Homeಮುಖಪುಟಕೇರಳ: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗೆ 5 ವರ್ಷ ಜೈಲು!

ಕೇರಳ: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗೆ 5 ವರ್ಷ ಜೈಲು!

ಕೊರೊನಾ ಪ್ರಾರಂಭವಾದಾಗಿನಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಅಪರಾಧಗಳು, ನಕಲಿ ಪ್ರಚಾರ ಮತ್ತು ದ್ವೇಷದ ಮಾತುಗಳ ಹೆಚ್ಚಳವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ, ಬೆದರಿಕೆ, ಮಾನಹಾನಿಕರ, ವಿವಾದಿತ ಪೋಸ್ಟ್ ಹಾಕುವುದರ ವಿರುದ್ಧ ಕೇರಳ ರಾಜ್ಯ ಸರ್ಕಾರ ಕಠಿಣ ಸುಗ್ರೀವಾಜ್ಞೆಗೆ ಜಾರಿ ಮಾಡಿದೆ. ಈ ಕಾನೂನಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇಂದು ಸಹಿ ಮಾಡಿ ಅನುಮೋದನೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರಮಣಕಾರಿ, ಬೆದರಿಕೆ, ಅವಮಾನಕರ ಹೇಳಿಕೆ ನಿಡುವುದು, ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದರ ವಿರುದ್ಧ ಜೈಲು ಶಿಕ್ಷೆ ವಿಧಿಸುವ ಕೇರಳ ಪೊಲೀಸ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಕಠಿಣ ಸುಗ್ರೀವಾಜ್ಞೆ ಜಾರಿಯಾಗಿದೆ.

ಕೇರಳ ಪೊಲೀಸ್ ಕಾಯ್ದೆಯಲ್ಲಿ 118 (ಎ) ಎಂಬ ಹೊಸ ವಿಭಾಗವನ್ನು ಒಳಗೊಂಡಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ ಎಂದು ರಾಜಭವನ ಶನಿವಾರ ದೃಢಪಡಿಸಿದೆ. ಈ ಕಾಯ್ದೆ ಅನ್ವಯ ಸೋಷಿಯಲ್ ಮೀಡಿಯಾಗಳಲ್ಲಿ ಬೆದರಿಕೆ, ನಿಂದನೀಯ, ಅವಮಾನಕರ ಅಥವಾ ಮಾನಿಹಾನಿಕರವಾಗಿ ನಡೆದುಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ಅಥವಾ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಇಲ್ಲ ಎರಡನ್ನೂ ವಿಧಿಸುವ ಅಧಿಕಾರ ನ್ಯಾಯಾಲಯಕ್ಕೆ ಇರುತ್ತದೆ.

ಇದನ್ನೂ ಓದಿ: ಯುಪಿ ಸರ್ಕಾರ ಬಂಧಿಸಿದ ಕೇರಳದ ಪತ್ರಕರ್ತನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ!

ಕಾಯಿದೆಯ 118 (ಡಿ) ಸೆಕ್ಷನ್ ವಿರುದ್ಧ 2015 ರಲ್ಲಿ ಸುಪ್ರೀಂ ಕೋರ್ಟ್‌ಗೆ ತೆರಳಿದ ಕೇರಳ ಮೂಲದ ವಕೀಲ ಅನೂಪ್ ಕುಮಾರನ್ ಅವರು ಸುಗ್ರೀವಾಜ್ಞೆಯ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. “ಸೆಕ್ಷನ್ 118 (ಎ) ಸಾರ್ವಜನಿಕರನ್ನು, ವಿಶೇಷವಾಗಿ ಮಹಿಳೆಯರನ್ನು ಸಾಮಾಜಿಕ ಮಾಧ್ಯಮ ನಿಂದನೆಯಿಂದ ರಕ್ಷಿಸಲು ಉದ್ದೇಶಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ ವಾಸ್ತವದಲ್ಲಿ, ಹೊಸ ಕಾನೂನನ್ನು ಅಧಿಕಾರಿಗಳು ಮತ್ತು ಸರ್ಕಾರವನ್ನು ಟೀಕಿಸುವವರ ವಿರುದ್ಧ ಬಳಸುತ್ತದೆ”ಎಂದು ಆರೋಪಿಸಿದ್ದಾರೆ.

ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಡಿ) ಅನ್ನು ತಿರಸ್ಕರಿಸಿದ್ದ ಸುಪ್ರೀಂ ಕೋರ್ಟ್, ಇದು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಹಾಗಾಗಿ ಇದು ಅಸಂವಿಧಾನಿಕ ಎಂದು ಘೋಷಿಸಿತ್ತು.

ಇದನ್ನೂ ಓದಿ: ಕೇರಳ ಚುನಾವಣೆ: ಕೋತಿಗಳ ಕಾಟ ತಡೆಯುವವರಿಗೆ ನಮ್ಮ ಮತ ಎಂದ ಸ್ಥಳೀಯರು!

ಸಿಪಿಎಂ ನೇತೃತ್ವದ ಸರ್ಕಾರವು ಕೊರೊನಾ ಪ್ರಾರಂಭವಾದಾಗಿನಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಅಪರಾಧಗಳು, ನಕಲಿ ಪ್ರಚಾರ ಮತ್ತು ದ್ವೇಷದ ಮಾತುಗಳ ಹೆಚ್ಚಳವಾಗಿದೆ ಎಂದು ಹೇಳಿಕೊಂಡಿತ್ತು. ಜೊತೆಗೆ ಅಸ್ತಿತ್ವದಲ್ಲಿರುವ ಕಾನೂನು ನಿಬಂಧನೆಗಳು ಅವುಗಳ ವಿರುದ್ಧ ಹೋರಾಡಲು ಅಸಮರ್ಪಕವೆಂದು ಹೇಳಿತ್ತು.

ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಡಿ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66-ಎ ಅನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದರೂ, ಅವುಗಳನ್ನು ಬದಲಾಯಿಸಲು ಕೇಂದ್ರವು ಬೇರೆ ಯಾವುದೇ ಕಾನೂನು ಚೌಕಟ್ಟನ್ನು ಪರಿಚಯಿಸಿಲ್ಲ. “ಈ ಸನ್ನಿವೇಶದಲ್ಲಿ, ಸಾಮಾಜಿಕ ಮಾಧ್ಯಮಗಳ ಮೂಲಕ ಮಾಡಿದ ಅಪರಾಧಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಪೊಲೀಸರಿಗೆ ಸಾಧ್ಯವಿಲ್ಲ” ಎಂದು ಸರ್ಕಾರ ಹೇಳಿಕೊಂಡಿತ್ತು.

ಆದರೆ, ಸರ್ಕಾರದ ಹೊಸ ಕಾನೂನಿನ ವಿರುದ್ಧ ಪರ-ವಿರೋಧ ಚರ್ಚೆಗಳು ವ್ಯಕ್ತವಾಗಿದ್ದು, ಹಲವು ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಕುರಿತು ಪೋಸ್ಟ ಮಾಡಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಆಕ್ರಮಣಕಾರಿ ಪೋಸ್ಟ್ ಮಾಡಿದವರಿಗೆ 5 ವರ್ಷ ಶಿಕ್ಷೆ ನೀಡುವ ಈ ಕಾನೂನನ್ನು ಕೇರಳದ ಲೆಫ್ಟ್ ಡೆಮಾಕ್ರೆಟಿಕ್ ಫ್ರಂಟ್(LDF) ರೂಪಿಸಿರುವುದು ಆಘಾತಕಾರಿ” ಎಂದಿದ್ದಾರೆ.

 

ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ನಿಂದನೆಯನ್ನು ತಪ್ಪಿಸಲು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಆದರೆ ಈ ತಿದ್ದುಪಡಿಯು ಪೊಲೀಸರಿಗೆ ಹೆಚ್ಚಿನ ಶಕ್ತಿಯನ್ನು ನೀಡುವ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ನಿರ್ಬಂಧಿಸುವ ಕಾನೂನು ಎಂಬ ಆತಂಕ ಎಲ್ಲೆಡೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...