Homeಮುಖಪುಟಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಈಶ್ವರಪ್ಪ ಮತ್ತು ಬಿಜೆಪಿಯ ನಡುವೆ ನಾನು ಉರಿಗೌಡನೂ ಅಲ್ಲ. ನಂಜೇಗೌಡನೂ ಅಲ್ಲ. ಯಾರ ಬಾಯಲ್ಲಿ ನಂಜು ಬರುತ್ತದೆಯೋ ಅವರನ್ನು ನಂಜೇಗೌಡ ಅನ್ನಿ. ಯಾರು ನನ್ನ ಮಾತು ಕೇಳಿ ಉರಿಬೀಳುತ್ತಾರೊ ಅವರಿಗೆ ಉರಿಗೌಡ ಅನ್ನಿ.

- Advertisement -
- Advertisement -

‘ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ. ಮುರಿದ ಮನಸ್ಸುಗಳ ಬೆಸುಗೆಯಾಗಲಿ. ಶಿವಮೊಗ್ಗದಲ್ಲಿ ಶಾಂತಿ–ಸೌಹಾರ್ದತೆ ನೆಲೆಸಲಿ’ ಇದು ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಯನೂರು ಮಂಜುನಾಥ್‌ರವರು ಯುಗಾದಿ ಹಾಗೂ ರಂಜಾನ್‌ಗೆ ಶುಭಕೋರಿ ಶಿವಮೊಗ್ಗ ನಗರದಾದ್ಯಂತ ಹಾಕಿರುವ ಫ್ಲೆಕ್ಸ್‌ಗಳಲ್ಲಿನ ಬರಹಗಳು. ಕೋಮು ಪ್ರಚೋದನಾಕಾರಿ ಹೇಳಿಕೆಗಳಲ್ಲಿ ಕುಖ್ಯಾತಿ ಪಡೆದಿರುವ ಮಾಜಿ ಸಚಿವ, ಹಾಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ.ಎಚ್ ಈಶ್ವರಪ್ಪನವರ ಕುರಿತು ಇರುವ ಹೇಳಿಕೆಯಾಗಿದೆ ಎಂಬ ಚರ್ಚೆ ಆರಂಭವಾಗಿದೆ.

ಆಯನೂರು ಮಂಜುನಾಥ್‌ ಇದ್ದಕ್ಕಿದ್ದಂತೆ ಹೀಗೆಕೆ ಆದರು ಎಂಬುದನ್ನು ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಪೈಪೋಟಿಯನ್ನು ಗಮನಿಸಿದರೆ ಉತ್ತರ ಸಿಗುತ್ತದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಆಕಾಂಕ್ಷಿಗಳ ಸರದಿ ಸಾಲು ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ದಿನ ಕಳೆದಂತೆ ಬೆಳೆಯುತ್ತಲೇ ಇದೆ. ಯಾರಿಗೆ ಟಿಕೆಟ್ ಸಿಗಬಹುದೆಂದು ಸಣ್ಣದೊಂದು ಊಹೆ ಕೂಡ ಮಾಡಲಾಗದಷ್ಟು ಗೊಂದಲ ಎರಡೂ ಪಕ್ಷದಲ್ಲಿದೆ. ಸ್ಥಳೀಯ ಹಿಂದುತ್ವ ಸಂಘಟನೆ ಹಾಗು ಬಿಜೆಪಿಯ ಒಂದು ವರ್ಗಕ್ಕೆ ಈಶ್ವರಪ್ಪರ ಬಗ್ಗೆ ಅಸಮಧಾನ-ಆಕ್ರೋಶವಿದೆ; ಈಶ್ವರಪ್ಪರ ವಿಚಿತ್ರ ಮ್ಯಾನರಿಸಂ ಮತ್ತು ಅಸಂಬದ್ಧ ಮಾತುಗಾರಿಕೆಯಿಂದ ಸಂಘ ಪರಿವಾರಕ್ಕೂ ಮುಜುಗರ ಆಗುತ್ತಿದೆ ಎಂಬ ಸುದ್ದಿಗಳು ತೇಲಾಡುತ್ತಿದೆ. 2008-2013ರ ಅವಧಿಯಲ್ಲಿ ಮಂತ್ರಿಯಾಗಿದ್ದಾಗ ಪೊಲೀಸರಿಗೆ ನೋಟು ಎಣಿಸುವ ಯಂತ್ರ ಈಶ್ವರಪ್ಪ ಮನೆಯಲ್ಲಿ ಸಿಕ್ಕಿದ್ದು, ಈಗ ಬಂದಿರುವ 40 ಪರ್ಸೆಂಟ್ ಆರೋಪ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ, ಈಚೆಗೆ ಹತ್ಯೆಗೀಡಾದ ಹಿಂದುತ್ವದ ಸಂಘಟನೆಯಲ್ಲಿದ್ದ ಹುಡುಗ ಹರ್ಷನ ಕೊಲೆ ಮತ್ತು ಆನಂತರ ಕೇಸರಿ ಪಡೆಯಲ್ಲಿ ಸ್ಥಳೀಯ ನಾಯಕತ್ವದ ಬಗ್ಗೆ ಮೂಡಿರುವ ಅನುಮಾನ, ಹರ್ಷನ ಅಕ್ಕ ಈಶ್ವರಪ್ಪ ಬಗ್ಗೆ ಅಸಮಾಧಾನದಿಂದ ಮಾತನಾಡುತ್ತಿರುವುದು ಮತ್ತು 2023ರ ಚುನಾವಣೆ ಹೊತ್ತಲ್ಲಿ ಈಶ್ವರಪ್ಪರಿಗೆ 74 ವರ್ಷ ವಯಸ್ಸಾಗುವುದರಿಂದ ಅವರಿಗೆ ಟಿಕೆಟ್ ಸಿಗಲಾರದೆಂಬ ಲೆಕ್ಕಾಚಾರದ ಚರ್ಚೆ ಬಿಜೆಪಿಯಲ್ಲಿ ಬಿರುಸಾಗಿದೆ.

