Homeಮುಖಪುಟನೀವು ಪದೇ ಪದೇ ಸಮಸ್ಯೆಗೆ ಸಿಕ್ಕಿಹಾಕಿಕೊಳ್ಳುತ್ತೀರಾ? ಹಾಗಾದರೆ ಅವುಗಳ ವೈಜ್ಞಾನಿಕ ಪರಿಹಾರಕ್ಕೆ ಏನು ಮಾಡಬೇಕು ಗೊತ್ತೆ?

ನೀವು ಪದೇ ಪದೇ ಸಮಸ್ಯೆಗೆ ಸಿಕ್ಕಿಹಾಕಿಕೊಳ್ಳುತ್ತೀರಾ? ಹಾಗಾದರೆ ಅವುಗಳ ವೈಜ್ಞಾನಿಕ ಪರಿಹಾರಕ್ಕೆ ಏನು ಮಾಡಬೇಕು ಗೊತ್ತೆ?

ಪರಿಹಾರ ಹುಡುಕುವ ದೈಹಿಕ/ಮಾನಸಿಕ ಸ್ಥಿತಿಯಲ್ಲಿ ನಾವು ಇರದಿದ್ದಲ್ಲಿ ಕೂಡಲೇ ಸಹಾಯ ಯಾಚಿಸಬೇಕು. ದೊಡ್ಡಸ್ತಿಕೆ ಮಾಡಲುಹೋಗಬಾರದು. ಚಿಕ್ಕ ಮಗುವೂ ಕೂಡ ತನಗೆ ಯಾವುದನ್ನು ಮಾಡಲು ಸಾಧ್ಯವಿಲ್ಲ ಎಂದು ಅರಿಯುತ್ತದೆಯೋ, ಕೂಡಲೇ ದೊಡ್ಡವರ ಗಮನ ಸೆಳೆಯುತ್ತದೆ. ಎಷ್ಟೋ ಬಾರಿ ನಾವು ಈ ಸರಳ ವಿಷಯವನ್ನು ಮರೆತುಬಿಡುತ್ತೇವೆ.

- Advertisement -
- Advertisement -

ಜೀವನ ಕಲೆಗಳು: ಅಂಕಣ – 22

ಸಮಸ್ಯೆಗಳ ಪರಿಹಾರ

ಸಮಸ್ಯೆಗಳು ಜೀವನದ ಒಂದು ಅವಿಭಾಜ್ಯ ಅಂಗ. ಹಾಗೆಂದು ಸಮಸ್ಯೆಯಿಂದ ಓಡಿ ಹೋಗುವುದಾಗಲೀ, ಆತ್ಮಹತ್ಯೆಯಾಗಲೀ ಪರಿಹಾರವಲ್ಲ. ಜೀವನಾವಶ್ಯಕ ಕಲೆಗಳಲ್ಲಿ ಸಮಸ್ಯೆ ಬಗೆಹರಿಸುವುದು ಮತ್ತು ನಿರ್ಧಾರ ತೆಗೆದುಕೊಳ್ಳುವುದು ಜೊತೆ ಜೊತೆಯಾಗಿ ಹೋಗುತ್ತವೆ. ಸಮಸ್ಯೆ ಪರಿಹಾರಕ್ಕೆ ಎಲ್ಲೋ ಒಂದು ನಿರ್ಧಾರ ತೆಗೆದುಕೊಳ್ಳುವ ಅವಶ್ಯಕತೆ ಇದ್ದರೆ, ತೆಗೆದುಕೊಂಡ ನಿರ್ಧಾರ ಇನ್ನೆಲ್ಲೋ ಒಂದು ಸಮಸ್ಯೆಯನ್ನು ಸೃಷ್ಟಿಸಲೂಬಹುದು. ಹಾಗಾಗಿ ಅವೆರಡಕ್ಕೂ ಒಂದು ರೀತಿಯ ನಂಟು ಇರುವಂತಿದ್ದರೂ ಎಲ್ಲಾ ಸಮಸ್ಯೆಗೂ ನಿರ್ಧಾರವೇ ಪರಿಹಾರ ಎಂತಲೂ ಇಲ್ಲ; ಎಲ್ಲಾ ನಿರ್ಧಾರಗಳೂ ಹೊಸ ಸಮಸ್ಯೆಗೆ ಕಾರಣವಾಗುತ್ತವೆ ಎಂತಲೂ ಇಲ್ಲ.

