Homeಮುಖಪುಟಕೇರಳ: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗೆ 5 ವರ್ಷ ಜೈಲು!

ಕೇರಳ: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗೆ 5 ವರ್ಷ ಜೈಲು!

ಕೊರೊನಾ ಪ್ರಾರಂಭವಾದಾಗಿನಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಅಪರಾಧಗಳು, ನಕಲಿ ಪ್ರಚಾರ ಮತ್ತು ದ್ವೇಷದ ಮಾತುಗಳ ಹೆಚ್ಚಳವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ, ಬೆದರಿಕೆ, ಮಾನಹಾನಿಕರ, ವಿವಾದಿತ ಪೋಸ್ಟ್ ಹಾಕುವುದರ ವಿರುದ್ಧ ಕೇರಳ ರಾಜ್ಯ ಸರ್ಕಾರ ಕಠಿಣ ಸುಗ್ರೀವಾಜ್ಞೆಗೆ ಜಾರಿ ಮಾಡಿದೆ. ಈ ಕಾನೂನಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇಂದು ಸಹಿ ಮಾಡಿ ಅನುಮೋದನೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರಮಣಕಾರಿ, ಬೆದರಿಕೆ, ಅವಮಾನಕರ ಹೇಳಿಕೆ ನಿಡುವುದು, ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದರ ವಿರುದ್ಧ ಜೈಲು ಶಿಕ್ಷೆ ವಿಧಿಸುವ ಕೇರಳ ಪೊಲೀಸ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಕಠಿಣ ಸುಗ್ರೀವಾಜ್ಞೆ ಜಾರಿಯಾಗಿದೆ.

ಕೇರಳ ಪೊಲೀಸ್ ಕಾಯ್ದೆಯಲ್ಲಿ 118 (ಎ) ಎಂಬ ಹೊಸ ವಿಭಾಗವನ್ನು ಒಳಗೊಂಡಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ ಎಂದು ರಾಜಭವನ ಶನಿವಾರ ದೃಢಪಡಿಸಿದೆ. ಈ ಕಾಯ್ದೆ ಅನ್ವಯ ಸೋಷಿಯಲ್ ಮೀಡಿಯಾಗಳಲ್ಲಿ ಬೆದರಿಕೆ, ನಿಂದನೀಯ, ಅವಮಾನಕರ ಅಥವಾ ಮಾನಿಹಾನಿಕರವಾಗಿ ನಡೆದುಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ಅಥವಾ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಇಲ್ಲ ಎರಡನ್ನೂ ವಿಧಿಸುವ ಅಧಿಕಾರ ನ್ಯಾಯಾಲಯಕ್ಕೆ ಇರುತ್ತದೆ.

ಇದನ್ನೂ ಓದಿ: ಯುಪಿ ಸರ್ಕಾರ ಬಂಧಿಸಿದ ಕೇರಳದ ಪತ್ರಕರ್ತನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ!

ಕಾಯಿದೆಯ 118 (ಡಿ) ಸೆಕ್ಷನ್ ವಿರುದ್ಧ 2015 ರಲ್ಲಿ ಸುಪ್ರೀಂ ಕೋರ್ಟ್‌ಗೆ ತೆರಳಿದ ಕೇರಳ ಮೂಲದ ವಕೀಲ ಅನೂಪ್ ಕುಮಾರನ್ ಅವರು ಸುಗ್ರೀವಾಜ್ಞೆಯ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. “ಸೆಕ್ಷನ್ 118 (ಎ) ಸಾರ್ವಜನಿಕರನ್ನು, ವಿಶೇಷವಾಗಿ ಮಹಿಳೆಯರನ್ನು ಸಾಮಾಜಿಕ ಮಾಧ್ಯಮ ನಿಂದನೆಯಿಂದ ರಕ್ಷಿಸಲು ಉದ್ದೇಶಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ ವಾಸ್ತವದಲ್ಲಿ, ಹೊಸ ಕಾನೂನನ್ನು ಅಧಿಕಾರಿಗಳು ಮತ್ತು ಸರ್ಕಾರವನ್ನು ಟೀಕಿಸುವವರ ವಿರುದ್ಧ ಬಳಸುತ್ತದೆ”ಎಂದು ಆರೋಪಿಸಿದ್ದಾರೆ.

ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಡಿ) ಅನ್ನು ತಿರಸ್ಕರಿಸಿದ್ದ ಸುಪ್ರೀಂ ಕೋರ್ಟ್, ಇದು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಹಾಗಾಗಿ ಇದು ಅಸಂವಿಧಾನಿಕ ಎಂದು ಘೋಷಿಸಿತ್ತು.

ಇದನ್ನೂ ಓದಿ: ಕೇರಳ ಚುನಾವಣೆ: ಕೋತಿಗಳ ಕಾಟ ತಡೆಯುವವರಿಗೆ ನಮ್ಮ ಮತ ಎಂದ ಸ್ಥಳೀಯರು!

ಸಿಪಿಎಂ ನೇತೃತ್ವದ ಸರ್ಕಾರವು ಕೊರೊನಾ ಪ್ರಾರಂಭವಾದಾಗಿನಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಅಪರಾಧಗಳು, ನಕಲಿ ಪ್ರಚಾರ ಮತ್ತು ದ್ವೇಷದ ಮಾತುಗಳ ಹೆಚ್ಚಳವಾಗಿದೆ ಎಂದು ಹೇಳಿಕೊಂಡಿತ್ತು. ಜೊತೆಗೆ ಅಸ್ತಿತ್ವದಲ್ಲಿರುವ ಕಾನೂನು ನಿಬಂಧನೆಗಳು ಅವುಗಳ ವಿರುದ್ಧ ಹೋರಾಡಲು ಅಸಮರ್ಪಕವೆಂದು ಹೇಳಿತ್ತು.

ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಡಿ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66-ಎ ಅನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದರೂ, ಅವುಗಳನ್ನು ಬದಲಾಯಿಸಲು ಕೇಂದ್ರವು ಬೇರೆ ಯಾವುದೇ ಕಾನೂನು ಚೌಕಟ್ಟನ್ನು ಪರಿಚಯಿಸಿಲ್ಲ. “ಈ ಸನ್ನಿವೇಶದಲ್ಲಿ, ಸಾಮಾಜಿಕ ಮಾಧ್ಯಮಗಳ ಮೂಲಕ ಮಾಡಿದ ಅಪರಾಧಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಪೊಲೀಸರಿಗೆ ಸಾಧ್ಯವಿಲ್ಲ” ಎಂದು ಸರ್ಕಾರ ಹೇಳಿಕೊಂಡಿತ್ತು.

ಆದರೆ, ಸರ್ಕಾರದ ಹೊಸ ಕಾನೂನಿನ ವಿರುದ್ಧ ಪರ-ವಿರೋಧ ಚರ್ಚೆಗಳು ವ್ಯಕ್ತವಾಗಿದ್ದು, ಹಲವು ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಕುರಿತು ಪೋಸ್ಟ ಮಾಡಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಆಕ್ರಮಣಕಾರಿ ಪೋಸ್ಟ್ ಮಾಡಿದವರಿಗೆ 5 ವರ್ಷ ಶಿಕ್ಷೆ ನೀಡುವ ಈ ಕಾನೂನನ್ನು ಕೇರಳದ ಲೆಫ್ಟ್ ಡೆಮಾಕ್ರೆಟಿಕ್ ಫ್ರಂಟ್(LDF) ರೂಪಿಸಿರುವುದು ಆಘಾತಕಾರಿ” ಎಂದಿದ್ದಾರೆ.

 

ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ನಿಂದನೆಯನ್ನು ತಪ್ಪಿಸಲು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಆದರೆ ಈ ತಿದ್ದುಪಡಿಯು ಪೊಲೀಸರಿಗೆ ಹೆಚ್ಚಿನ ಶಕ್ತಿಯನ್ನು ನೀಡುವ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ನಿರ್ಬಂಧಿಸುವ ಕಾನೂನು ಎಂಬ ಆತಂಕ ಎಲ್ಲೆಡೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...