ಐದು ವರ್ಷದ ಬಾಲಕಿಯ ಮೇಲೆ 40 ವರ್ಷದ ಶಿಕ್ಷಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮೀರತ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಿಕ್ಷಾಮಿತ್ರ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಶಿಕ್ಷಕನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಶಾಲೆಗೆ ಪ್ರವೇಶ ಮಾಡಿಕೊಳ್ಳುವ ಸಂಬಂಧ ಸಂತ್ರಸ್ತೆ ಮತ್ತು ಇತರೆ ಕೆಲವು ಬಾಲಕಿಯರನ್ನು ಆರೋಪಿ ಶಿಕ್ಷಕ ಶಾಲೆಗೆ ಕರೆತಂದಿದ್ದನು. ನಂತರ ಇತರರನ್ನು ಮನೆಗೆ ಹೋಗುವಂತೆ ಹೇಳಿ ಸಂತ್ರಸ್ತೆಯನ್ನು ಶಾಲೆಯಲ್ಲೇ ಉಳಿಯುವಂತೆ ಹೇಳಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು
ಬಾಲಕಿ ಹೇಗೋ ಮನೆಗೆ ತಲುಪಿ ಶಾಲೆಯಲ್ಲಿ ನಡೆದ ಘಟನೆ ಬಗ್ಗೆ ಪೋಷಕರಿಗೆ ತಿಳಿಸಿದೆ. ಇದರಿಂದ ಕೋಪಗೊಂಡ ಪೋಷಕರು ಸ್ಥಳೀಯರೊಂದಿಗೆ ಶಾಲೆಗೆ ಆಗಮಿಸಿ ಶಿಕ್ಷಕರನ್ನು ಕೋಣೆಗೆ ಕೂಡಿಹಾಕಿ ಬಿಗ ಜಡಿದು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಹೇಳಲಾಗಿದೆ.
ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಬಂಧಿಸಲಾಗಿದೆ. ಘಟನೆಯ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಮೀರತ್ ಗ್ರಾಮೀಣ ಪೋಲೀಸ್ ವರಿಷ್ಠಾಧಿಕಾರಿ ಅವಿನಾಶ್ ಪಾಂಡೆ ಹೇಳಿದ್ದಾರೆ.
ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ
ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರ ಆಕ್ರೋಶ; ವಿಡಿಯೋ ನೋಡಿ:
ಯಡಿಯೂರಪ್ಪ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರ ಆಕ್ರೋಶ…
Posted by Naanu Gauri on Tuesday, September 22, 2020