಎಂದು ಎಚ್‌ಡಿಕೆ ಆಕ್ರೋಶ

ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಮುಂಬರುವ ಚುನಾವಣೆಗಳ ಕುರಿತು ಚುನಾವಣಾ ಆಯೋಗವು ಆರೋಗ್ಯ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿದೆ. ಚುನಾವಣೆ ನಡೆಯಲಿರುವ ಪಂಚರಾಜ್ಯಗಳ ಲಸಿಕೆ ವ್ಯಾಪ್ತಿ ಮತ್ತು ಓಮಿಕ್ರಾನ್ ಪ್ರಕರಣಗಳ ವಿವರಗಳನ್ನು ಕೇಳಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಸಿದ್ಧತೆಗಳ ಮೇಲ್ವಿಚಾರಣೆಗಾಗಿ ಸಿಇಸಿ ಸುಶೀಲ್ ಚಂದ್ರ ಮತ್ತು ಇಬ್ಬರು ಚುನಾವಣಾ ಅಧಿಕಾರಿಗಳನ್ನು ಒಳಗೊಂಡಿರುವ ಚುನಾವಣಾ ಆಯೋಗವು ಡಿಸೆಂಬರ್ 28 ರಿಂದ 30 ರ ನಡುವೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಆಯೋಗವು ಈಗಾಗಲೇ ಗೋವಾ, ಪಂಜಾಬ್ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದೆ.

ಗ್ರಾಮ ಪಂಚಾಯ್ತಿ ಚುನಾವಣೆಗಳು ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು ಕೋವಿಡ್ ವೇಗವಾಗಿ ಹರಡಲು ಕಾರಣವಾಗಿತ್ತು. ಈಗ ಉತ್ತರ ಪ್ರದೇಶ ರಾಜ್ಯದಲ್ಲಿ ಕೋವಿಡ್ ಪ್ರೊಟೋಕಾಲ್‌ಗಳನ್ನು ಅನುಸರಿಸಿ ಚುನಾವಣಾ ರ್‍ಯಾಲಿಗಳನ್ನು ನಡೆಸುವುದು ಅಸಾಧ್ಯ. ಹಾಗಾಗಿ ರ್‍ಯಾಲಿಗಳನ್ನೇ ರದ್ದುಗೊಳಿಸಿ ಒಂದೆರೆಡು ತಿಂಗಳು ಚುನಾವಣೆ ಮುಂದೂಡಬೇಕೆಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಯುಪಿ ಚುನಾವಣೆ ಮೂಂದೂಡಿ, ರ್ಯಾಲಿಗಳನ್ನು ರದ್ದುಗೊಳಿಸಿ: ಚುನಾವಣಾ ಆಯೋಗ, ಪ್ರಧಾನಿಗೆ ಹೈಕೋರ್ಟ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...