Homeಮುಖಪುಟನೀವು ಪದೇ ಪದೇ ಸಮಸ್ಯೆಗೆ ಸಿಕ್ಕಿಹಾಕಿಕೊಳ್ಳುತ್ತೀರಾ? ಹಾಗಾದರೆ ಅವುಗಳ ವೈಜ್ಞಾನಿಕ ಪರಿಹಾರಕ್ಕೆ ಏನು ಮಾಡಬೇಕು ಗೊತ್ತೆ?

ನೀವು ಪದೇ ಪದೇ ಸಮಸ್ಯೆಗೆ ಸಿಕ್ಕಿಹಾಕಿಕೊಳ್ಳುತ್ತೀರಾ? ಹಾಗಾದರೆ ಅವುಗಳ ವೈಜ್ಞಾನಿಕ ಪರಿಹಾರಕ್ಕೆ ಏನು ಮಾಡಬೇಕು ಗೊತ್ತೆ?

ಪರಿಹಾರ ಹುಡುಕುವ ದೈಹಿಕ/ಮಾನಸಿಕ ಸ್ಥಿತಿಯಲ್ಲಿ ನಾವು ಇರದಿದ್ದಲ್ಲಿ ಕೂಡಲೇ ಸಹಾಯ ಯಾಚಿಸಬೇಕು. ದೊಡ್ಡಸ್ತಿಕೆ ಮಾಡಲುಹೋಗಬಾರದು. ಚಿಕ್ಕ ಮಗುವೂ ಕೂಡ ತನಗೆ ಯಾವುದನ್ನು ಮಾಡಲು ಸಾಧ್ಯವಿಲ್ಲ ಎಂದು ಅರಿಯುತ್ತದೆಯೋ, ಕೂಡಲೇ ದೊಡ್ಡವರ ಗಮನ ಸೆಳೆಯುತ್ತದೆ. ಎಷ್ಟೋ ಬಾರಿ ನಾವು ಈ ಸರಳ ವಿಷಯವನ್ನು ಮರೆತುಬಿಡುತ್ತೇವೆ.

- Advertisement -
- Advertisement -

ಜೀವನ ಕಲೆಗಳು: ಅಂಕಣ – 22

ಸಮಸ್ಯೆಗಳ ಪರಿಹಾರ

ಸಮಸ್ಯೆಗಳು ಜೀವನದ ಒಂದು ಅವಿಭಾಜ್ಯ ಅಂಗ. ಹಾಗೆಂದು ಸಮಸ್ಯೆಯಿಂದ ಓಡಿ ಹೋಗುವುದಾಗಲೀ, ಆತ್ಮಹತ್ಯೆಯಾಗಲೀ ಪರಿಹಾರವಲ್ಲ. ಜೀವನಾವಶ್ಯಕ ಕಲೆಗಳಲ್ಲಿ ಸಮಸ್ಯೆ ಬಗೆಹರಿಸುವುದು ಮತ್ತು ನಿರ್ಧಾರ ತೆಗೆದುಕೊಳ್ಳುವುದು ಜೊತೆ ಜೊತೆಯಾಗಿ ಹೋಗುತ್ತವೆ. ಸಮಸ್ಯೆ ಪರಿಹಾರಕ್ಕೆ ಎಲ್ಲೋ ಒಂದು ನಿರ್ಧಾರ ತೆಗೆದುಕೊಳ್ಳುವ ಅವಶ್ಯಕತೆ ಇದ್ದರೆ, ತೆಗೆದುಕೊಂಡ ನಿರ್ಧಾರ ಇನ್ನೆಲ್ಲೋ ಒಂದು ಸಮಸ್ಯೆಯನ್ನು ಸೃಷ್ಟಿಸಲೂಬಹುದು. ಹಾಗಾಗಿ ಅವೆರಡಕ್ಕೂ ಒಂದು ರೀತಿಯ ನಂಟು ಇರುವಂತಿದ್ದರೂ ಎಲ್ಲಾ ಸಮಸ್ಯೆಗೂ ನಿರ್ಧಾರವೇ ಪರಿಹಾರ ಎಂತಲೂ ಇಲ್ಲ; ಎಲ್ಲಾ ನಿರ್ಧಾರಗಳೂ ಹೊಸ ಸಮಸ್ಯೆಗೆ ಕಾರಣವಾಗುತ್ತವೆ ಎಂತಲೂ ಇಲ್ಲ.

