Homeಮುಖಪುಟನೀವು ಪದೇ ಪದೇ ಸಮಸ್ಯೆಗೆ ಸಿಕ್ಕಿಹಾಕಿಕೊಳ್ಳುತ್ತೀರಾ? ಹಾಗಾದರೆ ಅವುಗಳ ವೈಜ್ಞಾನಿಕ ಪರಿಹಾರಕ್ಕೆ ಏನು ಮಾಡಬೇಕು ಗೊತ್ತೆ?

ನೀವು ಪದೇ ಪದೇ ಸಮಸ್ಯೆಗೆ ಸಿಕ್ಕಿಹಾಕಿಕೊಳ್ಳುತ್ತೀರಾ? ಹಾಗಾದರೆ ಅವುಗಳ ವೈಜ್ಞಾನಿಕ ಪರಿಹಾರಕ್ಕೆ ಏನು ಮಾಡಬೇಕು ಗೊತ್ತೆ?

ಪರಿಹಾರ ಹುಡುಕುವ ದೈಹಿಕ/ಮಾನಸಿಕ ಸ್ಥಿತಿಯಲ್ಲಿ ನಾವು ಇರದಿದ್ದಲ್ಲಿ ಕೂಡಲೇ ಸಹಾಯ ಯಾಚಿಸಬೇಕು. ದೊಡ್ಡಸ್ತಿಕೆ ಮಾಡಲುಹೋಗಬಾರದು. ಚಿಕ್ಕ ಮಗುವೂ ಕೂಡ ತನಗೆ ಯಾವುದನ್ನು ಮಾಡಲು ಸಾಧ್ಯವಿಲ್ಲ ಎಂದು ಅರಿಯುತ್ತದೆಯೋ, ಕೂಡಲೇ ದೊಡ್ಡವರ ಗಮನ ಸೆಳೆಯುತ್ತದೆ. ಎಷ್ಟೋ ಬಾರಿ ನಾವು ಈ ಸರಳ ವಿಷಯವನ್ನು ಮರೆತುಬಿಡುತ್ತೇವೆ.

- Advertisement -
- Advertisement -

ಜೀವನ ಕಲೆಗಳು: ಅಂಕಣ – 22

ಸಮಸ್ಯೆಗಳ ಪರಿಹಾರ

ಸಮಸ್ಯೆಗಳು ಜೀವನದ ಒಂದು ಅವಿಭಾಜ್ಯ ಅಂಗ. ಹಾಗೆಂದು ಸಮಸ್ಯೆಯಿಂದ ಓಡಿ ಹೋಗುವುದಾಗಲೀ, ಆತ್ಮಹತ್ಯೆಯಾಗಲೀ ಪರಿಹಾರವಲ್ಲ. ಜೀವನಾವಶ್ಯಕ ಕಲೆಗಳಲ್ಲಿ ಸಮಸ್ಯೆ ಬಗೆಹರಿಸುವುದು ಮತ್ತು ನಿರ್ಧಾರ ತೆಗೆದುಕೊಳ್ಳುವುದು ಜೊತೆ ಜೊತೆಯಾಗಿ ಹೋಗುತ್ತವೆ. ಸಮಸ್ಯೆ ಪರಿಹಾರಕ್ಕೆ ಎಲ್ಲೋ ಒಂದು ನಿರ್ಧಾರ ತೆಗೆದುಕೊಳ್ಳುವ ಅವಶ್ಯಕತೆ ಇದ್ದರೆ, ತೆಗೆದುಕೊಂಡ ನಿರ್ಧಾರ ಇನ್ನೆಲ್ಲೋ ಒಂದು ಸಮಸ್ಯೆಯನ್ನು ಸೃಷ್ಟಿಸಲೂಬಹುದು. ಹಾಗಾಗಿ ಅವೆರಡಕ್ಕೂ ಒಂದು ರೀತಿಯ ನಂಟು ಇರುವಂತಿದ್ದರೂ ಎಲ್ಲಾ ಸಮಸ್ಯೆಗೂ ನಿರ್ಧಾರವೇ ಪರಿಹಾರ ಎಂತಲೂ ಇಲ್ಲ; ಎಲ್ಲಾ ನಿರ್ಧಾರಗಳೂ ಹೊಸ ಸಮಸ್ಯೆಗೆ ಕಾರಣವಾಗುತ್ತವೆ ಎಂತಲೂ ಇಲ್ಲ.

