Homeಕರ್ನಾಟಕಗದಗ ಪ್ರವಾಹ ಭೀಕರವಲ್ಲ: ಬಿಜೆಪಿ ಮತ್ತು ಮಾಜಿ ಸಚಿವರ ಮುಠ್ಠಾಳತನ ಭೀಕರ!

ಗದಗ ಪ್ರವಾಹ ಭೀಕರವಲ್ಲ: ಬಿಜೆಪಿ ಮತ್ತು ಮಾಜಿ ಸಚಿವರ ಮುಠ್ಠಾಳತನ ಭೀಕರ!

- Advertisement -
- Advertisement -

(ಇಂಟ್ರೋ: ಶ್ರವಣಕುಮಾರ್ ಹಡಗಲಿ ಮತ್ತು ರಫೀಕ್ ಕೊಣ್ಣೂರು- ಗೌರಿ ಲಂಕೇಶ್ ರವರ ಅಭಿಮಾನಿಗಳಾದ ಈ ಇಬ್ಬರು ಗದಗ ಜಿಲ್ಲೆಯ ರೋಣ ಮತ್ತು ನರಗುಂದ ತಾಲೂಕುಗಳ ಪ್ರವಾಹಪೀಡಿತ ಊರುಗಳಿಗೆ ಭೇಟಿ ಕೊಟ್ಟು ಫೋಟೊ ಮತ್ತು ವಿಡಿಯೋ ಒದಗಿಸಿದ್ದಾರೆ. ಅವರಿಗೆ ನಮ್ಮ ತಂಡದಿಂದ ಧನ್ಯವಾದಗಳು)

ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಗೆ ಹೋಲಿಸಿದರೆ ಮಳೆ-ಪ್ರವಾಹದ ಕಾರಣಕ್ಕೆ ಗದಗ ಜಿಲ್ಲೆಗೇನೂ ದೊಡ್ಡ ನಷ್ಟ (ಸಾಪೇಕ್ಷವಾಗಿ) ಸಂಭವಿಸಿಲ್ಲ. ಧಾರವಾಡ-ಹುಬ್ಬಳ್ಳಿ ಕಡೆ ಹದಿನೈದು ದಿನಗಟ್ಟಲೇ ಮಳೆ ಹಿಡಿಯಿತೆಂದರೆ ಬೆಣ್ಣೆಹಳ್ಳ ಭರಪೂರ ಹರಿಯುತ್ತದೆ, ನವಿಲುತೀರ್ಥದಿಂದ ನೀರು ಬಿಡುಗಡೆ ಹೆಚ್ಚಾದಂತೆ ಮಲಪ್ರಭೆ ಉಕ್ಕತೊಡಗುತ್ತಾಳೆ.

ಮಹಾರಾಷ್ಟ್ರದ ಕೋಯ್ನಾದಿಂದ ಯಾವಾಗ ಎಷ್ಟು ಪ್ರಮಾಣದ ನೀರು ಬಿಡುತ್ತಾರೋ ಎಂಬುದರ ಮಾಹಿತಿ ಅಸಮರ್ಪಕವಾಗಿರುವುದರಿಂದ ಬೆಳಗಾವಿಯ ಜಿಲ್ಲಾಡಳಿತ ತತ್ತರಿಸಿ ಹೋಗುತ್ತದೆ. ಆದರೆ, ಗದಗಿಗೆ ಮೊದಲೇ ಮುನ್ಸೂಚನೆ ಸಿಗುವುದರಿಂದ ಇಲ್ಲಿ ಮೊದಲೇ ನಿಗಾ ವಹಿಸಲು ಸಾಧ್ಯ. ಈ ಸಲ ಜಿಲ್ಲಾಡಳಿತ ಮೊದಲೇ ಎಚ್ಚೆತ್ತ ಪರಿಣಾಮವಾಗಿ ಅಂತಹ ಹಾನಿಯೇನೂ ಸಂಭವಿಸಿಲ್ಲ.