ಇಲ್ಲಿ ಸಮಸ್ಯೆಯನ್ನು ನಾವು ಎರಡು ವಿಧವಾಗಿ ಪರಿಗಣಿಸಬಹುದು. ಒಂದು ವೈಯುಕ್ತಿಕ ಅಥವಾ ಸಾಮಾಜಿಕ. ಇದು ಮನಶಾಸ್ತ್ರಕ್ಕೆ ಸಂಬಂಧಿಸಿದ್ದು, ಮತ್ತೊಂದು ವಿಜ್ಞಾನಕ್ಕೆ ಸಂಬಂಧಿಸಿದ್ದು, ಅಂದರೆ ಗಣಿತ, ವ್ಯಾಕರಣ, ವೈದ್ಯಕೀಯ, ಇತ್ಯಾದಿ.. ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ, ಕೇವಲ ವೈಯುಕ್ತಿಕ ಅಥವಾ ಸಾಮಾಜಿಕ ಸಮಸ್ಯೆಗಳ ಬಗ್ಗೆ ಚರ್ಚಿಸೋಣ. ಒಟ್ಟಿನಲ್ಲಿ ಸಮಸ್ಯೆ ಏನೇ ಇರಲಿ, ಅದು ಸ್ಪಷ್ಟವಾಗಿದ್ದಷ್ಟೂ ಪರಿಹಾರ ಸುಲಭ. ಸಮಸ್ಯೆ ಏನು ಎಂಬುದೇ ತಿಳಿಯದಿದ್ದಲ್ಲಿ ಪರಿಹಾರವೂ ಕಷ್ಟಸಾಧ್ಯ. ಪರಿಹಾರಕ್ಕೆ ನಮಗೆ ಬೇಕಾಗಿರುವುದು ವಿಮರ್ಶಾತ್ಮಕ ಮತ್ತು ಸೃಜನಾತ್ಮಕ ಚಿಂತನೆ. ಇವೆರಡರ ಬಗ್ಗೆ ನಾನು ಈಗಾಗಲೇ ತಿಳಿಸಿದ್ದೇನೆ.

