Homeಮುಖಪುಟಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಈಶ್ವರಪ್ಪ ಮತ್ತು ಬಿಜೆಪಿಯ ನಡುವೆ ನಾನು ಉರಿಗೌಡನೂ ಅಲ್ಲ. ನಂಜೇಗೌಡನೂ ಅಲ್ಲ. ಯಾರ ಬಾಯಲ್ಲಿ ನಂಜು ಬರುತ್ತದೆಯೋ ಅವರನ್ನು ನಂಜೇಗೌಡ ಅನ್ನಿ. ಯಾರು ನನ್ನ ಮಾತು ಕೇಳಿ ಉರಿಬೀಳುತ್ತಾರೊ ಅವರಿಗೆ ಉರಿಗೌಡ ಅನ್ನಿ.

- Advertisement -
- Advertisement -

‘ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ. ಮುರಿದ ಮನಸ್ಸುಗಳ ಬೆಸುಗೆಯಾಗಲಿ. ಶಿವಮೊಗ್ಗದಲ್ಲಿ ಶಾಂತಿ–ಸೌಹಾರ್ದತೆ ನೆಲೆಸಲಿ’ ಇದು ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಯನೂರು ಮಂಜುನಾಥ್‌ರವರು ಯುಗಾದಿ ಹಾಗೂ ರಂಜಾನ್‌ಗೆ ಶುಭಕೋರಿ ಶಿವಮೊಗ್ಗ ನಗರದಾದ್ಯಂತ ಹಾಕಿರುವ ಫ್ಲೆಕ್ಸ್‌ಗಳಲ್ಲಿನ ಬರಹಗಳು. ಕೋಮು ಪ್ರಚೋದನಾಕಾರಿ ಹೇಳಿಕೆಗಳಲ್ಲಿ ಕುಖ್ಯಾತಿ ಪಡೆದಿರುವ ಮಾಜಿ ಸಚಿವ, ಹಾಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ.ಎಚ್ ಈಶ್ವರಪ್ಪನವರ ಕುರಿತು ಇರುವ ಹೇಳಿಕೆಯಾಗಿದೆ ಎಂಬ ಚರ್ಚೆ ಆರಂಭವಾಗಿದೆ.

ಆಯನೂರು ಮಂಜುನಾಥ್‌ ಇದ್ದಕ್ಕಿದ್ದಂತೆ ಹೀಗೆಕೆ ಆದರು ಎಂಬುದನ್ನು ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಪೈಪೋಟಿಯನ್ನು ಗಮನಿಸಿದರೆ ಉತ್ತರ ಸಿಗುತ್ತದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಆಕಾಂಕ್ಷಿಗಳ ಸರದಿ ಸಾಲು ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ದಿನ ಕಳೆದಂತೆ ಬೆಳೆಯುತ್ತಲೇ ಇದೆ. ಯಾರಿಗೆ ಟಿಕೆಟ್ ಸಿಗಬಹುದೆಂದು ಸಣ್ಣದೊಂದು ಊಹೆ ಕೂಡ ಮಾಡಲಾಗದಷ್ಟು ಗೊಂದಲ ಎರಡೂ ಪಕ್ಷದಲ್ಲಿದೆ. ಸ್ಥಳೀಯ ಹಿಂದುತ್ವ ಸಂಘಟನೆ ಹಾಗು ಬಿಜೆಪಿಯ ಒಂದು ವರ್ಗಕ್ಕೆ ಈಶ್ವರಪ್ಪರ ಬಗ್ಗೆ ಅಸಮಧಾನ-ಆಕ್ರೋಶವಿದೆ; ಈಶ್ವರಪ್ಪರ ವಿಚಿತ್ರ ಮ್ಯಾನರಿಸಂ ಮತ್ತು ಅಸಂಬದ್ಧ ಮಾತುಗಾರಿಕೆಯಿಂದ ಸಂಘ ಪರಿವಾರಕ್ಕೂ ಮುಜುಗರ ಆಗುತ್ತಿದೆ ಎಂಬ ಸುದ್ದಿಗಳು ತೇಲಾಡುತ್ತಿದೆ. 2008-2013ರ ಅವಧಿಯಲ್ಲಿ ಮಂತ್ರಿಯಾಗಿದ್ದಾಗ ಪೊಲೀಸರಿಗೆ ನೋಟು ಎಣಿಸುವ ಯಂತ್ರ ಈಶ್ವರಪ್ಪ ಮನೆಯಲ್ಲಿ ಸಿಕ್ಕಿದ್ದು, ಈಗ ಬಂದಿರುವ 40 ಪರ್ಸೆಂಟ್ ಆರೋಪ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ, ಈಚೆಗೆ ಹತ್ಯೆಗೀಡಾದ ಹಿಂದುತ್ವದ ಸಂಘಟನೆಯಲ್ಲಿದ್ದ ಹುಡುಗ ಹರ್ಷನ ಕೊಲೆ ಮತ್ತು ಆನಂತರ ಕೇಸರಿ ಪಡೆಯಲ್ಲಿ ಸ್ಥಳೀಯ ನಾಯಕತ್ವದ ಬಗ್ಗೆ ಮೂಡಿರುವ ಅನುಮಾನ, ಹರ್ಷನ ಅಕ್ಕ ಈಶ್ವರಪ್ಪ ಬಗ್ಗೆ ಅಸಮಾಧಾನದಿಂದ ಮಾತನಾಡುತ್ತಿರುವುದು ಮತ್ತು 2023ರ ಚುನಾವಣೆ ಹೊತ್ತಲ್ಲಿ ಈಶ್ವರಪ್ಪರಿಗೆ 74 ವರ್ಷ ವಯಸ್ಸಾಗುವುದರಿಂದ ಅವರಿಗೆ ಟಿಕೆಟ್ ಸಿಗಲಾರದೆಂಬ ಲೆಕ್ಕಾಚಾರದ ಚರ್ಚೆ ಬಿಜೆಪಿಯಲ್ಲಿ ಬಿರುಸಾಗಿದೆ.

