Homeಮುಖಪುಟಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

- Advertisement -
- Advertisement -

ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ ಶನಿವಾರ ಬೆಳಿಗ್ಗೆ ಇಂಫಾಲ್‌ನ ವಿಮಾನ ನಿಲ್ದಾಣಕ್ಕೆ ತಲುಪಿದ್ದು, ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಈ ನಿಯೋಗವನ್ನು ವಿಮಾನ ನಿಲ್ದಾಣದಲ್ಲಿ ರಾಜ್ಯದ ವಕೀಲರ ಸಮುದಾಯವು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದಾಗಿ ನಿರಾಶ್ರಿತರಾದ ಜನರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ ತಲುಪಿದ

ನ್ಯಾಯಮೂರ್ತಿಗಳು ಬೆಳಿಗ್ಗೆ 10.40 ರ ಸುಮಾರಿಗೆ ಚುರಾಚಂದ್‌ಪುರ ಜಿಲ್ಲೆಯ ಮಿನಿ ಸೆಕ್ರೆಟರಿಯೇಟ್‌ನಿಂದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಕಾನೂನು ಸೇವಾ ಶಿಬಿರಗಳು, ಕಾನೂನು ನೆರವು ಘಟಕಗಳು ಮತ್ತು ತಾತ್ಕಾಲಿಕ ವೈದ್ಯಕೀಯ ಸೌಲಭ್ಯಗಳನ್ನು ಆನ್‌ಲೈನ್‌ನಲ್ಲಿ ಉದ್ಘಾಟಿಸಲಿದ್ದಾರೆ. ನಂತರ, ಅವರು ಬಿಷ್ಣುಪುರದ ಮೊಯಿರಾಂಗ್ ಕಾಲೇಜಿನಲ್ಲಿರುವ ಪರಿಹಾರ ಶಿಬಿರಕ್ಕೆ ಹೋಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ನಾವು ಇಲ್ಲಿಗೆ ಬಂದಿರುವುದಕ್ಕೆ ತುಂಬಾ ಸಂತೋಷವಾಗಿದೆ. ಈಗಷ್ಟೆ ಇಲ್ಲಿಗೆ ಬಂದಿದ್ದು, ಜನರ ಭೇಟಿಗಾಗಿ ಎದುರು ನೋಡುತ್ತಿದ್ದೇವೆ” ಎಂದು ಭೇಟಿ ನೀಡಿದ ನ್ಯಾಯಮೂರ್ತಿಗಳಲ್ಲಿ ಒಬ್ಬರು ವರದಿಗಾರರಿಗೆ ತಿಳಿಸಿದ್ದಾರೆ. ಮಣಿಪುರ ತಲುಪಿದ

ಮೈತೇಯಿ ಸಮುದಾಯಕ್ಕೆ ಸೇರಿದ ನಿಯೋಗದ ಭಾಗವಾಗಿರುವ ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್, ಕುಕಿ ಬಹುಸಂಖ್ಯಾತ ಚುರಾಚಂದ್‌ಪುರ ಜಿಲ್ಲೆಗೆ ಭೇಟಿ ನೀಡುವುದಿಲ್ಲ ಎಂದು ವರದಿಯಾಗಿದ್ದು, ಅಲ್ಲಿನ ವಕೀಲರ ಸಂಘದ ಆಕ್ಷೇಪಣೆಯ ನಡುವೆ, ನ್ಯಾಯಮೂರ್ತಿ ಕೋಟೀಶ್ವರ್‌ ಸಿಂಗ್ ಅವರು ಬಿಷ್ಣುಪುರ ಜಿಲ್ಲೆಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್‌ನ ಮೈತೇಯಿ ನ್ಯಾಯಮೂರ್ತಿ ಕುಕಿ-ಝೋ ಪ್ರಾಬಲ್ಯದ ಪ್ರದೇಶಕ್ಕೆ ಭೇಟಿ ನೀಡುವುದನ್ನು ತಡೆಯುವ ತನ್ನ ನಿರ್ದೇಶನವನ್ನು ಹಿಂಪಡೆಯುವಂತೆ ಆಲ್ ಮಣಿಪುರ ಬಾರ್ ಅಸೋಸಿಯೇಷನ್ ​​(AMBA) ತನ್ನ ಚುರಾಚಂದ್‌ಪುರ ಜಿಲ್ಲಾ ಘಟಕಕ್ಕೆ ಒತ್ತಾಯಿಸಿದೆ. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ಈ ಭೇಟಿ ಐತಿಹಾಸಿಕವಾಗಿದ್ದು, ಈ ರೀತಿಯ ಭೇಟಿ ಮೊದಲನೆಯ ಭಾರಿಗೆ ನಡೆಯುತ್ತಿದೆ ಎಂದು AMBA ಅಧ್ಯಕ್ಷ ಪುಯಮ್ ತೋಮ್ಚಾ ಮೈತೇಯಿ ಪಿಟಿಐಗೆ ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಭಾನುವಾರ ಮಣಿಪುರದ ಹೈಕೋರ್ಟ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೇ 2023 ರಿಂದ ಇಂಫಾಲ್ ಕಣಿವೆಯ ಮೈತೇಯಿ ಮತ್ತು ಪಕ್ಕದ ಬೆಟ್ಟಗಳಲ್ಲಿ ಇರುವ ಕುಕಿ-ಝೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೂ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  “ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

“ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...