ಸಮಸ್ಯೆಯ ಪರಿಹಾರದಲ್ಲಿ ನಮ್ಮ ಮನಃಸ್ಥಿತಿಯೂ ಮುಖ್ಯ ಭೂಮಿಕೆ ವಹಿಸುತ್ತದೆ. ಪರಿಹಾರ ಹುಡುಕುವ ದೈಹಿಕ/ಮಾನಸಿಕ ಸ್ಥಿತಿಯಲ್ಲಿ ನಾವು ಇರದಿದ್ದಲ್ಲಿ ಕೂಡಲೇ ಸಹಾಯ ಯಾಚಿಸಬೇಕು. ದೊಡ್ಡಸ್ತಿಕೆ ಮಾಡಲುಹೋಗಬಾರದು. ಚಿಕ್ಕ ಮಗುವೂ ಕೂಡ ತನಗೆ ಯಾವುದನ್ನು ಮಾಡಲು ಸಾಧ್ಯವಿಲ್ಲ ಎಂದು ಅರಿಯುತ್ತದೆಯೋ, ಕೂಡಲೇ ದೊಡ್ಡವರ ಗಮನ ಸೆಳೆಯುತ್ತದೆ. ಎಷ್ಟೋ ಬಾರಿ ನಾವು ಈ ಸರಳ ವಿಷಯವನ್ನು ಮರೆತುಬಿಡುತ್ತೇವೆ. ಅದೇ ರೀತಿ ಸಮಸ್ಯೆಯ ಎಲ್ಲಾ ಪಾರ್ಶ್ವಗಳನ್ನು ಸರಿಯಾಗಿ ತಿಳಿಯಲು ಸಾಧ್ಯವಾಗಿಲ್ಲದಿದ್ದಲ್ಲಿ, ನಮಗೆ ಗೊತ್ತಿರುವ ಅಲ್ಪ ಮಾಹಿತಿಯ ಆಧಾರದ ಮೇಲೆ, ಪರಿಹಾರಕ್ಕೆ ಕೈ ಹಾಕಿ ವಿಪರೀತ ಪರಿಣಾಮ ಎದುರಿಸಬೇಕಾಗುತ್ತದೆ. ಉದಾ: ಎಲೆಕ್ಟ್ರಿಕ್ ಮೀಟರ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಾಗ ಅಥವಾ ಒಲೆಯ ಮೇಲಿರಿಸಿದ ಕಾಯ್ದ ಎಣ್ಣೆಗೆ ಬೆಂಕಿ ತಗುಲಿದಾಗ, ನಾವು ಬೆಂಕಿ ನಂದಿಸಲು ಅದರ ಮೇಲೆ ನೀರು ಎರಚಲು ಹೋದಲ್ಲಿ, ವಿದ್ಯುತ್ ಶಾಕಿನಿಂದ ಅಥವಾ ದೊಡ್ಡ ಬೆಂಕಿ ಅನಾಹುತದಿಂದ ಹೆಚ್ಚಿನ ತೊಂದರೆಗೆ ಸಿಲುಕುತ್ತೇವೆ. ಆದ್ದರಿಂದ ಸಮಸ್ಯೆ ಅರ್ಥವಾಗದಿದ್ದಲ್ಲಿ, ನಮ್ಮಲ್ಲಿ ಸಾಮರ್ಥ್ಯ/ಸಂಪನ್ಮೂಲದ ಕೊರತೆ ಇದ್ದಲ್ಲಿ, ಪರಿಹಾರಕ್ಕೆ ನಾವೊಬ್ಬರೇ ಯತ್ನಿಸದೇ, ಕೂಡಲೇ ಬೇರೆಯವರ ಸಹಾಯ ಪಡೆಯಬೇಕು. ಇದು ಸಮಸ್ಯೆ ಪರಿಹಾರ ಕಲೆಯ ಮುಖ್ಯ ಎಚ್ಚರಿಕೆ.

ಮೊಟ್ಟ ಮೊದಲಿಗೆ ನಾವು ಸಮಸ್ಯೆ ಏನು ಎಂಬುದನ್ನು ಸರಿಯಾಗಿ ಅರಿಯಬೇಕು. ಸಮಸ್ಯೆ ನೇರವಾಗಿ ನಮ್ಮ ಕಣ್ಣಿಗೆ ಕಾಣುವುದು ಅಪರೂಪ, ಕೇವಲ ಅದರ ಲಕ್ಷಣಗಳು ನಮಗೆ ಗೋಚರಿಸುತ್ತವೆ. ಸಮಸ್ಯೆ ಎಲ್ಲೋ ಇರುತ್ತದೆ, ಲಕ್ಷಣಗಳು ಇನ್ನೆಲ್ಲೋ ಕಾಣಿಸಿಕೊಳ್ಳುತ್ತವೆ. ಹೇಗೆ ವೈದ್ಯರು ನಮ್ಮ ಕಾಯಿಲೆ ಕಂಡು ಹಿಡಿಯುವಾಗ ನಮ್ಮಿಂದ ತೊಂದರೆಯ ಲಕ್ಷಣಗಳನ್ನು ಕೇಳಿ ತಿಳಿದುಕೊಳ್ಳುತ್ತಾರೋ ಹಾಗೆ ನಾವೂ ಸಹ ಸಮಸ್ಯೆಯ ಗುಣ-ಲಕ್ಷಣಗಳನ್ನು ಗುರುತಿಸಿ, ವಿಶ್ಲೇಷಿಸಿ ಅದರಿಂದ ಸಮಸ್ಯೆ ಏನು ಎಂಬ ನಿರ್ಧಾರಕ್ಕೆ ಬರಬೇಕಾಗುತ್ತದೆ. ಅದರಲ್ಲೂ ಸಮಸ್ಯೆಗೆ “ಮೂಲ ಕಾರಣ” ಏನು ಎಂಬುದನ್ನು ತಿಳಿದು, ನಂತರ ಮೂಲ ಕಾರಣ ಹೋಗಲಾಡಿಸುವಂತಹ ಪರಿಹಾರ ಹುಡುಕಬೇಕಾಗುತ್ತದೆ. ಮೂಲ ಕಾರಣ ತಿಳಿಯದಿದ್ದರೆ ನಾವು ಪರಿಹಾರಕ್ಕೆ ದಾರಿ ಸಿಕ್ಕದೆ, ಅದರ ಚಕ್ರವ್ಯೂಹದಲ್ಲಿ ಸಿಲುಕುವುದು ನಿಶ್ಚಿತ.