ಈಶ್ವರಪ್ಪ ಸುಲಭಕ್ಕೆ ಸೀಟು ಬಿಟ್ಟು ಕೊಡುವ ಪೈಕಿಯಲ್ಲ; ತಮ್ಮ ವ್ಯವಹಾರವನ್ನೆಲ್ಲ ನೋಡಿಕೊಳ್ಳುತ್ತಿರುವ-ಜಿಪಂ ಸದಸ್ಯನಾಗಿದ್ದ ಮಗ ಕಾಂತೇಶ್‌ಗೆ ಟಿಕೆಟ್ ಕೇಳುತ್ತಿದ್ದಾರೆ. ಯಡಿಯೂರಪ್ಪರ ಮಗನಿಗೆ ಶಿಕಾರಿಪುರದಲ್ಲಿ ಅವಕಾಶ ಕೊಡುವುದಾದರೆ ತನ್ನ ಮಗನಿಗೇಕೆ ಶಿವಮೊಗ್ಗದಲ್ಲಿ ಟಿಕೆಟ್ ಕೊಡಬಾರದೆಂಬ ವಾದ ಈಶ್ವರಪ್ಪರದು ಎನ್ನಲಾಗುತ್ತಿದೆ. ಯಡಿಯೂರಪ್ಪರಿಗೆ ತಮ್ಮ ಸ್ವಜಾತಿ ಪರಮಾಪ್ತ ರುದ್ರೇಗೌಡರನ್ನು ಅಭ್ಯರ್ಥಿ ಮಾಡುವ ಮನಸ್ಸಿದೆಯಾದರೂ ಅವರಿಗೆ ವಯಸ್ಸಾಗಿರುವುದರಿಂದ ಕಷ್ಟವೆಂಬ ಮಾತಿದೆ. ಸೂಡಾದ ಅಧ್ಯಕ್ಷರಾಗಿದ್ದ ಲಿಂಗಾಯತ ಸಮುದಾಯದ ಜ್ಯೋತಿ ಪ್ರಕಾಶ್ ಹೆಸರು ಕೇಳಿಬರುತ್ತಿದೆ. ಎಮ್ ಆಯನೂರು ಮಂಜುನಾಥ್ ತನಗಿದು ಕೊನೆಯ ಅವಕಾಶ ಟಿಕೆಟ್ ಕೊಡಿಯೆಂದು ಸಂಘ ಶ್ರೇಷ್ಠರಿಗೆ ದುಂಬಾಲು ಬಿದ್ದಿದ್ದಾರಂತೆ.

