Homeಮುಖಪುಟಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

ಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

- Advertisement -
- Advertisement -

ಫೆಬ್ರವರಿ 14ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಉತ್ತರಖಂಡ ಮತ್ತು ಗೋವಾ ಹಾಗೂ ಫೆಬ್ರವರಿ 20ರಂದು ನಡೆಯಲಿರುವ ಪಂಜಾಬ್‍ ಚುನಾವಣಾ ಕಣದಲ್ಲಿರುವ 2,207 ಅಭ್ಯರ್ಥಿಗಳಲ್ಲಿ 491 ಮಂದಿ ಅಪರಾಧ ಹಿನ್ನೆಲೆ ಹೊಂದಿದ್ದಾರೆ. ಇವರಲ್ಲಿ ಹಲವರು ಗಂಭೀರ ಆರೋಪ ಎದುರಿಸುತ್ತಿದ್ದಾರೆ ಎಂದು ಅವರು ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಿಂದ ತಿಳಿದುಬಂದಿದೆ.

ಚುನಾವಣಾ ಆಯೋಗದ ದಾಖಲೆ ಪ್ರಕಾರ ಪಂಜಾಬ್‍ನ 117 ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಿರುವ 1285 ಅಭ್ಯರ್ಥಿಗಳ ಪೈಕಿ 312 ಮಂದಿ, ಉತ್ತರಖಂಡದ 70 ಕ್ಷೇತ್ರಗಳಲ್ಲಿ 632 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ಪೈಕಿ 106 ಮಂದಿಗೆ ಅಪರಾಧ ಹಿನ್ನೆಲೆ ಇದೆ. ಗೋವಾದ 40 ಸ್ಥಾನಗಳಿಗೆ 301 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ಪೈಕಿ 80 ಮಂದಿ ಕ್ರಿಮಿನಲ್ ಹಿನ್ನೆಲೆ ಕುರಿತ ದಾಖಲೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ಪಂಜಾಬ್‍ನ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳ ಪೈಕಿ ಶೇ.13 ರಷ್ಟು ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯ ಹಾಗೂ ಉತ್ತರಖಂಡ ಮತ್ತು ಗೋವಾದಲ್ಲಿ ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಶೇ.10 ರಿಂದ 16ರಷ್ಟು ಮಂದಿ ಗಂಭೀರ ಅಪರಾಧ ಪ್ರಕರಣಗಳ ಆರೋಪ ಹೊತ್ತಿರುವುದು ಚುನಾವಣಾ ಆಯೋಗಕ್ಕೆ ಅಭ್ಯರ್ಥಿಗಳು ಸಲ್ಲಿಸಿರುವ ಅಫಿಡವಿಟ್ ಪರಿಶೀಲನೆ ವೇಳೆ ತಿಳಿದು ಬಂದಿರುವ ಬಗ್ಗೆ ಪ್ರಿಂಟ್ ವರದಿ ಮಾಡಿದೆ.

ದಾಖಲೆಗಳಲ್ಲಿ ಕೊಲೆ, ಕೊಲೆ ಯತ್ನ, ಅಪರಾಧಿ ನರಹತ್ಯೆ, ಅತ್ಯಾಚಾರ, ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಪ್ರಕರಣ, ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳು, ಅಪಹರಣ ಮತ್ತು ಸುಲಿಗೆಯಂಥ ಪ್ರಕರಣಗಳನ್ನು ಗಂಭೀರ ಅಪರಾಧವೆಂದು ಪರಿಗಣಿಸಲಾಗಿದೆ.

8 ಅಭ್ಯರ್ಥಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳಿದ್ದು, ಇವರಲ್ಲಿ ಪಂಜಾಬ್‍ನ ಮೂವರು, ಉತ್ತರಖಂಡದ ಒಬ್ಬರು, ಗೋವಾದ ನಾಲ್ವರು ಇದ್ದಾರೆ. ಧಾರ್ಮಿಕ ಅಸಂಗತತೆ, ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸುವುದು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವಂಥ ಪ್ರಕರಣಗಳನ್ನು ಎದುರಿಸುತ್ತಿರುವ 19 ಅಭ್ಯರ್ಥಿಗಳ ಪೈಕಿ ತಲಾ 9 ಮಂದಿ ಪಂಜಾಬ್ ಮತ್ತು ಉತ್ತರಖಂಡದವರಾಗಿದ್ದು, ಒಬ್ಬರು ಗೋವಾದವರಾಗಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಕಾಂಗ್ರೆಸ್, ಎಸ್‌ಪಿ ಮೈತ್ರಿಯಾಗಿದ್ದರೇ ಮತವಿಭಜನೆ ತಡೆಯಬಹುದಿತ್ತು- ಮಮತಾ ಬ್ಯಾನರ್ಜಿ