ಮೂಲ ಕಾರಣ (ರೂಟ್ ಕಾಸ್) ಹುಡುಕಲು ಹಲವಾರು ಉಪಕರಣಗಳಿವೆ. ಅವುಗಳಲ್ಲಿ ಒಂದು “ಫೈವ್ ವೈ” (Five Why) ಇದರಲ್ಲಿ ಸಮಸ್ಯೆಯ ಬಗ್ಗೆ ಐದು ಬಾರಿ “ಏಕೆ?“ ಎಂದು ಪ್ರಶ್ನಿಸುವುದು. ಈ ಐದು ಬಾರಿಯ ಪ್ರಶ್ನೆಗೆ ಉತ್ತರ ಸಿಗುವಂತಿದ್ದರೆ ನಮಗೆ ಸಮಸ್ಯೆಯ ಮೂಲ ಕಾರಣ ಸ್ಪಷ್ಟವಾಗುತ್ತದೆ.

ಇನ್ನೊಂದು ಉಪಕರಣ ”ಫಿಷ್ ಬೋನ್” ಡಯಾಗ್ರಾಮ್. ಇದರಲ್ಲಿ ಸಮಸ್ಯೆಗೆ ಯಾವುದು ಕಾರಣ – ನಮ್ಮ ವ್ಯವಸ್ಥೆಯೇ, ಸಲಕರಣೆಗಳೇ, ಪರ್ಯಾವರಣವೇ, ಬಳಕೆಯ ವಸ್ತುಗಳೇ, ಜನರೇ ಅಥವಾ ಪ್ರಕ್ರಿಯೆಯೇ? ಎಂಬುದಾಗಿ ಅವುಗಳ ಕಾರ್ಯವನ್ನು ನಿರೀಕ್ಷಿಸಿ, ವಿಶ್ಲೇಶಿಸಿ ಯಾವುದು “ಕಾರಣ”, ಯಾವುದು ಲಕ್ಷಣ ಎಂಬ ತೀರ್ಮಾನಕ್ಕೆ ಬರುವುದು. ಚಿತ್ರ ಮೀನಿನ ಮೂಳೆಯ ಆಕಾರದಲ್ಲಿರುವುದರಿಂದ ಇದಕ್ಕೆ ಫಿಶ್ ಬೋನ್ ಎನ್ನುತ್ತಾರೆ.

ಮೇಲಿನ ರೀತಿಗಳಲ್ಲದೆ ಸಮಸ್ಯೆ ಪರಿಹಾರಕ್ಕೆ ಇನ್ನೂ ಕೆಲವು ತಂತ್ರಗಳನ್ನು ಬಳಸಬಹುದು. ಅವೆಂದರೆ:

·         ಸಮಸ್ಯೆಯ ಒಂದು ನಿಜರೂಪ ಮಾದರಿ (ಮೊಡೆಲ್) ಮಾಡಿಕೊಂಡು ಅದರ ಮೇಲೆ ಮೊದಲು ಪ್ರಯೋಗ ಮಾಡುವುದು. ನಂತರ ಅದನ್ನು ನಿಜವಾದ ಸಮಸ್ಯೆಯ ಮೇಲೆ ಉಪಯೋಗಿಸುವುದು (ವೈದ್ಯರು ತಮ್ಮ ಔಷಧಿಗಳನ್ನು ಮೊದಲು ಬಲಿಪಶುಗಳ ಮೇಲೆ ಉಪಯೋಗಿಸುವ ರೀತಿಯಲ್ಲಿ).