ಈಶ್ವರಪ್ಪ ಸುಲಭಕ್ಕೆ ಸೀಟು ಬಿಟ್ಟು ಕೊಡುವ ಪೈಕಿಯಲ್ಲ; ತಮ್ಮ ವ್ಯವಹಾರವನ್ನೆಲ್ಲ ನೋಡಿಕೊಳ್ಳುತ್ತಿರುವ-ಜಿಪಂ ಸದಸ್ಯನಾಗಿದ್ದ ಮಗ ಕಾಂತೇಶ್‌ಗೆ ಟಿಕೆಟ್ ಕೇಳುತ್ತಿದ್ದಾರೆ. ಯಡಿಯೂರಪ್ಪರ ಮಗನಿಗೆ ಶಿಕಾರಿಪುರದಲ್ಲಿ ಅವಕಾಶ ಕೊಡುವುದಾದರೆ ತನ್ನ ಮಗನಿಗೇಕೆ ಶಿವಮೊಗ್ಗದಲ್ಲಿ ಟಿಕೆಟ್ ಕೊಡಬಾರದೆಂಬ ವಾದ ಈಶ್ವರಪ್ಪರದು ಎನ್ನಲಾಗುತ್ತಿದೆ. ಯಡಿಯೂರಪ್ಪರಿಗೆ ತಮ್ಮ ಸ್ವಜಾತಿ ಪರಮಾಪ್ತ ರುದ್ರೇಗೌಡರನ್ನು ಅಭ್ಯರ್ಥಿ ಮಾಡುವ ಮನಸ್ಸಿದೆಯಾದರೂ ಅವರಿಗೆ ವಯಸ್ಸಾಗಿರುವುದರಿಂದ ಕಷ್ಟವೆಂಬ ಮಾತಿದೆ. ಸೂಡಾದ ಅಧ್ಯಕ್ಷರಾಗಿದ್ದ ಲಿಂಗಾಯತ ಸಮುದಾಯದ ಜ್ಯೋತಿ ಪ್ರಕಾಶ್ ಹೆಸರು ಕೇಳಿಬರುತ್ತಿದೆ. ಎಮ್ ಆಯನೂರು ಮಂಜುನಾಥ್ ತನಗಿದು ಕೊನೆಯ ಅವಕಾಶ ಟಿಕೆಟ್ ಕೊಡಿಯೆಂದು ಸಂಘ ಶ್ರೇಷ್ಠರಿಗೆ ದುಂಬಾಲು ಬಿದ್ದಿದ್ದಾರಂತೆ.

