Homeಮುಖಪುಟಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

- Advertisement -
- Advertisement -

ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ ಶನಿವಾರ ಬೆಳಿಗ್ಗೆ ಇಂಫಾಲ್‌ನ ವಿಮಾನ ನಿಲ್ದಾಣಕ್ಕೆ ತಲುಪಿದ್ದು, ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಈ ನಿಯೋಗವನ್ನು ವಿಮಾನ ನಿಲ್ದಾಣದಲ್ಲಿ ರಾಜ್ಯದ ವಕೀಲರ ಸಮುದಾಯವು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದಾಗಿ ನಿರಾಶ್ರಿತರಾದ ಜನರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ ತಲುಪಿದ

ನ್ಯಾಯಮೂರ್ತಿಗಳು ಬೆಳಿಗ್ಗೆ 10.40 ರ ಸುಮಾರಿಗೆ ಚುರಾಚಂದ್‌ಪುರ ಜಿಲ್ಲೆಯ ಮಿನಿ ಸೆಕ್ರೆಟರಿಯೇಟ್‌ನಿಂದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಕಾನೂನು ಸೇವಾ ಶಿಬಿರಗಳು, ಕಾನೂನು ನೆರವು ಘಟಕಗಳು ಮತ್ತು ತಾತ್ಕಾಲಿಕ ವೈದ್ಯಕೀಯ ಸೌಲಭ್ಯಗಳನ್ನು ಆನ್‌ಲೈನ್‌ನಲ್ಲಿ ಉದ್ಘಾಟಿಸಲಿದ್ದಾರೆ. ನಂತರ, ಅವರು ಬಿಷ್ಣುಪುರದ ಮೊಯಿರಾಂಗ್ ಕಾಲೇಜಿನಲ್ಲಿರುವ ಪರಿಹಾರ ಶಿಬಿರಕ್ಕೆ ಹೋಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ನಾವು ಇಲ್ಲಿಗೆ ಬಂದಿರುವುದಕ್ಕೆ ತುಂಬಾ ಸಂತೋಷವಾಗಿದೆ. ಈಗಷ್ಟೆ ಇಲ್ಲಿಗೆ ಬಂದಿದ್ದು, ಜನರ ಭೇಟಿಗಾಗಿ ಎದುರು ನೋಡುತ್ತಿದ್ದೇವೆ” ಎಂದು ಭೇಟಿ ನೀಡಿದ ನ್ಯಾಯಮೂರ್ತಿಗಳಲ್ಲಿ ಒಬ್ಬರು ವರದಿಗಾರರಿಗೆ ತಿಳಿಸಿದ್ದಾರೆ. ಮಣಿಪುರ ತಲುಪಿದ

ಮೈತೇಯಿ ಸಮುದಾಯಕ್ಕೆ ಸೇರಿದ ನಿಯೋಗದ ಭಾಗವಾಗಿರುವ ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್, ಕುಕಿ ಬಹುಸಂಖ್ಯಾತ ಚುರಾಚಂದ್‌ಪುರ ಜಿಲ್ಲೆಗೆ ಭೇಟಿ ನೀಡುವುದಿಲ್ಲ ಎಂದು ವರದಿಯಾಗಿದ್ದು, ಅಲ್ಲಿನ ವಕೀಲರ ಸಂಘದ ಆಕ್ಷೇಪಣೆಯ ನಡುವೆ, ನ್ಯಾಯಮೂರ್ತಿ ಕೋಟೀಶ್ವರ್‌ ಸಿಂಗ್ ಅವರು ಬಿಷ್ಣುಪುರ ಜಿಲ್ಲೆಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್‌ನ ಮೈತೇಯಿ ನ್ಯಾಯಮೂರ್ತಿ ಕುಕಿ-ಝೋ ಪ್ರಾಬಲ್ಯದ ಪ್ರದೇಶಕ್ಕೆ ಭೇಟಿ ನೀಡುವುದನ್ನು ತಡೆಯುವ ತನ್ನ ನಿರ್ದೇಶನವನ್ನು ಹಿಂಪಡೆಯುವಂತೆ ಆಲ್ ಮಣಿಪುರ ಬಾರ್ ಅಸೋಸಿಯೇಷನ್ ​​(AMBA) ತನ್ನ ಚುರಾಚಂದ್‌ಪುರ ಜಿಲ್ಲಾ ಘಟಕಕ್ಕೆ ಒತ್ತಾಯಿಸಿದೆ. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ಈ ಭೇಟಿ ಐತಿಹಾಸಿಕವಾಗಿದ್ದು, ಈ ರೀತಿಯ ಭೇಟಿ ಮೊದಲನೆಯ ಭಾರಿಗೆ ನಡೆಯುತ್ತಿದೆ ಎಂದು AMBA ಅಧ್ಯಕ್ಷ ಪುಯಮ್ ತೋಮ್ಚಾ ಮೈತೇಯಿ ಪಿಟಿಐಗೆ ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಭಾನುವಾರ ಮಣಿಪುರದ ಹೈಕೋರ್ಟ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೇ 2023 ರಿಂದ ಇಂಫಾಲ್ ಕಣಿವೆಯ ಮೈತೇಯಿ ಮತ್ತು ಪಕ್ಕದ ಬೆಟ್ಟಗಳಲ್ಲಿ ಇರುವ ಕುಕಿ-ಝೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೂ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  “ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

“ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...