ಇಲ್ಲಿ ಸಮಸ್ಯೆಯನ್ನು ನಾವು ಎರಡು ವಿಧವಾಗಿ ಪರಿಗಣಿಸಬಹುದು. ಒಂದು ವೈಯುಕ್ತಿಕ ಅಥವಾ ಸಾಮಾಜಿಕ. ಇದು ಮನಶಾಸ್ತ್ರಕ್ಕೆ ಸಂಬಂಧಿಸಿದ್ದು, ಮತ್ತೊಂದು ವಿಜ್ಞಾನಕ್ಕೆ ಸಂಬಂಧಿಸಿದ್ದು, ಅಂದರೆ ಗಣಿತ, ವ್ಯಾಕರಣ, ವೈದ್ಯಕೀಯ, ಇತ್ಯಾದಿ.. ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ, ಕೇವಲ ವೈಯುಕ್ತಿಕ ಅಥವಾ ಸಾಮಾಜಿಕ ಸಮಸ್ಯೆಗಳ ಬಗ್ಗೆ ಚರ್ಚಿಸೋಣ. ಒಟ್ಟಿನಲ್ಲಿ ಸಮಸ್ಯೆ ಏನೇ ಇರಲಿ, ಅದು ಸ್ಪಷ್ಟವಾಗಿದ್ದಷ್ಟೂ ಪರಿಹಾರ ಸುಲಭ. ಸಮಸ್ಯೆ ಏನು ಎಂಬುದೇ ತಿಳಿಯದಿದ್ದಲ್ಲಿ ಪರಿಹಾರವೂ ಕಷ್ಟಸಾಧ್ಯ. ಪರಿಹಾರಕ್ಕೆ ನಮಗೆ ಬೇಕಾಗಿರುವುದು ವಿಮರ್ಶಾತ್ಮಕ ಮತ್ತು ಸೃಜನಾತ್ಮಕ ಚಿಂತನೆ. ಇವೆರಡರ ಬಗ್ಗೆ ನಾನು ಈಗಾಗಲೇ ತಿಳಿಸಿದ್ದೇನೆ.

