Homeಮುಖಪುಟಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

ಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

- Advertisement -
- Advertisement -

ಫೆಬ್ರವರಿ 14ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಉತ್ತರಖಂಡ ಮತ್ತು ಗೋವಾ ಹಾಗೂ ಫೆಬ್ರವರಿ 20ರಂದು ನಡೆಯಲಿರುವ ಪಂಜಾಬ್‍ ಚುನಾವಣಾ ಕಣದಲ್ಲಿರುವ 2,207 ಅಭ್ಯರ್ಥಿಗಳಲ್ಲಿ 491 ಮಂದಿ ಅಪರಾಧ ಹಿನ್ನೆಲೆ ಹೊಂದಿದ್ದಾರೆ. ಇವರಲ್ಲಿ ಹಲವರು ಗಂಭೀರ ಆರೋಪ ಎದುರಿಸುತ್ತಿದ್ದಾರೆ ಎಂದು ಅವರು ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಿಂದ ತಿಳಿದುಬಂದಿದೆ.

ಚುನಾವಣಾ ಆಯೋಗದ ದಾಖಲೆ ಪ್ರಕಾರ ಪಂಜಾಬ್‍ನ 117 ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಿರುವ 1285 ಅಭ್ಯರ್ಥಿಗಳ ಪೈಕಿ 312 ಮಂದಿ, ಉತ್ತರಖಂಡದ 70 ಕ್ಷೇತ್ರಗಳಲ್ಲಿ 632 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ಪೈಕಿ 106 ಮಂದಿಗೆ ಅಪರಾಧ ಹಿನ್ನೆಲೆ ಇದೆ. ಗೋವಾದ 40 ಸ್ಥಾನಗಳಿಗೆ 301 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ಪೈಕಿ 80 ಮಂದಿ ಕ್ರಿಮಿನಲ್ ಹಿನ್ನೆಲೆ ಕುರಿತ ದಾಖಲೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ಪಂಜಾಬ್‍ನ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳ ಪೈಕಿ ಶೇ.13 ರಷ್ಟು ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯ ಹಾಗೂ ಉತ್ತರಖಂಡ ಮತ್ತು ಗೋವಾದಲ್ಲಿ ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಶೇ.10 ರಿಂದ 16ರಷ್ಟು ಮಂದಿ ಗಂಭೀರ ಅಪರಾಧ ಪ್ರಕರಣಗಳ ಆರೋಪ ಹೊತ್ತಿರುವುದು ಚುನಾವಣಾ ಆಯೋಗಕ್ಕೆ ಅಭ್ಯರ್ಥಿಗಳು ಸಲ್ಲಿಸಿರುವ ಅಫಿಡವಿಟ್ ಪರಿಶೀಲನೆ ವೇಳೆ ತಿಳಿದು ಬಂದಿರುವ ಬಗ್ಗೆ ಪ್ರಿಂಟ್ ವರದಿ ಮಾಡಿದೆ.

ದಾಖಲೆಗಳಲ್ಲಿ ಕೊಲೆ, ಕೊಲೆ ಯತ್ನ, ಅಪರಾಧಿ ನರಹತ್ಯೆ, ಅತ್ಯಾಚಾರ, ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಪ್ರಕರಣ, ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳು, ಅಪಹರಣ ಮತ್ತು ಸುಲಿಗೆಯಂಥ ಪ್ರಕರಣಗಳನ್ನು ಗಂಭೀರ ಅಪರಾಧವೆಂದು ಪರಿಗಣಿಸಲಾಗಿದೆ.

8 ಅಭ್ಯರ್ಥಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳಿದ್ದು, ಇವರಲ್ಲಿ ಪಂಜಾಬ್‍ನ ಮೂವರು, ಉತ್ತರಖಂಡದ ಒಬ್ಬರು, ಗೋವಾದ ನಾಲ್ವರು ಇದ್ದಾರೆ. ಧಾರ್ಮಿಕ ಅಸಂಗತತೆ, ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸುವುದು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವಂಥ ಪ್ರಕರಣಗಳನ್ನು ಎದುರಿಸುತ್ತಿರುವ 19 ಅಭ್ಯರ್ಥಿಗಳ ಪೈಕಿ ತಲಾ 9 ಮಂದಿ ಪಂಜಾಬ್ ಮತ್ತು ಉತ್ತರಖಂಡದವರಾಗಿದ್ದು, ಒಬ್ಬರು ಗೋವಾದವರಾಗಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಕಾಂಗ್ರೆಸ್, ಎಸ್‌ಪಿ ಮೈತ್ರಿಯಾಗಿದ್ದರೇ ಮತವಿಭಜನೆ ತಡೆಯಬಹುದಿತ್ತು- ಮಮತಾ ಬ್ಯಾನರ್ಜಿ