ಇಲ್ಲಿ ಸಮಸ್ಯೆಯನ್ನು ನಾವು ಎರಡು ವಿಧವಾಗಿ ಪರಿಗಣಿಸಬಹುದು. ಒಂದು ವೈಯುಕ್ತಿಕ ಅಥವಾ ಸಾಮಾಜಿಕ. ಇದು ಮನಶಾಸ್ತ್ರಕ್ಕೆ ಸಂಬಂಧಿಸಿದ್ದು, ಮತ್ತೊಂದು ವಿಜ್ಞಾನಕ್ಕೆ ಸಂಬಂಧಿಸಿದ್ದು, ಅಂದರೆ ಗಣಿತ, ವ್ಯಾಕರಣ, ವೈದ್ಯಕೀಯ, ಇತ್ಯಾದಿ.. ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ, ಕೇವಲ ವೈಯುಕ್ತಿಕ ಅಥವಾ ಸಾಮಾಜಿಕ ಸಮಸ್ಯೆಗಳ ಬಗ್ಗೆ ಚರ್ಚಿಸೋಣ. ಒಟ್ಟಿನಲ್ಲಿ ಸಮಸ್ಯೆ ಏನೇ ಇರಲಿ, ಅದು ಸ್ಪಷ್ಟವಾಗಿದ್ದಷ್ಟೂ ಪರಿಹಾರ ಸುಲಭ. ಸಮಸ್ಯೆ ಏನು ಎಂಬುದೇ ತಿಳಿಯದಿದ್ದಲ್ಲಿ ಪರಿಹಾರವೂ ಕಷ್ಟಸಾಧ್ಯ. ಪರಿಹಾರಕ್ಕೆ ನಮಗೆ ಬೇಕಾಗಿರುವುದು ವಿಮರ್ಶಾತ್ಮಕ ಮತ್ತು ಸೃಜನಾತ್ಮಕ ಚಿಂತನೆ. ಇವೆರಡರ ಬಗ್ಗೆ ನಾನು ಈಗಾಗಲೇ ತಿಳಿಸಿದ್ದೇನೆ.

