Homeಮುಖಪುಟಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

ಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

- Advertisement -
- Advertisement -

ಫೆಬ್ರವರಿ 14ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಉತ್ತರಖಂಡ ಮತ್ತು ಗೋವಾ ಹಾಗೂ ಫೆಬ್ರವರಿ 20ರಂದು ನಡೆಯಲಿರುವ ಪಂಜಾಬ್‍ ಚುನಾವಣಾ ಕಣದಲ್ಲಿರುವ 2,207 ಅಭ್ಯರ್ಥಿಗಳಲ್ಲಿ 491 ಮಂದಿ ಅಪರಾಧ ಹಿನ್ನೆಲೆ ಹೊಂದಿದ್ದಾರೆ. ಇವರಲ್ಲಿ ಹಲವರು ಗಂಭೀರ ಆರೋಪ ಎದುರಿಸುತ್ತಿದ್ದಾರೆ ಎಂದು ಅವರು ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಿಂದ ತಿಳಿದುಬಂದಿದೆ.

ಚುನಾವಣಾ ಆಯೋಗದ ದಾಖಲೆ ಪ್ರಕಾರ ಪಂಜಾಬ್‍ನ 117 ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಿರುವ 1285 ಅಭ್ಯರ್ಥಿಗಳ ಪೈಕಿ 312 ಮಂದಿ, ಉತ್ತರಖಂಡದ 70 ಕ್ಷೇತ್ರಗಳಲ್ಲಿ 632 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ಪೈಕಿ 106 ಮಂದಿಗೆ ಅಪರಾಧ ಹಿನ್ನೆಲೆ ಇದೆ. ಗೋವಾದ 40 ಸ್ಥಾನಗಳಿಗೆ 301 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ಪೈಕಿ 80 ಮಂದಿ ಕ್ರಿಮಿನಲ್ ಹಿನ್ನೆಲೆ ಕುರಿತ ದಾಖಲೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ಪಂಜಾಬ್‍ನ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳ ಪೈಕಿ ಶೇ.13 ರಷ್ಟು ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯ ಹಾಗೂ ಉತ್ತರಖಂಡ ಮತ್ತು ಗೋವಾದಲ್ಲಿ ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಶೇ.10 ರಿಂದ 16ರಷ್ಟು ಮಂದಿ ಗಂಭೀರ ಅಪರಾಧ ಪ್ರಕರಣಗಳ ಆರೋಪ ಹೊತ್ತಿರುವುದು ಚುನಾವಣಾ ಆಯೋಗಕ್ಕೆ ಅಭ್ಯರ್ಥಿಗಳು ಸಲ್ಲಿಸಿರುವ ಅಫಿಡವಿಟ್ ಪರಿಶೀಲನೆ ವೇಳೆ ತಿಳಿದು ಬಂದಿರುವ ಬಗ್ಗೆ ಪ್ರಿಂಟ್ ವರದಿ ಮಾಡಿದೆ.

ದಾಖಲೆಗಳಲ್ಲಿ ಕೊಲೆ, ಕೊಲೆ ಯತ್ನ, ಅಪರಾಧಿ ನರಹತ್ಯೆ, ಅತ್ಯಾಚಾರ, ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಪ್ರಕರಣ, ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳು, ಅಪಹರಣ ಮತ್ತು ಸುಲಿಗೆಯಂಥ ಪ್ರಕರಣಗಳನ್ನು ಗಂಭೀರ ಅಪರಾಧವೆಂದು ಪರಿಗಣಿಸಲಾಗಿದೆ.

8 ಅಭ್ಯರ್ಥಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳಿದ್ದು, ಇವರಲ್ಲಿ ಪಂಜಾಬ್‍ನ ಮೂವರು, ಉತ್ತರಖಂಡದ ಒಬ್ಬರು, ಗೋವಾದ ನಾಲ್ವರು ಇದ್ದಾರೆ. ಧಾರ್ಮಿಕ ಅಸಂಗತತೆ, ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸುವುದು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವಂಥ ಪ್ರಕರಣಗಳನ್ನು ಎದುರಿಸುತ್ತಿರುವ 19 ಅಭ್ಯರ್ಥಿಗಳ ಪೈಕಿ ತಲಾ 9 ಮಂದಿ ಪಂಜಾಬ್ ಮತ್ತು ಉತ್ತರಖಂಡದವರಾಗಿದ್ದು, ಒಬ್ಬರು ಗೋವಾದವರಾಗಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಕಾಂಗ್ರೆಸ್, ಎಸ್‌ಪಿ ಮೈತ್ರಿಯಾಗಿದ್ದರೇ ಮತವಿಭಜನೆ ತಡೆಯಬಹುದಿತ್ತು- ಮಮತಾ ಬ್ಯಾನರ್ಜಿ