ಪಂಜಾಬ್‍ನ ಕ್ರಿಮಿನಲ್ ಹಿನ್ನೆಲೆಯ 312 ಅಭ್ಯರ್ಥಿಗಳ ಪೈಕಿ ಶೇ.12.9ರಷ್ಟು ಮಂದಿ ಗಂಭೀರ ಆರೋಪ ಹೊತ್ತಿದ್ದಾರೆ. ನಾಲ್ವರು ಅಭ್ಯರ್ಥಿಗಳು ಕೊಲೆ ಪ್ರಕರಣ, ಇಬ್ಬರು ಅಪರಾಧಿ ನರಹತ್ಯೆ, 24 ಮಂದಿ ಕೊಲೆ ಯತ್ನ, ಇಬ್ಬರು ಅತ್ಯಾಚಾರ ಪ್ರಕರಣ, ಇಬ್ಬರು ಅಪಹರಣ ಪ್ರಕರಣ, ಐವರು ಮಹಿಳೆಯರ ಮೇಲಿನ ದೌರ್ಜನ್ಯ, ಇಬ್ಬರು ಅಭ್ಯರ್ಥಿಗಳು ಪರಿಶಿಷ್ಟ ಜಾತಿಯವರ ಮೇಲೆ ದೌರ್ಜನ್ಯ ಪ್ರಕರಣ ಎದುರಿಸುತ್ತಿದ್ದಾರೆ. 8 ಮಂದಿ ಮೇಲೆ ಮಾದಕ ವಸ್ತು ಸಂಬಂಧಿತ ಪ್ರಕರಣಗಳಿವೆ. ಒಬ್ಬರು ತೆರಿಗೆ ವಂಚನೆ, ಇಬ್ಬರು ಅಕ್ರಮ ಗಣಿಗಾರಿಕೆ ಪ್ರಕರಣ ಎದುರಿಸುತ್ತಿರುವ ಬಗ್ಗೆ ಅಫಿಡವಿಟ್‍ನಲ್ಲಿ ಮಾಹಿತಿ ಇದೆ.

ಉತ್ತರಖಂಡ ರಾಜ್ಯದಲ್ಲಿ ಕ್ರಿಮಿನಲ್ ದಾಖಲೆ ಇರುವ 106 ಅಭ್ಯರ್ಥಿಗಳ ಪೈಕಿ ಶೇ.10.4ರಷ್ಟು ಮಂದಿ ಗಂಭೀರ ಆರೋಪ ಹೊಂದಿದ್ದಾರೆ. ಕೊಲೆ, ಕೊಲೆ ಯತ್ನ, ಅಪರಾಧಿ ನರಹತ್ಯೆ ಮತ್ತು ಅತ್ಯಾಚಾರ ಆರೋಪ ಎದುರಿಸುತ್ತಿರುವ ಒಬ್ಬೊಬ್ಬ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಲ್ವರು ಮಹಿಳೆ ಗೌರವಕ್ಕೆ ಧಕ್ಕೆ ಪ್ರಕರಣ ಘೋಷಿಸಿದ್ದಾರೆ. ಇಬ್ಬರು ಅಭ್ಯರ್ಥಿಗಳು ಸುಲಿಗೆ ಪ್ರಕರಣ ಎದುರಿಸುತ್ತಿದ್ದಾರೆ. ಒಬ್ಬರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ಘೋಷಿಸಿದ್ದಾರೆ.

ಗೋವಾದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ 80 ಅಭ್ಯರ್ಥಿಗಳ ಪೈಕಿ ಶೇ.16.25ರಷ್ಟು ಮಂದಿ ಗಂಭೀರ ಆರೋಪದ ಪ್ರಕರಣ ಎದುರಿಸುತ್ತಿದ್ದು, ಈ ಪೈಕಿ ನಾಲ್ವರು ಕೊಲೆ ಯತ್ನದ ಪ್ರಕರಣಗಳಿರುವ ಬಗ್ಗೆ ಅಫಿಡವಿತ್ನಲ್ಲಿ ಮಾಹಿತಿ ಇದೆ. ಒಬ್ಬರು ಅತ್ಯಾಚಾರ, ಐವರ ವಿರುದ್ಧ ಮಹಿಳೆ ಗೌರವಕ್ಕೆ ಧಕ್ಕೆ, ಮೂವರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿವೆ.

ಇದನ್ನೂ ಓದಿ: ಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷಕ್ಕೆ ಬೆಂಬಲ ಘೋಷಿಸಿದ CPI(M) 

ಇದೇ ರೀತಿ ಮೂರು ರಾಜ್ಯಗಳಲ್ಲಿ ಹಲವು ಅಭ್ಯರ್ಥಿಗಳು ಬೇರೆ ಬೇರೆ ರೀತಿಯ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ವಂಚನೆ ಮತ್ತು ನಕಲಿ ಪ್ರಕರಣಗಳನ್ನು ಎದುರಿಸುತ್ತಿರುವ ಒಟ್ಟು 48 ಅಭ್ಯರ್ಥಿಗಳಿದ್ದು, ಪಂಜಾಬ್‌ನಲ್ಲಿ 33, ಉತ್ತರಾಖಂಡದಲ್ಲಿ ಏಳು ಮತ್ತು ಗೋವಾದಲ್ಲಿ ಎಂಟು ಜನರಿದ್ದಾರೆ.

ಅಫಿಡವಿಟ್‍ಗಳ ಪ್ರಕಾರ ಮೂರು ರಾಜ್ಯಗಳಲ್ಲಿ ಎಲ್ಲಾ ಪ್ರಮುಖ ಪಕ್ಷಗಳು, ಕ್ರಿಮಿನಲ್ ಹಿನ್ನೆಲೆ ಹೊಂದಿರುವವರನ್ನು ಕಣಕ್ಕಿಳಿಸಿರುವ ಬಗ್ಗೆ ದಾಖಲೆಗಳು ಹೇಳಿವೆ. ಉಳಿದಂತೆ ಉತ್ತರ ಪ್ರದೇಶ ರಾಜ್ಯವು ಏಳು ಹಂತಗಳಲ್ಲಿ ಚುನಾವಣೆ ಎದುರಿಸುತ್ತಿರುವುದರಿಂದ ಅಲ್ಲಿನ ದತ್ತಾಂಶವನ್ನು ಆಯೋಗವು ಕಂತುಗಳಲ್ಲಿ ಪರಿಶೀಲಿಸಲಿದೆ.

ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‍ಗಳಲ್ಲಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...