ಸಮಸ್ಯೆಯ ಪರಿಹಾರದಲ್ಲಿ ನಮ್ಮ ಮನಃಸ್ಥಿತಿಯೂ ಮುಖ್ಯ ಭೂಮಿಕೆ ವಹಿಸುತ್ತದೆ. ಪರಿಹಾರ ಹುಡುಕುವ ದೈಹಿಕ/ಮಾನಸಿಕ ಸ್ಥಿತಿಯಲ್ಲಿ ನಾವು ಇರದಿದ್ದಲ್ಲಿ ಕೂಡಲೇ ಸಹಾಯ ಯಾಚಿಸಬೇಕು. ದೊಡ್ಡಸ್ತಿಕೆ ಮಾಡಲುಹೋಗಬಾರದು. ಚಿಕ್ಕ ಮಗುವೂ ಕೂಡ ತನಗೆ ಯಾವುದನ್ನು ಮಾಡಲು ಸಾಧ್ಯವಿಲ್ಲ ಎಂದು ಅರಿಯುತ್ತದೆಯೋ, ಕೂಡಲೇ ದೊಡ್ಡವರ ಗಮನ ಸೆಳೆಯುತ್ತದೆ. ಎಷ್ಟೋ ಬಾರಿ ನಾವು ಈ ಸರಳ ವಿಷಯವನ್ನು ಮರೆತುಬಿಡುತ್ತೇವೆ. ಅದೇ ರೀತಿ ಸಮಸ್ಯೆಯ ಎಲ್ಲಾ ಪಾರ್ಶ್ವಗಳನ್ನು ಸರಿಯಾಗಿ ತಿಳಿಯಲು ಸಾಧ್ಯವಾಗಿಲ್ಲದಿದ್ದಲ್ಲಿ, ನಮಗೆ ಗೊತ್ತಿರುವ ಅಲ್ಪ ಮಾಹಿತಿಯ ಆಧಾರದ ಮೇಲೆ, ಪರಿಹಾರಕ್ಕೆ ಕೈ ಹಾಕಿ ವಿಪರೀತ ಪರಿಣಾಮ ಎದುರಿಸಬೇಕಾಗುತ್ತದೆ. ಉದಾ: ಎಲೆಕ್ಟ್ರಿಕ್ ಮೀಟರ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಾಗ ಅಥವಾ ಒಲೆಯ ಮೇಲಿರಿಸಿದ ಕಾಯ್ದ ಎಣ್ಣೆಗೆ ಬೆಂಕಿ ತಗುಲಿದಾಗ, ನಾವು ಬೆಂಕಿ ನಂದಿಸಲು ಅದರ ಮೇಲೆ ನೀರು ಎರಚಲು ಹೋದಲ್ಲಿ, ವಿದ್ಯುತ್ ಶಾಕಿನಿಂದ ಅಥವಾ ದೊಡ್ಡ ಬೆಂಕಿ ಅನಾಹುತದಿಂದ ಹೆಚ್ಚಿನ ತೊಂದರೆಗೆ ಸಿಲುಕುತ್ತೇವೆ. ಆದ್ದರಿಂದ ಸಮಸ್ಯೆ ಅರ್ಥವಾಗದಿದ್ದಲ್ಲಿ, ನಮ್ಮಲ್ಲಿ ಸಾಮರ್ಥ್ಯ/ಸಂಪನ್ಮೂಲದ ಕೊರತೆ ಇದ್ದಲ್ಲಿ, ಪರಿಹಾರಕ್ಕೆ ನಾವೊಬ್ಬರೇ ಯತ್ನಿಸದೇ, ಕೂಡಲೇ ಬೇರೆಯವರ ಸಹಾಯ ಪಡೆಯಬೇಕು. ಇದು ಸಮಸ್ಯೆ ಪರಿಹಾರ ಕಲೆಯ ಮುಖ್ಯ ಎಚ್ಚರಿಕೆ.

ಮೊಟ್ಟ ಮೊದಲಿಗೆ ನಾವು ಸಮಸ್ಯೆ ಏನು ಎಂಬುದನ್ನು ಸರಿಯಾಗಿ ಅರಿಯಬೇಕು. ಸಮಸ್ಯೆ ನೇರವಾಗಿ ನಮ್ಮ ಕಣ್ಣಿಗೆ ಕಾಣುವುದು ಅಪರೂಪ, ಕೇವಲ ಅದರ ಲಕ್ಷಣಗಳು ನಮಗೆ ಗೋಚರಿಸುತ್ತವೆ. ಸಮಸ್ಯೆ ಎಲ್ಲೋ ಇರುತ್ತದೆ, ಲಕ್ಷಣಗಳು ಇನ್ನೆಲ್ಲೋ ಕಾಣಿಸಿಕೊಳ್ಳುತ್ತವೆ. ಹೇಗೆ ವೈದ್ಯರು ನಮ್ಮ ಕಾಯಿಲೆ ಕಂಡು ಹಿಡಿಯುವಾಗ ನಮ್ಮಿಂದ ತೊಂದರೆಯ ಲಕ್ಷಣಗಳನ್ನು ಕೇಳಿ ತಿಳಿದುಕೊಳ್ಳುತ್ತಾರೋ ಹಾಗೆ ನಾವೂ ಸಹ ಸಮಸ್ಯೆಯ ಗುಣ-ಲಕ್ಷಣಗಳನ್ನು ಗುರುತಿಸಿ, ವಿಶ್ಲೇಷಿಸಿ ಅದರಿಂದ ಸಮಸ್ಯೆ ಏನು ಎಂಬ ನಿರ್ಧಾರಕ್ಕೆ ಬರಬೇಕಾಗುತ್ತದೆ. ಅದರಲ್ಲೂ ಸಮಸ್ಯೆಗೆ “ಮೂಲ ಕಾರಣ” ಏನು ಎಂಬುದನ್ನು ತಿಳಿದು, ನಂತರ ಮೂಲ ಕಾರಣ ಹೋಗಲಾಡಿಸುವಂತಹ ಪರಿಹಾರ ಹುಡುಕಬೇಕಾಗುತ್ತದೆ. ಮೂಲ ಕಾರಣ ತಿಳಿಯದಿದ್ದರೆ ನಾವು ಪರಿಹಾರಕ್ಕೆ ದಾರಿ ಸಿಕ್ಕದೆ, ಅದರ ಚಕ್ರವ್ಯೂಹದಲ್ಲಿ ಸಿಲುಕುವುದು ನಿಶ್ಚಿತ.

