Homeಮುಖಪುಟಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಈಶ್ವರಪ್ಪ ಮತ್ತು ಬಿಜೆಪಿಯ ನಡುವೆ ನಾನು ಉರಿಗೌಡನೂ ಅಲ್ಲ. ನಂಜೇಗೌಡನೂ ಅಲ್ಲ. ಯಾರ ಬಾಯಲ್ಲಿ ನಂಜು ಬರುತ್ತದೆಯೋ ಅವರನ್ನು ನಂಜೇಗೌಡ ಅನ್ನಿ. ಯಾರು ನನ್ನ ಮಾತು ಕೇಳಿ ಉರಿಬೀಳುತ್ತಾರೊ ಅವರಿಗೆ ಉರಿಗೌಡ ಅನ್ನಿ.

- Advertisement -
- Advertisement -

‘ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ. ಮುರಿದ ಮನಸ್ಸುಗಳ ಬೆಸುಗೆಯಾಗಲಿ. ಶಿವಮೊಗ್ಗದಲ್ಲಿ ಶಾಂತಿ–ಸೌಹಾರ್ದತೆ ನೆಲೆಸಲಿ’ ಇದು ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಯನೂರು ಮಂಜುನಾಥ್‌ರವರು ಯುಗಾದಿ ಹಾಗೂ ರಂಜಾನ್‌ಗೆ ಶುಭಕೋರಿ ಶಿವಮೊಗ್ಗ ನಗರದಾದ್ಯಂತ ಹಾಕಿರುವ ಫ್ಲೆಕ್ಸ್‌ಗಳಲ್ಲಿನ ಬರಹಗಳು. ಕೋಮು ಪ್ರಚೋದನಾಕಾರಿ ಹೇಳಿಕೆಗಳಲ್ಲಿ ಕುಖ್ಯಾತಿ ಪಡೆದಿರುವ ಮಾಜಿ ಸಚಿವ, ಹಾಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ.ಎಚ್ ಈಶ್ವರಪ್ಪನವರ ಕುರಿತು ಇರುವ ಹೇಳಿಕೆಯಾಗಿದೆ ಎಂಬ ಚರ್ಚೆ ಆರಂಭವಾಗಿದೆ.

ಆಯನೂರು ಮಂಜುನಾಥ್‌ ಇದ್ದಕ್ಕಿದ್ದಂತೆ ಹೀಗೆಕೆ ಆದರು ಎಂಬುದನ್ನು ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಪೈಪೋಟಿಯನ್ನು ಗಮನಿಸಿದರೆ ಉತ್ತರ ಸಿಗುತ್ತದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಆಕಾಂಕ್ಷಿಗಳ ಸರದಿ ಸಾಲು ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ದಿನ ಕಳೆದಂತೆ ಬೆಳೆಯುತ್ತಲೇ ಇದೆ. ಯಾರಿಗೆ ಟಿಕೆಟ್ ಸಿಗಬಹುದೆಂದು ಸಣ್ಣದೊಂದು ಊಹೆ ಕೂಡ ಮಾಡಲಾಗದಷ್ಟು ಗೊಂದಲ ಎರಡೂ ಪಕ್ಷದಲ್ಲಿದೆ. ಸ್ಥಳೀಯ ಹಿಂದುತ್ವ ಸಂಘಟನೆ ಹಾಗು ಬಿಜೆಪಿಯ ಒಂದು ವರ್ಗಕ್ಕೆ ಈಶ್ವರಪ್ಪರ ಬಗ್ಗೆ ಅಸಮಧಾನ-ಆಕ್ರೋಶವಿದೆ; ಈಶ್ವರಪ್ಪರ ವಿಚಿತ್ರ ಮ್ಯಾನರಿಸಂ ಮತ್ತು ಅಸಂಬದ್ಧ ಮಾತುಗಾರಿಕೆಯಿಂದ ಸಂಘ ಪರಿವಾರಕ್ಕೂ ಮುಜುಗರ ಆಗುತ್ತಿದೆ ಎಂಬ ಸುದ್ದಿಗಳು ತೇಲಾಡುತ್ತಿದೆ. 2008-2013ರ ಅವಧಿಯಲ್ಲಿ ಮಂತ್ರಿಯಾಗಿದ್ದಾಗ ಪೊಲೀಸರಿಗೆ ನೋಟು ಎಣಿಸುವ ಯಂತ್ರ ಈಶ್ವರಪ್ಪ ಮನೆಯಲ್ಲಿ ಸಿಕ್ಕಿದ್ದು, ಈಗ ಬಂದಿರುವ 40 ಪರ್ಸೆಂಟ್ ಆರೋಪ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ, ಈಚೆಗೆ ಹತ್ಯೆಗೀಡಾದ ಹಿಂದುತ್ವದ ಸಂಘಟನೆಯಲ್ಲಿದ್ದ ಹುಡುಗ ಹರ್ಷನ ಕೊಲೆ ಮತ್ತು ಆನಂತರ ಕೇಸರಿ ಪಡೆಯಲ್ಲಿ ಸ್ಥಳೀಯ ನಾಯಕತ್ವದ ಬಗ್ಗೆ ಮೂಡಿರುವ ಅನುಮಾನ, ಹರ್ಷನ ಅಕ್ಕ ಈಶ್ವರಪ್ಪ ಬಗ್ಗೆ ಅಸಮಾಧಾನದಿಂದ ಮಾತನಾಡುತ್ತಿರುವುದು ಮತ್ತು 2023ರ ಚುನಾವಣೆ ಹೊತ್ತಲ್ಲಿ ಈಶ್ವರಪ್ಪರಿಗೆ 74 ವರ್ಷ ವಯಸ್ಸಾಗುವುದರಿಂದ ಅವರಿಗೆ ಟಿಕೆಟ್ ಸಿಗಲಾರದೆಂಬ ಲೆಕ್ಕಾಚಾರದ ಚರ್ಚೆ ಬಿಜೆಪಿಯಲ್ಲಿ ಬಿರುಸಾಗಿದೆ.