ಈ ಬಾರಿ ಬ್ರಾಹ್ಮಣ ಸಮುದಾಯ ಬಿಜೆಪಿ ಟಿಕೆಟ್‌ಗೆ ಗಂಭೀರ ಪ್ರಯತ್ನ ಮಾಡುತ್ತಿದೆ; ಮಾಜಿ ಎಮ್ಮೆಲ್ಸಿ ಭಾನುಪ್ರಕಾಶ್, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ದತ್ತಾತ್ರಿ ಮತ್ತು ಸ್ಥಳೀಯ ಹಿಂದು ಮಹಾ ಸಭಾದ ಅಧ್ಯಕ್ಷ ನಟರಾಜ ಭಾಗ್ವತ್ ಎಮ್ಮೆಲ್ಲೆ ಆಗುವ ಕನಸು ಕಾಣುತ್ತಿದ್ದಾರೆ ಎಂಬುದು ಶಿವಮೊಗ್ಗೆಯಲ್ಲಿ ಬಹಿರಂಗ ರಹಸ್ಯ. ಯಡಿಯೂರಪ್ಪ ವಿರೋಧಿ ಕ್ಯಾಂಪಿನ ಭಾನುಪ್ರಕಾಶ್ ತನಗಲ್ಲದಿದ್ದರು ತಮ್ಮ ಮಗನಿಗಾದರು ಟಿಕೆಟ್ ಕೊಡುವಂತೆ ಕೇಳುತ್ತಿದ್ದಾರಂತೆ. ಆರ್‌ಎಸ್‌ಎಸ್ ಹಿನ್ನೆಲೆಯ ಈ ಮೂವರಿಗೆ ತಮ್ಮಲ್ಲಿ ಯಾರು ಸಂಘ ಸರದಾರರ ನೆಚ್ಚಿನ ಕಪ್ಪು ಕುದುರೆ ಆಗಬಹುದೆಂಬುದು ಅರ್ಥವಾಗದೆ ಗೊಂದಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಗರದ ಹೆಸರಾಂತ ವೈದ್ಯ ಡಾ.ಧನಂಜಯ್ ಸರ್ಜಿ ಬಿಜೆಪಿ ಅಥವಾ ಕಾಂಗ್ರೆಸ್‌ನಿಂದ ಕಣಕ್ಕಿಳಿಯುವ ಪ್ರಯತ್ನದಲ್ಲಿದ್ದಾರೆಂಬ ಸುದ್ದಿ ಸದ್ದು ಮಾಡುತ್ತಿರುವುದು ಕುತೂಹಲಕ್ಕೆಡೆಮಾಡಿದೆ. ಮಾಜಿ ಶಾಸಕ ಪ್ರಸನ್ನಕುಮಾರ್ ಸೋತರೂ ಜನರ ನಡುವಿದ್ದಾರೆ. ಆದರೆ ಬಿಜೆಪಿ ಕಡೆಗೆ ಹೋಗುವ ಸ್ವಜಾತಿ ಮತ ಸೆಳೆಲು ಪ್ರಸನ್ನಕುಮಾರ್‌ರಿಂದ ಆಗದಿರುವುದರಿಂದ ಲಿಂಗಾಯತ ಅಥವಾ ಕುರುಬ ಸಮುದಾಯದವರಿಗೆ ಅವಕಾಶ ಕೊಟ್ಟರೆ ಗೆಲ್ಲುವ ಸಂಭವವಿದೆ ಎಂಬ ಚರ್ಚೆಗಳು ಕಾಂಗ್ರೆಸ್‌ನಲ್ಲಿ ನಡೆದಿದೆಯೆನ್ನಲಾಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಕಾರ್ಪೊರೆಟ್ ಎಚ್.ಸಿ.ಯೋಗೀಶ್ ಮತ್ತು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಸ್ಪರ್ಧಿಸಿ ಸೋತಿರುವ ದಿನೇಶ್ ಟಿಕೆಟ್‌ಗೆ ಪೈಪೋಟಿ ನಡೆಸಿದ್ದಾರೆ. ದಿನೇಶ್ ಬೆನ್ನಿಗೆ ಲಿಂಗಾಯತ ಪಂಗಡದ ಪ್ರಭಾವಿ ಮುಖಂಡ ಶಾಮನೂರು ಶಿವಶಂಕರಪ್ಪನವರಿದ್ದರೆ ಯೋಗೀಶ್‌ಗೆ ಮಾಜಿ ಶಾಸಕ ಚಂದ್ರಶೇಖರಪ್ಪರ ಮಗನೆಂಬುದೆ ಬಲ ಎನ್ನಲಾಗುತ್ತಿದೆ.

