Homeಮುಖಪುಟಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಈಶ್ವರಪ್ಪ ಮತ್ತು ಬಿಜೆಪಿಯ ನಡುವೆ ನಾನು ಉರಿಗೌಡನೂ ಅಲ್ಲ. ನಂಜೇಗೌಡನೂ ಅಲ್ಲ. ಯಾರ ಬಾಯಲ್ಲಿ ನಂಜು ಬರುತ್ತದೆಯೋ ಅವರನ್ನು ನಂಜೇಗೌಡ ಅನ್ನಿ. ಯಾರು ನನ್ನ ಮಾತು ಕೇಳಿ ಉರಿಬೀಳುತ್ತಾರೊ ಅವರಿಗೆ ಉರಿಗೌಡ ಅನ್ನಿ.

- Advertisement -
- Advertisement -

‘ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ. ಮುರಿದ ಮನಸ್ಸುಗಳ ಬೆಸುಗೆಯಾಗಲಿ. ಶಿವಮೊಗ್ಗದಲ್ಲಿ ಶಾಂತಿ–ಸೌಹಾರ್ದತೆ ನೆಲೆಸಲಿ’ ಇದು ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಯನೂರು ಮಂಜುನಾಥ್‌ರವರು ಯುಗಾದಿ ಹಾಗೂ ರಂಜಾನ್‌ಗೆ ಶುಭಕೋರಿ ಶಿವಮೊಗ್ಗ ನಗರದಾದ್ಯಂತ ಹಾಕಿರುವ ಫ್ಲೆಕ್ಸ್‌ಗಳಲ್ಲಿನ ಬರಹಗಳು. ಕೋಮು ಪ್ರಚೋದನಾಕಾರಿ ಹೇಳಿಕೆಗಳಲ್ಲಿ ಕುಖ್ಯಾತಿ ಪಡೆದಿರುವ ಮಾಜಿ ಸಚಿವ, ಹಾಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ.ಎಚ್ ಈಶ್ವರಪ್ಪನವರ ಕುರಿತು ಇರುವ ಹೇಳಿಕೆಯಾಗಿದೆ ಎಂಬ ಚರ್ಚೆ ಆರಂಭವಾಗಿದೆ.

ಆಯನೂರು ಮಂಜುನಾಥ್‌ ಇದ್ದಕ್ಕಿದ್ದಂತೆ ಹೀಗೆಕೆ ಆದರು ಎಂಬುದನ್ನು ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಪೈಪೋಟಿಯನ್ನು ಗಮನಿಸಿದರೆ ಉತ್ತರ ಸಿಗುತ್ತದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಆಕಾಂಕ್ಷಿಗಳ ಸರದಿ ಸಾಲು ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ದಿನ ಕಳೆದಂತೆ ಬೆಳೆಯುತ್ತಲೇ ಇದೆ. ಯಾರಿಗೆ ಟಿಕೆಟ್ ಸಿಗಬಹುದೆಂದು ಸಣ್ಣದೊಂದು ಊಹೆ ಕೂಡ ಮಾಡಲಾಗದಷ್ಟು ಗೊಂದಲ ಎರಡೂ ಪಕ್ಷದಲ್ಲಿದೆ. ಸ್ಥಳೀಯ ಹಿಂದುತ್ವ ಸಂಘಟನೆ ಹಾಗು ಬಿಜೆಪಿಯ ಒಂದು ವರ್ಗಕ್ಕೆ ಈಶ್ವರಪ್ಪರ ಬಗ್ಗೆ ಅಸಮಧಾನ-ಆಕ್ರೋಶವಿದೆ; ಈಶ್ವರಪ್ಪರ ವಿಚಿತ್ರ ಮ್ಯಾನರಿಸಂ ಮತ್ತು ಅಸಂಬದ್ಧ ಮಾತುಗಾರಿಕೆಯಿಂದ ಸಂಘ ಪರಿವಾರಕ್ಕೂ ಮುಜುಗರ ಆಗುತ್ತಿದೆ ಎಂಬ ಸುದ್ದಿಗಳು ತೇಲಾಡುತ್ತಿದೆ. 2008-2013ರ ಅವಧಿಯಲ್ಲಿ ಮಂತ್ರಿಯಾಗಿದ್ದಾಗ ಪೊಲೀಸರಿಗೆ ನೋಟು ಎಣಿಸುವ ಯಂತ್ರ ಈಶ್ವರಪ್ಪ ಮನೆಯಲ್ಲಿ ಸಿಕ್ಕಿದ್ದು, ಈಗ ಬಂದಿರುವ 40 ಪರ್ಸೆಂಟ್ ಆರೋಪ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ, ಈಚೆಗೆ ಹತ್ಯೆಗೀಡಾದ ಹಿಂದುತ್ವದ ಸಂಘಟನೆಯಲ್ಲಿದ್ದ ಹುಡುಗ ಹರ್ಷನ ಕೊಲೆ ಮತ್ತು ಆನಂತರ ಕೇಸರಿ ಪಡೆಯಲ್ಲಿ ಸ್ಥಳೀಯ ನಾಯಕತ್ವದ ಬಗ್ಗೆ ಮೂಡಿರುವ ಅನುಮಾನ, ಹರ್ಷನ ಅಕ್ಕ ಈಶ್ವರಪ್ಪ ಬಗ್ಗೆ ಅಸಮಾಧಾನದಿಂದ ಮಾತನಾಡುತ್ತಿರುವುದು ಮತ್ತು 2023ರ ಚುನಾವಣೆ ಹೊತ್ತಲ್ಲಿ ಈಶ್ವರಪ್ಪರಿಗೆ 74 ವರ್ಷ ವಯಸ್ಸಾಗುವುದರಿಂದ ಅವರಿಗೆ ಟಿಕೆಟ್ ಸಿಗಲಾರದೆಂಬ ಲೆಕ್ಕಾಚಾರದ ಚರ್ಚೆ ಬಿಜೆಪಿಯಲ್ಲಿ ಬಿರುಸಾಗಿದೆ.