ಈ ಬಾರಿ ಬ್ರಾಹ್ಮಣ ಸಮುದಾಯ ಬಿಜೆಪಿ ಟಿಕೆಟ್‌ಗೆ ಗಂಭೀರ ಪ್ರಯತ್ನ ಮಾಡುತ್ತಿದೆ; ಮಾಜಿ ಎಮ್ಮೆಲ್ಸಿ ಭಾನುಪ್ರಕಾಶ್, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ದತ್ತಾತ್ರಿ ಮತ್ತು ಸ್ಥಳೀಯ ಹಿಂದು ಮಹಾ ಸಭಾದ ಅಧ್ಯಕ್ಷ ನಟರಾಜ ಭಾಗ್ವತ್ ಎಮ್ಮೆಲ್ಲೆ ಆಗುವ ಕನಸು ಕಾಣುತ್ತಿದ್ದಾರೆ ಎಂಬುದು ಶಿವಮೊಗ್ಗೆಯಲ್ಲಿ ಬಹಿರಂಗ ರಹಸ್ಯ. ಯಡಿಯೂರಪ್ಪ ವಿರೋಧಿ ಕ್ಯಾಂಪಿನ ಭಾನುಪ್ರಕಾಶ್ ತನಗಲ್ಲದಿದ್ದರು ತಮ್ಮ ಮಗನಿಗಾದರು ಟಿಕೆಟ್ ಕೊಡುವಂತೆ ಕೇಳುತ್ತಿದ್ದಾರಂತೆ. ಆರ್‌ಎಸ್‌ಎಸ್ ಹಿನ್ನೆಲೆಯ ಈ ಮೂವರಿಗೆ ತಮ್ಮಲ್ಲಿ ಯಾರು ಸಂಘ ಸರದಾರರ ನೆಚ್ಚಿನ ಕಪ್ಪು ಕುದುರೆ ಆಗಬಹುದೆಂಬುದು ಅರ್ಥವಾಗದೆ ಗೊಂದಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಗರದ ಹೆಸರಾಂತ ವೈದ್ಯ ಡಾ.ಧನಂಜಯ್ ಸರ್ಜಿ ಬಿಜೆಪಿ ಅಥವಾ ಕಾಂಗ್ರೆಸ್‌ನಿಂದ ಕಣಕ್ಕಿಳಿಯುವ ಪ್ರಯತ್ನದಲ್ಲಿದ್ದಾರೆಂಬ ಸುದ್ದಿ ಸದ್ದು ಮಾಡುತ್ತಿರುವುದು ಕುತೂಹಲಕ್ಕೆಡೆಮಾಡಿದೆ. ಮಾಜಿ ಶಾಸಕ ಪ್ರಸನ್ನಕುಮಾರ್ ಸೋತರೂ ಜನರ ನಡುವಿದ್ದಾರೆ. ಆದರೆ ಬಿಜೆಪಿ ಕಡೆಗೆ ಹೋಗುವ ಸ್ವಜಾತಿ ಮತ ಸೆಳೆಲು ಪ್ರಸನ್ನಕುಮಾರ್‌ರಿಂದ ಆಗದಿರುವುದರಿಂದ ಲಿಂಗಾಯತ ಅಥವಾ ಕುರುಬ ಸಮುದಾಯದವರಿಗೆ ಅವಕಾಶ ಕೊಟ್ಟರೆ ಗೆಲ್ಲುವ ಸಂಭವವಿದೆ ಎಂಬ ಚರ್ಚೆಗಳು ಕಾಂಗ್ರೆಸ್‌ನಲ್ಲಿ ನಡೆದಿದೆಯೆನ್ನಲಾಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಕಾರ್ಪೊರೆಟ್ ಎಚ್.ಸಿ.ಯೋಗೀಶ್ ಮತ್ತು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಸ್ಪರ್ಧಿಸಿ ಸೋತಿರುವ ದಿನೇಶ್ ಟಿಕೆಟ್‌ಗೆ ಪೈಪೋಟಿ ನಡೆಸಿದ್ದಾರೆ. ದಿನೇಶ್ ಬೆನ್ನಿಗೆ ಲಿಂಗಾಯತ ಪಂಗಡದ ಪ್ರಭಾವಿ ಮುಖಂಡ ಶಾಮನೂರು ಶಿವಶಂಕರಪ್ಪನವರಿದ್ದರೆ ಯೋಗೀಶ್‌ಗೆ ಮಾಜಿ ಶಾಸಕ ಚಂದ್ರಶೇಖರಪ್ಪರ ಮಗನೆಂಬುದೆ ಬಲ ಎನ್ನಲಾಗುತ್ತಿದೆ.

