Homeಕರ್ನಾಟಕFLASHBACK| ಪರೇಶ್ ಮೇಸ್ತಾ ಸಾವಾದಾಗ ಬಿಜೆಪಿ ನಾಯಕರು ವರ್ತಿಸಿದ್ದು‌ ಹೀಗೆ...

FLASHBACK| ಪರೇಶ್ ಮೇಸ್ತಾ ಸಾವಾದಾಗ ಬಿಜೆಪಿ ನಾಯಕರು ವರ್ತಿಸಿದ್ದು‌ ಹೀಗೆ…

ಪರೇಶ್ ಮೇಸ್ತಾ ಸಾವು ಹತ್ಯೆಯಲ್ಲ, ಆಕಸ್ಮಿಕವಾಗಿ ಘಟಿಸಿದೆ ಎಂದು ಸಿಬಿಐ ವರದಿ ಸಲ್ಲಿಸಿದೆ.

- Advertisement -
- Advertisement -

ಯಾವುದೇ ಜಾತಿಯ ಯುವಕರು ಅನುಮಾನಾಸ್ಪದವಾಗಿ ಸಾವಿಗೀಡಾದಾಗ ಸಂಘ ಪರಿವಾರ ಅದಕ್ಕೆ ಕೋಮು ಬಣ್ಣವನ್ನು ಬಳಿಯಲು ಯತ್ನಿಸುತ್ತದೆ. ಇದಕ್ಕೆ ಬಹುದೊಡ್ಡ ರಾಜಕೀಯ ಇತಿಹಾಸವೇ ಇದೆ. ಹಾಗೆಯೇ 2017ರ ಡಿಸೆಂಬರ್‌ 6ರಂದು ಘಟಿಸಿದ ಪರೇಶ್ ಮೆಸ್ತಾ ಎಂಬ ಬೆಸ್ತರ ಯುವಕನ ಸಾವಿನಲ್ಲೂ ರಾಜಕೀಯ ನಡೆಯಿತು.

ಅಂದು ಭಾರೀ ರಾಜಕೀಯ ಕೋಲಾಹಲ ಸೃಷ್ಟಿಸಿದ್ದ ಹೊನ್ನಾವರ ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಬಹುದೊಡ್ಡ ತಿರುವು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖಾ ವರದಿಯನ್ನು ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ವರದಿಯಲ್ಲಿ ಪರೇಶ್ ಮೇಸ್ತಾ ಸಾವು ಹತ್ಯೆಯಲ್ಲ, ಆಕಸ್ಮಿಕವಾಗಿ ಘಟಿಸಿದೆ ಎಂದು ಉಲ್ಲೇಖಿಸಲಾಗಿದೆ. ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನವೆಂಬರ್ 16ಕ್ಕೆ ತೀರ್ಪು ಕಾಯ್ದಿರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎಂಟರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಮುಸ್ಲಿಮರು ಹತ್ಯೆ ಮಾಡಿದ್ದಾರೆಂದು ಸಂಘಪರಿವಾರ ಹಾಗೂ ಬಿಜೆಪಿ ಆರೋಪಿಸಿತ್ತು. ಮೃತ ಮೇಸ್ತಾನನ್ನು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಲಾಯಿತು. ಆಗಿನ ಆಡಳಿತರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿತ್ತು.

ಪರೇಶ್ ಮೆಸ್ತಾ ಸಾವು ಮುಂದಿಟ್ಟು ಬಿಜೆಪಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಂಡಿತ್ತು. ಆಗಿನ ಗೃಹ ಮಂತ್ರಿ ರಾಮಲಿಂಗ ರೆಡ್ಡಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ವಿಸ್ತೃತ ವಿಚಾರಣೆಗೆ ಕೇಳಿತ್ತು. ಅದಾಗಿಯೂ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಕನ್ನಡ, ಉಡುಪಿ, ದಕ, ಶಿವಮೊಗ್ಗ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬಿರುಸಿನ ಪ್ರಚಾರ ನಡೆಸಿತ್ತು.

