Homeಮುಖಪುಟಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

ಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

- Advertisement -
- Advertisement -

ಕೊರೊನಾ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿದ್ದಂತೆ ಐದು ರಾಜ್ಯಗಳಲ್ಲಿ ಚುನಾವಣೆಗೆ ಮುಂಚಿತವಾಗಿ ನಡೆಯುವ ರ್‍ಯಾಲಿಗಳು ಮತ್ತು ರೋಡ್‌ಶೋಗಳ ಮೇಲೆ ನಿಷೇಧ ಹೇರಲಾಗಿತ್ತು. ಇದೀಗ ಈ ನಿಷೇಧವನ್ನು ಜನವರಿ 22 ರವರೆಗೆ ವಿಸ್ತರಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

ಒಳಾಂಗಣ ರಾಜಕೀಯ ಸಭೆಗಳು, 300 ಜನರ ಮಿತಿಗೆ ಒಳಪಟ್ಟು, ಸಭಾಂಗಣದ ಸಾಮರ್ಥ್ಯದ 50% ಅಥವಾ ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿಗದಿಪಡಿಸಿದ ಮಿತಿಗೆ ಒಳಪಟ್ಟು ನಡೆಸಬಹುದಾಗಿದೆ.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ಜನವರಿ 8 ರಂದು ಚುನಾವಣಾ ಆಯೋಗವು ರ್‍ಯಾಲಿಗಳು, ರೋಡ್‌ಶೋಗಳು ಮತ್ತು ಇತರ ರೀತಿಯ ಸಾರ್ವಜನಿಕ ರಾಜಕೀಯ ಕಾರ್ಯಕ್ರಮಗಳನ್ನು ಜನವರಿ 15 (ಇಂದು) ವರೆಗೆ ನಿಷೇಧಿಸಲಾಗುವುದು ಮತ್ತು ನಂತರ ಈ ಆದೇಶವನ್ನು ಪರಿಶೀಲಿಸಲಾಗುವುದು ಎಂದು ಹೇಳಿತ್ತು.

ಚುನಾವಣಾ ಆಯೋಗವು ಇಂದು 11 ಗಂಟೆಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿಗಳೊಂದಿಗೆ, ಮಧ್ಯಾಹ್ನ 1 ಗಂಟೆಗೆ ಚುನಾವಣೆಗೆ ಒಳಪಟ್ಟ ಎಲ್ಲಾ ರಾಜ್ಯಗಳ ಮುಖ್ಯ ಮತ್ತು ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಮತ್ತು ಮಧ್ಯಾಹ್ನ 1 ಗಂಟೆಗೆ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿತ್ತು.

ಒಕ್ಕೂಟ ಸರ್ಕಾರ, ರಾಜ್ಯ ಸರ್ಕಾರಗಳು, ಆರೋಗ್ಯ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು ಪಡೆದ ನಂತರ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ:ಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?

ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಸಾಧ್ಯವಾದಷ್ಟು ಸುರಕ್ಷಿತವಾಗಿ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿರುವ ಕ್ರಮಗಳ ಭಾಗವಾಗಿ ರ್‍ಯಾಲಿಗಳು ಮತ್ತು ರೋಡ್‌ಶೋಗಳನ್ನು ನಿಷೇಧಿಸುವ ಆದೇಶವನ್ನು ಅಂಗೀಕರಿಸಲಾಗಿದೆ.

“ಅಭ್ಯರ್ಥಿಗಳು ಸಾಧ್ಯವಾದಷ್ಟು ಆನ್‌ಲೈನ್‌‌ ಮೂಲಕ ಪ್ರಚಾರ ನಡೆಸಬೇಕು… ಸಾರ್ವಜನಿಕ ರಸ್ತೆಗಳಲ್ಲಿ ಸಭೆಗಳು ಇರುವುದಿಲ್ಲ ಮತ್ತು ಮತ ಎಣಿಕೆಯ ನಂತರ ವಿಜಯೋತ್ಸವದ ಮೆರವಣಿಗೆ ಇರುವುದಿಲ್ಲ” ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಕಳೆದ ವಾರ ಹೇಳಿದ್ದರು.

ಯುಪಿ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ್‌ಗಳಲ್ಲಿ ಚುನಾವಣೆಗಳು ನಡೆಯುತ್ತಿದ್ದು, ದೇಶದಾದ್ಯಂತ ಕೋವಿಡ್ ಪ್ರಕರಣಗಳ ಹೆಚ್ಚಳದ ನಡುವೆಯೇ ಚುನಾವಣೆಗಳು ನಡೆಯುತ್ತಿವೆ.

ಇದನ್ನೂ ಓದಿ:ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...