ಈಶ್ವರಪ್ಪ ಸುಲಭಕ್ಕೆ ಸೀಟು ಬಿಟ್ಟು ಕೊಡುವ ಪೈಕಿಯಲ್ಲ; ತಮ್ಮ ವ್ಯವಹಾರವನ್ನೆಲ್ಲ ನೋಡಿಕೊಳ್ಳುತ್ತಿರುವ-ಜಿಪಂ ಸದಸ್ಯನಾಗಿದ್ದ ಮಗ ಕಾಂತೇಶ್‌ಗೆ ಟಿಕೆಟ್ ಕೇಳುತ್ತಿದ್ದಾರೆ. ಯಡಿಯೂರಪ್ಪರ ಮಗನಿಗೆ ಶಿಕಾರಿಪುರದಲ್ಲಿ ಅವಕಾಶ ಕೊಡುವುದಾದರೆ ತನ್ನ ಮಗನಿಗೇಕೆ ಶಿವಮೊಗ್ಗದಲ್ಲಿ ಟಿಕೆಟ್ ಕೊಡಬಾರದೆಂಬ ವಾದ ಈಶ್ವರಪ್ಪರದು ಎನ್ನಲಾಗುತ್ತಿದೆ. ಯಡಿಯೂರಪ್ಪರಿಗೆ ತಮ್ಮ ಸ್ವಜಾತಿ ಪರಮಾಪ್ತ ರುದ್ರೇಗೌಡರನ್ನು ಅಭ್ಯರ್ಥಿ ಮಾಡುವ ಮನಸ್ಸಿದೆಯಾದರೂ ಅವರಿಗೆ ವಯಸ್ಸಾಗಿರುವುದರಿಂದ ಕಷ್ಟವೆಂಬ ಮಾತಿದೆ. ಸೂಡಾದ ಅಧ್ಯಕ್ಷರಾಗಿದ್ದ ಲಿಂಗಾಯತ ಸಮುದಾಯದ ಜ್ಯೋತಿ ಪ್ರಕಾಶ್ ಹೆಸರು ಕೇಳಿಬರುತ್ತಿದೆ. ಎಮ್ ಆಯನೂರು ಮಂಜುನಾಥ್ ತನಗಿದು ಕೊನೆಯ ಅವಕಾಶ ಟಿಕೆಟ್ ಕೊಡಿಯೆಂದು ಸಂಘ ಶ್ರೇಷ್ಠರಿಗೆ ದುಂಬಾಲು ಬಿದ್ದಿದ್ದಾರಂತೆ.