ಎಲ್ಲಿ ಜನಪ್ರತಿನಿಧಿಗಳು?
ಅಂಡು ಸುಟ್ಟ ಬೆಕ್ಕಿನಂತೆ ಈಗ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ತಲೆ ತುಂಬ ಸಂಪುಟ ವಿಸ್ತರಣೆಯನ್ನೆ ತುಂಬಿಕೊಂಡ ಪರಿಣಾಮ ಅವರ ಆಗಮನದಿಂದ ಅಧಿಕಾರಿಗಳ ಮೇಲೆ ಯಾವ ಪರಿಣಾಮವೂ ಆಗಿಲ್ಲ. ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳ ಶಾಸಕರಿಗೆ ಪ್ರವಾಹ ದುರಂತ ತಾಕಿಯೇ ಇಲ್ಲ. ಬಿಜೆಪಿಯ ಶಾಸಕರಂತೂ ಸಚಿವಗಿರಿ ಪಡೆಯುವ ಉಮೇದಿನಲ್ಲೇ ಇದ್ದಾರೆ.

ಮಳೆ ಮತ್ತು ಪ್ರವಾಹ ಕೇವಲ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಕಲಬುರಗಿ, ಗದಗ ಜಿಲ್ಲೆಗಳಿಗೆ ಅಷ್ಟೇ ಸೀಮಿತವಾಗಿಲ್ಲ. ಕೊಡಗು ಮತ್ತು ಕರಾವಳಿಯ ಮೂರು ಜಿಲ್ಲೆಗಳೂ ಇದರಿಂದ ತೊಂದರೆಗೆ ಸಿಲುಕಿವೆ. ಅಧಿಕೃತ ಅಂಕಿಅಂಶದ ಪ್ರಕಾರವೇ ರಾಜ್ಯದ 15 ಜಿಲ್ಲೆಗಳು ಮಳೆ ಮತ್ತು ಪ್ರವಾಹದ ಕಾರಣದಿಂದ ತತ್ತರಿಸಿ ಹೋಗಿವೆ. 15 ಜಿಲ್ಲೆಗಳು ಸಂಕಟದಲ್ಲಿ ಇರುವಾಘ ರಾಜ್ಯದ 28 ಸಂಸದರು ಎಲ್ಲ ಮುಚ್ಚಿಕೊಂಡು ಸುಮ್ಮನಿದ್ದಾರೆ. ಅದರಲ್ಲೂ ಬಿಜೆಪಿಯ 25 ಸಂಸದರು ಈ ಬಗ್ಗೆ ಮಾತೇ ಆಡಿಲ್ಲ.
ನಿನ್ನೆ ಬಾಯಿ ಬಿಟ್ಟಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳುತ್ತಾರೆ: ರಾಜ್ಯದಿಂದ ಅನುದಾನ ಕೋರಿ ಕೇಂದ್ರಕ್ಕೆ ಮನವಿಯೇ ಬಂದಿಲ್ಲ ಎಂದು…..

ಶಿವನೇ, sorry, ರಾಘವೇಂದ್ರ ಸ್ವಾಮಿಯೇ, ಈ ಜೋಶಿ ಎಂಬ ಮನೆಹಾಳನಿಗೆ ಮೊದಲು ಬುದ್ಧಿ ಕೊಡು. ತಮ್ಮದೇ ಪಕ್ಷದ ರಾಜ್ಯ ಸರ್ಕಾರ ವಿಶೇಷ ನೆರವಿಗೆ ಮನವಿ ಸಲ್ಲಿಸಬೇಕಂತೆ! ಅಲ್ಲಿವರೆಗೆ ಈ ಜೋಶಿ ಸಾಹೇಬರು ಕೇಂದ್ರದ ಜೊತೆ ಮಾತಾಡಲ್ಲವಂತೆ!
ಅಲ್ರೀ, ಈ ಜೋಶಿಯೂ ಕೇಂದ್ರ ಸರ್ಕಾರದ ಭಾಗವೇ ಅಲ್ಲವೇ? ಮೂರು ದಿನದ ಹಿಂದೆ ಬೆಳಗಾವಿ ತಲುಪುವ ಮೊದಲು ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ರಚನೆ ಬಗ್ಗೆ ಅನುಮತಿ ಪಡೆಯಲು ಗುಲಾಮನ ತರಹ ಓಡಿ ಹೋಗಿದ್ದ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಗೃಹ ಸಚಿವರಿಗೆ ವಿಶೇಷ ನೆರವಿಗಾಗಿ ಮನವಿ ಮಾಡಬಹುದಿತ್ತಲ್ಲ? ಕಾಶ್ಮೀರದ ‘ಅಭಿವೃದ್ಧಿ’ಗಾಗಿ ಅಲ್ಲಿ ಸಂಸತ್ತಿನಲ್ಲಿ ವೋಟಿಂಗ್ ಮಾಡುವುದು ಮುಗಿದ ನಂತರವಾದರೂ ನಮ್ಮ ಸಂಸದರು ಕರ್ನಾಟಕದ ಸಂಕಷ್ಟದ ಬಗ್ಗೆ ಯೋಚಿಸಬೇಕಿತ್ತಲ್ಲವಾ? ಈ ಹೊತ್ತಿನಲ್ಲೂ ಕೇಂದ್ರ ನೆರವು ಘೋಷಿಸಿಲ್ಲ, ರಾಜ್ಯ ಸರ್ಕಾರ ಕೇಳಿಯೇ ಇಲ್ಲ…

