Homeಮುಖಪುಟಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

ಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

- Advertisement -
- Advertisement -

ಕೊರೊನಾ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿದ್ದಂತೆ ಐದು ರಾಜ್ಯಗಳಲ್ಲಿ ಚುನಾವಣೆಗೆ ಮುಂಚಿತವಾಗಿ ನಡೆಯುವ ರ್‍ಯಾಲಿಗಳು ಮತ್ತು ರೋಡ್‌ಶೋಗಳ ಮೇಲೆ ನಿಷೇಧ ಹೇರಲಾಗಿತ್ತು. ಇದೀಗ ಈ ನಿಷೇಧವನ್ನು ಜನವರಿ 22 ರವರೆಗೆ ವಿಸ್ತರಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

ಒಳಾಂಗಣ ರಾಜಕೀಯ ಸಭೆಗಳು, 300 ಜನರ ಮಿತಿಗೆ ಒಳಪಟ್ಟು, ಸಭಾಂಗಣದ ಸಾಮರ್ಥ್ಯದ 50% ಅಥವಾ ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿಗದಿಪಡಿಸಿದ ಮಿತಿಗೆ ಒಳಪಟ್ಟು ನಡೆಸಬಹುದಾಗಿದೆ.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ಜನವರಿ 8 ರಂದು ಚುನಾವಣಾ ಆಯೋಗವು ರ್‍ಯಾಲಿಗಳು, ರೋಡ್‌ಶೋಗಳು ಮತ್ತು ಇತರ ರೀತಿಯ ಸಾರ್ವಜನಿಕ ರಾಜಕೀಯ ಕಾರ್ಯಕ್ರಮಗಳನ್ನು ಜನವರಿ 15 (ಇಂದು) ವರೆಗೆ ನಿಷೇಧಿಸಲಾಗುವುದು ಮತ್ತು ನಂತರ ಈ ಆದೇಶವನ್ನು ಪರಿಶೀಲಿಸಲಾಗುವುದು ಎಂದು ಹೇಳಿತ್ತು.

ಚುನಾವಣಾ ಆಯೋಗವು ಇಂದು 11 ಗಂಟೆಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿಗಳೊಂದಿಗೆ, ಮಧ್ಯಾಹ್ನ 1 ಗಂಟೆಗೆ ಚುನಾವಣೆಗೆ ಒಳಪಟ್ಟ ಎಲ್ಲಾ ರಾಜ್ಯಗಳ ಮುಖ್ಯ ಮತ್ತು ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಮತ್ತು ಮಧ್ಯಾಹ್ನ 1 ಗಂಟೆಗೆ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿತ್ತು.

ಒಕ್ಕೂಟ ಸರ್ಕಾರ, ರಾಜ್ಯ ಸರ್ಕಾರಗಳು, ಆರೋಗ್ಯ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು ಪಡೆದ ನಂತರ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ:ಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?

ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಸಾಧ್ಯವಾದಷ್ಟು ಸುರಕ್ಷಿತವಾಗಿ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿರುವ ಕ್ರಮಗಳ ಭಾಗವಾಗಿ ರ್‍ಯಾಲಿಗಳು ಮತ್ತು ರೋಡ್‌ಶೋಗಳನ್ನು ನಿಷೇಧಿಸುವ ಆದೇಶವನ್ನು ಅಂಗೀಕರಿಸಲಾಗಿದೆ.

“ಅಭ್ಯರ್ಥಿಗಳು ಸಾಧ್ಯವಾದಷ್ಟು ಆನ್‌ಲೈನ್‌‌ ಮೂಲಕ ಪ್ರಚಾರ ನಡೆಸಬೇಕು… ಸಾರ್ವಜನಿಕ ರಸ್ತೆಗಳಲ್ಲಿ ಸಭೆಗಳು ಇರುವುದಿಲ್ಲ ಮತ್ತು ಮತ ಎಣಿಕೆಯ ನಂತರ ವಿಜಯೋತ್ಸವದ ಮೆರವಣಿಗೆ ಇರುವುದಿಲ್ಲ” ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಕಳೆದ ವಾರ ಹೇಳಿದ್ದರು.

ಯುಪಿ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ್‌ಗಳಲ್ಲಿ ಚುನಾವಣೆಗಳು ನಡೆಯುತ್ತಿದ್ದು, ದೇಶದಾದ್ಯಂತ ಕೋವಿಡ್ ಪ್ರಕರಣಗಳ ಹೆಚ್ಚಳದ ನಡುವೆಯೇ ಚುನಾವಣೆಗಳು ನಡೆಯುತ್ತಿವೆ.

ಇದನ್ನೂ ಓದಿ:ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...