ಈ ನಡುವೆ ಲಿಂಗಾಯತರ ಅನುಕಂಪ ಪಡೆದಿರುವ ಆಯನೂರು ಮಂಜುನಾಥರನ್ನು ಬಿಜೆಪಿಯಿಂದ ಕರೆತಂದು ಅಖಾಡಕ್ಕಿಸುವ ಪ್ರಯತ್ನ ಕಾಂಗ್ರೆಸ್‌ನ ಒಂದು ಒಂದು ವರ್ಗ ಮಾಡುತ್ತಿದೆ. ಮತ್ತೊಂದೆಡೆ ಎರಡು ಸಲ ಅಸೆಂಬ್ಲಿಗೆ ಸ್ಪರ್ಧಿಸಿದಾಗ 19-21 ಸಾವಿರದಷ್ಟು ಮತ ಪಡೆದ ಕುರುಬ ಜನಾಂಗದ ಜನಬಳಕೆ ಮುಖಂಡ ಎಂ.ಶ್ರೀಕಾಂತ್‌ರನ್ನು ಜೆಡಿಎಸ್‌ನಿಂದ ಸೆಳೆಯುವ ಕಾರ್ಯಾಚರಣೆ ಆಗುತ್ತಿದೆ ಎಂಬ ಮಾತು ಜಿಲ್ಲೆಯ ರಾಜಕೀಯ ವಲಯದಲ್ಲಿದೆ. ಕಾಂಗ್ರೆಸ್ಸಿಗೆ ಈಶ್ವರಪ್ಪರ ಸಂಪನ್ಮೂಲ ಮತ್ತು ಸಂಘ ಪರಿವಾರದ ಅಕ್ರಮಣಕಾರಿ ಹಿಂದುತ್ವ ಕೌಂಟರ್ ಮಾಡುವ ’ಗಟ್ಟಿ’ ಅಭ್ಯರ್ಥಿ ಬೇಕಾಗಿದೆ ಎಂದು ಆ ಪಕ್ಷದ ಕಾರ್ಯಕರ್ತರು ಹೇಳುತ್ತಾರೆ.

ಈಶ್ವರಪ್ಪರಿಗೆ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ; ಈಗಿನ ಸ್ಥಿತಿಯಲ್ಲಿ ಅವರು ಗೆಲ್ಲುವುದೂ ಕಷ್ಟ; ಮತದಾರರಿಗೂ ಬಿಜೆಪಿ ನಾಯಕರು ಕಂಡವರ ಮಕ್ಕಳನ್ನು ಬಾವಿಗಿಳಿಸಿ ಆಳ ನೋಡುವ ಹಿಂದುತ್ವದಿಂದ ರೋಸಿಹೋಗಿದೆ. ಈ ನಡುವೆ ಆಯನೂರು ಮಂಜುನಾಥ್‌ರವರ ಫ್ಲೆಕ್ಸ್‌ಗಳು ಹೊರಬಿದ್ದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಆಯನೂರು ಮಂಜುನಾಥ್, “ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂದು ಬಹುವಚನ ಬಳಸಲಾಗಿದೆ. ಹೀಗಾಗಿ ಆ ಮಾತನ್ನು ಈಶ್ವರಪ್ಪ ಒಬ್ಬರಿಗೇ ಅನ್ವಯಿಸುವುದು ಸರಿಯಲ್ಲ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಾರ್ಥನೆ ಮಾಡಲು ಮುಂದಾಗುವವರಿಗೂ ಅದು ಅನ್ವಯಿಸುತ್ತದೆ. ಆದರೆ ‘ಯಾವುದೋ ಧರ್ಮದ ದೇವರು ಕಿವುಡನೇ, ಕುರುಡನೇ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಮಾತಾಡುವುದು ಬೇಡ. ಅವರೊಬ್ಬ ಪ್ರಬುದ್ಧ ರಾಜಕಾರಣಿ. ಜವಾಬ್ದಾರಿಯಿಂದ ಮಾತಾಡಬೇಕು ಎಂಬ ನಿರೀಕ್ಷೆ ನನಗೂ ಇದೆ’ ಎಂದಿದ್ದಾರೆ.