ಈ ಬಾರಿ ಬ್ರಾಹ್ಮಣ ಸಮುದಾಯ ಬಿಜೆಪಿ ಟಿಕೆಟ್‌ಗೆ ಗಂಭೀರ ಪ್ರಯತ್ನ ಮಾಡುತ್ತಿದೆ; ಮಾಜಿ ಎಮ್ಮೆಲ್ಸಿ ಭಾನುಪ್ರಕಾಶ್, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ದತ್ತಾತ್ರಿ ಮತ್ತು ಸ್ಥಳೀಯ ಹಿಂದು ಮಹಾ ಸಭಾದ ಅಧ್ಯಕ್ಷ ನಟರಾಜ ಭಾಗ್ವತ್ ಎಮ್ಮೆಲ್ಲೆ ಆಗುವ ಕನಸು ಕಾಣುತ್ತಿದ್ದಾರೆ ಎಂಬುದು ಶಿವಮೊಗ್ಗೆಯಲ್ಲಿ ಬಹಿರಂಗ ರಹಸ್ಯ. ಯಡಿಯೂರಪ್ಪ ವಿರೋಧಿ ಕ್ಯಾಂಪಿನ ಭಾನುಪ್ರಕಾಶ್ ತನಗಲ್ಲದಿದ್ದರು ತಮ್ಮ ಮಗನಿಗಾದರು ಟಿಕೆಟ್ ಕೊಡುವಂತೆ ಕೇಳುತ್ತಿದ್ದಾರಂತೆ. ಆರ್‌ಎಸ್‌ಎಸ್ ಹಿನ್ನೆಲೆಯ ಈ ಮೂವರಿಗೆ ತಮ್ಮಲ್ಲಿ ಯಾರು ಸಂಘ ಸರದಾರರ ನೆಚ್ಚಿನ ಕಪ್ಪು ಕುದುರೆ ಆಗಬಹುದೆಂಬುದು ಅರ್ಥವಾಗದೆ ಗೊಂದಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಗರದ ಹೆಸರಾಂತ ವೈದ್ಯ ಡಾ.ಧನಂಜಯ್ ಸರ್ಜಿ ಬಿಜೆಪಿ ಅಥವಾ ಕಾಂಗ್ರೆಸ್‌ನಿಂದ ಕಣಕ್ಕಿಳಿಯುವ ಪ್ರಯತ್ನದಲ್ಲಿದ್ದಾರೆಂಬ ಸುದ್ದಿ ಸದ್ದು ಮಾಡುತ್ತಿರುವುದು ಕುತೂಹಲಕ್ಕೆಡೆಮಾಡಿದೆ. ಮಾಜಿ ಶಾಸಕ ಪ್ರಸನ್ನಕುಮಾರ್ ಸೋತರೂ ಜನರ ನಡುವಿದ್ದಾರೆ. ಆದರೆ ಬಿಜೆಪಿ ಕಡೆಗೆ ಹೋಗುವ ಸ್ವಜಾತಿ ಮತ ಸೆಳೆಲು ಪ್ರಸನ್ನಕುಮಾರ್‌ರಿಂದ ಆಗದಿರುವುದರಿಂದ ಲಿಂಗಾಯತ ಅಥವಾ ಕುರುಬ ಸಮುದಾಯದವರಿಗೆ ಅವಕಾಶ ಕೊಟ್ಟರೆ ಗೆಲ್ಲುವ ಸಂಭವವಿದೆ ಎಂಬ ಚರ್ಚೆಗಳು ಕಾಂಗ್ರೆಸ್‌ನಲ್ಲಿ ನಡೆದಿದೆಯೆನ್ನಲಾಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಕಾರ್ಪೊರೆಟ್ ಎಚ್.ಸಿ.ಯೋಗೀಶ್ ಮತ್ತು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಸ್ಪರ್ಧಿಸಿ ಸೋತಿರುವ ದಿನೇಶ್ ಟಿಕೆಟ್‌ಗೆ ಪೈಪೋಟಿ ನಡೆಸಿದ್ದಾರೆ. ದಿನೇಶ್ ಬೆನ್ನಿಗೆ ಲಿಂಗಾಯತ ಪಂಗಡದ ಪ್ರಭಾವಿ ಮುಖಂಡ ಶಾಮನೂರು ಶಿವಶಂಕರಪ್ಪನವರಿದ್ದರೆ ಯೋಗೀಶ್‌ಗೆ ಮಾಜಿ ಶಾಸಕ ಚಂದ್ರಶೇಖರಪ್ಪರ ಮಗನೆಂಬುದೆ ಬಲ ಎನ್ನಲಾಗುತ್ತಿದೆ.