ಸಮಸ್ಯೆಯ ಪರಿಹಾರದಲ್ಲಿ ನಮ್ಮ ಮನಃಸ್ಥಿತಿಯೂ ಮುಖ್ಯ ಭೂಮಿಕೆ ವಹಿಸುತ್ತದೆ. ಪರಿಹಾರ ಹುಡುಕುವ ದೈಹಿಕ/ಮಾನಸಿಕ ಸ್ಥಿತಿಯಲ್ಲಿ ನಾವು ಇರದಿದ್ದಲ್ಲಿ ಕೂಡಲೇ ಸಹಾಯ ಯಾಚಿಸಬೇಕು. ದೊಡ್ಡಸ್ತಿಕೆ ಮಾಡಲುಹೋಗಬಾರದು. ಚಿಕ್ಕ ಮಗುವೂ ಕೂಡ ತನಗೆ ಯಾವುದನ್ನು ಮಾಡಲು ಸಾಧ್ಯವಿಲ್ಲ ಎಂದು ಅರಿಯುತ್ತದೆಯೋ, ಕೂಡಲೇ ದೊಡ್ಡವರ ಗಮನ ಸೆಳೆಯುತ್ತದೆ. ಎಷ್ಟೋ ಬಾರಿ ನಾವು ಈ ಸರಳ ವಿಷಯವನ್ನು ಮರೆತುಬಿಡುತ್ತೇವೆ. ಅದೇ ರೀತಿ ಸಮಸ್ಯೆಯ ಎಲ್ಲಾ ಪಾರ್ಶ್ವಗಳನ್ನು ಸರಿಯಾಗಿ ತಿಳಿಯಲು ಸಾಧ್ಯವಾಗಿಲ್ಲದಿದ್ದಲ್ಲಿ, ನಮಗೆ ಗೊತ್ತಿರುವ ಅಲ್ಪ ಮಾಹಿತಿಯ ಆಧಾರದ ಮೇಲೆ, ಪರಿಹಾರಕ್ಕೆ ಕೈ ಹಾಕಿ ವಿಪರೀತ ಪರಿಣಾಮ ಎದುರಿಸಬೇಕಾಗುತ್ತದೆ. ಉದಾ: ಎಲೆಕ್ಟ್ರಿಕ್ ಮೀಟರ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಾಗ ಅಥವಾ ಒಲೆಯ ಮೇಲಿರಿಸಿದ ಕಾಯ್ದ ಎಣ್ಣೆಗೆ ಬೆಂಕಿ ತಗುಲಿದಾಗ, ನಾವು ಬೆಂಕಿ ನಂದಿಸಲು ಅದರ ಮೇಲೆ ನೀರು ಎರಚಲು ಹೋದಲ್ಲಿ, ವಿದ್ಯುತ್ ಶಾಕಿನಿಂದ ಅಥವಾ ದೊಡ್ಡ ಬೆಂಕಿ ಅನಾಹುತದಿಂದ ಹೆಚ್ಚಿನ ತೊಂದರೆಗೆ ಸಿಲುಕುತ್ತೇವೆ. ಆದ್ದರಿಂದ ಸಮಸ್ಯೆ ಅರ್ಥವಾಗದಿದ್ದಲ್ಲಿ, ನಮ್ಮಲ್ಲಿ ಸಾಮರ್ಥ್ಯ/ಸಂಪನ್ಮೂಲದ ಕೊರತೆ ಇದ್ದಲ್ಲಿ, ಪರಿಹಾರಕ್ಕೆ ನಾವೊಬ್ಬರೇ ಯತ್ನಿಸದೇ, ಕೂಡಲೇ ಬೇರೆಯವರ ಸಹಾಯ ಪಡೆಯಬೇಕು. ಇದು ಸಮಸ್ಯೆ ಪರಿಹಾರ ಕಲೆಯ ಮುಖ್ಯ ಎಚ್ಚರಿಕೆ.

ಮೊಟ್ಟ ಮೊದಲಿಗೆ ನಾವು ಸಮಸ್ಯೆ ಏನು ಎಂಬುದನ್ನು ಸರಿಯಾಗಿ ಅರಿಯಬೇಕು. ಸಮಸ್ಯೆ ನೇರವಾಗಿ ನಮ್ಮ ಕಣ್ಣಿಗೆ ಕಾಣುವುದು ಅಪರೂಪ, ಕೇವಲ ಅದರ ಲಕ್ಷಣಗಳು ನಮಗೆ ಗೋಚರಿಸುತ್ತವೆ. ಸಮಸ್ಯೆ ಎಲ್ಲೋ ಇರುತ್ತದೆ, ಲಕ್ಷಣಗಳು ಇನ್ನೆಲ್ಲೋ ಕಾಣಿಸಿಕೊಳ್ಳುತ್ತವೆ. ಹೇಗೆ ವೈದ್ಯರು ನಮ್ಮ ಕಾಯಿಲೆ ಕಂಡು ಹಿಡಿಯುವಾಗ ನಮ್ಮಿಂದ ತೊಂದರೆಯ ಲಕ್ಷಣಗಳನ್ನು ಕೇಳಿ ತಿಳಿದುಕೊಳ್ಳುತ್ತಾರೋ ಹಾಗೆ ನಾವೂ ಸಹ ಸಮಸ್ಯೆಯ ಗುಣ-ಲಕ್ಷಣಗಳನ್ನು ಗುರುತಿಸಿ, ವಿಶ್ಲೇಷಿಸಿ ಅದರಿಂದ ಸಮಸ್ಯೆ ಏನು ಎಂಬ ನಿರ್ಧಾರಕ್ಕೆ ಬರಬೇಕಾಗುತ್ತದೆ. ಅದರಲ್ಲೂ ಸಮಸ್ಯೆಗೆ “ಮೂಲ ಕಾರಣ” ಏನು ಎಂಬುದನ್ನು ತಿಳಿದು, ನಂತರ ಮೂಲ ಕಾರಣ ಹೋಗಲಾಡಿಸುವಂತಹ ಪರಿಹಾರ ಹುಡುಕಬೇಕಾಗುತ್ತದೆ. ಮೂಲ ಕಾರಣ ತಿಳಿಯದಿದ್ದರೆ ನಾವು ಪರಿಹಾರಕ್ಕೆ ದಾರಿ ಸಿಕ್ಕದೆ, ಅದರ ಚಕ್ರವ್ಯೂಹದಲ್ಲಿ ಸಿಲುಕುವುದು ನಿಶ್ಚಿತ.

