Homeಅಂತರಾಷ್ಟ್ರೀಯರಷ್ಯಾದ ಟಾಟರ್ಸ್ತಾನ್‌ನಲ್ಲಿ ವಿಮಾನ ಪತನ: 16 ಜನರ ದುರ್ಮರಣ

ರಷ್ಯಾದ ಟಾಟರ್ಸ್ತಾನ್‌ನಲ್ಲಿ ವಿಮಾನ ಪತನ: 16 ಜನರ ದುರ್ಮರಣ

- Advertisement -
- Advertisement -

ರಷ್ಯಾದ L-410 ವಿಮಾನವೊಂದು ಟಾಟರ್ಸ್ತಾನ್ ಪ್ಯಾಂತ್ಯದ ಬಳಿ ಭಾನುವಾರ ಪತನಗೊಂಡಿದೆ. ಘಟನೆಯಲ್ಲಿ 16 ಜನರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು RIA ಸುದ್ದಿ ಸಂಸ್ಥೆ ವರದಿ ಮಾಡಿದೆ. ಘಟನೆಯು ಬೆಳಗ್ಗೆ 9:11 ಕ್ಕೆ (ಮಾಸ್ಕೋ ಸಮಯ) ನಡೆದಿದೆ ಎಂದು ವರದಿ ತಿಳಿಸಿದೆ.

ವಿಮಾನದಲ್ಲಿ ಒಟ್ಟು 22 ಜನರಿದ್ದರು ಎಂದು ವರದಿಯಾಗಿದ್ದು, ಅವರಲ್ಲಿ 21 ಜನರು ಪ್ಯಾರಾಚೂಟ್ ಜಿಗಿತಗಾರರಾಗಿದ್ದರು. ಈ ಗುಂಪನ್ನು ವಿಮಾನದಲ್ಲಿ ಕರೆದೊಯ್ಯಲಾಗುತ್ತಿತ್ತು ಎಂದು ತುರ್ತು ಸಚಿವಾಲಯ ಹೇಳಿದೆ ಎಂದು TASS ಸುದ್ದಿ ಸಂಸ್ಥೆ ವರದಿ ಮಾಡಿದೆ. ವಿಮಾನದ ಅವಶೇಷಗಳಿಂದ ಏಳು ಜನರನ್ನು ಜೀವಂತವಾಗಿ ಹೊರತೆಗೆಯಲಾಗಿದೆ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಗಲ್ಫ್ ದೇಶಗಳ ವಿಮಾನಯಾನ ದರ ಕಡಿಮೆ ಮಾಡಿ – ಒಕ್ಕೂಟ ಸರ್ಕಾರಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್

“ಏಳು ಜನರನ್ನು ರಕ್ಷಿಸಲಾಗಿದೆ” ಎಂದು ಎಎಫ್‌ಪಿ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ರಷ್ಯಾದ ತುರ್ತು ಸಚಿವಾಲಯವನ್ನು ಉಲ್ಲೇಖಿಸಿ RIA ವರದಿ ಹೇಳಿದೆ.

ವಿಮಾನವು ಲೆಟ್ ಎಲ್ -410 ಟರ್ಬೊಲೆಟ್ ಆಗಿದ್ದು, ಇದು ಅವಳಿ ಎಂಜಿನ್ ಇರುವ ಕಿರು-ಶ್ರೇಣಿಯ ಸಾರಿಗೆ ವಿಮಾನವಾಗಿದೆ. ವಿಮಾನ ಪತನಕ್ಕೆ ಅತಿಯಾದ ಹೊರೆಯೆ ಕಾರಣ ಆಗಿರಬಹುದು ಎಂದು RIA ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಕಳೆದ ತಿಂಗಳು ಹಳೆಯ ಆಂಟೊನೊವ್ ಆನ್-26 ಸಾರಿಗೆ ವಿಮಾನವು ರಷ್ಯಾದ ಪೂರ್ವ ಭಾಗದಲ್ಲಿ ಪತನಗೊಂಡು ಆರು ಜನರನ್ನು ಬಲಿ ತೆಗೆದುಕೊಂಡಿತ್ತು. ಅದಕ್ಕಿಂತ ಮುಂಚೆ ಜುಲೈನಲ್ಲಿ ಕೂಡಾ ಆಂಟೊನೊವ್ ಆನ್ -26 ಟ್ವಿನ್ ಎಂಜಿನ್ ಟರ್ಬೊಪ್ರೊಪ್‌ ವಿಮಾನದಲ್ಲಿದ್ದ ಎಲ್ಲಾ 28 ಜನರು ರಷ್ಯಾದ ಕಮ್ಚಟ್ಕಾದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದರು.

ಇದನ್ನೂ ಓದಿ: ಮುಂಬೈ ವಿಮಾನ ನಿಲ್ಧಾಣವನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಅದಾನಿ ಸಮೂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...