ಈ ನಡುವೆ ಲಿಂಗಾಯತರ ಅನುಕಂಪ ಪಡೆದಿರುವ ಆಯನೂರು ಮಂಜುನಾಥರನ್ನು ಬಿಜೆಪಿಯಿಂದ ಕರೆತಂದು ಅಖಾಡಕ್ಕಿಸುವ ಪ್ರಯತ್ನ ಕಾಂಗ್ರೆಸ್‌ನ ಒಂದು ಒಂದು ವರ್ಗ ಮಾಡುತ್ತಿದೆ. ಮತ್ತೊಂದೆಡೆ ಎರಡು ಸಲ ಅಸೆಂಬ್ಲಿಗೆ ಸ್ಪರ್ಧಿಸಿದಾಗ 19-21 ಸಾವಿರದಷ್ಟು ಮತ ಪಡೆದ ಕುರುಬ ಜನಾಂಗದ ಜನಬಳಕೆ ಮುಖಂಡ ಎಂ.ಶ್ರೀಕಾಂತ್‌ರನ್ನು ಜೆಡಿಎಸ್‌ನಿಂದ ಸೆಳೆಯುವ ಕಾರ್ಯಾಚರಣೆ ಆಗುತ್ತಿದೆ ಎಂಬ ಮಾತು ಜಿಲ್ಲೆಯ ರಾಜಕೀಯ ವಲಯದಲ್ಲಿದೆ. ಕಾಂಗ್ರೆಸ್ಸಿಗೆ ಈಶ್ವರಪ್ಪರ ಸಂಪನ್ಮೂಲ ಮತ್ತು ಸಂಘ ಪರಿವಾರದ ಅಕ್ರಮಣಕಾರಿ ಹಿಂದುತ್ವ ಕೌಂಟರ್ ಮಾಡುವ ’ಗಟ್ಟಿ’ ಅಭ್ಯರ್ಥಿ ಬೇಕಾಗಿದೆ ಎಂದು ಆ ಪಕ್ಷದ ಕಾರ್ಯಕರ್ತರು ಹೇಳುತ್ತಾರೆ.

ಈಶ್ವರಪ್ಪರಿಗೆ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ; ಈಗಿನ ಸ್ಥಿತಿಯಲ್ಲಿ ಅವರು ಗೆಲ್ಲುವುದೂ ಕಷ್ಟ; ಮತದಾರರಿಗೂ ಬಿಜೆಪಿ ನಾಯಕರು ಕಂಡವರ ಮಕ್ಕಳನ್ನು ಬಾವಿಗಿಳಿಸಿ ಆಳ ನೋಡುವ ಹಿಂದುತ್ವದಿಂದ ರೋಸಿಹೋಗಿದೆ. ಈ ನಡುವೆ ಆಯನೂರು ಮಂಜುನಾಥ್‌ರವರ ಫ್ಲೆಕ್ಸ್‌ಗಳು ಹೊರಬಿದ್ದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಆಯನೂರು ಮಂಜುನಾಥ್, “ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂದು ಬಹುವಚನ ಬಳಸಲಾಗಿದೆ. ಹೀಗಾಗಿ ಆ ಮಾತನ್ನು ಈಶ್ವರಪ್ಪ ಒಬ್ಬರಿಗೇ ಅನ್ವಯಿಸುವುದು ಸರಿಯಲ್ಲ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಾರ್ಥನೆ ಮಾಡಲು ಮುಂದಾಗುವವರಿಗೂ ಅದು ಅನ್ವಯಿಸುತ್ತದೆ. ಆದರೆ ‘ಯಾವುದೋ ಧರ್ಮದ ದೇವರು ಕಿವುಡನೇ, ಕುರುಡನೇ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಮಾತಾಡುವುದು ಬೇಡ. ಅವರೊಬ್ಬ ಪ್ರಬುದ್ಧ ರಾಜಕಾರಣಿ. ಜವಾಬ್ದಾರಿಯಿಂದ ಮಾತಾಡಬೇಕು ಎಂಬ ನಿರೀಕ್ಷೆ ನನಗೂ ಇದೆ’ ಎಂದಿದ್ದಾರೆ.

