Homeಮುಖಪುಟಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

- Advertisement -
- Advertisement -

ಒಂದು ವಾರದೊಳಗಡೆ ಎರಡು ಸುತ್ತಿನ ರಾಷ್ಟ್ರವ್ಯಾಪಿ ದಾಳಿಗಳು ನಡೆದು, 240 ಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಿದ ನಂತರ, ಒಕ್ಕೂಟ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು “ಕಾನೂನುಬಾಹಿರ ಸಂಘ” ಎಂದು ಘೋಷಿಸಲಾಗಿದೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ.

ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI), ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (JMB) ಮತ್ತು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ನೊಂದಿಗೆ ಸಂಘಟನೆಯು ಸಂಪರ್ಕ ಇಟ್ಟುಕೊಂಡಿದೆ ಎಂದು ಸರ್ಕಾರ ಉಲ್ಲೇಖಿಸಿದ್ದು, ಹಲವಾರು ಕ್ರಿಮಿನಲ್ ಮತ್ತು ಭಯೋತ್ಪಾದನೆ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ, ಇದು ‘ದೇಶದ ಸಮಗ್ರತೆ, ಸಾರ್ವಭೌಮತ್ವ ಮತ್ತು ಭದ್ರತೆ’ಗೆ ಧಕ್ಕೆ ತರುತ್ತದೆ. ಅಲ್ಲದೆ ಸಂಘಟನೆಯು ಸಾರ್ವಜನಿಕ ಶಾಂತಿ ಮತ್ತು ಕೋಮು ಸೌಹಾರ್ದ ಕದಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದೆ.

ಇದನ್ನೂ ಓದಿ: ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು ವಶಕ್ಕೆ

ಸಮಾಜದ ಒಂದು ನಿರ್ದಿಷ್ಟ ವರ್ಗವನ್ನು ತೀವ್ರಗಾಮಿಯನ್ನಾಗಿಸಲು PFI ರಹಸ್ಯ ಕಾರ್ಯಸೂಚಿಯನ್ನು ಅನುಸರಿಸುತ್ತಿದೆ. ಅಲ್ಲದೆ ದೇಶದ ಸಾಂವಿಧಾನಿಕ ಅಧಿಕಾರದ ಕಡೆಗೆ ಸಂಪೂರ್ಣ ಅಗೌರವವನ್ನು ತೋರಿಸುತ್ತದೆ ಎಂದು ಸರ್ಕಾರ ಹೇಳಿದೆ.

“ಹೊರಗಿನ ನಿಧಿ ಮತ್ತು ಸೈದ್ಧಾಂತಿಕ ಬೆಂಬಲದೊಂದಿಗೆ, ಇದು ದೇಶದ ಆಂತರಿಕ ಭದ್ರತೆಗೆ ದೊಡ್ಡ ಬೆದರಿಕೆಯಾಗಿದೆ” ಎಂದು ಅಧಿಸೂಚನೆಯಲ್ಲಿ ಸರ್ಕಾರ ಹೇಳಿದೆ.

ಸಾರ್ವಜನಿಕ ಮನಸ್ಸಿನಲ್ಲಿ ಭಯೋತ್ಪಾದನೆಯ ಆಳ್ವಿಕೆಯನ್ನು ಸೃಷ್ಟಿಸಲು ಪಿಎಫ್‌ಐ ಸದಸ್ಯರು ಈ ಹಿಂದೆ ಹಲವಾರು ಅಪರಾಧ ಚಟುವಟಿಕೆಗಳು ಮತ್ತು ಕ್ರೂರ ಕೊಲೆಗಳನ್ನು ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ, ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳು ಸಂಘಟನೆಯನ್ನು ನಿಷೇಧಿಸಲು ಶಿಫಾರಸು ಮಾಡಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಭಾರತದ ರಾಷ್ಟ್ರಪತಿ ‘ಸೆರಗು’ ಧರಿಸುತ್ತಾರೆ, ಅದು ಪಿಎಫ್‌ಐನ ಪಿತೂರಿಯೇ?: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

15 ರಾಜ್ಯಗಳಾದ್ಯಂತ ಪಿಎಫ್‌ಐ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸಂಪರ್ಕ ಹೊಂದಿದ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಜ್ಯ ಪೊಲೀಸರ ಸಂಘಟಿತ ಕ್ರಮದಲ್ಲಿ ಸೆಪ್ಟೆಂಬರ್ 22 ರಂದು ಮೊದಲ ಬಾರಿಗೆ ದಾಳಿ ನಡೆಸಿ 100 ಕ್ಕೂ ಹೆಚ್ಚು ಜನರನ್‌ಉ ಬಂಧಿಸಲಾಗಿತ್ತು.

ಇದರ ನಂತರ ಸಂಘಟನೆಯ ವಿರುದ್ಧ ರಾಷ್ಟ್ರವ್ಯಾಪಿ ಎರಡನೇ ಸುತ್ತಿನ ಕಾರ್ಯಾಚರಣೆಯನ್ನು ನಿನ್ನೆ ನಡೆಸಲಾಗಿತ್ತು. ಈವರೆಗೆ ಒಟ್ಟು 247 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಿಎಫ್‌ಐ ಜೊತೆಗೆ, ಅದರ ಸಹವರ್ತಿ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್(NWF), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರೆಹಬ್ ಫೌಂಡೇಶನ್-ಕೇರಳ ಸಂಘಟನೆಗಳನ್ನು ಕೂಡಾ ನಿಷೇಧಿಸಲಾಗಿದೆ.

ಇದನ್ನೂ ಓದಿ: ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಬಿಜೆಪಿ ಸರ್ಕಾರ ತಮ್ಮ ವಿರೋಧಿಗಳನ್ನು ಹಣಿಯುವುದಕ್ಕೆ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್ ಹೇಳಿದ್ದಾರೆ.

“ಈ ಹಿಂದೆ ಇಂದಿರಾ ಗಾಂಧಿ ಕೂಡಾ ಹೀಗೆಯೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದರು. ಕಾಂಗ್ರೆಸ್ ಕೂಡಾ ಮಾಡಿತ್ತು, ಅದನ್ನೇ ಬಿಜೆಪಿ ಕೂಡಾ ಮಾಡುತ್ತಿದೆ. ನಿಷೇಧವನ್ನು ಖಂಡಿಸಿ ಪಕ್ಷದ ವತಿಯಿಂದ ನಡೆಸಿದ ಶಾಂತಿಯುತ ಪ್ರತಿಭಟನೆಗೂ ಸರ್ಕಾರ ಅವಕಾಶ ನೀಡದೆ ನಮ್ಮ ನಾಯಕರನ್ನು ಬಂಧಿಸುತ್ತಿದ್ದಾರೆ. ಇದು ಅಘೋಷಿತ ತುರ್ತ ಪರಿಸ್ಥಿತಿಯ ಮತ್ತೊಂದು ರೂಪ” ಎಂದು ಭಾಸ್ಕರ್‌ ಪ್ರಸಾದ್ ಅವರು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...