Homeಮುಖಪುಟಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

ಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

- Advertisement -
- Advertisement -

ಫೆಬ್ರವರಿ 14ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಉತ್ತರಖಂಡ ಮತ್ತು ಗೋವಾ ಹಾಗೂ ಫೆಬ್ರವರಿ 20ರಂದು ನಡೆಯಲಿರುವ ಪಂಜಾಬ್‍ ಚುನಾವಣಾ ಕಣದಲ್ಲಿರುವ 2,207 ಅಭ್ಯರ್ಥಿಗಳಲ್ಲಿ 491 ಮಂದಿ ಅಪರಾಧ ಹಿನ್ನೆಲೆ ಹೊಂದಿದ್ದಾರೆ. ಇವರಲ್ಲಿ ಹಲವರು ಗಂಭೀರ ಆರೋಪ ಎದುರಿಸುತ್ತಿದ್ದಾರೆ ಎಂದು ಅವರು ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಿಂದ ತಿಳಿದುಬಂದಿದೆ.

ಚುನಾವಣಾ ಆಯೋಗದ ದಾಖಲೆ ಪ್ರಕಾರ ಪಂಜಾಬ್‍ನ 117 ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಿರುವ 1285 ಅಭ್ಯರ್ಥಿಗಳ ಪೈಕಿ 312 ಮಂದಿ, ಉತ್ತರಖಂಡದ 70 ಕ್ಷೇತ್ರಗಳಲ್ಲಿ 632 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ಪೈಕಿ 106 ಮಂದಿಗೆ ಅಪರಾಧ ಹಿನ್ನೆಲೆ ಇದೆ. ಗೋವಾದ 40 ಸ್ಥಾನಗಳಿಗೆ 301 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ಪೈಕಿ 80 ಮಂದಿ ಕ್ರಿಮಿನಲ್ ಹಿನ್ನೆಲೆ ಕುರಿತ ದಾಖಲೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ಪಂಜಾಬ್‍ನ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳ ಪೈಕಿ ಶೇ.13 ರಷ್ಟು ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯ ಹಾಗೂ ಉತ್ತರಖಂಡ ಮತ್ತು ಗೋವಾದಲ್ಲಿ ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಶೇ.10 ರಿಂದ 16ರಷ್ಟು ಮಂದಿ ಗಂಭೀರ ಅಪರಾಧ ಪ್ರಕರಣಗಳ ಆರೋಪ ಹೊತ್ತಿರುವುದು ಚುನಾವಣಾ ಆಯೋಗಕ್ಕೆ ಅಭ್ಯರ್ಥಿಗಳು ಸಲ್ಲಿಸಿರುವ ಅಫಿಡವಿಟ್ ಪರಿಶೀಲನೆ ವೇಳೆ ತಿಳಿದು ಬಂದಿರುವ ಬಗ್ಗೆ ಪ್ರಿಂಟ್ ವರದಿ ಮಾಡಿದೆ.

ದಾಖಲೆಗಳಲ್ಲಿ ಕೊಲೆ, ಕೊಲೆ ಯತ್ನ, ಅಪರಾಧಿ ನರಹತ್ಯೆ, ಅತ್ಯಾಚಾರ, ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಪ್ರಕರಣ, ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳು, ಅಪಹರಣ ಮತ್ತು ಸುಲಿಗೆಯಂಥ ಪ್ರಕರಣಗಳನ್ನು ಗಂಭೀರ ಅಪರಾಧವೆಂದು ಪರಿಗಣಿಸಲಾಗಿದೆ.

8 ಅಭ್ಯರ್ಥಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳಿದ್ದು, ಇವರಲ್ಲಿ ಪಂಜಾಬ್‍ನ ಮೂವರು, ಉತ್ತರಖಂಡದ ಒಬ್ಬರು, ಗೋವಾದ ನಾಲ್ವರು ಇದ್ದಾರೆ. ಧಾರ್ಮಿಕ ಅಸಂಗತತೆ, ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸುವುದು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವಂಥ ಪ್ರಕರಣಗಳನ್ನು ಎದುರಿಸುತ್ತಿರುವ 19 ಅಭ್ಯರ್ಥಿಗಳ ಪೈಕಿ ತಲಾ 9 ಮಂದಿ ಪಂಜಾಬ್ ಮತ್ತು ಉತ್ತರಖಂಡದವರಾಗಿದ್ದು, ಒಬ್ಬರು ಗೋವಾದವರಾಗಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಕಾಂಗ್ರೆಸ್, ಎಸ್‌ಪಿ ಮೈತ್ರಿಯಾಗಿದ್ದರೇ ಮತವಿಭಜನೆ ತಡೆಯಬಹುದಿತ್ತು- ಮಮತಾ ಬ್ಯಾನರ್ಜಿ