·         ಸಮಸ್ಯೆಯ ತರಹವೇ ಇರುವ ಅನುರೂಪ ಮಾದರಿಯ ಮೇಲೆ ಪ್ರಯೋಗ ಮಾಡಿ ನೋಡುವುದು.

·         “ಹೀಗೆ ಮಾಡಿದರೆ ಹೀಗೆ ಆಗುತ್ತದೆ” ಎನ್ನುವ ಪಠ್ಯಪುಸ್ತಕ ತತ್ವವಾದವನ್ನು ಪ್ರಯೋಗಿಸಿ ನೋಡುವುದು.

·         ಸಂಕೀರ್ಣ ಸಮಸ್ಯೆಯನ್ನು ಚಿಕ್ಕ-ಚಿಕ್ಕದಾಗಿ ತುಂಡರಿಸಿ ಪರಿಹಾರ ಹುಡುಕುವುದು.

·         ಯಾವ ಯಾವ ತುಂಡುಗಳಿಗೆ ಪರಿಹಾರ ಸಿಗುತ್ತದೋ ಅಲ್ಲಿಂದ ಮುಂದಕ್ಕೆ ಹೊಸದಾಗಿ ಯೋಚಿಸುವುದು.

·         ಪರಿಹಾರ ಸಿಗದ ತುಂಡುಗಳನ್ನು ಒಟ್ಟು ಸೇರಿಸಿ ಪರಿಹಾರ ಕಂಡುಕೊಳ್ಳುವುದು

·         ಸಮಸ್ಯೆಯನ್ನು ಪರಿವರ್ತಿಸಿ ಪರಿಹಾರವಿರುವಂತಹ ಸಮಸ್ಯೆಯನ್ನಾಗಿ ಮಾಡುವುದು.

ಸಮಸ್ಯೆ ಪರಿಹಾರದ ಐದು ಹೆಜ್ಜೆಗಳು:

1.      ಸಮಸ್ಯೆಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ, ಸರಿಯಾಗಿ ಗುರುತಿಸಿ, ವ್ಯಾಖ್ಯಾನಿಸುವುದು.

2.      ಅದರ ಪರಿಹಾರಕ್ಕೆ ಬೇಕಾದ ಪರ್ಯಾಯ ಮಾರ್ಗಗಳನ್ನು, ಬೇಕಾದ ಸಂಪನ್ಮೂಲ ಹುಡುಕುವುದು/ಕ್ರೋಢೀಕರಿಸುವುದು.

3.      ಪರ್ಯಾಯ ಮಾರ್ಗಗಳ ಉಪಯುಕ್ತತೆ/ಮೌಲ್ಯ ಕಂಡುಹಿಡಿದು, ಅವುಗಳಲ್ಲಿ ಅತ್ಯಂತ ಸೂಕ್ತವಾದುದನ್ನು ಆಯ್ದುಕೊಳ್ಳುವುದು.

4.      ಆಯ್ದ ಯೋಜನೆಯನ್ನು ಚಾಚೂ ತಪ್ಪದಂತೆ ಜಾರಿಗೊಳಿಸುವುದು.

5.      ಸಮಸ್ಯೆ ಪರಿಹಾರವಾಯಿತೋ, ಇಲ್ಲವೋ ಎಂದು ನೋಡುವುದು. ಆಗಿಲ್ಲದಿದ್ದಲ್ಲಿ ಮತ್ತೆ. ಹೆಜ್ಜೆ ಕ್ರಮಾಂಕ 1 ರಿಂದ ಪ್ರಾರಂಭಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...