ಸರ್ಕಾರವೇ ಪ್ರವಾಹದಲ್ಲಿ ಸಿಕ್ಕಾಗ…
ಇಲ್ಲಿ ಸರ್ಕಾರವೇ ಇಲ್ಲ ಎಂಬ ಭಾವನೆ ಜನರಿಗೆ ಬರತೊಡಗಿದೆ. ಏಕೆಂದರೆ ಆಪರೇಷನ್ ಕಮಲ ಎಂಬ ಅಸಹ್ಯ ಹಣದ ಪ್ರವಾಹ ಹರಿಸಿ ಸರ್ಕಾರ ರಚನೆ ಮಾಡಿದ ಮೇಲೆ, ಮುಖ್ಯಮಂತ್ರಿ ಬಿಟ್ಟರೆ ಬೇರಾವ ಸಚಿವರೂ ಇಲ್ಲವೇ ಇಲ್ಲ. ಹೀಗಾಗಿ ರಾಜ್ಯ ಬಿಜೆಪಿಯೇ ಈಗ ಅಧಿಕಾರ ಮತ್ತು ಕೇಂದ್ರದ ಅಡಿ ಗುಲಾಮಗಿರಿ ಎಂಬ ಪ್ರವಾಹದಲ್ಲಿ ಮುಳುಗಿದೆ. ಹೀಗಾಗಿ, ಸಚಿವ ಸ್ಥಾನ ಆಕಾಂಕ್ಷಿಗಳಾದ ಜಗದೀಶ ಶೆಟ್ಟರ್, ಈಶ್ವರಪ್ಪ, ಶ್ರೀರಾಮುಲು, ಉಮೇಶ ಕತ್ತಿ, ಬಾಲಚಂದ್ರ ಜಾರಕಿಹೊಳಿ ಇತ್ಯಾದಿಗಳಿಗೆ ಪ್ರವಾಹದ ಸಂಕಟ ತಟ್ಟಿಯೇ ಇಲ್ಲ.

ಗದಗ: ಶಾಶ್ವತ ಪರಿಹಾರವೇ ಇಲ್ಲವೇ?
2008-2009ರ ಪ್ರವಾಹದಲ್ಲಿ ಬಾಧೆಗೆ ಒಳಗಾದ ಗ್ರಾಮಗಳೇ ಈಗಲೂ ತೊಂದರೆಗೆ ಒಳಗಾಗಿವೆ. ಗದಗ ಜಿಲ್ಲೆಯಲ್ಲಿ ಪ್ರವಾಹ ಬಂದರೆ ನರಗುಂದ ಮತ್ತು ರೋಣ ತಾಲೂಕುಗಳ ನೂರಾರು ಗ್ರಾಮಗಳು ಸಮಸ್ಯೆಗೆ ಸಿಲುಕುತ್ತವೆ. ಬೆಣ್ಣೆಹಳ್ಳ ಮತ್ತು ಮಲಪ್ರಭೆಯ ಹರಿವು ಆರ್ಭಟಿಸಿಬಿಟ್ಟರೆ ಈ ನೂರಾರು ಹಳ್ಳಿಗಳ ಜನರ ಬದುಕು ಎಕ್ಕುಟ್ಟಿ ಹೋಗುತ್ತದೆ.