ಇದನ್ನೂ ಓದಿರಿ: ಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

ಪರೇಶ್ ಸಾವಿನ ಸಂದರ್ಭದಲ್ಲಿ ಬಿಜೆಪಿ ನಾಯಕರು ಹೇಗೆ ವರ್ತಿಸಿ, ಸಮಾಜದ ಭಾವನೆಗಳನ್ನು ಕೆರಳಿಸಲು ಯತ್ನಿಸಿದ್ದರು ಎಂಬುದನ್ನು ಅವಲೋಕನ ಮಾಡಿಕೊಂಡು ಉತ್ತಮ ರಾಜಕೀಯ ಪರಿಸರವನ್ನು ನಿರ್ಮಿಸಬೇಕಿದೆ. ಸಾವುಗಳು ಸಂಭವಿಸಿದಾಗ ಎಚ್ಚರಿಕೆ ವಹಿಸಿ ಒಂದು ಕೋಮನ್ನು ವಿನಾಕಾರಣ ದೂಷಿಸದೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ತುರ್ತು ಇದೆ. ಹೀಗಾಗಿ ಸಂಘಪರಿವಾರ ಹಾಗೂ ಬಿಜೆಪಿ ನಾಯಕರು ಅಂದು ಹೇಗೆ ಅಂದು ವರ್ತಿಸಿದ್ದರು, ಮುಗ್ದ ಜರನ್ನು ಕೆರಳಿಸಿ ಗೆದ್ದರು ಎಂಬುದನ್ನು ಅವಲೋಕನ ಮಾಡಿಕೊಳ್ಳುವ ಅಗತ್ಯವಿದೆ.

2018ರ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ನಾಯಕ ಅಮಿತ್ ಷಾ ಅವರು ಹೊನ್ನಾವರದಲ್ಲಿರುವ ಪರೇಶ್ ಮೆಸ್ತಾ ಅವರ ಮನೆಗೆ ಭೇಟಿ ನೀಡಿದ್ದರು. ಆ ಮೂಲಕ ಹಿಂದೂ ಮತಗಳ ಧ್ರುವೀಕರಣಕ್ಕೆ ಯತ್ನಿಸಿದ್ದರು. ಬಿ.ಎಸ್.ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಅನಂತಕುಮಾರ್‌ ಹೆಗಡೆ ಅಂದು ಹಾಜರಿದ್ದರು.

 

ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಶೋಭಾ ಕರಂದ್ಲಾಜೆ ತರಹೇವಾರಿ ಹೇಳಿಕೆಗಳನ್ನು ನೀಡಿದ್ದರು. “ಈಶ್ವರಪ್ಪನವರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಜಿಹಾದಿಗಳ ಪರವಾಗಿ ಸರ್ಕಾರ ಹಾಗೂ ಪೊಲೀಸರೇ ನಿಂತು ಹಿಂದೂಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂಬುದನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ನಡೆಯುತ್ತಿರುವ ಘಟನೆಗಳಿಗೆ ರಾಜ್ಯ ಸರ್ಕಾರವೇ ಪ್ರಮುಖವಾದ ಕಾರಣ. ಪ್ರಕರಣವನ್ನು ಮುಚ್ಚಿಹಾಕುವ ಗುಮಾನಿ ಆ ಭಾಗದ ಜನರಿಗೆ ಬರುತ್ತಿದೆ” ಎಂದು ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದರು.

“ಮೀನುಗಾರರ ಜನಾಂಗ ಕಷ್ಟಪಟ್ಟು ಜೀವನ ಮಾಡುತ್ತಿದ್ದು, ಧರ್ಮದ ಬಗ್ಗೆ ನಿಷ್ಟೆಯನ್ನು ಹೊಂದಿದೆ. ಅಂತಹ ಸಮುದಾಯದ ಯುವಕನನ್ನು ಜಿಹಾದಿಗಳು ಅಮಾನುಷ ಹಾಗೂ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆದರೂ ಏನೂ ಆಗಿಲ್ಲ ಎಂಬ ರೀತಿ ಸರ್ಕಾರ ವರ್ತನೆ ಮಾಡುತ್ತಿದೆ” ಎಂದು ಆರೋಪಿಸಿದ್ದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಶೋಭಾ ಕರಂದ್ಲಾಜೆ, “ಹಿಂದಿನ ದಿನ ದೇವಸ್ಥಾನದಲ್ಲಿ ಮೇಸ್ತಾ ಚಂಡೆ ಭಾರಿಸುತ್ತಿದ್ದನು. ಯಾರು ಚಂಡೆ ಹೊಡೆಯುತ್ತಿದ್ದಾನೆ ಎಂದು ಮುಸಲ್ಮಾನ ಗೂಂಡಾಗಳು ಗಮನಿಸಿಕೊಂಡು ಹೋಗಿದ್ದರು. ಡಿಸೆಂಬರ್‌ ಆರನೇ ತಾರೀಕು ತನ್ನ ಸ್ನೇಹಿತನ ಬೈಕ್ ತರುವುದಾಗಿ ಎಲ್ಲರಿಗೂ ಹೇಳಿ ಮೇಸ್ತಾ ಹೊರಗೆ ಹೋಗಿದ್ದನು. ಆಚೆ ಹೋದವನು ವಾಪಸ್ ಬಂದಿಲ್ಲ” ಎಂದು ಕತೆ ಕಟ್ಟಿದ್ದರು.

