Homeಮುಖಪುಟಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

ಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

- Advertisement -
- Advertisement -

ಕೊರೊನಾ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿದ್ದಂತೆ ಐದು ರಾಜ್ಯಗಳಲ್ಲಿ ಚುನಾವಣೆಗೆ ಮುಂಚಿತವಾಗಿ ನಡೆಯುವ ರ್‍ಯಾಲಿಗಳು ಮತ್ತು ರೋಡ್‌ಶೋಗಳ ಮೇಲೆ ನಿಷೇಧ ಹೇರಲಾಗಿತ್ತು. ಇದೀಗ ಈ ನಿಷೇಧವನ್ನು ಜನವರಿ 22 ರವರೆಗೆ ವಿಸ್ತರಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

ಒಳಾಂಗಣ ರಾಜಕೀಯ ಸಭೆಗಳು, 300 ಜನರ ಮಿತಿಗೆ ಒಳಪಟ್ಟು, ಸಭಾಂಗಣದ ಸಾಮರ್ಥ್ಯದ 50% ಅಥವಾ ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿಗದಿಪಡಿಸಿದ ಮಿತಿಗೆ ಒಳಪಟ್ಟು ನಡೆಸಬಹುದಾಗಿದೆ.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ಜನವರಿ 8 ರಂದು ಚುನಾವಣಾ ಆಯೋಗವು ರ್‍ಯಾಲಿಗಳು, ರೋಡ್‌ಶೋಗಳು ಮತ್ತು ಇತರ ರೀತಿಯ ಸಾರ್ವಜನಿಕ ರಾಜಕೀಯ ಕಾರ್ಯಕ್ರಮಗಳನ್ನು ಜನವರಿ 15 (ಇಂದು) ವರೆಗೆ ನಿಷೇಧಿಸಲಾಗುವುದು ಮತ್ತು ನಂತರ ಈ ಆದೇಶವನ್ನು ಪರಿಶೀಲಿಸಲಾಗುವುದು ಎಂದು ಹೇಳಿತ್ತು.

ಚುನಾವಣಾ ಆಯೋಗವು ಇಂದು 11 ಗಂಟೆಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿಗಳೊಂದಿಗೆ, ಮಧ್ಯಾಹ್ನ 1 ಗಂಟೆಗೆ ಚುನಾವಣೆಗೆ ಒಳಪಟ್ಟ ಎಲ್ಲಾ ರಾಜ್ಯಗಳ ಮುಖ್ಯ ಮತ್ತು ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಮತ್ತು ಮಧ್ಯಾಹ್ನ 1 ಗಂಟೆಗೆ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿತ್ತು.

ಒಕ್ಕೂಟ ಸರ್ಕಾರ, ರಾಜ್ಯ ಸರ್ಕಾರಗಳು, ಆರೋಗ್ಯ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು ಪಡೆದ ನಂತರ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ:ಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?

ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಸಾಧ್ಯವಾದಷ್ಟು ಸುರಕ್ಷಿತವಾಗಿ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿರುವ ಕ್ರಮಗಳ ಭಾಗವಾಗಿ ರ್‍ಯಾಲಿಗಳು ಮತ್ತು ರೋಡ್‌ಶೋಗಳನ್ನು ನಿಷೇಧಿಸುವ ಆದೇಶವನ್ನು ಅಂಗೀಕರಿಸಲಾಗಿದೆ.

“ಅಭ್ಯರ್ಥಿಗಳು ಸಾಧ್ಯವಾದಷ್ಟು ಆನ್‌ಲೈನ್‌‌ ಮೂಲಕ ಪ್ರಚಾರ ನಡೆಸಬೇಕು… ಸಾರ್ವಜನಿಕ ರಸ್ತೆಗಳಲ್ಲಿ ಸಭೆಗಳು ಇರುವುದಿಲ್ಲ ಮತ್ತು ಮತ ಎಣಿಕೆಯ ನಂತರ ವಿಜಯೋತ್ಸವದ ಮೆರವಣಿಗೆ ಇರುವುದಿಲ್ಲ” ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಕಳೆದ ವಾರ ಹೇಳಿದ್ದರು.

ಯುಪಿ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ್‌ಗಳಲ್ಲಿ ಚುನಾವಣೆಗಳು ನಡೆಯುತ್ತಿದ್ದು, ದೇಶದಾದ್ಯಂತ ಕೋವಿಡ್ ಪ್ರಕರಣಗಳ ಹೆಚ್ಚಳದ ನಡುವೆಯೇ ಚುನಾವಣೆಗಳು ನಡೆಯುತ್ತಿವೆ.

ಇದನ್ನೂ ಓದಿ:ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....