ಮೂಲ ಕಾರಣ (ರೂಟ್ ಕಾಸ್) ಹುಡುಕಲು ಹಲವಾರು ಉಪಕರಣಗಳಿವೆ. ಅವುಗಳಲ್ಲಿ ಒಂದು “ಫೈವ್ ವೈ” (Five Why) ಇದರಲ್ಲಿ ಸಮಸ್ಯೆಯ ಬಗ್ಗೆ ಐದು ಬಾರಿ “ಏಕೆ?“ ಎಂದು ಪ್ರಶ್ನಿಸುವುದು. ಈ ಐದು ಬಾರಿಯ ಪ್ರಶ್ನೆಗೆ ಉತ್ತರ ಸಿಗುವಂತಿದ್ದರೆ ನಮಗೆ ಸಮಸ್ಯೆಯ ಮೂಲ ಕಾರಣ ಸ್ಪಷ್ಟವಾಗುತ್ತದೆ.

ಇನ್ನೊಂದು ಉಪಕರಣ ”ಫಿಷ್ ಬೋನ್” ಡಯಾಗ್ರಾಮ್. ಇದರಲ್ಲಿ ಸಮಸ್ಯೆಗೆ ಯಾವುದು ಕಾರಣ – ನಮ್ಮ ವ್ಯವಸ್ಥೆಯೇ, ಸಲಕರಣೆಗಳೇ, ಪರ್ಯಾವರಣವೇ, ಬಳಕೆಯ ವಸ್ತುಗಳೇ, ಜನರೇ ಅಥವಾ ಪ್ರಕ್ರಿಯೆಯೇ? ಎಂಬುದಾಗಿ ಅವುಗಳ ಕಾರ್ಯವನ್ನು ನಿರೀಕ್ಷಿಸಿ, ವಿಶ್ಲೇಶಿಸಿ ಯಾವುದು “ಕಾರಣ”, ಯಾವುದು ಲಕ್ಷಣ ಎಂಬ ತೀರ್ಮಾನಕ್ಕೆ ಬರುವುದು. ಚಿತ್ರ ಮೀನಿನ ಮೂಳೆಯ ಆಕಾರದಲ್ಲಿರುವುದರಿಂದ ಇದಕ್ಕೆ ಫಿಶ್ ಬೋನ್ ಎನ್ನುತ್ತಾರೆ.

ಮೇಲಿನ ರೀತಿಗಳಲ್ಲದೆ ಸಮಸ್ಯೆ ಪರಿಹಾರಕ್ಕೆ ಇನ್ನೂ ಕೆಲವು ತಂತ್ರಗಳನ್ನು ಬಳಸಬಹುದು. ಅವೆಂದರೆ:

·         ಸಮಸ್ಯೆಯ ಒಂದು ನಿಜರೂಪ ಮಾದರಿ (ಮೊಡೆಲ್) ಮಾಡಿಕೊಂಡು ಅದರ ಮೇಲೆ ಮೊದಲು ಪ್ರಯೋಗ ಮಾಡುವುದು. ನಂತರ ಅದನ್ನು ನಿಜವಾದ ಸಮಸ್ಯೆಯ ಮೇಲೆ ಉಪಯೋಗಿಸುವುದು (ವೈದ್ಯರು ತಮ್ಮ ಔಷಧಿಗಳನ್ನು ಮೊದಲು ಬಲಿಪಶುಗಳ ಮೇಲೆ ಉಪಯೋಗಿಸುವ ರೀತಿಯಲ್ಲಿ).