‘ಬಿಜೆಪಿಗೆ ಧಕ್ಕೆ ಬರುವ ಯಾವುದೇ ಮಾತುಗಳನ್ನು ಯಾವುದೇ ನಾಯಕರು ಹೇಳಿದರೂ ಅದನ್ನು ಸ್ವೀಕಾರ ಮಾಡಬೇಕೆಂಬ ಬಲವಂತ ನಮಗೆ ಯಾರಿಗೂ ಇಲ್ಲ. ಸಂಘಟನೆಯ ಹಿತದೃಷ್ಟಿಯಿಂದ ನೀವು (ಈಶ್ವರಪ್ಪ) ಹೀಗೆ ಮಾತಾಡುವುದು ಸರಿಯಲ್ಲ. ಜವಾಬ್ದಾರಿಯಿಂದ ಮಾತಾಡಿ ಎಂದು ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ? ಈಶ್ವರಪ್ಪ ಹಾಗೆ ಮಾತಾಡಿದ್ದರೆ ತಿದ್ದಿಕೊಳ್ಳುವುದು ಒಳ್ಳೆಯದು. ಸಣ್ಣ ಘಟನೆ ನಡೆದರೂ ಶಿವಮೊಗ್ಗದಲ್ಲಿ ಏನಾಗುತ್ತದೆ ಎಂಬುದು ಊಹಿಸಿಕೊಳ್ಳಲಿ’ ಎಂದು ಕಿವಿಮಾತು ಎಂದು ಆಯನೂರು ಮಂಜುನಾಥ್‌ ತಿಳಿಸಿದ್ದಾರೆ.

ಬಿಜೆಪಿ ಬಿಡುತ್ತೀರಾ ಎಂಬ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡಿರುವ ಅವರು, ಮದುವೆಗೆ ನಿಮ್ಮ ಮನೆಯಲ್ಲಿ ಹೆಣ್ಣು ಕೊಟ್ಟರೆ ನಾನೇಕೆ ಪಕ್ಕದ ಮನೆಗೆ ಹೋಗಲಿ ಎಂದು ತನಗೆ ಟಿಕೆಟ್ ಬೇಕೆ ಬೇಕು ಎಂದು ಹಠ ಮುಂದಿಟ್ಟಿದ್ದಾರೆ. ಈಶ್ವರಪ್ಪನವರು ತನ್ನ ಮಗನಿಗೆ ಟಿಕೆಟ್ ಕೇಳುತ್ತಿದ್ದಾರೆ. ಆದರೆ ಅವರ ಮಗ ಇನ್ನು ಚಿಕ್ಕವರು. ನಾವು ಕ್ಯೂನಲ್ಲಿ ಇಲ್ಲವೆ? ಈಶ್ವರಪ್ಪ ಮತ್ತು ಬಿಜೆಪಿಯ ನಡುವೆ ನಾನು ಉರಿಗೌಡನೂ ಅಲ್ಲ. ನಂಜೇಗೌಡನೂ ಅಲ್ಲ. ಬದಲಿಗೆ ನಾನು ಆಯನೂರು ಮಂಜುನಾಥ್. ಯಾರ ಬಾಯಲ್ಲಿ ನಂಜು ಬರುತ್ತದೆಯೋ ಅವರನ್ನು ನಂಜೇಗೌಡ ಅನ್ನಿ. ಯಾರು ನನ್ನ ಮಾತು ಕೇಳಿ ಉರಿಬೀಳುತ್ತಾರೊ ಅವರಿಗೆ ಉರಿಗೌಡ ಅನ್ನಿ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿವಮೊಗ್ಗ: ಮತೋನ್ಮತ್ತ ರಣಕಣದಿಂದ ಈಶ್ವರಪ್ಪ ಕಡ್ಡಾಯ ನಿವೃತ್ತಿ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...