ಈಶ್ವರಪ್ಪ ಸುಲಭಕ್ಕೆ ಸೀಟು ಬಿಟ್ಟು ಕೊಡುವ ಪೈಕಿಯಲ್ಲ; ತಮ್ಮ ವ್ಯವಹಾರವನ್ನೆಲ್ಲ ನೋಡಿಕೊಳ್ಳುತ್ತಿರುವ-ಜಿಪಂ ಸದಸ್ಯನಾಗಿದ್ದ ಮಗ ಕಾಂತೇಶ್‌ಗೆ ಟಿಕೆಟ್ ಕೇಳುತ್ತಿದ್ದಾರೆ. ಯಡಿಯೂರಪ್ಪರ ಮಗನಿಗೆ ಶಿಕಾರಿಪುರದಲ್ಲಿ ಅವಕಾಶ ಕೊಡುವುದಾದರೆ ತನ್ನ ಮಗನಿಗೇಕೆ ಶಿವಮೊಗ್ಗದಲ್ಲಿ ಟಿಕೆಟ್ ಕೊಡಬಾರದೆಂಬ ವಾದ ಈಶ್ವರಪ್ಪರದು ಎನ್ನಲಾಗುತ್ತಿದೆ. ಯಡಿಯೂರಪ್ಪರಿಗೆ ತಮ್ಮ ಸ್ವಜಾತಿ ಪರಮಾಪ್ತ ರುದ್ರೇಗೌಡರನ್ನು ಅಭ್ಯರ್ಥಿ ಮಾಡುವ ಮನಸ್ಸಿದೆಯಾದರೂ ಅವರಿಗೆ ವಯಸ್ಸಾಗಿರುವುದರಿಂದ ಕಷ್ಟವೆಂಬ ಮಾತಿದೆ. ಸೂಡಾದ ಅಧ್ಯಕ್ಷರಾಗಿದ್ದ ಲಿಂಗಾಯತ ಸಮುದಾಯದ ಜ್ಯೋತಿ ಪ್ರಕಾಶ್ ಹೆಸರು ಕೇಳಿಬರುತ್ತಿದೆ. ಎಮ್ ಆಯನೂರು ಮಂಜುನಾಥ್ ತನಗಿದು ಕೊನೆಯ ಅವಕಾಶ ಟಿಕೆಟ್ ಕೊಡಿಯೆಂದು ಸಂಘ ಶ್ರೇಷ್ಠರಿಗೆ ದುಂಬಾಲು ಬಿದ್ದಿದ್ದಾರಂತೆ.