ಈ ನಡುವೆ ಲಿಂಗಾಯತರ ಅನುಕಂಪ ಪಡೆದಿರುವ ಆಯನೂರು ಮಂಜುನಾಥರನ್ನು ಬಿಜೆಪಿಯಿಂದ ಕರೆತಂದು ಅಖಾಡಕ್ಕಿಸುವ ಪ್ರಯತ್ನ ಕಾಂಗ್ರೆಸ್‌ನ ಒಂದು ಒಂದು ವರ್ಗ ಮಾಡುತ್ತಿದೆ. ಮತ್ತೊಂದೆಡೆ ಎರಡು ಸಲ ಅಸೆಂಬ್ಲಿಗೆ ಸ್ಪರ್ಧಿಸಿದಾಗ 19-21 ಸಾವಿರದಷ್ಟು ಮತ ಪಡೆದ ಕುರುಬ ಜನಾಂಗದ ಜನಬಳಕೆ ಮುಖಂಡ ಎಂ.ಶ್ರೀಕಾಂತ್‌ರನ್ನು ಜೆಡಿಎಸ್‌ನಿಂದ ಸೆಳೆಯುವ ಕಾರ್ಯಾಚರಣೆ ಆಗುತ್ತಿದೆ ಎಂಬ ಮಾತು ಜಿಲ್ಲೆಯ ರಾಜಕೀಯ ವಲಯದಲ್ಲಿದೆ. ಕಾಂಗ್ರೆಸ್ಸಿಗೆ ಈಶ್ವರಪ್ಪರ ಸಂಪನ್ಮೂಲ ಮತ್ತು ಸಂಘ ಪರಿವಾರದ ಅಕ್ರಮಣಕಾರಿ ಹಿಂದುತ್ವ ಕೌಂಟರ್ ಮಾಡುವ ’ಗಟ್ಟಿ’ ಅಭ್ಯರ್ಥಿ ಬೇಕಾಗಿದೆ ಎಂದು ಆ ಪಕ್ಷದ ಕಾರ್ಯಕರ್ತರು ಹೇಳುತ್ತಾರೆ.

ಈಶ್ವರಪ್ಪರಿಗೆ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ; ಈಗಿನ ಸ್ಥಿತಿಯಲ್ಲಿ ಅವರು ಗೆಲ್ಲುವುದೂ ಕಷ್ಟ; ಮತದಾರರಿಗೂ ಬಿಜೆಪಿ ನಾಯಕರು ಕಂಡವರ ಮಕ್ಕಳನ್ನು ಬಾವಿಗಿಳಿಸಿ ಆಳ ನೋಡುವ ಹಿಂದುತ್ವದಿಂದ ರೋಸಿಹೋಗಿದೆ. ಈ ನಡುವೆ ಆಯನೂರು ಮಂಜುನಾಥ್‌ರವರ ಫ್ಲೆಕ್ಸ್‌ಗಳು ಹೊರಬಿದ್ದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಆಯನೂರು ಮಂಜುನಾಥ್, “ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂದು ಬಹುವಚನ ಬಳಸಲಾಗಿದೆ. ಹೀಗಾಗಿ ಆ ಮಾತನ್ನು ಈಶ್ವರಪ್ಪ ಒಬ್ಬರಿಗೇ ಅನ್ವಯಿಸುವುದು ಸರಿಯಲ್ಲ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಾರ್ಥನೆ ಮಾಡಲು ಮುಂದಾಗುವವರಿಗೂ ಅದು ಅನ್ವಯಿಸುತ್ತದೆ. ಆದರೆ ‘ಯಾವುದೋ ಧರ್ಮದ ದೇವರು ಕಿವುಡನೇ, ಕುರುಡನೇ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಮಾತಾಡುವುದು ಬೇಡ. ಅವರೊಬ್ಬ ಪ್ರಬುದ್ಧ ರಾಜಕಾರಣಿ. ಜವಾಬ್ದಾರಿಯಿಂದ ಮಾತಾಡಬೇಕು ಎಂಬ ನಿರೀಕ್ಷೆ ನನಗೂ ಇದೆ’ ಎಂದಿದ್ದಾರೆ.