2008-09ರ ಭೀಕರ ಪ್ರವಾಹದ ನಂತರ ಮೂವರು ಇದೇ ಜಿಲ್ಲೆಯವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಇವರ್ಯಾರೂ ಈ ಹಳ್ಳಿಗಳ ಶಾಶ್ವತ ಪುನರ್ವಸತಿಗೆ ಎಂದೂ ಪ್ರಾಮಾಣಿಕ ಪ್ರಯತ್ನ ಮಾಡಲೇ ಇಲ್ಲ.

ಯಡಿಯೂರಪ್ಪ ಕೃಪೆಯಿಂದ ಸಚಿವರಾಗಿದ್ದ ನರಗುಂದ ಶಾಸಕ ಸಿ.ಸಿ. ಪಾಟೀಲ, ಜಗದೀಶ ಶೆಟ್ಟರ್ ಆಶಿರ್ವಾದದಿಂದ ಸಚಿವರಾಗಿದ್ದ ರೋಣ ಶಾಸಕ ಕಳಕಪ್ಪ ಬಂಡಿ ತಮ್ಮ ಆ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಜಿಲ್ಲೆಯಲ್ಲಿ ಪ್ರವಾಹ ಬಂದರೆ ಇವರಿಬ್ಬರ ತಾಲೂಕುಗಳೇ ತೊಂದರೆಗೆ ಸಿಲುಕುವುದು. ಆದರೆ ಈ ಇಬ್ಬರೂ ಒಂದು ಶಾಶ್ವತ ಪರಿಹಾರಕ್ಕೆ ಯತ್ನಿಸಲೇ ಇಲ್ಲ.

ಈಗ ಬನ್ನಿ, 2013-18ರ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದ ಎಚ್.ಕೆ. ಪಾಟೀಲರು ಕಳಕಪ್ಪ ಬಂಡಿ ಮತ್ತು ಸಿ.ಸಿ. ಪಾಟಲರಂತೆ ಪಂಡರಾಪಟ್ಟಿ ಶಾಸಕ ಎಂದು ಅನಿಸಿಕೊಂಡವರಲ್ಲ. ರಾಜ್ಯ ರಾಜಕಾರಣದಲ್ಲಿ ಎಚ್‍ಕೆ ಅವರಿಗೆ ಒಂದು ಗೌರವದ ಸ್ಥಾನವಿದೆ.

ಆದರೆ, ಅವರು ಕೂಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಈ ನೆರೆ-ಪ್ರವಾಹ ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ರೂಪಿಸಲೇ ಇಲ್ಲ. ಅವರು ಒಂದು ಪರಿಹಾರ ಹುಡುಕಿ ಆ ಪ್ರಸ್ತಾಪವನ್ನು ಅವರ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿಟ್ಟಿದ್ದರೂ ಸಾಕಿತ್ತು, ತಕ್ಷಣ ಅನುಮೋದನೆ ಸಿಗುತ್ತಿತ್ತು. ಗದಗಿಗೆ ನಿತ್ಯ ನೀರು ಒದಗಿಸುವ, ಗದಗ ಜಿಲ್ಲೆಯ ಎಲ್ಲ ಹಳ್ಳಿಗಳಿಗೂ ಮೇಲ್ಮೈ ನೀರು (ಸರ್ಫೆಸ್ ವಾಟರ್, ನದಿ ನೀರು) ಒದಗಿಸುವ ದೊಡ್ಡ ಯೋಜನೆಗಳಿಗೆ ಎಲ್ಲ ನೆರವು ನೀಡಿದ ಸಿದ್ದರಾಮಯ್ಯ ಪ್ರವಾಹ ಪರಿಹಾರದ ಯೋಜನೆ ರೂಪಿಸಿದ್ದರೆ ಖಂಡಿತ ಇಲ್ಲ ಅನ್ನುತ್ತಿರಲಿಲ್ಲ.


ಹೀಗಾಗಿ, ಬಂಡಿ, ಸಿಸಿ ಪಾಟೀಲರಂತಹ ತರಹೇವಾರಿ ರಾಜಕಾರಣಿಗಲನ್ನು ಬಿಟ್ಟು ಬಿಡೋಣ. ಎಚ್. ಕೆ. ಪಾಟೀಲರಂತಹ ಹಿರಿಯ, ಗೌರವಾನ್ವಿತ ರಾಜಕಾರಣಿಯನ್ನೇ ಈಗ ನಾವು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲೇಬೇಕಿದೆ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...