ಪಂಜಾಬ್‍ನ ಕ್ರಿಮಿನಲ್ ಹಿನ್ನೆಲೆಯ 312 ಅಭ್ಯರ್ಥಿಗಳ ಪೈಕಿ ಶೇ.12.9ರಷ್ಟು ಮಂದಿ ಗಂಭೀರ ಆರೋಪ ಹೊತ್ತಿದ್ದಾರೆ. ನಾಲ್ವರು ಅಭ್ಯರ್ಥಿಗಳು ಕೊಲೆ ಪ್ರಕರಣ, ಇಬ್ಬರು ಅಪರಾಧಿ ನರಹತ್ಯೆ, 24 ಮಂದಿ ಕೊಲೆ ಯತ್ನ, ಇಬ್ಬರು ಅತ್ಯಾಚಾರ ಪ್ರಕರಣ, ಇಬ್ಬರು ಅಪಹರಣ ಪ್ರಕರಣ, ಐವರು ಮಹಿಳೆಯರ ಮೇಲಿನ ದೌರ್ಜನ್ಯ, ಇಬ್ಬರು ಅಭ್ಯರ್ಥಿಗಳು ಪರಿಶಿಷ್ಟ ಜಾತಿಯವರ ಮೇಲೆ ದೌರ್ಜನ್ಯ ಪ್ರಕರಣ ಎದುರಿಸುತ್ತಿದ್ದಾರೆ. 8 ಮಂದಿ ಮೇಲೆ ಮಾದಕ ವಸ್ತು ಸಂಬಂಧಿತ ಪ್ರಕರಣಗಳಿವೆ. ಒಬ್ಬರು ತೆರಿಗೆ ವಂಚನೆ, ಇಬ್ಬರು ಅಕ್ರಮ ಗಣಿಗಾರಿಕೆ ಪ್ರಕರಣ ಎದುರಿಸುತ್ತಿರುವ ಬಗ್ಗೆ ಅಫಿಡವಿಟ್‍ನಲ್ಲಿ ಮಾಹಿತಿ ಇದೆ.

ಉತ್ತರಖಂಡ ರಾಜ್ಯದಲ್ಲಿ ಕ್ರಿಮಿನಲ್ ದಾಖಲೆ ಇರುವ 106 ಅಭ್ಯರ್ಥಿಗಳ ಪೈಕಿ ಶೇ.10.4ರಷ್ಟು ಮಂದಿ ಗಂಭೀರ ಆರೋಪ ಹೊಂದಿದ್ದಾರೆ. ಕೊಲೆ, ಕೊಲೆ ಯತ್ನ, ಅಪರಾಧಿ ನರಹತ್ಯೆ ಮತ್ತು ಅತ್ಯಾಚಾರ ಆರೋಪ ಎದುರಿಸುತ್ತಿರುವ ಒಬ್ಬೊಬ್ಬ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಲ್ವರು ಮಹಿಳೆ ಗೌರವಕ್ಕೆ ಧಕ್ಕೆ ಪ್ರಕರಣ ಘೋಷಿಸಿದ್ದಾರೆ. ಇಬ್ಬರು ಅಭ್ಯರ್ಥಿಗಳು ಸುಲಿಗೆ ಪ್ರಕರಣ ಎದುರಿಸುತ್ತಿದ್ದಾರೆ. ಒಬ್ಬರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ಘೋಷಿಸಿದ್ದಾರೆ.

ಗೋವಾದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ 80 ಅಭ್ಯರ್ಥಿಗಳ ಪೈಕಿ ಶೇ.16.25ರಷ್ಟು ಮಂದಿ ಗಂಭೀರ ಆರೋಪದ ಪ್ರಕರಣ ಎದುರಿಸುತ್ತಿದ್ದು, ಈ ಪೈಕಿ ನಾಲ್ವರು ಕೊಲೆ ಯತ್ನದ ಪ್ರಕರಣಗಳಿರುವ ಬಗ್ಗೆ ಅಫಿಡವಿತ್ನಲ್ಲಿ ಮಾಹಿತಿ ಇದೆ. ಒಬ್ಬರು ಅತ್ಯಾಚಾರ, ಐವರ ವಿರುದ್ಧ ಮಹಿಳೆ ಗೌರವಕ್ಕೆ ಧಕ್ಕೆ, ಮೂವರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿವೆ.

ಇದನ್ನೂ ಓದಿ: ಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷಕ್ಕೆ ಬೆಂಬಲ ಘೋಷಿಸಿದ CPI(M) 

ಇದೇ ರೀತಿ ಮೂರು ರಾಜ್ಯಗಳಲ್ಲಿ ಹಲವು ಅಭ್ಯರ್ಥಿಗಳು ಬೇರೆ ಬೇರೆ ರೀತಿಯ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ವಂಚನೆ ಮತ್ತು ನಕಲಿ ಪ್ರಕರಣಗಳನ್ನು ಎದುರಿಸುತ್ತಿರುವ ಒಟ್ಟು 48 ಅಭ್ಯರ್ಥಿಗಳಿದ್ದು, ಪಂಜಾಬ್‌ನಲ್ಲಿ 33, ಉತ್ತರಾಖಂಡದಲ್ಲಿ ಏಳು ಮತ್ತು ಗೋವಾದಲ್ಲಿ ಎಂಟು ಜನರಿದ್ದಾರೆ.

ಅಫಿಡವಿಟ್‍ಗಳ ಪ್ರಕಾರ ಮೂರು ರಾಜ್ಯಗಳಲ್ಲಿ ಎಲ್ಲಾ ಪ್ರಮುಖ ಪಕ್ಷಗಳು, ಕ್ರಿಮಿನಲ್ ಹಿನ್ನೆಲೆ ಹೊಂದಿರುವವರನ್ನು ಕಣಕ್ಕಿಳಿಸಿರುವ ಬಗ್ಗೆ ದಾಖಲೆಗಳು ಹೇಳಿವೆ. ಉಳಿದಂತೆ ಉತ್ತರ ಪ್ರದೇಶ ರಾಜ್ಯವು ಏಳು ಹಂತಗಳಲ್ಲಿ ಚುನಾವಣೆ ಎದುರಿಸುತ್ತಿರುವುದರಿಂದ ಅಲ್ಲಿನ ದತ್ತಾಂಶವನ್ನು ಆಯೋಗವು ಕಂತುಗಳಲ್ಲಿ ಪರಿಶೀಲಿಸಲಿದೆ.

ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‍ಗಳಲ್ಲಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...