ಈ ಬಾರಿ ಬ್ರಾಹ್ಮಣ ಸಮುದಾಯ ಬಿಜೆಪಿ ಟಿಕೆಟ್‌ಗೆ ಗಂಭೀರ ಪ್ರಯತ್ನ ಮಾಡುತ್ತಿದೆ; ಮಾಜಿ ಎಮ್ಮೆಲ್ಸಿ ಭಾನುಪ್ರಕಾಶ್, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ದತ್ತಾತ್ರಿ ಮತ್ತು ಸ್ಥಳೀಯ ಹಿಂದು ಮಹಾ ಸಭಾದ ಅಧ್ಯಕ್ಷ ನಟರಾಜ ಭಾಗ್ವತ್ ಎಮ್ಮೆಲ್ಲೆ ಆಗುವ ಕನಸು ಕಾಣುತ್ತಿದ್ದಾರೆ ಎಂಬುದು ಶಿವಮೊಗ್ಗೆಯಲ್ಲಿ ಬಹಿರಂಗ ರಹಸ್ಯ. ಯಡಿಯೂರಪ್ಪ ವಿರೋಧಿ ಕ್ಯಾಂಪಿನ ಭಾನುಪ್ರಕಾಶ್ ತನಗಲ್ಲದಿದ್ದರು ತಮ್ಮ ಮಗನಿಗಾದರು ಟಿಕೆಟ್ ಕೊಡುವಂತೆ ಕೇಳುತ್ತಿದ್ದಾರಂತೆ. ಆರ್‌ಎಸ್‌ಎಸ್ ಹಿನ್ನೆಲೆಯ ಈ ಮೂವರಿಗೆ ತಮ್ಮಲ್ಲಿ ಯಾರು ಸಂಘ ಸರದಾರರ ನೆಚ್ಚಿನ ಕಪ್ಪು ಕುದುರೆ ಆಗಬಹುದೆಂಬುದು ಅರ್ಥವಾಗದೆ ಗೊಂದಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಗರದ ಹೆಸರಾಂತ ವೈದ್ಯ ಡಾ.ಧನಂಜಯ್ ಸರ್ಜಿ ಬಿಜೆಪಿ ಅಥವಾ ಕಾಂಗ್ರೆಸ್‌ನಿಂದ ಕಣಕ್ಕಿಳಿಯುವ ಪ್ರಯತ್ನದಲ್ಲಿದ್ದಾರೆಂಬ ಸುದ್ದಿ ಸದ್ದು ಮಾಡುತ್ತಿರುವುದು ಕುತೂಹಲಕ್ಕೆಡೆಮಾಡಿದೆ. ಮಾಜಿ ಶಾಸಕ ಪ್ರಸನ್ನಕುಮಾರ್ ಸೋತರೂ ಜನರ ನಡುವಿದ್ದಾರೆ. ಆದರೆ ಬಿಜೆಪಿ ಕಡೆಗೆ ಹೋಗುವ ಸ್ವಜಾತಿ ಮತ ಸೆಳೆಲು ಪ್ರಸನ್ನಕುಮಾರ್‌ರಿಂದ ಆಗದಿರುವುದರಿಂದ ಲಿಂಗಾಯತ ಅಥವಾ ಕುರುಬ ಸಮುದಾಯದವರಿಗೆ ಅವಕಾಶ ಕೊಟ್ಟರೆ ಗೆಲ್ಲುವ ಸಂಭವವಿದೆ ಎಂಬ ಚರ್ಚೆಗಳು ಕಾಂಗ್ರೆಸ್‌ನಲ್ಲಿ ನಡೆದಿದೆಯೆನ್ನಲಾಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಕಾರ್ಪೊರೆಟ್ ಎಚ್.ಸಿ.ಯೋಗೀಶ್ ಮತ್ತು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಸ್ಪರ್ಧಿಸಿ ಸೋತಿರುವ ದಿನೇಶ್ ಟಿಕೆಟ್‌ಗೆ ಪೈಪೋಟಿ ನಡೆಸಿದ್ದಾರೆ. ದಿನೇಶ್ ಬೆನ್ನಿಗೆ ಲಿಂಗಾಯತ ಪಂಗಡದ ಪ್ರಭಾವಿ ಮುಖಂಡ ಶಾಮನೂರು ಶಿವಶಂಕರಪ್ಪನವರಿದ್ದರೆ ಯೋಗೀಶ್‌ಗೆ ಮಾಜಿ ಶಾಸಕ ಚಂದ್ರಶೇಖರಪ್ಪರ ಮಗನೆಂಬುದೆ ಬಲ ಎನ್ನಲಾಗುತ್ತಿದೆ.