ಮೂಲ ಕಾರಣ (ರೂಟ್ ಕಾಸ್) ಹುಡುಕಲು ಹಲವಾರು ಉಪಕರಣಗಳಿವೆ. ಅವುಗಳಲ್ಲಿ ಒಂದು “ಫೈವ್ ವೈ” (Five Why) ಇದರಲ್ಲಿ ಸಮಸ್ಯೆಯ ಬಗ್ಗೆ ಐದು ಬಾರಿ “ಏಕೆ?“ ಎಂದು ಪ್ರಶ್ನಿಸುವುದು. ಈ ಐದು ಬಾರಿಯ ಪ್ರಶ್ನೆಗೆ ಉತ್ತರ ಸಿಗುವಂತಿದ್ದರೆ ನಮಗೆ ಸಮಸ್ಯೆಯ ಮೂಲ ಕಾರಣ ಸ್ಪಷ್ಟವಾಗುತ್ತದೆ.

ಇನ್ನೊಂದು ಉಪಕರಣ ”ಫಿಷ್ ಬೋನ್” ಡಯಾಗ್ರಾಮ್. ಇದರಲ್ಲಿ ಸಮಸ್ಯೆಗೆ ಯಾವುದು ಕಾರಣ – ನಮ್ಮ ವ್ಯವಸ್ಥೆಯೇ, ಸಲಕರಣೆಗಳೇ, ಪರ್ಯಾವರಣವೇ, ಬಳಕೆಯ ವಸ್ತುಗಳೇ, ಜನರೇ ಅಥವಾ ಪ್ರಕ್ರಿಯೆಯೇ? ಎಂಬುದಾಗಿ ಅವುಗಳ ಕಾರ್ಯವನ್ನು ನಿರೀಕ್ಷಿಸಿ, ವಿಶ್ಲೇಶಿಸಿ ಯಾವುದು “ಕಾರಣ”, ಯಾವುದು ಲಕ್ಷಣ ಎಂಬ ತೀರ್ಮಾನಕ್ಕೆ ಬರುವುದು. ಚಿತ್ರ ಮೀನಿನ ಮೂಳೆಯ ಆಕಾರದಲ್ಲಿರುವುದರಿಂದ ಇದಕ್ಕೆ ಫಿಶ್ ಬೋನ್ ಎನ್ನುತ್ತಾರೆ.

ಮೇಲಿನ ರೀತಿಗಳಲ್ಲದೆ ಸಮಸ್ಯೆ ಪರಿಹಾರಕ್ಕೆ ಇನ್ನೂ ಕೆಲವು ತಂತ್ರಗಳನ್ನು ಬಳಸಬಹುದು. ಅವೆಂದರೆ:

·         ಸಮಸ್ಯೆಯ ಒಂದು ನಿಜರೂಪ ಮಾದರಿ (ಮೊಡೆಲ್) ಮಾಡಿಕೊಂಡು ಅದರ ಮೇಲೆ ಮೊದಲು ಪ್ರಯೋಗ ಮಾಡುವುದು. ನಂತರ ಅದನ್ನು ನಿಜವಾದ ಸಮಸ್ಯೆಯ ಮೇಲೆ ಉಪಯೋಗಿಸುವುದು (ವೈದ್ಯರು ತಮ್ಮ ಔಷಧಿಗಳನ್ನು ಮೊದಲು ಬಲಿಪಶುಗಳ ಮೇಲೆ ಉಪಯೋಗಿಸುವ ರೀತಿಯಲ್ಲಿ).