‘ಬಿಜೆಪಿಗೆ ಧಕ್ಕೆ ಬರುವ ಯಾವುದೇ ಮಾತುಗಳನ್ನು ಯಾವುದೇ ನಾಯಕರು ಹೇಳಿದರೂ ಅದನ್ನು ಸ್ವೀಕಾರ ಮಾಡಬೇಕೆಂಬ ಬಲವಂತ ನಮಗೆ ಯಾರಿಗೂ ಇಲ್ಲ. ಸಂಘಟನೆಯ ಹಿತದೃಷ್ಟಿಯಿಂದ ನೀವು (ಈಶ್ವರಪ್ಪ) ಹೀಗೆ ಮಾತಾಡುವುದು ಸರಿಯಲ್ಲ. ಜವಾಬ್ದಾರಿಯಿಂದ ಮಾತಾಡಿ ಎಂದು ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ? ಈಶ್ವರಪ್ಪ ಹಾಗೆ ಮಾತಾಡಿದ್ದರೆ ತಿದ್ದಿಕೊಳ್ಳುವುದು ಒಳ್ಳೆಯದು. ಸಣ್ಣ ಘಟನೆ ನಡೆದರೂ ಶಿವಮೊಗ್ಗದಲ್ಲಿ ಏನಾಗುತ್ತದೆ ಎಂಬುದು ಊಹಿಸಿಕೊಳ್ಳಲಿ’ ಎಂದು ಕಿವಿಮಾತು ಎಂದು ಆಯನೂರು ಮಂಜುನಾಥ್‌ ತಿಳಿಸಿದ್ದಾರೆ.

ಬಿಜೆಪಿ ಬಿಡುತ್ತೀರಾ ಎಂಬ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡಿರುವ ಅವರು, ಮದುವೆಗೆ ನಿಮ್ಮ ಮನೆಯಲ್ಲಿ ಹೆಣ್ಣು ಕೊಟ್ಟರೆ ನಾನೇಕೆ ಪಕ್ಕದ ಮನೆಗೆ ಹೋಗಲಿ ಎಂದು ತನಗೆ ಟಿಕೆಟ್ ಬೇಕೆ ಬೇಕು ಎಂದು ಹಠ ಮುಂದಿಟ್ಟಿದ್ದಾರೆ. ಈಶ್ವರಪ್ಪನವರು ತನ್ನ ಮಗನಿಗೆ ಟಿಕೆಟ್ ಕೇಳುತ್ತಿದ್ದಾರೆ. ಆದರೆ ಅವರ ಮಗ ಇನ್ನು ಚಿಕ್ಕವರು. ನಾವು ಕ್ಯೂನಲ್ಲಿ ಇಲ್ಲವೆ? ಈಶ್ವರಪ್ಪ ಮತ್ತು ಬಿಜೆಪಿಯ ನಡುವೆ ನಾನು ಉರಿಗೌಡನೂ ಅಲ್ಲ. ನಂಜೇಗೌಡನೂ ಅಲ್ಲ. ಬದಲಿಗೆ ನಾನು ಆಯನೂರು ಮಂಜುನಾಥ್. ಯಾರ ಬಾಯಲ್ಲಿ ನಂಜು ಬರುತ್ತದೆಯೋ ಅವರನ್ನು ನಂಜೇಗೌಡ ಅನ್ನಿ. ಯಾರು ನನ್ನ ಮಾತು ಕೇಳಿ ಉರಿಬೀಳುತ್ತಾರೊ ಅವರಿಗೆ ಉರಿಗೌಡ ಅನ್ನಿ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿವಮೊಗ್ಗ: ಮತೋನ್ಮತ್ತ ರಣಕಣದಿಂದ ಈಶ್ವರಪ್ಪ ಕಡ್ಡಾಯ ನಿವೃತ್ತಿ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...