Homeಮುಖಪುಟಮಧ್ಯಪ್ರದೇಶ: 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು

ಮಧ್ಯಪ್ರದೇಶ: 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು

ದುರಂತದ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಸಹಾಯಧನ ಘೋಷಿಸಿದ್ದಾರೆ.

- Advertisement -
- Advertisement -

ಕಳೆದ ನಾಲ್ಕು ದಿನಗಳ ಹಿಂದೆ ಮಧ್ಯಪ್ರದೇಶದ ನಿವಾರಿ ಜಿಲ್ಲೆಯಲ್ಲಿ 200 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಐದು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಸತತ 90 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆಯ ನಂತರವೂ ಉಳಿಸಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಕರ್ತರ ತಂಡವು ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಬಾಲಕನನ್ನು ಕೊಳವೆ ಬಾವಿಯಿಂದ ಹೊರತೆಗೆದಿದ್ದಾರೆ. ಆದರೆ ಆಸ್ಪತ್ರೆ ತಲುಪುವ ಮೊದಲೇ ಬಾಲಕ ಪ್ರಹ್ಲಾದ್ ಮೃತಪಟ್ಟಿದ್ದಾನೆ ಎಂದು ಅಲ್ಲಿನ ವೈದ್ಯರು ತಿಳಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ದುರಂತದ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಸಹಾಯಧನ ಘೋಷಿಸಿದ್ದಾರೆ.

ಇದನ್ನೂ ಓದಿ: ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ರೈತ ಹರಿಕೃಷ್ಣನ್ ಕುಶ್ವಾಹ ಅವರ ಮಗ ಪ್ರಹ್ಲಾದ್, ಬುಧವಾರ ಬೆಳಿಗ್ಗೆ ನಿವಾರಿ ಜಿಲ್ಲೆಯ ಸೈತ್ಪುರಾ (ಬರಾಹ್‌ಬುಜುರ್ಗ್) ಗ್ರಾಮದಲ್ಲಿರುವ ತನ್ನ ತಂದೆಯ ಹೊಲದಲ್ಲಿ ಹೊಸದಾಗಿ ತೋಡಿದ್ದ 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದನು.

200 ಅಡಿ ಆಳದ ಬೋರ್‌ವೆಲ್‌ನಲ್ಲಿ ಬಾಲಕ ಪ್ರಹ್ಲಾದ್, 60 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿತ್ತು. ಆದರೆ, ಕಳೆದ ಮೂರು ದಿನಗಳಿಂದ ಯಾವುದೇ ಚಲನವಲನ ಕಾಣಿಸುತ್ತಿರಲಿಲ್ಲ ಎಂದು ಜಿಲ್ಲಾಧಿಕಾರಿ ಆಶಿಶ್ ಭಾರ್ಗವ ತಿಳಿಸಿದ್ದಾರೆ.

ಬಾಲಕನ ರಕ್ಷಣೆಗಾಗಿ ಜೆಸಿಬಿ ಯಂತ್ರಗಳನ್ನು ಬಳಸಲಾಗುತ್ತಿತ್ತು. ಸತತ ಸುಮಾರು 90 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 80 ರಕ್ಷಣಾ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಆದರೂ ಆತನನ್ನು ಉಳಿಸಲಾಗಲಿಲ್ಲ ಎಂದು ಆಶಿಶ್ ಭಾರ್ಗವ ಹೇಳಿದರು.

ದುರಂತದ ಕುರಿತು ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಾಲಕ, ’ಬೋರ್‌ವೆಲ್‌ಗಳನ್ನು ಕೊರೆಸುವ ಎಲ್ಲರಿಗೂ ನಾನು ಪ್ರಾರ್ಥಿಸುತ್ತೇನೆ, ಅವರು ಯಾವುದೇ ಸಮಯದಲ್ಲಿ  ಬೋರ್‌ವೆಲ್‌ಗಳನ್ನು ತೆರೆದಿರಬೇಡಿ. ನಿಮ್ಮ ಸುತ್ತಮುತ್ತಲಿನ ಬೋರ್‌ವೆಲ್‌ಗಳನ್ನು ವ್ಯವಸ್ಥಿತವಾಗಿ ಮುಚ್ಚಿ. ಈ ಹಿಂದೆ ಕೂಡ ಹಲವು ಮುಗ್ದರು ಇಂತಹ ದುರಂತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಎಚ್ಚರಿಸಿದ್ದಾರೆ.


 

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...