ಪಂಜಾಬ್‍ನ ಕ್ರಿಮಿನಲ್ ಹಿನ್ನೆಲೆಯ 312 ಅಭ್ಯರ್ಥಿಗಳ ಪೈಕಿ ಶೇ.12.9ರಷ್ಟು ಮಂದಿ ಗಂಭೀರ ಆರೋಪ ಹೊತ್ತಿದ್ದಾರೆ. ನಾಲ್ವರು ಅಭ್ಯರ್ಥಿಗಳು ಕೊಲೆ ಪ್ರಕರಣ, ಇಬ್ಬರು ಅಪರಾಧಿ ನರಹತ್ಯೆ, 24 ಮಂದಿ ಕೊಲೆ ಯತ್ನ, ಇಬ್ಬರು ಅತ್ಯಾಚಾರ ಪ್ರಕರಣ, ಇಬ್ಬರು ಅಪಹರಣ ಪ್ರಕರಣ, ಐವರು ಮಹಿಳೆಯರ ಮೇಲಿನ ದೌರ್ಜನ್ಯ, ಇಬ್ಬರು ಅಭ್ಯರ್ಥಿಗಳು ಪರಿಶಿಷ್ಟ ಜಾತಿಯವರ ಮೇಲೆ ದೌರ್ಜನ್ಯ ಪ್ರಕರಣ ಎದುರಿಸುತ್ತಿದ್ದಾರೆ. 8 ಮಂದಿ ಮೇಲೆ ಮಾದಕ ವಸ್ತು ಸಂಬಂಧಿತ ಪ್ರಕರಣಗಳಿವೆ. ಒಬ್ಬರು ತೆರಿಗೆ ವಂಚನೆ, ಇಬ್ಬರು ಅಕ್ರಮ ಗಣಿಗಾರಿಕೆ ಪ್ರಕರಣ ಎದುರಿಸುತ್ತಿರುವ ಬಗ್ಗೆ ಅಫಿಡವಿಟ್‍ನಲ್ಲಿ ಮಾಹಿತಿ ಇದೆ.

ಉತ್ತರಖಂಡ ರಾಜ್ಯದಲ್ಲಿ ಕ್ರಿಮಿನಲ್ ದಾಖಲೆ ಇರುವ 106 ಅಭ್ಯರ್ಥಿಗಳ ಪೈಕಿ ಶೇ.10.4ರಷ್ಟು ಮಂದಿ ಗಂಭೀರ ಆರೋಪ ಹೊಂದಿದ್ದಾರೆ. ಕೊಲೆ, ಕೊಲೆ ಯತ್ನ, ಅಪರಾಧಿ ನರಹತ್ಯೆ ಮತ್ತು ಅತ್ಯಾಚಾರ ಆರೋಪ ಎದುರಿಸುತ್ತಿರುವ ಒಬ್ಬೊಬ್ಬ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಲ್ವರು ಮಹಿಳೆ ಗೌರವಕ್ಕೆ ಧಕ್ಕೆ ಪ್ರಕರಣ ಘೋಷಿಸಿದ್ದಾರೆ. ಇಬ್ಬರು ಅಭ್ಯರ್ಥಿಗಳು ಸುಲಿಗೆ ಪ್ರಕರಣ ಎದುರಿಸುತ್ತಿದ್ದಾರೆ. ಒಬ್ಬರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ಘೋಷಿಸಿದ್ದಾರೆ.

ಗೋವಾದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ 80 ಅಭ್ಯರ್ಥಿಗಳ ಪೈಕಿ ಶೇ.16.25ರಷ್ಟು ಮಂದಿ ಗಂಭೀರ ಆರೋಪದ ಪ್ರಕರಣ ಎದುರಿಸುತ್ತಿದ್ದು, ಈ ಪೈಕಿ ನಾಲ್ವರು ಕೊಲೆ ಯತ್ನದ ಪ್ರಕರಣಗಳಿರುವ ಬಗ್ಗೆ ಅಫಿಡವಿತ್ನಲ್ಲಿ ಮಾಹಿತಿ ಇದೆ. ಒಬ್ಬರು ಅತ್ಯಾಚಾರ, ಐವರ ವಿರುದ್ಧ ಮಹಿಳೆ ಗೌರವಕ್ಕೆ ಧಕ್ಕೆ, ಮೂವರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿವೆ.

ಇದನ್ನೂ ಓದಿ: ಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷಕ್ಕೆ ಬೆಂಬಲ ಘೋಷಿಸಿದ CPI(M) 

ಇದೇ ರೀತಿ ಮೂರು ರಾಜ್ಯಗಳಲ್ಲಿ ಹಲವು ಅಭ್ಯರ್ಥಿಗಳು ಬೇರೆ ಬೇರೆ ರೀತಿಯ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ವಂಚನೆ ಮತ್ತು ನಕಲಿ ಪ್ರಕರಣಗಳನ್ನು ಎದುರಿಸುತ್ತಿರುವ ಒಟ್ಟು 48 ಅಭ್ಯರ್ಥಿಗಳಿದ್ದು, ಪಂಜಾಬ್‌ನಲ್ಲಿ 33, ಉತ್ತರಾಖಂಡದಲ್ಲಿ ಏಳು ಮತ್ತು ಗೋವಾದಲ್ಲಿ ಎಂಟು ಜನರಿದ್ದಾರೆ.

ಅಫಿಡವಿಟ್‍ಗಳ ಪ್ರಕಾರ ಮೂರು ರಾಜ್ಯಗಳಲ್ಲಿ ಎಲ್ಲಾ ಪ್ರಮುಖ ಪಕ್ಷಗಳು, ಕ್ರಿಮಿನಲ್ ಹಿನ್ನೆಲೆ ಹೊಂದಿರುವವರನ್ನು ಕಣಕ್ಕಿಳಿಸಿರುವ ಬಗ್ಗೆ ದಾಖಲೆಗಳು ಹೇಳಿವೆ. ಉಳಿದಂತೆ ಉತ್ತರ ಪ್ರದೇಶ ರಾಜ್ಯವು ಏಳು ಹಂತಗಳಲ್ಲಿ ಚುನಾವಣೆ ಎದುರಿಸುತ್ತಿರುವುದರಿಂದ ಅಲ್ಲಿನ ದತ್ತಾಂಶವನ್ನು ಆಯೋಗವು ಕಂತುಗಳಲ್ಲಿ ಪರಿಶೀಲಿಸಲಿದೆ.

ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‍ಗಳಲ್ಲಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...