‘ಬಿಜೆಪಿಗೆ ಧಕ್ಕೆ ಬರುವ ಯಾವುದೇ ಮಾತುಗಳನ್ನು ಯಾವುದೇ ನಾಯಕರು ಹೇಳಿದರೂ ಅದನ್ನು ಸ್ವೀಕಾರ ಮಾಡಬೇಕೆಂಬ ಬಲವಂತ ನಮಗೆ ಯಾರಿಗೂ ಇಲ್ಲ. ಸಂಘಟನೆಯ ಹಿತದೃಷ್ಟಿಯಿಂದ ನೀವು (ಈಶ್ವರಪ್ಪ) ಹೀಗೆ ಮಾತಾಡುವುದು ಸರಿಯಲ್ಲ. ಜವಾಬ್ದಾರಿಯಿಂದ ಮಾತಾಡಿ ಎಂದು ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ? ಈಶ್ವರಪ್ಪ ಹಾಗೆ ಮಾತಾಡಿದ್ದರೆ ತಿದ್ದಿಕೊಳ್ಳುವುದು ಒಳ್ಳೆಯದು. ಸಣ್ಣ ಘಟನೆ ನಡೆದರೂ ಶಿವಮೊಗ್ಗದಲ್ಲಿ ಏನಾಗುತ್ತದೆ ಎಂಬುದು ಊಹಿಸಿಕೊಳ್ಳಲಿ’ ಎಂದು ಕಿವಿಮಾತು ಎಂದು ಆಯನೂರು ಮಂಜುನಾಥ್‌ ತಿಳಿಸಿದ್ದಾರೆ.

ಬಿಜೆಪಿ ಬಿಡುತ್ತೀರಾ ಎಂಬ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡಿರುವ ಅವರು, ಮದುವೆಗೆ ನಿಮ್ಮ ಮನೆಯಲ್ಲಿ ಹೆಣ್ಣು ಕೊಟ್ಟರೆ ನಾನೇಕೆ ಪಕ್ಕದ ಮನೆಗೆ ಹೋಗಲಿ ಎಂದು ತನಗೆ ಟಿಕೆಟ್ ಬೇಕೆ ಬೇಕು ಎಂದು ಹಠ ಮುಂದಿಟ್ಟಿದ್ದಾರೆ. ಈಶ್ವರಪ್ಪನವರು ತನ್ನ ಮಗನಿಗೆ ಟಿಕೆಟ್ ಕೇಳುತ್ತಿದ್ದಾರೆ. ಆದರೆ ಅವರ ಮಗ ಇನ್ನು ಚಿಕ್ಕವರು. ನಾವು ಕ್ಯೂನಲ್ಲಿ ಇಲ್ಲವೆ? ಈಶ್ವರಪ್ಪ ಮತ್ತು ಬಿಜೆಪಿಯ ನಡುವೆ ನಾನು ಉರಿಗೌಡನೂ ಅಲ್ಲ. ನಂಜೇಗೌಡನೂ ಅಲ್ಲ. ಬದಲಿಗೆ ನಾನು ಆಯನೂರು ಮಂಜುನಾಥ್. ಯಾರ ಬಾಯಲ್ಲಿ ನಂಜು ಬರುತ್ತದೆಯೋ ಅವರನ್ನು ನಂಜೇಗೌಡ ಅನ್ನಿ. ಯಾರು ನನ್ನ ಮಾತು ಕೇಳಿ ಉರಿಬೀಳುತ್ತಾರೊ ಅವರಿಗೆ ಉರಿಗೌಡ ಅನ್ನಿ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿವಮೊಗ್ಗ: ಮತೋನ್ಮತ್ತ ರಣಕಣದಿಂದ ಈಶ್ವರಪ್ಪ ಕಡ್ಡಾಯ ನಿವೃತ್ತಿ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...