Homeಮುಖಪುಟಕೇರಳ: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗೆ 5 ವರ್ಷ ಜೈಲು!

ಕೇರಳ: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗೆ 5 ವರ್ಷ ಜೈಲು!

ಕೊರೊನಾ ಪ್ರಾರಂಭವಾದಾಗಿನಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಅಪರಾಧಗಳು, ನಕಲಿ ಪ್ರಚಾರ ಮತ್ತು ದ್ವೇಷದ ಮಾತುಗಳ ಹೆಚ್ಚಳವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ, ಬೆದರಿಕೆ, ಮಾನಹಾನಿಕರ, ವಿವಾದಿತ ಪೋಸ್ಟ್ ಹಾಕುವುದರ ವಿರುದ್ಧ ಕೇರಳ ರಾಜ್ಯ ಸರ್ಕಾರ ಕಠಿಣ ಸುಗ್ರೀವಾಜ್ಞೆಗೆ ಜಾರಿ ಮಾಡಿದೆ. ಈ ಕಾನೂನಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇಂದು ಸಹಿ ಮಾಡಿ ಅನುಮೋದನೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರಮಣಕಾರಿ, ಬೆದರಿಕೆ, ಅವಮಾನಕರ ಹೇಳಿಕೆ ನಿಡುವುದು, ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದರ ವಿರುದ್ಧ ಜೈಲು ಶಿಕ್ಷೆ ವಿಧಿಸುವ ಕೇರಳ ಪೊಲೀಸ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಕಠಿಣ ಸುಗ್ರೀವಾಜ್ಞೆ ಜಾರಿಯಾಗಿದೆ.

ಕೇರಳ ಪೊಲೀಸ್ ಕಾಯ್ದೆಯಲ್ಲಿ 118 (ಎ) ಎಂಬ ಹೊಸ ವಿಭಾಗವನ್ನು ಒಳಗೊಂಡಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ ಎಂದು ರಾಜಭವನ ಶನಿವಾರ ದೃಢಪಡಿಸಿದೆ. ಈ ಕಾಯ್ದೆ ಅನ್ವಯ ಸೋಷಿಯಲ್ ಮೀಡಿಯಾಗಳಲ್ಲಿ ಬೆದರಿಕೆ, ನಿಂದನೀಯ, ಅವಮಾನಕರ ಅಥವಾ ಮಾನಿಹಾನಿಕರವಾಗಿ ನಡೆದುಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ಅಥವಾ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಇಲ್ಲ ಎರಡನ್ನೂ ವಿಧಿಸುವ ಅಧಿಕಾರ ನ್ಯಾಯಾಲಯಕ್ಕೆ ಇರುತ್ತದೆ.

ಇದನ್ನೂ ಓದಿ: ಯುಪಿ ಸರ್ಕಾರ ಬಂಧಿಸಿದ ಕೇರಳದ ಪತ್ರಕರ್ತನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ!

ಕಾಯಿದೆಯ 118 (ಡಿ) ಸೆಕ್ಷನ್ ವಿರುದ್ಧ 2015 ರಲ್ಲಿ ಸುಪ್ರೀಂ ಕೋರ್ಟ್‌ಗೆ ತೆರಳಿದ ಕೇರಳ ಮೂಲದ ವಕೀಲ ಅನೂಪ್ ಕುಮಾರನ್ ಅವರು ಸುಗ್ರೀವಾಜ್ಞೆಯ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. “ಸೆಕ್ಷನ್ 118 (ಎ) ಸಾರ್ವಜನಿಕರನ್ನು, ವಿಶೇಷವಾಗಿ ಮಹಿಳೆಯರನ್ನು ಸಾಮಾಜಿಕ ಮಾಧ್ಯಮ ನಿಂದನೆಯಿಂದ ರಕ್ಷಿಸಲು ಉದ್ದೇಶಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ ವಾಸ್ತವದಲ್ಲಿ, ಹೊಸ ಕಾನೂನನ್ನು ಅಧಿಕಾರಿಗಳು ಮತ್ತು ಸರ್ಕಾರವನ್ನು ಟೀಕಿಸುವವರ ವಿರುದ್ಧ ಬಳಸುತ್ತದೆ”ಎಂದು ಆರೋಪಿಸಿದ್ದಾರೆ.

ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಡಿ) ಅನ್ನು ತಿರಸ್ಕರಿಸಿದ್ದ ಸುಪ್ರೀಂ ಕೋರ್ಟ್, ಇದು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಹಾಗಾಗಿ ಇದು ಅಸಂವಿಧಾನಿಕ ಎಂದು ಘೋಷಿಸಿತ್ತು.

ಇದನ್ನೂ ಓದಿ: ಕೇರಳ ಚುನಾವಣೆ: ಕೋತಿಗಳ ಕಾಟ ತಡೆಯುವವರಿಗೆ ನಮ್ಮ ಮತ ಎಂದ ಸ್ಥಳೀಯರು!

ಸಿಪಿಎಂ ನೇತೃತ್ವದ ಸರ್ಕಾರವು ಕೊರೊನಾ ಪ್ರಾರಂಭವಾದಾಗಿನಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಅಪರಾಧಗಳು, ನಕಲಿ ಪ್ರಚಾರ ಮತ್ತು ದ್ವೇಷದ ಮಾತುಗಳ ಹೆಚ್ಚಳವಾಗಿದೆ ಎಂದು ಹೇಳಿಕೊಂಡಿತ್ತು. ಜೊತೆಗೆ ಅಸ್ತಿತ್ವದಲ್ಲಿರುವ ಕಾನೂನು ನಿಬಂಧನೆಗಳು ಅವುಗಳ ವಿರುದ್ಧ ಹೋರಾಡಲು ಅಸಮರ್ಪಕವೆಂದು ಹೇಳಿತ್ತು.

ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಡಿ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66-ಎ ಅನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದರೂ, ಅವುಗಳನ್ನು ಬದಲಾಯಿಸಲು ಕೇಂದ್ರವು ಬೇರೆ ಯಾವುದೇ ಕಾನೂನು ಚೌಕಟ್ಟನ್ನು ಪರಿಚಯಿಸಿಲ್ಲ. “ಈ ಸನ್ನಿವೇಶದಲ್ಲಿ, ಸಾಮಾಜಿಕ ಮಾಧ್ಯಮಗಳ ಮೂಲಕ ಮಾಡಿದ ಅಪರಾಧಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಪೊಲೀಸರಿಗೆ ಸಾಧ್ಯವಿಲ್ಲ” ಎಂದು ಸರ್ಕಾರ ಹೇಳಿಕೊಂಡಿತ್ತು.

ಆದರೆ, ಸರ್ಕಾರದ ಹೊಸ ಕಾನೂನಿನ ವಿರುದ್ಧ ಪರ-ವಿರೋಧ ಚರ್ಚೆಗಳು ವ್ಯಕ್ತವಾಗಿದ್ದು, ಹಲವು ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಕುರಿತು ಪೋಸ್ಟ ಮಾಡಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಆಕ್ರಮಣಕಾರಿ ಪೋಸ್ಟ್ ಮಾಡಿದವರಿಗೆ 5 ವರ್ಷ ಶಿಕ್ಷೆ ನೀಡುವ ಈ ಕಾನೂನನ್ನು ಕೇರಳದ ಲೆಫ್ಟ್ ಡೆಮಾಕ್ರೆಟಿಕ್ ಫ್ರಂಟ್(LDF) ರೂಪಿಸಿರುವುದು ಆಘಾತಕಾರಿ” ಎಂದಿದ್ದಾರೆ.

 

ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ನಿಂದನೆಯನ್ನು ತಪ್ಪಿಸಲು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಆದರೆ ಈ ತಿದ್ದುಪಡಿಯು ಪೊಲೀಸರಿಗೆ ಹೆಚ್ಚಿನ ಶಕ್ತಿಯನ್ನು ನೀಡುವ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ನಿರ್ಬಂಧಿಸುವ ಕಾನೂನು ಎಂಬ ಆತಂಕ ಎಲ್ಲೆಡೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...