Homeಮುಖಪುಟಕೇರಳ: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗೆ 5 ವರ್ಷ ಜೈಲು!

ಕೇರಳ: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗೆ 5 ವರ್ಷ ಜೈಲು!

ಕೊರೊನಾ ಪ್ರಾರಂಭವಾದಾಗಿನಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಅಪರಾಧಗಳು, ನಕಲಿ ಪ್ರಚಾರ ಮತ್ತು ದ್ವೇಷದ ಮಾತುಗಳ ಹೆಚ್ಚಳವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ, ಬೆದರಿಕೆ, ಮಾನಹಾನಿಕರ, ವಿವಾದಿತ ಪೋಸ್ಟ್ ಹಾಕುವುದರ ವಿರುದ್ಧ ಕೇರಳ ರಾಜ್ಯ ಸರ್ಕಾರ ಕಠಿಣ ಸುಗ್ರೀವಾಜ್ಞೆಗೆ ಜಾರಿ ಮಾಡಿದೆ. ಈ ಕಾನೂನಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇಂದು ಸಹಿ ಮಾಡಿ ಅನುಮೋದನೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರಮಣಕಾರಿ, ಬೆದರಿಕೆ, ಅವಮಾನಕರ ಹೇಳಿಕೆ ನಿಡುವುದು, ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದರ ವಿರುದ್ಧ ಜೈಲು ಶಿಕ್ಷೆ ವಿಧಿಸುವ ಕೇರಳ ಪೊಲೀಸ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಕಠಿಣ ಸುಗ್ರೀವಾಜ್ಞೆ ಜಾರಿಯಾಗಿದೆ.

ಕೇರಳ ಪೊಲೀಸ್ ಕಾಯ್ದೆಯಲ್ಲಿ 118 (ಎ) ಎಂಬ ಹೊಸ ವಿಭಾಗವನ್ನು ಒಳಗೊಂಡಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ ಎಂದು ರಾಜಭವನ ಶನಿವಾರ ದೃಢಪಡಿಸಿದೆ. ಈ ಕಾಯ್ದೆ ಅನ್ವಯ ಸೋಷಿಯಲ್ ಮೀಡಿಯಾಗಳಲ್ಲಿ ಬೆದರಿಕೆ, ನಿಂದನೀಯ, ಅವಮಾನಕರ ಅಥವಾ ಮಾನಿಹಾನಿಕರವಾಗಿ ನಡೆದುಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ಅಥವಾ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಇಲ್ಲ ಎರಡನ್ನೂ ವಿಧಿಸುವ ಅಧಿಕಾರ ನ್ಯಾಯಾಲಯಕ್ಕೆ ಇರುತ್ತದೆ.

ಇದನ್ನೂ ಓದಿ: ಯುಪಿ ಸರ್ಕಾರ ಬಂಧಿಸಿದ ಕೇರಳದ ಪತ್ರಕರ್ತನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ!

ಕಾಯಿದೆಯ 118 (ಡಿ) ಸೆಕ್ಷನ್ ವಿರುದ್ಧ 2015 ರಲ್ಲಿ ಸುಪ್ರೀಂ ಕೋರ್ಟ್‌ಗೆ ತೆರಳಿದ ಕೇರಳ ಮೂಲದ ವಕೀಲ ಅನೂಪ್ ಕುಮಾರನ್ ಅವರು ಸುಗ್ರೀವಾಜ್ಞೆಯ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. “ಸೆಕ್ಷನ್ 118 (ಎ) ಸಾರ್ವಜನಿಕರನ್ನು, ವಿಶೇಷವಾಗಿ ಮಹಿಳೆಯರನ್ನು ಸಾಮಾಜಿಕ ಮಾಧ್ಯಮ ನಿಂದನೆಯಿಂದ ರಕ್ಷಿಸಲು ಉದ್ದೇಶಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ ವಾಸ್ತವದಲ್ಲಿ, ಹೊಸ ಕಾನೂನನ್ನು ಅಧಿಕಾರಿಗಳು ಮತ್ತು ಸರ್ಕಾರವನ್ನು ಟೀಕಿಸುವವರ ವಿರುದ್ಧ ಬಳಸುತ್ತದೆ”ಎಂದು ಆರೋಪಿಸಿದ್ದಾರೆ.

ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಡಿ) ಅನ್ನು ತಿರಸ್ಕರಿಸಿದ್ದ ಸುಪ್ರೀಂ ಕೋರ್ಟ್, ಇದು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಹಾಗಾಗಿ ಇದು ಅಸಂವಿಧಾನಿಕ ಎಂದು ಘೋಷಿಸಿತ್ತು.

ಇದನ್ನೂ ಓದಿ: ಕೇರಳ ಚುನಾವಣೆ: ಕೋತಿಗಳ ಕಾಟ ತಡೆಯುವವರಿಗೆ ನಮ್ಮ ಮತ ಎಂದ ಸ್ಥಳೀಯರು!

ಸಿಪಿಎಂ ನೇತೃತ್ವದ ಸರ್ಕಾರವು ಕೊರೊನಾ ಪ್ರಾರಂಭವಾದಾಗಿನಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಅಪರಾಧಗಳು, ನಕಲಿ ಪ್ರಚಾರ ಮತ್ತು ದ್ವೇಷದ ಮಾತುಗಳ ಹೆಚ್ಚಳವಾಗಿದೆ ಎಂದು ಹೇಳಿಕೊಂಡಿತ್ತು. ಜೊತೆಗೆ ಅಸ್ತಿತ್ವದಲ್ಲಿರುವ ಕಾನೂನು ನಿಬಂಧನೆಗಳು ಅವುಗಳ ವಿರುದ್ಧ ಹೋರಾಡಲು ಅಸಮರ್ಪಕವೆಂದು ಹೇಳಿತ್ತು.

ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಡಿ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66-ಎ ಅನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದರೂ, ಅವುಗಳನ್ನು ಬದಲಾಯಿಸಲು ಕೇಂದ್ರವು ಬೇರೆ ಯಾವುದೇ ಕಾನೂನು ಚೌಕಟ್ಟನ್ನು ಪರಿಚಯಿಸಿಲ್ಲ. “ಈ ಸನ್ನಿವೇಶದಲ್ಲಿ, ಸಾಮಾಜಿಕ ಮಾಧ್ಯಮಗಳ ಮೂಲಕ ಮಾಡಿದ ಅಪರಾಧಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಪೊಲೀಸರಿಗೆ ಸಾಧ್ಯವಿಲ್ಲ” ಎಂದು ಸರ್ಕಾರ ಹೇಳಿಕೊಂಡಿತ್ತು.

ಆದರೆ, ಸರ್ಕಾರದ ಹೊಸ ಕಾನೂನಿನ ವಿರುದ್ಧ ಪರ-ವಿರೋಧ ಚರ್ಚೆಗಳು ವ್ಯಕ್ತವಾಗಿದ್ದು, ಹಲವು ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಕುರಿತು ಪೋಸ್ಟ ಮಾಡಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಆಕ್ರಮಣಕಾರಿ ಪೋಸ್ಟ್ ಮಾಡಿದವರಿಗೆ 5 ವರ್ಷ ಶಿಕ್ಷೆ ನೀಡುವ ಈ ಕಾನೂನನ್ನು ಕೇರಳದ ಲೆಫ್ಟ್ ಡೆಮಾಕ್ರೆಟಿಕ್ ಫ್ರಂಟ್(LDF) ರೂಪಿಸಿರುವುದು ಆಘಾತಕಾರಿ” ಎಂದಿದ್ದಾರೆ.

 

ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ನಿಂದನೆಯನ್ನು ತಪ್ಪಿಸಲು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಆದರೆ ಈ ತಿದ್ದುಪಡಿಯು ಪೊಲೀಸರಿಗೆ ಹೆಚ್ಚಿನ ಶಕ್ತಿಯನ್ನು ನೀಡುವ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ನಿರ್ಬಂಧಿಸುವ ಕಾನೂನು ಎಂಬ ಆತಂಕ ಎಲ್ಲೆಡೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...