Homeಮುಖಪುಟಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

ಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

- Advertisement -
- Advertisement -

ಕೊರೊನಾ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿದ್ದಂತೆ ಐದು ರಾಜ್ಯಗಳಲ್ಲಿ ಚುನಾವಣೆಗೆ ಮುಂಚಿತವಾಗಿ ನಡೆಯುವ ರ್‍ಯಾಲಿಗಳು ಮತ್ತು ರೋಡ್‌ಶೋಗಳ ಮೇಲೆ ನಿಷೇಧ ಹೇರಲಾಗಿತ್ತು. ಇದೀಗ ಈ ನಿಷೇಧವನ್ನು ಜನವರಿ 22 ರವರೆಗೆ ವಿಸ್ತರಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

ಒಳಾಂಗಣ ರಾಜಕೀಯ ಸಭೆಗಳು, 300 ಜನರ ಮಿತಿಗೆ ಒಳಪಟ್ಟು, ಸಭಾಂಗಣದ ಸಾಮರ್ಥ್ಯದ 50% ಅಥವಾ ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿಗದಿಪಡಿಸಿದ ಮಿತಿಗೆ ಒಳಪಟ್ಟು ನಡೆಸಬಹುದಾಗಿದೆ.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ಜನವರಿ 8 ರಂದು ಚುನಾವಣಾ ಆಯೋಗವು ರ್‍ಯಾಲಿಗಳು, ರೋಡ್‌ಶೋಗಳು ಮತ್ತು ಇತರ ರೀತಿಯ ಸಾರ್ವಜನಿಕ ರಾಜಕೀಯ ಕಾರ್ಯಕ್ರಮಗಳನ್ನು ಜನವರಿ 15 (ಇಂದು) ವರೆಗೆ ನಿಷೇಧಿಸಲಾಗುವುದು ಮತ್ತು ನಂತರ ಈ ಆದೇಶವನ್ನು ಪರಿಶೀಲಿಸಲಾಗುವುದು ಎಂದು ಹೇಳಿತ್ತು.

ಚುನಾವಣಾ ಆಯೋಗವು ಇಂದು 11 ಗಂಟೆಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿಗಳೊಂದಿಗೆ, ಮಧ್ಯಾಹ್ನ 1 ಗಂಟೆಗೆ ಚುನಾವಣೆಗೆ ಒಳಪಟ್ಟ ಎಲ್ಲಾ ರಾಜ್ಯಗಳ ಮುಖ್ಯ ಮತ್ತು ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಮತ್ತು ಮಧ್ಯಾಹ್ನ 1 ಗಂಟೆಗೆ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿತ್ತು.

ಒಕ್ಕೂಟ ಸರ್ಕಾರ, ರಾಜ್ಯ ಸರ್ಕಾರಗಳು, ಆರೋಗ್ಯ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು ಪಡೆದ ನಂತರ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ:ಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?

ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಸಾಧ್ಯವಾದಷ್ಟು ಸುರಕ್ಷಿತವಾಗಿ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿರುವ ಕ್ರಮಗಳ ಭಾಗವಾಗಿ ರ್‍ಯಾಲಿಗಳು ಮತ್ತು ರೋಡ್‌ಶೋಗಳನ್ನು ನಿಷೇಧಿಸುವ ಆದೇಶವನ್ನು ಅಂಗೀಕರಿಸಲಾಗಿದೆ.

“ಅಭ್ಯರ್ಥಿಗಳು ಸಾಧ್ಯವಾದಷ್ಟು ಆನ್‌ಲೈನ್‌‌ ಮೂಲಕ ಪ್ರಚಾರ ನಡೆಸಬೇಕು… ಸಾರ್ವಜನಿಕ ರಸ್ತೆಗಳಲ್ಲಿ ಸಭೆಗಳು ಇರುವುದಿಲ್ಲ ಮತ್ತು ಮತ ಎಣಿಕೆಯ ನಂತರ ವಿಜಯೋತ್ಸವದ ಮೆರವಣಿಗೆ ಇರುವುದಿಲ್ಲ” ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಕಳೆದ ವಾರ ಹೇಳಿದ್ದರು.

ಯುಪಿ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ್‌ಗಳಲ್ಲಿ ಚುನಾವಣೆಗಳು ನಡೆಯುತ್ತಿದ್ದು, ದೇಶದಾದ್ಯಂತ ಕೋವಿಡ್ ಪ್ರಕರಣಗಳ ಹೆಚ್ಚಳದ ನಡುವೆಯೇ ಚುನಾವಣೆಗಳು ನಡೆಯುತ್ತಿವೆ.

ಇದನ್ನೂ ಓದಿ:ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...