ಇಡೀ ದೇಶದ ಶೋಷಿತ ಹಾಗೂ ಅಲಕ್ಷಿತ ಸಮುದಾಯಗಳನ್ನು ರಕ್ಷಿಸುತ್ತಿರುವ ಸಂವಿಧಾನವನ್ನೇ ಬದಲಿಸುವುದಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಸಂಸದ ಅನಂತಕುಮಾರ್‌ ಹೆಗಡೆ, “ಮೇಸ್ತಾನ ಪ್ರತಿ ಹನಿ ರಕ್ತಕ್ಕೂ ನ್ಯಾಯ ದೊರಕಿಸದೆ ಬಿಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

“ಏನು ನಡೆದಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ನಾವು ತಾಳ್ಮೆಯನ್ನು ಮೀರಿ ಏನೋ ಮಾಡಿಕೊಳ್ಳುತ್ತೇವೆ ಎಂಬುದು ಸಾಧ್ಯವಾಗುವುದಿಲ್ಲ. ಕೆಳಗಡೆ ಬಿದ್ದಿರುವ ಒಂದೊಂದು ರಕ್ತದ ಹನಿಯ ಪ್ರಜ್ಞೆ ನಮಗಿದೆ.  ಏನೇನು ಮಾಡಬೇಕು ಎಂಬುದರ ಬಗ್ಗೆ ನಾವು ಖಂಡಿತವಾಗಿಯೂ ಯೋಚನೆ ಮಾಡುತ್ತೇವೆ. ಕೆಳಗಡೆ ಬಿದ್ದಿರುವ ರಕ್ತಕ್ಕೆ ನ್ಯಾಯ ಕೊಡದೆ ಸುಮ್ಮನಿರುವುದಿಲ್ಲ” ಎಂದು ಪ್ರಚೋದಿಸಿದ್ದರು.

ರಾಜ್ಯದ ಹಲವು ಭಾಗಗಳಲ್ಲಿ ಬಿಜೆಪಿ ಹಾಗೂ ಸಂಘಪರಿವಾರದ ಸಂಘಟನೆಗಳು ಪ್ರತಿಭಟನೆ ಮಾಡಿದ್ದವು. ಸರ್ಕಾರವನ್ನು ಹಿಂದೂ ವಿರೋಧಿ ಎಂದು ಬಿಂಬಿಸಿದ್ದವು.

ಇದೆಲ್ಲದರ ಪರಿಣಾಮವಾಗಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ದೊರೆತ್ತಿದ್ದವು. ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆಯವರು ಕೆಲವು ತಿಂಗಳ ಹಿಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡುತ್ತಾ, “ಒಬ್ಬ ಪರೇಶ್ ಮೆಸ್ತಾನಿಗಾಗಿ ನಾವು ಐದಾರು ಜನರನ್ನು ಗೆಲ್ಲಿಸಿ ಕಳಿಸಿದ್ದೇವೆ. ಆಮೇಲೆ ಏನಾಯ್ತು ಎಂಬುದನ್ನು ಇಲ್ಲಿಯವರೆಗೂ ಪ್ರಶ್ನೆ ಮಾಡಿಲ್ಲ” ಎಂದಿದ್ದರು.

ಪರೇಶ್ ಮೆಸ್ತಾ ಪ್ರಕರಣದಲ್ಲಿ ಆರೋಪಿಯೆಂದು ಗುರುತಿಸಲಾಗಿದ್ದ ಅಜಾದ್ ಅಣ್ಣಿಗೇರಿಗೆ ವಕ್ಫ್‌ ಮಂಡಲಿ ಜಿಲ್ಲಾ ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿ ಸರ್ಕಾರ ನೀಡಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಬಳಿಕ ಆ ಸ್ಥಾನದಿಂದ ಅವರನ್ನು ತೆರವು ಮಾಡಲಾಗಿತ್ತು.

ಇದನ್ನೂ ಓದಿರಿ: ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ಬಿಜೆಪಿ ಕ್ಷಮೆ ಯಾಚಿಸಲಿ: ಸಿದ್ದರಾಮಯ್ಯ

ರಾಜಕೀಯ ಮೇಲಾಟಗಳು ಹೇಗೆ ನಡೆಯುತ್ತವೆ ಎಂಬುದಕ್ಕೆ ಪರೇಶ್ ಮೆಸ್ತಾ ಸಾವಿನ ಪ್ರಕರಣ ಸಾಕ್ಷಿಯಾಗಿ ನಿಂತಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದು, “ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ” ಎಂದು ದೂರಿದ್ದಾರೆ.

“ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...