·         ಸಮಸ್ಯೆಯ ತರಹವೇ ಇರುವ ಅನುರೂಪ ಮಾದರಿಯ ಮೇಲೆ ಪ್ರಯೋಗ ಮಾಡಿ ನೋಡುವುದು.

·         “ಹೀಗೆ ಮಾಡಿದರೆ ಹೀಗೆ ಆಗುತ್ತದೆ” ಎನ್ನುವ ಪಠ್ಯಪುಸ್ತಕ ತತ್ವವಾದವನ್ನು ಪ್ರಯೋಗಿಸಿ ನೋಡುವುದು.

·         ಸಂಕೀರ್ಣ ಸಮಸ್ಯೆಯನ್ನು ಚಿಕ್ಕ-ಚಿಕ್ಕದಾಗಿ ತುಂಡರಿಸಿ ಪರಿಹಾರ ಹುಡುಕುವುದು.

·         ಯಾವ ಯಾವ ತುಂಡುಗಳಿಗೆ ಪರಿಹಾರ ಸಿಗುತ್ತದೋ ಅಲ್ಲಿಂದ ಮುಂದಕ್ಕೆ ಹೊಸದಾಗಿ ಯೋಚಿಸುವುದು.

·         ಪರಿಹಾರ ಸಿಗದ ತುಂಡುಗಳನ್ನು ಒಟ್ಟು ಸೇರಿಸಿ ಪರಿಹಾರ ಕಂಡುಕೊಳ್ಳುವುದು

·         ಸಮಸ್ಯೆಯನ್ನು ಪರಿವರ್ತಿಸಿ ಪರಿಹಾರವಿರುವಂತಹ ಸಮಸ್ಯೆಯನ್ನಾಗಿ ಮಾಡುವುದು.

ಸಮಸ್ಯೆ ಪರಿಹಾರದ ಐದು ಹೆಜ್ಜೆಗಳು:

1.      ಸಮಸ್ಯೆಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ, ಸರಿಯಾಗಿ ಗುರುತಿಸಿ, ವ್ಯಾಖ್ಯಾನಿಸುವುದು.

2.      ಅದರ ಪರಿಹಾರಕ್ಕೆ ಬೇಕಾದ ಪರ್ಯಾಯ ಮಾರ್ಗಗಳನ್ನು, ಬೇಕಾದ ಸಂಪನ್ಮೂಲ ಹುಡುಕುವುದು/ಕ್ರೋಢೀಕರಿಸುವುದು.

3.      ಪರ್ಯಾಯ ಮಾರ್ಗಗಳ ಉಪಯುಕ್ತತೆ/ಮೌಲ್ಯ ಕಂಡುಹಿಡಿದು, ಅವುಗಳಲ್ಲಿ ಅತ್ಯಂತ ಸೂಕ್ತವಾದುದನ್ನು ಆಯ್ದುಕೊಳ್ಳುವುದು.

4.      ಆಯ್ದ ಯೋಜನೆಯನ್ನು ಚಾಚೂ ತಪ್ಪದಂತೆ ಜಾರಿಗೊಳಿಸುವುದು.

5.      ಸಮಸ್ಯೆ ಪರಿಹಾರವಾಯಿತೋ, ಇಲ್ಲವೋ ಎಂದು ನೋಡುವುದು. ಆಗಿಲ್ಲದಿದ್ದಲ್ಲಿ ಮತ್ತೆ. ಹೆಜ್ಜೆ ಕ್ರಮಾಂಕ 1 ರಿಂದ ಪ್ರಾರಂಭಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...