·         ಸಮಸ್ಯೆಯ ತರಹವೇ ಇರುವ ಅನುರೂಪ ಮಾದರಿಯ ಮೇಲೆ ಪ್ರಯೋಗ ಮಾಡಿ ನೋಡುವುದು.

·         “ಹೀಗೆ ಮಾಡಿದರೆ ಹೀಗೆ ಆಗುತ್ತದೆ” ಎನ್ನುವ ಪಠ್ಯಪುಸ್ತಕ ತತ್ವವಾದವನ್ನು ಪ್ರಯೋಗಿಸಿ ನೋಡುವುದು.

·         ಸಂಕೀರ್ಣ ಸಮಸ್ಯೆಯನ್ನು ಚಿಕ್ಕ-ಚಿಕ್ಕದಾಗಿ ತುಂಡರಿಸಿ ಪರಿಹಾರ ಹುಡುಕುವುದು.

·         ಯಾವ ಯಾವ ತುಂಡುಗಳಿಗೆ ಪರಿಹಾರ ಸಿಗುತ್ತದೋ ಅಲ್ಲಿಂದ ಮುಂದಕ್ಕೆ ಹೊಸದಾಗಿ ಯೋಚಿಸುವುದು.

·         ಪರಿಹಾರ ಸಿಗದ ತುಂಡುಗಳನ್ನು ಒಟ್ಟು ಸೇರಿಸಿ ಪರಿಹಾರ ಕಂಡುಕೊಳ್ಳುವುದು

·         ಸಮಸ್ಯೆಯನ್ನು ಪರಿವರ್ತಿಸಿ ಪರಿಹಾರವಿರುವಂತಹ ಸಮಸ್ಯೆಯನ್ನಾಗಿ ಮಾಡುವುದು.

ಸಮಸ್ಯೆ ಪರಿಹಾರದ ಐದು ಹೆಜ್ಜೆಗಳು:

1.      ಸಮಸ್ಯೆಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ, ಸರಿಯಾಗಿ ಗುರುತಿಸಿ, ವ್ಯಾಖ್ಯಾನಿಸುವುದು.

2.      ಅದರ ಪರಿಹಾರಕ್ಕೆ ಬೇಕಾದ ಪರ್ಯಾಯ ಮಾರ್ಗಗಳನ್ನು, ಬೇಕಾದ ಸಂಪನ್ಮೂಲ ಹುಡುಕುವುದು/ಕ್ರೋಢೀಕರಿಸುವುದು.

3.      ಪರ್ಯಾಯ ಮಾರ್ಗಗಳ ಉಪಯುಕ್ತತೆ/ಮೌಲ್ಯ ಕಂಡುಹಿಡಿದು, ಅವುಗಳಲ್ಲಿ ಅತ್ಯಂತ ಸೂಕ್ತವಾದುದನ್ನು ಆಯ್ದುಕೊಳ್ಳುವುದು.

4.      ಆಯ್ದ ಯೋಜನೆಯನ್ನು ಚಾಚೂ ತಪ್ಪದಂತೆ ಜಾರಿಗೊಳಿಸುವುದು.

5.      ಸಮಸ್ಯೆ ಪರಿಹಾರವಾಯಿತೋ, ಇಲ್ಲವೋ ಎಂದು ನೋಡುವುದು. ಆಗಿಲ್ಲದಿದ್ದಲ್ಲಿ ಮತ್ತೆ. ಹೆಜ್ಜೆ ಕ್ರಮಾಂಕ 1 ರಿಂದ ಪ್ರಾರಂಭಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...