ಪಂಜಾಬ್‍ನ ಕ್ರಿಮಿನಲ್ ಹಿನ್ನೆಲೆಯ 312 ಅಭ್ಯರ್ಥಿಗಳ ಪೈಕಿ ಶೇ.12.9ರಷ್ಟು ಮಂದಿ ಗಂಭೀರ ಆರೋಪ ಹೊತ್ತಿದ್ದಾರೆ. ನಾಲ್ವರು ಅಭ್ಯರ್ಥಿಗಳು ಕೊಲೆ ಪ್ರಕರಣ, ಇಬ್ಬರು ಅಪರಾಧಿ ನರಹತ್ಯೆ, 24 ಮಂದಿ ಕೊಲೆ ಯತ್ನ, ಇಬ್ಬರು ಅತ್ಯಾಚಾರ ಪ್ರಕರಣ, ಇಬ್ಬರು ಅಪಹರಣ ಪ್ರಕರಣ, ಐವರು ಮಹಿಳೆಯರ ಮೇಲಿನ ದೌರ್ಜನ್ಯ, ಇಬ್ಬರು ಅಭ್ಯರ್ಥಿಗಳು ಪರಿಶಿಷ್ಟ ಜಾತಿಯವರ ಮೇಲೆ ದೌರ್ಜನ್ಯ ಪ್ರಕರಣ ಎದುರಿಸುತ್ತಿದ್ದಾರೆ. 8 ಮಂದಿ ಮೇಲೆ ಮಾದಕ ವಸ್ತು ಸಂಬಂಧಿತ ಪ್ರಕರಣಗಳಿವೆ. ಒಬ್ಬರು ತೆರಿಗೆ ವಂಚನೆ, ಇಬ್ಬರು ಅಕ್ರಮ ಗಣಿಗಾರಿಕೆ ಪ್ರಕರಣ ಎದುರಿಸುತ್ತಿರುವ ಬಗ್ಗೆ ಅಫಿಡವಿಟ್‍ನಲ್ಲಿ ಮಾಹಿತಿ ಇದೆ.

ಉತ್ತರಖಂಡ ರಾಜ್ಯದಲ್ಲಿ ಕ್ರಿಮಿನಲ್ ದಾಖಲೆ ಇರುವ 106 ಅಭ್ಯರ್ಥಿಗಳ ಪೈಕಿ ಶೇ.10.4ರಷ್ಟು ಮಂದಿ ಗಂಭೀರ ಆರೋಪ ಹೊಂದಿದ್ದಾರೆ. ಕೊಲೆ, ಕೊಲೆ ಯತ್ನ, ಅಪರಾಧಿ ನರಹತ್ಯೆ ಮತ್ತು ಅತ್ಯಾಚಾರ ಆರೋಪ ಎದುರಿಸುತ್ತಿರುವ ಒಬ್ಬೊಬ್ಬ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಲ್ವರು ಮಹಿಳೆ ಗೌರವಕ್ಕೆ ಧಕ್ಕೆ ಪ್ರಕರಣ ಘೋಷಿಸಿದ್ದಾರೆ. ಇಬ್ಬರು ಅಭ್ಯರ್ಥಿಗಳು ಸುಲಿಗೆ ಪ್ರಕರಣ ಎದುರಿಸುತ್ತಿದ್ದಾರೆ. ಒಬ್ಬರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ಘೋಷಿಸಿದ್ದಾರೆ.

ಗೋವಾದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ 80 ಅಭ್ಯರ್ಥಿಗಳ ಪೈಕಿ ಶೇ.16.25ರಷ್ಟು ಮಂದಿ ಗಂಭೀರ ಆರೋಪದ ಪ್ರಕರಣ ಎದುರಿಸುತ್ತಿದ್ದು, ಈ ಪೈಕಿ ನಾಲ್ವರು ಕೊಲೆ ಯತ್ನದ ಪ್ರಕರಣಗಳಿರುವ ಬಗ್ಗೆ ಅಫಿಡವಿತ್ನಲ್ಲಿ ಮಾಹಿತಿ ಇದೆ. ಒಬ್ಬರು ಅತ್ಯಾಚಾರ, ಐವರ ವಿರುದ್ಧ ಮಹಿಳೆ ಗೌರವಕ್ಕೆ ಧಕ್ಕೆ, ಮೂವರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿವೆ.

ಇದನ್ನೂ ಓದಿ: ಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷಕ್ಕೆ ಬೆಂಬಲ ಘೋಷಿಸಿದ CPI(M) 

ಇದೇ ರೀತಿ ಮೂರು ರಾಜ್ಯಗಳಲ್ಲಿ ಹಲವು ಅಭ್ಯರ್ಥಿಗಳು ಬೇರೆ ಬೇರೆ ರೀತಿಯ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ವಂಚನೆ ಮತ್ತು ನಕಲಿ ಪ್ರಕರಣಗಳನ್ನು ಎದುರಿಸುತ್ತಿರುವ ಒಟ್ಟು 48 ಅಭ್ಯರ್ಥಿಗಳಿದ್ದು, ಪಂಜಾಬ್‌ನಲ್ಲಿ 33, ಉತ್ತರಾಖಂಡದಲ್ಲಿ ಏಳು ಮತ್ತು ಗೋವಾದಲ್ಲಿ ಎಂಟು ಜನರಿದ್ದಾರೆ.

ಅಫಿಡವಿಟ್‍ಗಳ ಪ್ರಕಾರ ಮೂರು ರಾಜ್ಯಗಳಲ್ಲಿ ಎಲ್ಲಾ ಪ್ರಮುಖ ಪಕ್ಷಗಳು, ಕ್ರಿಮಿನಲ್ ಹಿನ್ನೆಲೆ ಹೊಂದಿರುವವರನ್ನು ಕಣಕ್ಕಿಳಿಸಿರುವ ಬಗ್ಗೆ ದಾಖಲೆಗಳು ಹೇಳಿವೆ. ಉಳಿದಂತೆ ಉತ್ತರ ಪ್ರದೇಶ ರಾಜ್ಯವು ಏಳು ಹಂತಗಳಲ್ಲಿ ಚುನಾವಣೆ ಎದುರಿಸುತ್ತಿರುವುದರಿಂದ ಅಲ್ಲಿನ ದತ್ತಾಂಶವನ್ನು ಆಯೋಗವು ಕಂತುಗಳಲ್ಲಿ ಪರಿಶೀಲಿಸಲಿದೆ.

ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‍ಗಳಲ್ಲಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....