ಈ ನಡುವೆ ಲಿಂಗಾಯತರ ಅನುಕಂಪ ಪಡೆದಿರುವ ಆಯನೂರು ಮಂಜುನಾಥರನ್ನು ಬಿಜೆಪಿಯಿಂದ ಕರೆತಂದು ಅಖಾಡಕ್ಕಿಸುವ ಪ್ರಯತ್ನ ಕಾಂಗ್ರೆಸ್‌ನ ಒಂದು ಒಂದು ವರ್ಗ ಮಾಡುತ್ತಿದೆ. ಮತ್ತೊಂದೆಡೆ ಎರಡು ಸಲ ಅಸೆಂಬ್ಲಿಗೆ ಸ್ಪರ್ಧಿಸಿದಾಗ 19-21 ಸಾವಿರದಷ್ಟು ಮತ ಪಡೆದ ಕುರುಬ ಜನಾಂಗದ ಜನಬಳಕೆ ಮುಖಂಡ ಎಂ.ಶ್ರೀಕಾಂತ್‌ರನ್ನು ಜೆಡಿಎಸ್‌ನಿಂದ ಸೆಳೆಯುವ ಕಾರ್ಯಾಚರಣೆ ಆಗುತ್ತಿದೆ ಎಂಬ ಮಾತು ಜಿಲ್ಲೆಯ ರಾಜಕೀಯ ವಲಯದಲ್ಲಿದೆ. ಕಾಂಗ್ರೆಸ್ಸಿಗೆ ಈಶ್ವರಪ್ಪರ ಸಂಪನ್ಮೂಲ ಮತ್ತು ಸಂಘ ಪರಿವಾರದ ಅಕ್ರಮಣಕಾರಿ ಹಿಂದುತ್ವ ಕೌಂಟರ್ ಮಾಡುವ ’ಗಟ್ಟಿ’ ಅಭ್ಯರ್ಥಿ ಬೇಕಾಗಿದೆ ಎಂದು ಆ ಪಕ್ಷದ ಕಾರ್ಯಕರ್ತರು ಹೇಳುತ್ತಾರೆ.

ಈಶ್ವರಪ್ಪರಿಗೆ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ; ಈಗಿನ ಸ್ಥಿತಿಯಲ್ಲಿ ಅವರು ಗೆಲ್ಲುವುದೂ ಕಷ್ಟ; ಮತದಾರರಿಗೂ ಬಿಜೆಪಿ ನಾಯಕರು ಕಂಡವರ ಮಕ್ಕಳನ್ನು ಬಾವಿಗಿಳಿಸಿ ಆಳ ನೋಡುವ ಹಿಂದುತ್ವದಿಂದ ರೋಸಿಹೋಗಿದೆ. ಈ ನಡುವೆ ಆಯನೂರು ಮಂಜುನಾಥ್‌ರವರ ಫ್ಲೆಕ್ಸ್‌ಗಳು ಹೊರಬಿದ್ದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಆಯನೂರು ಮಂಜುನಾಥ್, “ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂದು ಬಹುವಚನ ಬಳಸಲಾಗಿದೆ. ಹೀಗಾಗಿ ಆ ಮಾತನ್ನು ಈಶ್ವರಪ್ಪ ಒಬ್ಬರಿಗೇ ಅನ್ವಯಿಸುವುದು ಸರಿಯಲ್ಲ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಾರ್ಥನೆ ಮಾಡಲು ಮುಂದಾಗುವವರಿಗೂ ಅದು ಅನ್ವಯಿಸುತ್ತದೆ. ಆದರೆ ‘ಯಾವುದೋ ಧರ್ಮದ ದೇವರು ಕಿವುಡನೇ, ಕುರುಡನೇ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಮಾತಾಡುವುದು ಬೇಡ. ಅವರೊಬ್ಬ ಪ್ರಬುದ್ಧ ರಾಜಕಾರಣಿ. ಜವಾಬ್ದಾರಿಯಿಂದ ಮಾತಾಡಬೇಕು ಎಂಬ ನಿರೀಕ್ಷೆ ನನಗೂ ಇದೆ’ ಎಂದಿದ್ದಾರೆ.

‘ಬಿಜೆಪಿಗೆ ಧಕ್ಕೆ ಬರುವ ಯಾವುದೇ ಮಾತುಗಳನ್ನು ಯಾವುದೇ ನಾಯಕರು ಹೇಳಿದರೂ ಅದನ್ನು ಸ್ವೀಕಾರ ಮಾಡಬೇಕೆಂಬ ಬಲವಂತ ನಮಗೆ ಯಾರಿಗೂ ಇಲ್ಲ. ಸಂಘಟನೆಯ ಹಿತದೃಷ್ಟಿಯಿಂದ ನೀವು (ಈಶ್ವರಪ್ಪ) ಹೀಗೆ ಮಾತಾಡುವುದು ಸರಿಯಲ್ಲ. ಜವಾಬ್ದಾರಿಯಿಂದ ಮಾತಾಡಿ ಎಂದು ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ? ಈಶ್ವರಪ್ಪ ಹಾಗೆ ಮಾತಾಡಿದ್ದರೆ ತಿದ್ದಿಕೊಳ್ಳುವುದು ಒಳ್ಳೆಯದು. ಸಣ್ಣ ಘಟನೆ ನಡೆದರೂ ಶಿವಮೊಗ್ಗದಲ್ಲಿ ಏನಾಗುತ್ತದೆ ಎಂಬುದು ಊಹಿಸಿಕೊಳ್ಳಲಿ’ ಎಂದು ಕಿವಿಮಾತು ಎಂದು ಆಯನೂರು ಮಂಜುನಾಥ್‌ ತಿಳಿಸಿದ್ದಾರೆ.

ಬಿಜೆಪಿ ಬಿಡುತ್ತೀರಾ ಎಂಬ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡಿರುವ ಅವರು, ಮದುವೆಗೆ ನಿಮ್ಮ ಮನೆಯಲ್ಲಿ ಹೆಣ್ಣು ಕೊಟ್ಟರೆ ನಾನೇಕೆ ಪಕ್ಕದ ಮನೆಗೆ ಹೋಗಲಿ ಎಂದು ತನಗೆ ಟಿಕೆಟ್ ಬೇಕೆ ಬೇಕು ಎಂದು ಹಠ ಮುಂದಿಟ್ಟಿದ್ದಾರೆ. ಈಶ್ವರಪ್ಪನವರು ತನ್ನ ಮಗನಿಗೆ ಟಿಕೆಟ್ ಕೇಳುತ್ತಿದ್ದಾರೆ. ಆದರೆ ಅವರ ಮಗ ಇನ್ನು ಚಿಕ್ಕವರು. ನಾವು ಕ್ಯೂನಲ್ಲಿ ಇಲ್ಲವೆ? ಈಶ್ವರಪ್ಪ ಮತ್ತು ಬಿಜೆಪಿಯ ನಡುವೆ ನಾನು ಉರಿಗೌಡನೂ ಅಲ್ಲ. ನಂಜೇಗೌಡನೂ ಅಲ್ಲ. ಬದಲಿಗೆ ನಾನು ಆಯನೂರು ಮಂಜುನಾಥ್. ಯಾರ ಬಾಯಲ್ಲಿ ನಂಜು ಬರುತ್ತದೆಯೋ ಅವರನ್ನು ನಂಜೇಗೌಡ ಅನ್ನಿ. ಯಾರು ನನ್ನ ಮಾತು ಕೇಳಿ ಉರಿಬೀಳುತ್ತಾರೊ ಅವರಿಗೆ ಉರಿಗೌಡ ಅನ್ನಿ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿವಮೊಗ್ಗ: ಮತೋನ್ಮತ್ತ ರಣಕಣದಿಂದ ಈಶ್ವರಪ್ಪ ಕಡ್ಡಾಯ ನಿವೃತ್ತಿ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...